Homeಮುಖಪುಟಎಎಪಿ ಮುಖಂಡ ರಾಘವ್ ಚಡ್ಡಾಗೆ ರಾಖಿ ಸಾವಂತ್‌ ಪತಿಯ ತರಾಟೆ: ಧನ್ಯವಾದ ಹೇಳಿದ ನಟಿ

ಎಎಪಿ ಮುಖಂಡ ರಾಘವ್ ಚಡ್ಡಾಗೆ ರಾಖಿ ಸಾವಂತ್‌ ಪತಿಯ ತರಾಟೆ: ಧನ್ಯವಾದ ಹೇಳಿದ ನಟಿ

- Advertisement -
- Advertisement -

ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧುರನ್ನು ಬಾಲಿವುಡ್ ನಟಿ ರಾಖಿ ಸಾವಂತ್‌ಗೆ ಹೋಲಿಸಿದ್ದ ಎಎಪಿ ಮುಖಂಡ ರಾಘವ್ ಚಡ್ಡಾ ಅವರನ್ನು ನಟಿಯ ಪತಿ ರಿತೇಶ್ ತರಾಟೆ ತೆಗೆದುಕೊಂಡಿದ್ದಾರೆ. ಇದಕ್ಕೆ ನಟಿ ರಾಖಿ ಸಾವಂತ್‌ ಪತಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಶುಕ್ರವಾರ ಟ್ವೀಟ್ ಮಾಡಿದ್ದ ಎಎಪಿ ಮುಖಂಡ ರಾಘವ್ ಚಡ್ಡಾ, ನವಜೋತ್ ಸಿಂಗ್ ಸಿಧುರನ್ನು ಟೀಕಿಸುವ ಭರದಲ್ಲಿ ನಟಿ ರಾಖಿ ಸಾವಂತ್ ಅವರಿಗೆ ಹೋಲಿಸಿದ್ದರು. ಇದಕ್ಕೆ ಸಾಮಾಜಿಕ ಜಾಲತಾಣಗಳ್ಲಲಿ ನೆಟ್ಟಿಗರು ಆಕ್ಷೇಪ ವ್ಯಕ್ತಪಡಿಸಿದ್ದರು.

ವಿವಾದಿತ ಕೃಷಿ ಕಾನೂನುಗಳ ಕುರಿತು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರ ದ್ವಿಮುಖ ನಿರ್ಧಾರಗಳನ್ನು ಪ್ರಶ್ನಿಸಿ ವಿಡಿಯೋ ಮಾಡಿದ್ದ ನವಜೋತ್ ಸಿಂಗ್ ಸಿಧುರನ್ನು, ’ಪಂಜಾಬ್ ರಾಜಕಾರಣದ ರಾಖಿ ಸಾವಂತ್‌ ’ ಎಂದು ರಾಘವ್ ಚಡ್ಡಾ ಕರೆದಿದ್ದರು.

ಇದನ್ನೂ ಓದಿ: ನವಜೋತ್ ಸಿಧುರನ್ನು ’ಪಂಜಾಬ್‌ ರಾಜಕೀಯದ ರಾಖಿ ಸಾವಂತ್’ ಎಂದ ಆಪ್

 

View this post on Instagram

 

A post shared by Rakhi Sawant (@rakhisawant2511)


ರಾಘವ್ ಚಡ್ಡಾಗೆ ರಿತೇಶ್ ಪ್ರತಿಕ್ರಿಯಿಸಿರುವ ಟ್ವೀಟ್‌ನ ಸ್ಕ್ರೀನ್‌ಶಾಟ್ ಅನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ರಾಖಿ ಸಾವಂತ್‌, “ನನ್ನ ಪತಿ ರಾಘವ್ ಚಡ್ಡಾಗೆ ಪ್ರತಿಕ್ರಿಯಿಸಿದ್ದಾರೆ. ಇಲ್ಲಿಯವರೆಗೆ ನಾನು ಒಬ್ಬಂಟಿಯಾಗಿದ್ದರಿಂದ ಜನರು ನನ್ನನ್ನು ಹಿಂಸಿಸುತ್ತಿದ್ದರು. ಇಂದು ಇದನ್ನು ಹೇಳುತ್ತಾ ನನ್ನ ಕಣ್ಣಲ್ಲಿ ಕಣ್ಣೀರು ಬರುತ್ತಿದೆ. ನನ್ನ ಜೊತೆಗೆ ಯಾರೋ ಇದ್ದಾರೆ, ನನ್ನ ಘನತೆ, ಗೌರವದ ರಕ್ಷಣೆಗಾಗಿ ಜೊತೆಗೆ ನಿಂತಿದ್ದಾರೆ. ನನ್ನ ಪ್ರೀತಿಯ ಗಂಡನಿಗೆ ಧನ್ಯವಾದಗಳು” ಎಂದು ಪೋಸ್ಟ್ ಮಾಡಿದ್ದಾರೆ.

ದೆಹಲಿ ಶಾಸಕ ರಾಘವ್ ಚಡ್ಡಾ ವಿರುದ್ಧ ನಿಂತ ತಮ್ಮ ಪತಿ ರಿತೇಶ್ ಅವರಿಗೆ ನಟಿ ಧನ್ಯವಾದ ಸಲ್ಲಿಸಿದ್ದಾರೆ.

ರಾಘವ್ ಚಡ್ಡಾ ವಿರುದ್ಧ@riteshuk1 ಬಳಕೆದಾರರ ಹೆಸರಿನ ಟ್ವಿಟರ್ ಖಾತೆಯಲ್ಲಿ ಸರಣಿ ಟ್ವೀಟ್‌ಗಳನ್ನು ಮಾಡಲಾಗಿದೆ. “ರಾಘವ್ ಚಡ್ಡಾ, ದಯವಿಟ್ಟು ಇದನ್ನು ಎಚ್ಚರಿಕೆ ಎಂದು ಪರಿಗಣಿಸಿ !! ನಿಮ್ಮ ರಾಜಕೀಯ ವಿವಾದಗಳಲ್ಲಿ ನೀವು ನನ್ನ ಹೆಂಡತಿಯ ಹೆಸರನ್ನು ಮತ್ತೊಮ್ಮೆ ಬಳಸಿದರೆ, ನೀವು ಕಾನೂನು ಸಮಸ್ಯೆಯನ್ನು ಎದುರಿಸುತ್ತೀರಿ. ನಾನು ಮತ್ತೆ ಹೇಳುತ್ತೇನೆ, ನೀವು ಮತ್ತೆ ಎಂದಿಗೂ ಗೆಲ್ಲುವುದಿಲ್ಲ. ಏಕೆಂದರೆ ನೀವು ಆ ಸ್ಥಾನಕ್ಕೆ ಅರ್ಹರಲ್ಲ. ನೀವು ಇನ್ನೊಬ್ಬರ ಹೆಸರನ್ನು ಹಾಳು ಮಾಡಲು ಪ್ರಯತ್ನಿಸುತ್ತಿದ್ದೀರಿ” ಎಂದು ಟ್ವೀಟ್ ಮಾಡಲಾಗಿದೆ.

ಶುಕ್ರವಾರ ಟ್ವೀಟ್ ಮಾಡಿದ್ದ ರಾಘವ್ ಚಡ್ಡಾ, “ಪಂಜಾಬ್ ರಾಜಕೀಯದ ರಾಖಿ ಸಾವಂತ್ ನವಜೋತ್ ಸಿಂಗ್ ಸಿಧು. ಕ್ಯಾಪ್ಟನ್ (ಮುಖ್ಯಮಂತ್ರಿ ಅಮರಿಂದರ್ ಸಿಂಗ್) ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಗದರಿಸಿದ್ದಾರೆ. ಆದ್ದರಿಂದ ಇಂದು ಬದಲಾವಣೆಗಾಗಿ, ಅವರು ಅರವಿಂದ ಕೇಜ್ರಿವಾಲ್ ಹಿಂದೆ ಬಿದ್ದಿದ್ದಾರೆ. ನಾಳೆಯವರೆಗೆ ಕಾಯಿರಿ, ಅವರು ಕ್ಯಾಪ್ಟನ್ ವಿರುದ್ಧ ವೀರಾವೇಶದಿಂದ ಮತ್ತೆ ಹೇಳಿಕೆ ನೀಡುವುದನ್ನು ಪುನರಾರಂಭಿಸುತ್ತಾರೆ” ಎಂದು ಹೇಳಿದ್ದರು.


ಇದನ್ನೂ ಓದಿ: ಕೊರೊನಾ ಕಾಲದ ಆಪದ್ಬಾಂಧವ, ನಟ ಸೋನು ಸೂದ್ ಮೇಲೆ ತೆರಿಗೆ ವಂಚನೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...