Homeಕರ್ನಾಟಕಪ್ರತಿದಿನ ಭಯದಲ್ಲೇ ಮನೆಗೆ ಹೋಗುವ ನಮಗೆ, ನಮ್ಮ ಹಳ್ಳಿಗಳಲ್ಲೇ ಗೌರವವಿಲ್ಲ: ಆಶಾ ಕಾರ್ಯಕರ್ತರ ಅಳಲು

ಪ್ರತಿದಿನ ಭಯದಲ್ಲೇ ಮನೆಗೆ ಹೋಗುವ ನಮಗೆ, ನಮ್ಮ ಹಳ್ಳಿಗಳಲ್ಲೇ ಗೌರವವಿಲ್ಲ: ಆಶಾ ಕಾರ್ಯಕರ್ತರ ಅಳಲು

- Advertisement -
- Advertisement -

’ವಾರಕ್ಕೆ 3 ರಿಂದ 4 ದಿನ ಕೆಲಸ ಮಾಡುತ್ತಿದ್ದ ನಾವು, ಕೊರೊನಾ ಸಂಕಷ್ಟದಲ್ಲಿ ದಿನದ 24 ಗಂಟೆಗಳು ಕಾರ್ಯನಿರ್ವಹಿಸುತ್ತಿದ್ದೇವೆ. ಕೆಲಸ ಮುಗಿಸಿ ನಮಗೆಲ್ಲಿ ಸೋಂಕು ಹರಡಿದೆಯೋ, ಮನೆಯಲ್ಲಿ ಯಾರಿಗಾದರೂ ಹಬ್ಬುತ್ತದೆಯೋ ಎಂಬ ಭಯದಲ್ಲೇ ಮನೆಗೆ ಕಾಲಿಡುತ್ತೇವೆ. ಇದು ನಮ್ಮ ಕರ್ತವ್ಯ ಎಂದು ನಮ್ಮ ಪ್ರಾಣವನ್ನು ಒತ್ತೆ ಇಟ್ಟು ಕೆಲಸ ಮಾಡುತ್ತಿದ್ದೇವೆ ಆದರೆ, ನಾವಿರುವ ಹಳ್ಳಿಗಳಲ್ಲೇ ನಮಗೆ ಗೌರವ ದೊರೆಯುವುದಿಲ್ಲ. ಈ ಸಮಯದಲ್ಲಿ ಜಾಗೃತಿ ಮೂಡಿಸಲು ಸಹಾಯ ಮಾಡಬೇಕಾದ ಯುವ ಜನತೆಯೇ ನಮ್ಮ ಆತ್ಮವಿಶ್ವಾಸವನ್ನು ಕುಗ್ಗಿಸುವ ರೀತಿಯಲ್ಲಿ ನಡೆದುಕೊಳ್ಳುತ್ತಾರೆ” ಎಂದು ನೋವು ತೋಡಿಕೊಳ್ಳುತ್ತಾರೆ ಆಶಾ ಕಾರ್ಯಕರ್ತೆ ಪ್ರಿಯಾಂಕಾ.

ಹೌದು, ಕೊರೊನಾ ಸಾಂಕ್ರಾಮಿಕ ರೋಗ ಹಳ್ಳಿಗಳಿಗೆ ಲಗ್ಗೆಯಿಟ್ಟಿದೆ. ಗ್ರಾಮೀಣ ಪ್ರದೇಶಗಳಲ್ಲಿ ಜಾಗೃತಿ ವಹಿಸಬೇಕಿರುವುದು ಅನಿವಾರ್ಯವಾಗಿದೆ. ಇದೇ ಕಾರಣಕ್ಕೆ ಎರಡು ಬಾರಿ ಲಾಕ್‌ಡೌನ್ ಮುಂದುವರೆಸಲಾಗಿದೆ. ಹಳ್ಳಿಗಳಲ್ಲಿ ಕೊರೊನಾ ನಿಯಂತ್ರಣಕ್ಕೆ, ಕೊರೊನಾ ಜಾಗೃತಿಗೆ ಮೂಡಿಸುವಲ್ಲಿ ಮುಂಚೂಣಿಯಲ್ಲಿ ಇರುವವರು ಈ ಆಶಾ ಕಾರ್ಯಕರ್ತೆಯರು. ಇವರ ಸೇವೆ ನಿಜಕ್ಕೂ ಶ್ಲಾಘನಿಯವಾದದ್ದು. ಆದರೆ ಅವರಿಗೆ ಅಗೌರವ ಸೂಚಿಸುವ ಘಟನೆಗಳು ವರದಿಯಾಗುತ್ತಿರುವುದು ದುರಂತ.

ಸರ್ಕಾರ ನೀಡುವ ಅಲ್ಪ ಗೌರವಧನದಲ್ಲಿ ಜೀವನ ನಡೆಸುವ ಇವರು ಪ್ರತಿ ಬಾರಿಯು ತಮ್ಮ ಬೇಡಿಕೆ ಈಡೇರಿಕೆಗಾಗಿ ರಾಜಧಾನಿ ಬೆಂಗಳೂರಿನ ಕದ ತಟ್ಟಿದ್ದಾರೆ. ಅಲ್ಪ ಸ್ವಲ್ಪ ಪರಿಹಾರ ಪಡೆದಿದ್ದಾರೆ. ಆದರೆ, ಕೊರೊನಾದಂತಹ ಕಾಲದಲ್ಲಿ ಇವರ ಸೇವೆ ಅಮೂಲ್ಯವಾಗಿದೆ. ಪ್ರಾಣವನ್ನು ಲೆಕ್ಕಿಸದೇ ಕೊರೊನಾ ಸೋಂಕಿತರ ಸಹಾಯಕ್ಕೆ ನಿಲ್ಲುತ್ತಿದ್ದಾರೆ. ಆದರೆ, ಸಮಾಜ ಇವರನ್ನು ನಡೆಸಿಕೊಳ್ಳುತ್ತಿರುವ ರೀತಿ ಮಾತ್ರ ಅಸಹನೀಯವಾಗಿದೆ. ಹಳ್ಳಿಗಳಲ್ಲಿ ತಮ್ಮನ್ನು ನಡೆಸಿಕೊಳ್ಳುವ ರೀತಿಗೆ ಆಶಾ ಕಾರ್ಯಕರ್ತರು ತೀವ್ರ ಬೇಸರ ವ್ಯಕ್ತಪಡಿಸುತ್ತಾರೆ.

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಸಾಲಕಟ್ಟೆ ತಾಂಡ್ಯ ಉಪ ವಿಭಾಗದಲ್ಲಿ ಆಶಾ ಕಾರ್ಯಕರ್ತೆಯಾಗಿ ಸುಮಾರು ನಾಲ್ಕು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಪ್ರಿಯಾಂಕಾ ನಾನುಗೌರಿ.ಕಾಂ ಜೊತೆ ತಮ್ಮ ಕೆಲಸದ ಅನುಭವ, ಕೆಲಸದ ಸಮಯದಲ್ಲಿ ತಾವು ಅನುಭವಿಸುವ ಸವಾಲುಗಳನ್ನು ಹಂಚಿಕೊಂಡಿದ್ದು ಹೀಗೆ.

ಇದನ್ನೂ ಓದಿ: ಕನ್ನಡವನ್ನು ಕೊಳಕು ಭಾಷೆ ಎಂದು ತೋರಿಸಿದ್ದ ವೆಬ್‌ಸೈಟ್, ಕನ್ನಡಿಗರ ಆಕ್ರೋಶಕ್ಕೆ ಮಣಿದ ಗೂಗಲ್

’ನನಗೆ 7 ವರ್ಷದ ಮಗ ಮತ್ತು 5 ವರ್ಷದ ಹೆಣ್ಣು ಮಗುವಿದೆ. ನಾಲ್ಕು ಜನರ ಕುಟುಂಬ ನಮ್ಮದು. ಪ್ರತಿದಿನ ಕೆಲಸ ಮುಗಿಸಿ ಮನೆಗೆ ಭಯದಲ್ಲೇ ಹೋಗುತ್ತೇವೆ. ಎಷ್ಟೇ ಸುರಕ್ಷತಾ ನಿಯಮಗಳನ್ನು ಪಾಲಿಸಿದ್ದರೂ ಮಕ್ಕಳಿರುವ ಮನೆಯಲ್ಲಿ ಕೊರೊನಾ ಭಯ ಇರುತ್ತದೆ. ಆದರೆ, ನಮ್ಮ ಕೆಲಸ ನಾನು ಮಾಡಬೇಕು. ಕೊರೊನಾ ಸೋಂಕು ಹೆಚ್ಚಾದಾಗಿನಿಂದ ದಿನದ 24 ಗಂಟೆಯೂ ಕೆಲಸ ಮಾಡುತ್ತಿದ್ದೇವೆ. ನನ್ನ ವ್ಯಾಪ್ತಿಯಲ್ಲಿ ಮೂರು ಹಳ್ಳಿಗಳಿವೆ. ಬೇರೆ ಹಳ್ಳಿಗಳಿಗೆ ಹೋದಾಗ ಜನ ನೀಡುವ ಸ್ಪಂದನೆ, ನಾವು ವಾಸವಿರುವ ಹಳ್ಳಿಯಲ್ಲಿ ದೊರೆಯುವುದಿಲ್ಲ’ ಎನ್ನುತ್ತಾರೆ.

’ಲಾಕ್‌ಡೌನ್ ಮಾಡಿ ಬಸ್, ಆಟೋ ಎಲ್ಲಾ ನಿಲ್ಲಿಸಿರುವ ಸರ್ಕಾರಕ್ಕೆ ನಾವು ಹೇಗೆ ಓಡಾಡುತ್ತೇವೆ. ಹಳ್ಳಿ ಹಳ್ಳಿಗೆ ಹೇಗೆ ಹೋಗುತ್ತೇವೆ ಎಂಬ ಬಗ್ಗೆ ಚಿಂತೆ ಇಲ್ಲ. ರಸ್ತೆಯಲ್ಲಿ ಓಡಾಡುವ ಒಂದೋ, ಎರಡೋ ಬೈಕ್‌ಗಳಿಗೆ ಕೈ ಅಡ್ಡ ಹಾಕಿ ಅವರ ಜೊತೆಗೆ ಹೋಗಬೇಕು. ಅದು ಬೈಕ್ ಓಡಿಸುವವರು ಸ್ಪಲ್ಪ ಮಾನವೀಯತೆ ಇರುವವರಿದ್ದರೆ ನಿಲ್ಲಿಸುತ್ತಾರೆ. ಬೇರೆಯವರು ನಮ್ಮ ಯೂನಿಫಾರಂ ನೋಡಿ ಗಾಡಿಯನ್ನು ಕೂಡ ನಿಲ್ಲಿಸುವುದಿಲ್ಲ. ಮತ್ತೆ ಕೆಲವರು ಗಾಡಿ ನಿಲ್ಲಿಸಿ, ಕ್ಷಮಿಸಿ ನಿಮಗೆ ಡ್ರಾಪ್ ಕೊಡಲು ಆಗುವುದಿಲ್ಲ. ನೀವು ಕೊರೊನಾ ಸೋಂಕಿತರ ಜೊತೆ ಇರುತ್ತಿರಾ ಎನ್ನುತ್ತಾರೆ’ ಎಂದು ತಮ್ಮ ಅಸಹಾಯಕತೆ ವ್ಯಕ್ತಪಡಿಸುತ್ತಾರೆ ಪ್ರಿಯಾಂಕಾ.

ಜಾಗೃತಿ ಅಭಿಯಾನಗಳು

’ಕಷ್ಟವೋ ಸುಖವೋ ಹೇಗೋ ಮಾಡಿ ಯಾರಾದ್ರೂ ಪುಣ್ಯಾತ್ಮರ ಗಾಡಿಯಲ್ಲಿ ಡ್ರಾಪ್ ತೆಗೆದುಕೊಂಡರೆ, ಊರಿನಲ್ಲಿ ಹಲವರ ಬಾಯಿಗೆ ಆಹಾರವಾಗಬೇಕು. ನಮ್ಮ ಕೆಲಸದ ಬಗ್ಗೆ ಕಿಂಚಿತ್ತು ತಿಳುವಳಿಕೆ ಇಲ್ಲದ ಇವರು ಊರಿನಲ್ಲಿ ನಮ್ಮ ಬಗ್ಗೆ, ಯಾರ್‍ಯಾರದ್ದೋ ಬೈಕ್‌ನಲ್ಲಿ ಸುತ್ತುತ್ತಾರೆ ಎಂದು ಕೆಟ್ಟದಾಗಿ ಪ್ರಚಾರ ಮಾಡುತ್ತಾರೆ. ನಾನು ಕೂಡ ಹಲವು ಬಾರಿ ಈ ಬಗ್ಗೆ ಸಿಡಿದೆದ್ದಿದ್ದೇನೆ. ಪೊಲೀಸ್, ತಹಶಿಲ್ದಾರ್‌ ವರೆಗೂ ದೂರು ತಲುಪುವಂತೆ ಮಾಡಿದ್ದೇನೆ. ಆದರೆ, ಸ್ವತಃ ಇವರಲ್ಲಿ ಜಾಗೃತಿ ಬರುವವರೆಗೂ ಏನೂ ಮಾಡಿದರು ಪ್ರಯೋಜನವಿಲ್ಲವಷ್ಟೇ’ ಎಂದು ನಿಟ್ಟುಸಿರು ಬಿಡುತ್ತಾರೆ.

’ಒಂದು ತರಹ ನಿರ್ಲಕ್ಷಿತ ಸಮುದಾಯ ನಮ್ಮದು ಎನಿಸುತ್ತದೆ. ಕೆಲವೊಮ್ಮೆ ಅಂಗನವಾಡಿ ಕಾರ್ಯಕರ್ತೆಯರು, ವೈದ್ಯರು, ನರ್ಸ್‌‌ಗಳು ನಮ್ಮನ್ನು ಲೆಕ್ಕಕ್ಕೆ ತೆಗೆದುಕೊಲ್ಳುವುದಿಲ್ಲ. ಇತ್ತ ಜನ ನಮ್ಮನ್ನು ನೋಡಿದರೇ ಅಂಟು ರೋಗವನ್ನು ನೋಡಿದಂತೆ ದೂರ ಸರಿಯುತ್ತಾರೆ. ನಮ್ಮನ್ನು ನೋಡಿದರೇ ಬಾಗಿಲು ಮುಚ್ಚುತ್ತಾರೆ. ಕೊರೊನಾ ಟೆಸ್ಟ್ ಮಾಡಿಸಲು ಬಂದರು ಎಂದು ಬೈಯುತ್ತಾರೆ. ಇಂತಹ ಅಪಮಾನಗಳನ್ನು ನುಂಗಿಕೊಂಡು ನಾವು ಯಾರಿಗಾಗಿ ಕೆಲಸ ಮಾಡುತ್ತಿದ್ದೇವೆ ಎಂಬುದನ್ನು ಇಂದಿನ ಯುವಕರು ಅರ್ಥ ಮಾಡಿಕೊಳ್ಳಬೇಕಿದೆ. ಅವರು ಕೊರೊನಾ ಕಾಲದಲ್ಲಿ ಜನರಿಗೆ ನೆರವಾಗದಿದದ್ದರೂ, ನಮ್ಮ ಕೆಲಸ ಮಾಡಲು ನಮಗೆ ತೊಂದರೆ ನೀಡದಿದ್ದರೆ ಸಾಕು’ ಎಂದು ಮನವಿ ಮಾಡುತ್ತಾರೆ.

ಆಶಾ ಕಾರ್ಯಕರ್ತೆಯರ ಸಂಕಷ್ಟ ಒಂದೆರಡಲ್ಲ. ಹಳ್ಳಿಗಳಲ್ಲಿ ಕೊರೊನಾ ಜಾಗೃತಿ ಮೂಡಿಸಲು ಹೋದರೂ ದೂರ ಓಡಿಹೋಗುವಂತಹ ಪರಿಸ್ಥಿತಿ ಇದೆ. ಸೋಂಕು ಇದೆ ಎಂಬುದನ್ನೇ ಮುಚ್ಚಿಟ್ಟುಕೊಳ್ಳೂವ ಜನ, ಇವರನ್ನು ಕಂಡರೇ ಕೆಂಡಕಾರುತ್ತಾರೆ. ಆದರೂ, ಛಲಬಿಡದೇ ಕೆಲಸ ಮಾಡುವ ಇವರ ಧೈರ್ಯಕ್ಕೆ ಮೆಚ್ಚಲೇಬೇಕು. ಕೊರೊನಾ ಸೋಂಕಿಗೆ ಒಳಗಾದ ವ್ಯಕ್ತಿಯನ್ನು ಮನೆಯಿಂದ ಆಸ್ಪತ್ರೆ/ಕೋವಿಡ್ ಸೆಂಟರ್‌ಗೆ ಸೇರಿಸುವುದಷ್ಟೇ ಇವರ ಕೆಲಸವಲ್ಲ. ಕೊರೊನಾ ಸೋಂಕಿತರನ್ನು ಕೊರೊನಾ ಕೇಂದ್ರಕ್ಕೆ ಕಳುಹಿಸಿದ ಬಳಿಕ ಅವರಿದ್ದ ಬೀದಿಯನ್ನು ಸ್ಯಾನಿಟೈಜ್ ಮಾಡಿಸುವುದು, ಸೋಂಕಿತನ ಸಂಪರ್ಕಕ್ಕೆ ಬಂದವರನ್ನು ಮನವೊಲಿಸಿ ಕೋವಿಡ್ ಟೆಸ್ಟ್ ಮಾಡಿಸುವುದು, ಹೋಂ ಐಸೋಲೇಷನ್ ಆದವರನ್ನು ಪ್ರತಿದಿನ ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸುವುದು, ಒಂದು ಗ್ರಾಮದಲ್ಲಿ 10 ಕ್ಕಿಂತ ಹೆಚ್ಚು ಮಂದಿಗೆ ಸೋಂಕಿದ್ದರೇ ಅಲ್ಲಿ ಜಾಗೃತಿ ಜಾಥಾ ಮಾಡಿಸುವುದು… ಹೇಳುತ್ತಾ ಹೋದರೆ ಪಟ್ಟಿ ಮುಗಿಯುವುದಿಲ್ಲ.

ಸ್ಯಾನಿಟೈಜ್ ಮಾಡಿಸುತ್ತಿರುವ ಆಶಾ ಕಾರ್ಯಕರ್ತೆ ಪ್ರಿಯಾಂಕಾ

ಕಳೆದ ವಾರವಷ್ಟೇ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಆನ್‌ಲೈನ್ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯ ಸರ್ಕಾರಕ್ಕೆ ತಮ್ಮ ಮನವಿ ಸಲ್ಲಿಸಿದ್ದಾರೆ. ಗುರುವಾರ ಲಾಕ್‌ಡೌನ್‌ 2ನೇ ಹಂತದ ಪರಿಹಾರ ಪ್ಯಾಕೇಜ್‌ನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಆಶಾ ಕಾರ್ಯಕರ್ತೆಯರಿಗೆ 3000 ಸಾವಿರ ರೂಪಾಯಿ ಘೋಷಿಸಿದ್ದಾರೆ. ಆದರ, ಹಳ್ಳಿಗಳಲ್ಲಿ ಕೊರೊನಾ ಹರಡದಂತೆ ಕಷ್ಟಪಡುತ್ತಿರುವ ಇವರಿಗೆ ಇದು ಅರೆಕಾಸಿನ ಮಜ್ಜಿಗೆಯಂತೆ ಎಂದರೆ ತಪ್ಪಾಗಲಾರದು.

ಈ ಸಾಂಕ್ರಾಮಿಕ ರೋಗದ ಬಗ್ಗೆ ಮೂಡಿಸುವ ಜಾಗೃತಿಯ ಜೊತೆಗೆ ಜೀವದ ಹಂಗು ತೊರೆದು ಕೆಲಸ ಮಾಡುವ ಫ್ರಂಟ್‌ ಲೈನ್ ವಾರಿಯರ್‌ಗಳಾದ ಆಶಾ ಕಾರ್ಯಕರ್ತೆಯರ ಕೆಲಸದ ಬಗ್ಗೆಯೂ ಜನರಲ್ಲಿ ಜಾಗೃತಿ ಮೂಡಿಸುವುದು ಈಗಿನ ಅನಿವಾರ್ಯ. ಹಳ್ಳಿ ಹಳ್ಳಿ ಸುತ್ತುವ ಇವರಿಗೆ ವಾಹನದ ವ್ಯವಸ್ಥೆ ತಕ್ಷಣ ಆಗಬೇಕಿದೆ. ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಹಿಂಜರಿಯುವ ಇವರಿಗೆ ವೈದ್ಯರು, ಪಿಡಿಒಗಳು ಮುಖ್ಯವಾಗಿ ಹಳ್ಳಿಯ ಜನರು ಧೈರ್ಯ ತುಂಬಬೇಕಿದೆ. ಸರ್ಕಾರದಿಂದ ಬರಬೇಕಾದ ಸೌಲಭ್ಯಗಳಿಗಾಗಿ ಪ್ರತಿಭಟನೆ ನಡೆಸಿ ಪರಿಹಾರ ಪಡೆದುಕೊಳ್ಳಬಹುದು. ಆದರೆ, ತಮ್ಮದೇ ಊರಿನ ಜನ ನೀಡುವ ಹಿಂಸೆ, ಜನರಿಗಾಗಿ ಕೆಲಸ ಮಾಡುವವರ ಮನಸ್ಸಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಇದನ್ನು ಜನರು ಅರ್ಥ ಮಾಡಿಕೊಡಿಕೊಂಡು ಅವರಿಗೆ ಗೌರವ ನೀಡಬೇಕು. ಅವರ ಕೆಲಸ ಮಾಡಲು ಅನುವು ಮಾಡಿಕೊಟ್ಟು ಸಹಕರಿಸಬೇಕು. ಆ ಮೂಲಕ ಕೊರೊನಾ ಸೋಂಕು ಉಲ್ಭಣವಾಗದಂತೆ ತಡೆಯಬೇಕಿದೆ.


ಇದನ್ನೂ ಓದಿ: ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಶಾ ಕಾರ್ಯಕರ್ತೆಯರ ಆನ್‌ಲೈನ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...