Homeಮುಖಪುಟಎಎಪಿ ಮುಖಂಡ ರಾಘವ್ ಚಡ್ಡಾಗೆ ರಾಖಿ ಸಾವಂತ್‌ ಪತಿಯ ತರಾಟೆ: ಧನ್ಯವಾದ ಹೇಳಿದ ನಟಿ

ಎಎಪಿ ಮುಖಂಡ ರಾಘವ್ ಚಡ್ಡಾಗೆ ರಾಖಿ ಸಾವಂತ್‌ ಪತಿಯ ತರಾಟೆ: ಧನ್ಯವಾದ ಹೇಳಿದ ನಟಿ

- Advertisement -
- Advertisement -

ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧುರನ್ನು ಬಾಲಿವುಡ್ ನಟಿ ರಾಖಿ ಸಾವಂತ್‌ಗೆ ಹೋಲಿಸಿದ್ದ ಎಎಪಿ ಮುಖಂಡ ರಾಘವ್ ಚಡ್ಡಾ ಅವರನ್ನು ನಟಿಯ ಪತಿ ರಿತೇಶ್ ತರಾಟೆ ತೆಗೆದುಕೊಂಡಿದ್ದಾರೆ. ಇದಕ್ಕೆ ನಟಿ ರಾಖಿ ಸಾವಂತ್‌ ಪತಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಶುಕ್ರವಾರ ಟ್ವೀಟ್ ಮಾಡಿದ್ದ ಎಎಪಿ ಮುಖಂಡ ರಾಘವ್ ಚಡ್ಡಾ, ನವಜೋತ್ ಸಿಂಗ್ ಸಿಧುರನ್ನು ಟೀಕಿಸುವ ಭರದಲ್ಲಿ ನಟಿ ರಾಖಿ ಸಾವಂತ್ ಅವರಿಗೆ ಹೋಲಿಸಿದ್ದರು. ಇದಕ್ಕೆ ಸಾಮಾಜಿಕ ಜಾಲತಾಣಗಳ್ಲಲಿ ನೆಟ್ಟಿಗರು ಆಕ್ಷೇಪ ವ್ಯಕ್ತಪಡಿಸಿದ್ದರು.

ವಿವಾದಿತ ಕೃಷಿ ಕಾನೂನುಗಳ ಕುರಿತು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರ ದ್ವಿಮುಖ ನಿರ್ಧಾರಗಳನ್ನು ಪ್ರಶ್ನಿಸಿ ವಿಡಿಯೋ ಮಾಡಿದ್ದ ನವಜೋತ್ ಸಿಂಗ್ ಸಿಧುರನ್ನು, ’ಪಂಜಾಬ್ ರಾಜಕಾರಣದ ರಾಖಿ ಸಾವಂತ್‌ ’ ಎಂದು ರಾಘವ್ ಚಡ್ಡಾ ಕರೆದಿದ್ದರು.

ಇದನ್ನೂ ಓದಿ: ನವಜೋತ್ ಸಿಧುರನ್ನು ’ಪಂಜಾಬ್‌ ರಾಜಕೀಯದ ರಾಖಿ ಸಾವಂತ್’ ಎಂದ ಆಪ್

 

View this post on Instagram

 

A post shared by Rakhi Sawant (@rakhisawant2511)


ರಾಘವ್ ಚಡ್ಡಾಗೆ ರಿತೇಶ್ ಪ್ರತಿಕ್ರಿಯಿಸಿರುವ ಟ್ವೀಟ್‌ನ ಸ್ಕ್ರೀನ್‌ಶಾಟ್ ಅನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ರಾಖಿ ಸಾವಂತ್‌, “ನನ್ನ ಪತಿ ರಾಘವ್ ಚಡ್ಡಾಗೆ ಪ್ರತಿಕ್ರಿಯಿಸಿದ್ದಾರೆ. ಇಲ್ಲಿಯವರೆಗೆ ನಾನು ಒಬ್ಬಂಟಿಯಾಗಿದ್ದರಿಂದ ಜನರು ನನ್ನನ್ನು ಹಿಂಸಿಸುತ್ತಿದ್ದರು. ಇಂದು ಇದನ್ನು ಹೇಳುತ್ತಾ ನನ್ನ ಕಣ್ಣಲ್ಲಿ ಕಣ್ಣೀರು ಬರುತ್ತಿದೆ. ನನ್ನ ಜೊತೆಗೆ ಯಾರೋ ಇದ್ದಾರೆ, ನನ್ನ ಘನತೆ, ಗೌರವದ ರಕ್ಷಣೆಗಾಗಿ ಜೊತೆಗೆ ನಿಂತಿದ್ದಾರೆ. ನನ್ನ ಪ್ರೀತಿಯ ಗಂಡನಿಗೆ ಧನ್ಯವಾದಗಳು” ಎಂದು ಪೋಸ್ಟ್ ಮಾಡಿದ್ದಾರೆ.

ದೆಹಲಿ ಶಾಸಕ ರಾಘವ್ ಚಡ್ಡಾ ವಿರುದ್ಧ ನಿಂತ ತಮ್ಮ ಪತಿ ರಿತೇಶ್ ಅವರಿಗೆ ನಟಿ ಧನ್ಯವಾದ ಸಲ್ಲಿಸಿದ್ದಾರೆ.

ರಾಘವ್ ಚಡ್ಡಾ ವಿರುದ್ಧ@riteshuk1 ಬಳಕೆದಾರರ ಹೆಸರಿನ ಟ್ವಿಟರ್ ಖಾತೆಯಲ್ಲಿ ಸರಣಿ ಟ್ವೀಟ್‌ಗಳನ್ನು ಮಾಡಲಾಗಿದೆ. “ರಾಘವ್ ಚಡ್ಡಾ, ದಯವಿಟ್ಟು ಇದನ್ನು ಎಚ್ಚರಿಕೆ ಎಂದು ಪರಿಗಣಿಸಿ !! ನಿಮ್ಮ ರಾಜಕೀಯ ವಿವಾದಗಳಲ್ಲಿ ನೀವು ನನ್ನ ಹೆಂಡತಿಯ ಹೆಸರನ್ನು ಮತ್ತೊಮ್ಮೆ ಬಳಸಿದರೆ, ನೀವು ಕಾನೂನು ಸಮಸ್ಯೆಯನ್ನು ಎದುರಿಸುತ್ತೀರಿ. ನಾನು ಮತ್ತೆ ಹೇಳುತ್ತೇನೆ, ನೀವು ಮತ್ತೆ ಎಂದಿಗೂ ಗೆಲ್ಲುವುದಿಲ್ಲ. ಏಕೆಂದರೆ ನೀವು ಆ ಸ್ಥಾನಕ್ಕೆ ಅರ್ಹರಲ್ಲ. ನೀವು ಇನ್ನೊಬ್ಬರ ಹೆಸರನ್ನು ಹಾಳು ಮಾಡಲು ಪ್ರಯತ್ನಿಸುತ್ತಿದ್ದೀರಿ” ಎಂದು ಟ್ವೀಟ್ ಮಾಡಲಾಗಿದೆ.

ಶುಕ್ರವಾರ ಟ್ವೀಟ್ ಮಾಡಿದ್ದ ರಾಘವ್ ಚಡ್ಡಾ, “ಪಂಜಾಬ್ ರಾಜಕೀಯದ ರಾಖಿ ಸಾವಂತ್ ನವಜೋತ್ ಸಿಂಗ್ ಸಿಧು. ಕ್ಯಾಪ್ಟನ್ (ಮುಖ್ಯಮಂತ್ರಿ ಅಮರಿಂದರ್ ಸಿಂಗ್) ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಗದರಿಸಿದ್ದಾರೆ. ಆದ್ದರಿಂದ ಇಂದು ಬದಲಾವಣೆಗಾಗಿ, ಅವರು ಅರವಿಂದ ಕೇಜ್ರಿವಾಲ್ ಹಿಂದೆ ಬಿದ್ದಿದ್ದಾರೆ. ನಾಳೆಯವರೆಗೆ ಕಾಯಿರಿ, ಅವರು ಕ್ಯಾಪ್ಟನ್ ವಿರುದ್ಧ ವೀರಾವೇಶದಿಂದ ಮತ್ತೆ ಹೇಳಿಕೆ ನೀಡುವುದನ್ನು ಪುನರಾರಂಭಿಸುತ್ತಾರೆ” ಎಂದು ಹೇಳಿದ್ದರು.


ಇದನ್ನೂ ಓದಿ: ಕೊರೊನಾ ಕಾಲದ ಆಪದ್ಬಾಂಧವ, ನಟ ಸೋನು ಸೂದ್ ಮೇಲೆ ತೆರಿಗೆ ವಂಚನೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...