Homeಕರ್ನಾಟಕಪ್ರತಿದಿನ ಭಯದಲ್ಲೇ ಮನೆಗೆ ಹೋಗುವ ನಮಗೆ, ನಮ್ಮ ಹಳ್ಳಿಗಳಲ್ಲೇ ಗೌರವವಿಲ್ಲ: ಆಶಾ ಕಾರ್ಯಕರ್ತರ ಅಳಲು

ಪ್ರತಿದಿನ ಭಯದಲ್ಲೇ ಮನೆಗೆ ಹೋಗುವ ನಮಗೆ, ನಮ್ಮ ಹಳ್ಳಿಗಳಲ್ಲೇ ಗೌರವವಿಲ್ಲ: ಆಶಾ ಕಾರ್ಯಕರ್ತರ ಅಳಲು

- Advertisement -
- Advertisement -

’ವಾರಕ್ಕೆ 3 ರಿಂದ 4 ದಿನ ಕೆಲಸ ಮಾಡುತ್ತಿದ್ದ ನಾವು, ಕೊರೊನಾ ಸಂಕಷ್ಟದಲ್ಲಿ ದಿನದ 24 ಗಂಟೆಗಳು ಕಾರ್ಯನಿರ್ವಹಿಸುತ್ತಿದ್ದೇವೆ. ಕೆಲಸ ಮುಗಿಸಿ ನಮಗೆಲ್ಲಿ ಸೋಂಕು ಹರಡಿದೆಯೋ, ಮನೆಯಲ್ಲಿ ಯಾರಿಗಾದರೂ ಹಬ್ಬುತ್ತದೆಯೋ ಎಂಬ ಭಯದಲ್ಲೇ ಮನೆಗೆ ಕಾಲಿಡುತ್ತೇವೆ. ಇದು ನಮ್ಮ ಕರ್ತವ್ಯ ಎಂದು ನಮ್ಮ ಪ್ರಾಣವನ್ನು ಒತ್ತೆ ಇಟ್ಟು ಕೆಲಸ ಮಾಡುತ್ತಿದ್ದೇವೆ ಆದರೆ, ನಾವಿರುವ ಹಳ್ಳಿಗಳಲ್ಲೇ ನಮಗೆ ಗೌರವ ದೊರೆಯುವುದಿಲ್ಲ. ಈ ಸಮಯದಲ್ಲಿ ಜಾಗೃತಿ ಮೂಡಿಸಲು ಸಹಾಯ ಮಾಡಬೇಕಾದ ಯುವ ಜನತೆಯೇ ನಮ್ಮ ಆತ್ಮವಿಶ್ವಾಸವನ್ನು ಕುಗ್ಗಿಸುವ ರೀತಿಯಲ್ಲಿ ನಡೆದುಕೊಳ್ಳುತ್ತಾರೆ” ಎಂದು ನೋವು ತೋಡಿಕೊಳ್ಳುತ್ತಾರೆ ಆಶಾ ಕಾರ್ಯಕರ್ತೆ ಪ್ರಿಯಾಂಕಾ.

ಹೌದು, ಕೊರೊನಾ ಸಾಂಕ್ರಾಮಿಕ ರೋಗ ಹಳ್ಳಿಗಳಿಗೆ ಲಗ್ಗೆಯಿಟ್ಟಿದೆ. ಗ್ರಾಮೀಣ ಪ್ರದೇಶಗಳಲ್ಲಿ ಜಾಗೃತಿ ವಹಿಸಬೇಕಿರುವುದು ಅನಿವಾರ್ಯವಾಗಿದೆ. ಇದೇ ಕಾರಣಕ್ಕೆ ಎರಡು ಬಾರಿ ಲಾಕ್‌ಡೌನ್ ಮುಂದುವರೆಸಲಾಗಿದೆ. ಹಳ್ಳಿಗಳಲ್ಲಿ ಕೊರೊನಾ ನಿಯಂತ್ರಣಕ್ಕೆ, ಕೊರೊನಾ ಜಾಗೃತಿಗೆ ಮೂಡಿಸುವಲ್ಲಿ ಮುಂಚೂಣಿಯಲ್ಲಿ ಇರುವವರು ಈ ಆಶಾ ಕಾರ್ಯಕರ್ತೆಯರು. ಇವರ ಸೇವೆ ನಿಜಕ್ಕೂ ಶ್ಲಾಘನಿಯವಾದದ್ದು. ಆದರೆ ಅವರಿಗೆ ಅಗೌರವ ಸೂಚಿಸುವ ಘಟನೆಗಳು ವರದಿಯಾಗುತ್ತಿರುವುದು ದುರಂತ.

ಸರ್ಕಾರ ನೀಡುವ ಅಲ್ಪ ಗೌರವಧನದಲ್ಲಿ ಜೀವನ ನಡೆಸುವ ಇವರು ಪ್ರತಿ ಬಾರಿಯು ತಮ್ಮ ಬೇಡಿಕೆ ಈಡೇರಿಕೆಗಾಗಿ ರಾಜಧಾನಿ ಬೆಂಗಳೂರಿನ ಕದ ತಟ್ಟಿದ್ದಾರೆ. ಅಲ್ಪ ಸ್ವಲ್ಪ ಪರಿಹಾರ ಪಡೆದಿದ್ದಾರೆ. ಆದರೆ, ಕೊರೊನಾದಂತಹ ಕಾಲದಲ್ಲಿ ಇವರ ಸೇವೆ ಅಮೂಲ್ಯವಾಗಿದೆ. ಪ್ರಾಣವನ್ನು ಲೆಕ್ಕಿಸದೇ ಕೊರೊನಾ ಸೋಂಕಿತರ ಸಹಾಯಕ್ಕೆ ನಿಲ್ಲುತ್ತಿದ್ದಾರೆ. ಆದರೆ, ಸಮಾಜ ಇವರನ್ನು ನಡೆಸಿಕೊಳ್ಳುತ್ತಿರುವ ರೀತಿ ಮಾತ್ರ ಅಸಹನೀಯವಾಗಿದೆ. ಹಳ್ಳಿಗಳಲ್ಲಿ ತಮ್ಮನ್ನು ನಡೆಸಿಕೊಳ್ಳುವ ರೀತಿಗೆ ಆಶಾ ಕಾರ್ಯಕರ್ತರು ತೀವ್ರ ಬೇಸರ ವ್ಯಕ್ತಪಡಿಸುತ್ತಾರೆ.

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಸಾಲಕಟ್ಟೆ ತಾಂಡ್ಯ ಉಪ ವಿಭಾಗದಲ್ಲಿ ಆಶಾ ಕಾರ್ಯಕರ್ತೆಯಾಗಿ ಸುಮಾರು ನಾಲ್ಕು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಪ್ರಿಯಾಂಕಾ ನಾನುಗೌರಿ.ಕಾಂ ಜೊತೆ ತಮ್ಮ ಕೆಲಸದ ಅನುಭವ, ಕೆಲಸದ ಸಮಯದಲ್ಲಿ ತಾವು ಅನುಭವಿಸುವ ಸವಾಲುಗಳನ್ನು ಹಂಚಿಕೊಂಡಿದ್ದು ಹೀಗೆ.

ಇದನ್ನೂ ಓದಿ: ಕನ್ನಡವನ್ನು ಕೊಳಕು ಭಾಷೆ ಎಂದು ತೋರಿಸಿದ್ದ ವೆಬ್‌ಸೈಟ್, ಕನ್ನಡಿಗರ ಆಕ್ರೋಶಕ್ಕೆ ಮಣಿದ ಗೂಗಲ್

’ನನಗೆ 7 ವರ್ಷದ ಮಗ ಮತ್ತು 5 ವರ್ಷದ ಹೆಣ್ಣು ಮಗುವಿದೆ. ನಾಲ್ಕು ಜನರ ಕುಟುಂಬ ನಮ್ಮದು. ಪ್ರತಿದಿನ ಕೆಲಸ ಮುಗಿಸಿ ಮನೆಗೆ ಭಯದಲ್ಲೇ ಹೋಗುತ್ತೇವೆ. ಎಷ್ಟೇ ಸುರಕ್ಷತಾ ನಿಯಮಗಳನ್ನು ಪಾಲಿಸಿದ್ದರೂ ಮಕ್ಕಳಿರುವ ಮನೆಯಲ್ಲಿ ಕೊರೊನಾ ಭಯ ಇರುತ್ತದೆ. ಆದರೆ, ನಮ್ಮ ಕೆಲಸ ನಾನು ಮಾಡಬೇಕು. ಕೊರೊನಾ ಸೋಂಕು ಹೆಚ್ಚಾದಾಗಿನಿಂದ ದಿನದ 24 ಗಂಟೆಯೂ ಕೆಲಸ ಮಾಡುತ್ತಿದ್ದೇವೆ. ನನ್ನ ವ್ಯಾಪ್ತಿಯಲ್ಲಿ ಮೂರು ಹಳ್ಳಿಗಳಿವೆ. ಬೇರೆ ಹಳ್ಳಿಗಳಿಗೆ ಹೋದಾಗ ಜನ ನೀಡುವ ಸ್ಪಂದನೆ, ನಾವು ವಾಸವಿರುವ ಹಳ್ಳಿಯಲ್ಲಿ ದೊರೆಯುವುದಿಲ್ಲ’ ಎನ್ನುತ್ತಾರೆ.

’ಲಾಕ್‌ಡೌನ್ ಮಾಡಿ ಬಸ್, ಆಟೋ ಎಲ್ಲಾ ನಿಲ್ಲಿಸಿರುವ ಸರ್ಕಾರಕ್ಕೆ ನಾವು ಹೇಗೆ ಓಡಾಡುತ್ತೇವೆ. ಹಳ್ಳಿ ಹಳ್ಳಿಗೆ ಹೇಗೆ ಹೋಗುತ್ತೇವೆ ಎಂಬ ಬಗ್ಗೆ ಚಿಂತೆ ಇಲ್ಲ. ರಸ್ತೆಯಲ್ಲಿ ಓಡಾಡುವ ಒಂದೋ, ಎರಡೋ ಬೈಕ್‌ಗಳಿಗೆ ಕೈ ಅಡ್ಡ ಹಾಕಿ ಅವರ ಜೊತೆಗೆ ಹೋಗಬೇಕು. ಅದು ಬೈಕ್ ಓಡಿಸುವವರು ಸ್ಪಲ್ಪ ಮಾನವೀಯತೆ ಇರುವವರಿದ್ದರೆ ನಿಲ್ಲಿಸುತ್ತಾರೆ. ಬೇರೆಯವರು ನಮ್ಮ ಯೂನಿಫಾರಂ ನೋಡಿ ಗಾಡಿಯನ್ನು ಕೂಡ ನಿಲ್ಲಿಸುವುದಿಲ್ಲ. ಮತ್ತೆ ಕೆಲವರು ಗಾಡಿ ನಿಲ್ಲಿಸಿ, ಕ್ಷಮಿಸಿ ನಿಮಗೆ ಡ್ರಾಪ್ ಕೊಡಲು ಆಗುವುದಿಲ್ಲ. ನೀವು ಕೊರೊನಾ ಸೋಂಕಿತರ ಜೊತೆ ಇರುತ್ತಿರಾ ಎನ್ನುತ್ತಾರೆ’ ಎಂದು ತಮ್ಮ ಅಸಹಾಯಕತೆ ವ್ಯಕ್ತಪಡಿಸುತ್ತಾರೆ ಪ್ರಿಯಾಂಕಾ.

ಜಾಗೃತಿ ಅಭಿಯಾನಗಳು

’ಕಷ್ಟವೋ ಸುಖವೋ ಹೇಗೋ ಮಾಡಿ ಯಾರಾದ್ರೂ ಪುಣ್ಯಾತ್ಮರ ಗಾಡಿಯಲ್ಲಿ ಡ್ರಾಪ್ ತೆಗೆದುಕೊಂಡರೆ, ಊರಿನಲ್ಲಿ ಹಲವರ ಬಾಯಿಗೆ ಆಹಾರವಾಗಬೇಕು. ನಮ್ಮ ಕೆಲಸದ ಬಗ್ಗೆ ಕಿಂಚಿತ್ತು ತಿಳುವಳಿಕೆ ಇಲ್ಲದ ಇವರು ಊರಿನಲ್ಲಿ ನಮ್ಮ ಬಗ್ಗೆ, ಯಾರ್‍ಯಾರದ್ದೋ ಬೈಕ್‌ನಲ್ಲಿ ಸುತ್ತುತ್ತಾರೆ ಎಂದು ಕೆಟ್ಟದಾಗಿ ಪ್ರಚಾರ ಮಾಡುತ್ತಾರೆ. ನಾನು ಕೂಡ ಹಲವು ಬಾರಿ ಈ ಬಗ್ಗೆ ಸಿಡಿದೆದ್ದಿದ್ದೇನೆ. ಪೊಲೀಸ್, ತಹಶಿಲ್ದಾರ್‌ ವರೆಗೂ ದೂರು ತಲುಪುವಂತೆ ಮಾಡಿದ್ದೇನೆ. ಆದರೆ, ಸ್ವತಃ ಇವರಲ್ಲಿ ಜಾಗೃತಿ ಬರುವವರೆಗೂ ಏನೂ ಮಾಡಿದರು ಪ್ರಯೋಜನವಿಲ್ಲವಷ್ಟೇ’ ಎಂದು ನಿಟ್ಟುಸಿರು ಬಿಡುತ್ತಾರೆ.

’ಒಂದು ತರಹ ನಿರ್ಲಕ್ಷಿತ ಸಮುದಾಯ ನಮ್ಮದು ಎನಿಸುತ್ತದೆ. ಕೆಲವೊಮ್ಮೆ ಅಂಗನವಾಡಿ ಕಾರ್ಯಕರ್ತೆಯರು, ವೈದ್ಯರು, ನರ್ಸ್‌‌ಗಳು ನಮ್ಮನ್ನು ಲೆಕ್ಕಕ್ಕೆ ತೆಗೆದುಕೊಲ್ಳುವುದಿಲ್ಲ. ಇತ್ತ ಜನ ನಮ್ಮನ್ನು ನೋಡಿದರೇ ಅಂಟು ರೋಗವನ್ನು ನೋಡಿದಂತೆ ದೂರ ಸರಿಯುತ್ತಾರೆ. ನಮ್ಮನ್ನು ನೋಡಿದರೇ ಬಾಗಿಲು ಮುಚ್ಚುತ್ತಾರೆ. ಕೊರೊನಾ ಟೆಸ್ಟ್ ಮಾಡಿಸಲು ಬಂದರು ಎಂದು ಬೈಯುತ್ತಾರೆ. ಇಂತಹ ಅಪಮಾನಗಳನ್ನು ನುಂಗಿಕೊಂಡು ನಾವು ಯಾರಿಗಾಗಿ ಕೆಲಸ ಮಾಡುತ್ತಿದ್ದೇವೆ ಎಂಬುದನ್ನು ಇಂದಿನ ಯುವಕರು ಅರ್ಥ ಮಾಡಿಕೊಳ್ಳಬೇಕಿದೆ. ಅವರು ಕೊರೊನಾ ಕಾಲದಲ್ಲಿ ಜನರಿಗೆ ನೆರವಾಗದಿದದ್ದರೂ, ನಮ್ಮ ಕೆಲಸ ಮಾಡಲು ನಮಗೆ ತೊಂದರೆ ನೀಡದಿದ್ದರೆ ಸಾಕು’ ಎಂದು ಮನವಿ ಮಾಡುತ್ತಾರೆ.

ಆಶಾ ಕಾರ್ಯಕರ್ತೆಯರ ಸಂಕಷ್ಟ ಒಂದೆರಡಲ್ಲ. ಹಳ್ಳಿಗಳಲ್ಲಿ ಕೊರೊನಾ ಜಾಗೃತಿ ಮೂಡಿಸಲು ಹೋದರೂ ದೂರ ಓಡಿಹೋಗುವಂತಹ ಪರಿಸ್ಥಿತಿ ಇದೆ. ಸೋಂಕು ಇದೆ ಎಂಬುದನ್ನೇ ಮುಚ್ಚಿಟ್ಟುಕೊಳ್ಳೂವ ಜನ, ಇವರನ್ನು ಕಂಡರೇ ಕೆಂಡಕಾರುತ್ತಾರೆ. ಆದರೂ, ಛಲಬಿಡದೇ ಕೆಲಸ ಮಾಡುವ ಇವರ ಧೈರ್ಯಕ್ಕೆ ಮೆಚ್ಚಲೇಬೇಕು. ಕೊರೊನಾ ಸೋಂಕಿಗೆ ಒಳಗಾದ ವ್ಯಕ್ತಿಯನ್ನು ಮನೆಯಿಂದ ಆಸ್ಪತ್ರೆ/ಕೋವಿಡ್ ಸೆಂಟರ್‌ಗೆ ಸೇರಿಸುವುದಷ್ಟೇ ಇವರ ಕೆಲಸವಲ್ಲ. ಕೊರೊನಾ ಸೋಂಕಿತರನ್ನು ಕೊರೊನಾ ಕೇಂದ್ರಕ್ಕೆ ಕಳುಹಿಸಿದ ಬಳಿಕ ಅವರಿದ್ದ ಬೀದಿಯನ್ನು ಸ್ಯಾನಿಟೈಜ್ ಮಾಡಿಸುವುದು, ಸೋಂಕಿತನ ಸಂಪರ್ಕಕ್ಕೆ ಬಂದವರನ್ನು ಮನವೊಲಿಸಿ ಕೋವಿಡ್ ಟೆಸ್ಟ್ ಮಾಡಿಸುವುದು, ಹೋಂ ಐಸೋಲೇಷನ್ ಆದವರನ್ನು ಪ್ರತಿದಿನ ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸುವುದು, ಒಂದು ಗ್ರಾಮದಲ್ಲಿ 10 ಕ್ಕಿಂತ ಹೆಚ್ಚು ಮಂದಿಗೆ ಸೋಂಕಿದ್ದರೇ ಅಲ್ಲಿ ಜಾಗೃತಿ ಜಾಥಾ ಮಾಡಿಸುವುದು… ಹೇಳುತ್ತಾ ಹೋದರೆ ಪಟ್ಟಿ ಮುಗಿಯುವುದಿಲ್ಲ.

ಸ್ಯಾನಿಟೈಜ್ ಮಾಡಿಸುತ್ತಿರುವ ಆಶಾ ಕಾರ್ಯಕರ್ತೆ ಪ್ರಿಯಾಂಕಾ

ಕಳೆದ ವಾರವಷ್ಟೇ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಆನ್‌ಲೈನ್ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯ ಸರ್ಕಾರಕ್ಕೆ ತಮ್ಮ ಮನವಿ ಸಲ್ಲಿಸಿದ್ದಾರೆ. ಗುರುವಾರ ಲಾಕ್‌ಡೌನ್‌ 2ನೇ ಹಂತದ ಪರಿಹಾರ ಪ್ಯಾಕೇಜ್‌ನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಆಶಾ ಕಾರ್ಯಕರ್ತೆಯರಿಗೆ 3000 ಸಾವಿರ ರೂಪಾಯಿ ಘೋಷಿಸಿದ್ದಾರೆ. ಆದರ, ಹಳ್ಳಿಗಳಲ್ಲಿ ಕೊರೊನಾ ಹರಡದಂತೆ ಕಷ್ಟಪಡುತ್ತಿರುವ ಇವರಿಗೆ ಇದು ಅರೆಕಾಸಿನ ಮಜ್ಜಿಗೆಯಂತೆ ಎಂದರೆ ತಪ್ಪಾಗಲಾರದು.

ಈ ಸಾಂಕ್ರಾಮಿಕ ರೋಗದ ಬಗ್ಗೆ ಮೂಡಿಸುವ ಜಾಗೃತಿಯ ಜೊತೆಗೆ ಜೀವದ ಹಂಗು ತೊರೆದು ಕೆಲಸ ಮಾಡುವ ಫ್ರಂಟ್‌ ಲೈನ್ ವಾರಿಯರ್‌ಗಳಾದ ಆಶಾ ಕಾರ್ಯಕರ್ತೆಯರ ಕೆಲಸದ ಬಗ್ಗೆಯೂ ಜನರಲ್ಲಿ ಜಾಗೃತಿ ಮೂಡಿಸುವುದು ಈಗಿನ ಅನಿವಾರ್ಯ. ಹಳ್ಳಿ ಹಳ್ಳಿ ಸುತ್ತುವ ಇವರಿಗೆ ವಾಹನದ ವ್ಯವಸ್ಥೆ ತಕ್ಷಣ ಆಗಬೇಕಿದೆ. ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಹಿಂಜರಿಯುವ ಇವರಿಗೆ ವೈದ್ಯರು, ಪಿಡಿಒಗಳು ಮುಖ್ಯವಾಗಿ ಹಳ್ಳಿಯ ಜನರು ಧೈರ್ಯ ತುಂಬಬೇಕಿದೆ. ಸರ್ಕಾರದಿಂದ ಬರಬೇಕಾದ ಸೌಲಭ್ಯಗಳಿಗಾಗಿ ಪ್ರತಿಭಟನೆ ನಡೆಸಿ ಪರಿಹಾರ ಪಡೆದುಕೊಳ್ಳಬಹುದು. ಆದರೆ, ತಮ್ಮದೇ ಊರಿನ ಜನ ನೀಡುವ ಹಿಂಸೆ, ಜನರಿಗಾಗಿ ಕೆಲಸ ಮಾಡುವವರ ಮನಸ್ಸಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಇದನ್ನು ಜನರು ಅರ್ಥ ಮಾಡಿಕೊಡಿಕೊಂಡು ಅವರಿಗೆ ಗೌರವ ನೀಡಬೇಕು. ಅವರ ಕೆಲಸ ಮಾಡಲು ಅನುವು ಮಾಡಿಕೊಟ್ಟು ಸಹಕರಿಸಬೇಕು. ಆ ಮೂಲಕ ಕೊರೊನಾ ಸೋಂಕು ಉಲ್ಭಣವಾಗದಂತೆ ತಡೆಯಬೇಕಿದೆ.


ಇದನ್ನೂ ಓದಿ: ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಶಾ ಕಾರ್ಯಕರ್ತೆಯರ ಆನ್‌ಲೈನ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...