Homeಮುಖಪುಟದೆಹಲಿ ಬಜೆಟ್‌ನ ಶೇ. 25ರಷ್ಟು ಹಣ ಶಿಕ್ಷಣಕ್ಕಾಗಿ ಮೀಸಲಿಟ್ಟಿದ್ದೇವೆ: ಆತಿಶಿ ಮಾರ್ಲೇನಾ

ದೆಹಲಿ ಬಜೆಟ್‌ನ ಶೇ. 25ರಷ್ಟು ಹಣ ಶಿಕ್ಷಣಕ್ಕಾಗಿ ಮೀಸಲಿಟ್ಟಿದ್ದೇವೆ: ಆತಿಶಿ ಮಾರ್ಲೇನಾ

ಸರ್ಕಾರಗಳು ಖಾಸಗಿ ಶಾಲೆಗಳ ಲಾಬಿಗೆ ಮಣಿಯದೇ ಸರ್ಕಾರಿ ಶಾಲೆಗಳ ಮೂಲ ಸೌಕರ್ಯ ಹಾಗೂ ಬೋಧನಾ ಗುಣಮಟ್ಟವನ್ನು ಅಭಿವೃದ್ಧಿ ಪಡಿಸಬೇಕು.

- Advertisement -
- Advertisement -

“ಮಕ್ಕಳೇ ನಮ್ಮ ರಾಜ್ಯದ ಮುಂದಿನ ಭವಿಷ್ಯ. ಹಾಗಾಗಿ ಅವರಿಗೆ ಉತ್ತಮ ಶಿಕ್ಷಣ ನೀಡಬೇಕೆಂದು ನಿರ್ಧರಿಸಿ, ದೆಹಲಿ ಬಜೆಟ್‌ನಲ್ಲಿ ಶೇ. 25ರಷ್ಟು ಹಣವನ್ನು ಶಿಕ್ಷಣಕ್ಕಾಗಿ ಮೀಸಲಿಟ್ಟಿದ್ದೆವು. ಆದ್ದರಿಂದ ದೆಹಲಿ ಶೈಕ್ಷಣಿಕ ಕ್ರಾಂತಿ ಸಾಧಿಸಲು ಸಾಧ್ಯವಾಯಿತು ಎಂದು ದೆಹಲಿಯ ಎಎಪಿ ಶಾಸಕಿ, ಶಿಕ್ಷಣ ತಜ್ಞೆ ಆತಿಶಿ ಮಾರ್ಲೇನಾ ತಿಳಿಸಿದರು.

ಬೆಂಗಳೂರಿನ ರೋಟರಿ ಹಾಲ್‌ನಲ್ಲಿ ಆಮ್‌ ಆದ್ಮಿ ಪಾರ್ಟಿ ಆಯೋಜಿಸಿದ್ದ “ಶಿಕ್ಷಣ ಸಮ್ಮೇಳನ” ಸಂವಾದದಲ್ಲಿ ಮಾತನಾಡಿದ ಅವರು, “ಏಳು ವರ್ಷಗಳ ಹಿಂದೆ ದೆಹಲಿಯ ಸರ್ಕಾರಿ ಶಾಲೆಗಳು ಕೂಡ ಕರ್ನಾಟಕದ ಈಗಿನ ಸರ್ಕಾರಿ ಶಾಲೆಗಳಂತೆ ಇದ್ದವು. ಶೌಚಾಲಯ, ಬೋರ್ಡ್‌, ಡೆಸ್ಕ್‌, ಟೇಬಲ್‌, ಕೊಠಡಿ ಯಾವುದೂ ಅಲ್ಲಿ ಸರಿಯಾಗಿರಲಿಲ್ಲ. ಇದು ವಿದ್ಯಾರ್ಥಿಗಳ ಕಲಿಕೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತಿತ್ತು. ಈಗ ಪರಿಸ್ಥಿತಿ ಬದಲಾಗಿದೆ ಎಂದು ಅನುಭವ ಹಂಚಿಕೊಂಡರು.

ದೆಹಲಿ ಸರ್ಕಾರದಂತೆ ಕರ್ನಾಟಕ ಸರ್ಕಾರ ಕೂಡ ಕೋವಿಡ್‌ ಸಮಯವನ್ನು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದ ಅವರು ನಾವು ಮೀಸಲಿಟ್ಟ ಹಣದಲ್ಲಿ ಪ್ರತಿ ರೂಪಾಯಿಗೂ ಲೆಕ್ಕವಿಟ್ಟು ಸದ್ಭಳಕೆ ಮಾಡಿಕೊಂಡೆವು ಎಂದರು.

ಶಿಕ್ಷಣದಲ್ಲಿ ಸುಧಾರಣೆ ತರುವುದು ಕಷ್ಟವಲ್ಲ. ಬದಲಾವಣೆ ತರಬೇಕೆಂಬ ಇಚ್ಛಾಶಕ್ತಿ ಸರ್ಕಾರಕ್ಕೆ ಇರಬೇಕು ಅಷ್ಟೇ. ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳ ಸರ್ಕಾರಗಳಿಗೆ ಶಿಕ್ಷಣವು ಆದ್ಯತೆಯ ವಿಷಯವೇ ಆಗಿಲ್ಲ. ಆದ್ದರಿಂದ ದೆಹಲಿಯೇತರ ರಾಜ್ಯಗಳ ಸರ್ಕಾರಿ ಶಾಲೆಗಳು ಈಗಲೂ ಹಿಂದುಳಿದಿವೆ ಎಂದು ಬೇಸರ ವ್ಯಕ್ತಪಡಿಸಿದರು.


ಇದನ್ನೂ ಓದಿ: ಇವು ದೆಹಲಿ ಸರ್ಕಾರಿ ಶಾಲೆ ಮತ್ತು ಸರ್ಕಾರಿ ಆಸ್ಪತ್ರೆಗಳು ಎಂದರೆ ನೀವು ನಂಬುವುದಿಲ್ಲ


ಸರ್ಕಾರಗಳು ಶಿಕ್ಷಣ ಕ್ಷೇತ್ರವನ್ನು ನೋಡುವ ರೀತಿ ಬದಲಾಗಬೇಕು. ಖಾಸಗಿ ಶಾಲೆಗಳ ಲಾಬಿಗೆ ಮಣಿಯದೇ ಸರ್ಕಾರಿ ಶಾಲೆಗಳ ಮೂಲ ಸೌಕರ್ಯ ಹಾಗೂ ಬೋಧನಾ ಗುಣಮಟ್ಟವನ್ನು ಅಭಿವೃದ್ಧಿ ಪಡಿಸಬೇಕು. ಉಪಕರಣಗಳ ಕೊರತೆಯಿಂದಾಗಿ ಕರ್ನಾಟಕದ 65% ಮಕ್ಕಳು ಶಿಕ್ಷಣದಿಂದ ದೂರ ಉಳಿದಿದ್ದಾರೆ. ಕೊರೊನಾವನ್ನು ಬಿಟ್ಟರೆ, ಹಾಳಾಗಿರುವ ಶಿಕ್ಷಣ ವ್ಯವಸ್ಥೆಯೇ ದೇಶಕ್ಕೆ ಹೆಚ್ಚು ಮಾರಕವಾಗಿದೆ ಎಂದು ಆತಿಶಿ ಮಾರ್ಲೇನಾ ಅಭಿಪ್ರಾಯಪಟ್ಟರು.

ದೆಹಲಿಯಲ್ಲಿ ಬೋಧನಾ ಗುಣಮಟ್ಟದ ಅಭಿವೃದ್ಧಿಗೆ ಶಿಕ್ಷಕರನ್ನು ಮಾತ್ರವಲ್ಲದೇ ಪೋಷಕರ ಸಹಾಯವನ್ನೂ ಪಡೆಯಲಾಯಿತು. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರ ನಡುವೆ ಅನೇಕ ಸಲ ಸಭೆ, ಸಂವಾದ ಏರ್ಪಡಿಸಿದೆವು. ಅಲ್ಲಿ ಅಮೂಲ್ಯವಾದ ಸಲಹೆಗಳು ಕೇಳಿಬಂದವು. ಅದನ್ನು ಸರಿಯಾಗಿ ಕಾರ್ಯರೂಪಕ್ಕೆ ತರುವ ಕೆಲಸವನ್ನು ಎಎಪಿ ಸರ್ಕಾರ ಮಾಡಿತು. ಶಿಕ್ಷಕರಿಗೆ ತಜ್ಞರಿಂದ ತರಬೇತಿ ಕೊಡಿಸಲಾಯಿತು. ಆಧುನಿಕ ತಂತ್ರಜ್ಞಾನವನ್ನು ವ್ಯಾಪಕವಾಗಿ ಬಳಸಿಕೊಂಡೆವು. ಈ ಎಲ್ಲಾ ಕ್ರಮಗಳಿಂದ ಪೋಷಕರಿಗೆ ಸರ್ಕಾರದ ಮೇಲೆ ಹೆಮ್ಮೆ ಉಂಟಾಗಿ, ದೆಹಲಿಯ ಪಾಲಿಕೆ ಚುನಾವಣೆಯಲ್ಲಿ ಸ್ವಯಂಪ್ರೇರಣೆಯಿಂದ ಎಎಪಿ ಪರವಾಗಿ ಕೆಲಸ ಮಾಡಿದರು. ಹೀಗೆ ನಾವು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದು ಎಎಪಿಯ ಬೆಳವಣಿಗೆಗೂ ಕಾರಣವಾಯಿತು ಎಂದು ಆತಿಶಿ ಹೇಳಿದರು.

ಕಾರ್ಯಕ್ರಮದಲ್ಲಿ ಆಮ್‌ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿ, ಎಎಪಿ ಮುಖಂಡರಾದ ಎಚ್‌.ಡಿ.ಬಸವರಾಜು, ಶಿಕ್ಷಣ ತಜ್ಞರಾದ ಗುರುರಾಜ್‌ ಕರ್ಜಗಿ, ತಾನ್ಯಾ ಜಯರಾಜ್‌, ಪುಷ್ಪಾ ತಂತ್ರಿ, ಬಿ.ಎಸ್.ಸೂರ್ಯಪ್ರಕಾಶ್‌, ಚಿದಾನಂದ್‌, ಗುರು ಕಾಸಿನಾಥನ್‌, ಸಂಜೀವ್‌ ನರೇನ್‌ ಮತ್ತಿತರರು ಉಪಸ್ಥಿತರಿದ್ದರು.


ಇದನ್ನೂ ಓದಿ: ಕನಸುಗಾರ್ತಿಯೊಬ್ಬಳ ಕಣ್ಣೀರು : ಆತಿಶಿ ಮರ್ಲೀನಾ ಎಂಬ ಶೈಕ್ಷಣಿಕ ಚೈತನ್ಯದ ಕುರಿತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...