Homeಮುಖಪುಟಎಎಪಿ ಮುಖಂಡ ರಾಘವ್ ಚಡ್ಡಾಗೆ ರಾಖಿ ಸಾವಂತ್‌ ಪತಿಯ ತರಾಟೆ: ಧನ್ಯವಾದ ಹೇಳಿದ ನಟಿ

ಎಎಪಿ ಮುಖಂಡ ರಾಘವ್ ಚಡ್ಡಾಗೆ ರಾಖಿ ಸಾವಂತ್‌ ಪತಿಯ ತರಾಟೆ: ಧನ್ಯವಾದ ಹೇಳಿದ ನಟಿ

- Advertisement -
- Advertisement -

ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧುರನ್ನು ಬಾಲಿವುಡ್ ನಟಿ ರಾಖಿ ಸಾವಂತ್‌ಗೆ ಹೋಲಿಸಿದ್ದ ಎಎಪಿ ಮುಖಂಡ ರಾಘವ್ ಚಡ್ಡಾ ಅವರನ್ನು ನಟಿಯ ಪತಿ ರಿತೇಶ್ ತರಾಟೆ ತೆಗೆದುಕೊಂಡಿದ್ದಾರೆ. ಇದಕ್ಕೆ ನಟಿ ರಾಖಿ ಸಾವಂತ್‌ ಪತಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಶುಕ್ರವಾರ ಟ್ವೀಟ್ ಮಾಡಿದ್ದ ಎಎಪಿ ಮುಖಂಡ ರಾಘವ್ ಚಡ್ಡಾ, ನವಜೋತ್ ಸಿಂಗ್ ಸಿಧುರನ್ನು ಟೀಕಿಸುವ ಭರದಲ್ಲಿ ನಟಿ ರಾಖಿ ಸಾವಂತ್ ಅವರಿಗೆ ಹೋಲಿಸಿದ್ದರು. ಇದಕ್ಕೆ ಸಾಮಾಜಿಕ ಜಾಲತಾಣಗಳ್ಲಲಿ ನೆಟ್ಟಿಗರು ಆಕ್ಷೇಪ ವ್ಯಕ್ತಪಡಿಸಿದ್ದರು.

ವಿವಾದಿತ ಕೃಷಿ ಕಾನೂನುಗಳ ಕುರಿತು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರ ದ್ವಿಮುಖ ನಿರ್ಧಾರಗಳನ್ನು ಪ್ರಶ್ನಿಸಿ ವಿಡಿಯೋ ಮಾಡಿದ್ದ ನವಜೋತ್ ಸಿಂಗ್ ಸಿಧುರನ್ನು, ’ಪಂಜಾಬ್ ರಾಜಕಾರಣದ ರಾಖಿ ಸಾವಂತ್‌ ’ ಎಂದು ರಾಘವ್ ಚಡ್ಡಾ ಕರೆದಿದ್ದರು.

ಇದನ್ನೂ ಓದಿ: ನವಜೋತ್ ಸಿಧುರನ್ನು ’ಪಂಜಾಬ್‌ ರಾಜಕೀಯದ ರಾಖಿ ಸಾವಂತ್’ ಎಂದ ಆಪ್

 

View this post on Instagram

 

A post shared by Rakhi Sawant (@rakhisawant2511)


ರಾಘವ್ ಚಡ್ಡಾಗೆ ರಿತೇಶ್ ಪ್ರತಿಕ್ರಿಯಿಸಿರುವ ಟ್ವೀಟ್‌ನ ಸ್ಕ್ರೀನ್‌ಶಾಟ್ ಅನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ರಾಖಿ ಸಾವಂತ್‌, “ನನ್ನ ಪತಿ ರಾಘವ್ ಚಡ್ಡಾಗೆ ಪ್ರತಿಕ್ರಿಯಿಸಿದ್ದಾರೆ. ಇಲ್ಲಿಯವರೆಗೆ ನಾನು ಒಬ್ಬಂಟಿಯಾಗಿದ್ದರಿಂದ ಜನರು ನನ್ನನ್ನು ಹಿಂಸಿಸುತ್ತಿದ್ದರು. ಇಂದು ಇದನ್ನು ಹೇಳುತ್ತಾ ನನ್ನ ಕಣ್ಣಲ್ಲಿ ಕಣ್ಣೀರು ಬರುತ್ತಿದೆ. ನನ್ನ ಜೊತೆಗೆ ಯಾರೋ ಇದ್ದಾರೆ, ನನ್ನ ಘನತೆ, ಗೌರವದ ರಕ್ಷಣೆಗಾಗಿ ಜೊತೆಗೆ ನಿಂತಿದ್ದಾರೆ. ನನ್ನ ಪ್ರೀತಿಯ ಗಂಡನಿಗೆ ಧನ್ಯವಾದಗಳು” ಎಂದು ಪೋಸ್ಟ್ ಮಾಡಿದ್ದಾರೆ.

ದೆಹಲಿ ಶಾಸಕ ರಾಘವ್ ಚಡ್ಡಾ ವಿರುದ್ಧ ನಿಂತ ತಮ್ಮ ಪತಿ ರಿತೇಶ್ ಅವರಿಗೆ ನಟಿ ಧನ್ಯವಾದ ಸಲ್ಲಿಸಿದ್ದಾರೆ.

ರಾಘವ್ ಚಡ್ಡಾ ವಿರುದ್ಧ@riteshuk1 ಬಳಕೆದಾರರ ಹೆಸರಿನ ಟ್ವಿಟರ್ ಖಾತೆಯಲ್ಲಿ ಸರಣಿ ಟ್ವೀಟ್‌ಗಳನ್ನು ಮಾಡಲಾಗಿದೆ. “ರಾಘವ್ ಚಡ್ಡಾ, ದಯವಿಟ್ಟು ಇದನ್ನು ಎಚ್ಚರಿಕೆ ಎಂದು ಪರಿಗಣಿಸಿ !! ನಿಮ್ಮ ರಾಜಕೀಯ ವಿವಾದಗಳಲ್ಲಿ ನೀವು ನನ್ನ ಹೆಂಡತಿಯ ಹೆಸರನ್ನು ಮತ್ತೊಮ್ಮೆ ಬಳಸಿದರೆ, ನೀವು ಕಾನೂನು ಸಮಸ್ಯೆಯನ್ನು ಎದುರಿಸುತ್ತೀರಿ. ನಾನು ಮತ್ತೆ ಹೇಳುತ್ತೇನೆ, ನೀವು ಮತ್ತೆ ಎಂದಿಗೂ ಗೆಲ್ಲುವುದಿಲ್ಲ. ಏಕೆಂದರೆ ನೀವು ಆ ಸ್ಥಾನಕ್ಕೆ ಅರ್ಹರಲ್ಲ. ನೀವು ಇನ್ನೊಬ್ಬರ ಹೆಸರನ್ನು ಹಾಳು ಮಾಡಲು ಪ್ರಯತ್ನಿಸುತ್ತಿದ್ದೀರಿ” ಎಂದು ಟ್ವೀಟ್ ಮಾಡಲಾಗಿದೆ.

ಶುಕ್ರವಾರ ಟ್ವೀಟ್ ಮಾಡಿದ್ದ ರಾಘವ್ ಚಡ್ಡಾ, “ಪಂಜಾಬ್ ರಾಜಕೀಯದ ರಾಖಿ ಸಾವಂತ್ ನವಜೋತ್ ಸಿಂಗ್ ಸಿಧು. ಕ್ಯಾಪ್ಟನ್ (ಮುಖ್ಯಮಂತ್ರಿ ಅಮರಿಂದರ್ ಸಿಂಗ್) ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಗದರಿಸಿದ್ದಾರೆ. ಆದ್ದರಿಂದ ಇಂದು ಬದಲಾವಣೆಗಾಗಿ, ಅವರು ಅರವಿಂದ ಕೇಜ್ರಿವಾಲ್ ಹಿಂದೆ ಬಿದ್ದಿದ್ದಾರೆ. ನಾಳೆಯವರೆಗೆ ಕಾಯಿರಿ, ಅವರು ಕ್ಯಾಪ್ಟನ್ ವಿರುದ್ಧ ವೀರಾವೇಶದಿಂದ ಮತ್ತೆ ಹೇಳಿಕೆ ನೀಡುವುದನ್ನು ಪುನರಾರಂಭಿಸುತ್ತಾರೆ” ಎಂದು ಹೇಳಿದ್ದರು.


ಇದನ್ನೂ ಓದಿ: ಕೊರೊನಾ ಕಾಲದ ಆಪದ್ಬಾಂಧವ, ನಟ ಸೋನು ಸೂದ್ ಮೇಲೆ ತೆರಿಗೆ ವಂಚನೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...