Homeಮುಖಪುಟದೆಹಲಿ ಬಜೆಟ್‌ನ ಶೇ. 25ರಷ್ಟು ಹಣ ಶಿಕ್ಷಣಕ್ಕಾಗಿ ಮೀಸಲಿಟ್ಟಿದ್ದೇವೆ: ಆತಿಶಿ ಮಾರ್ಲೇನಾ

ದೆಹಲಿ ಬಜೆಟ್‌ನ ಶೇ. 25ರಷ್ಟು ಹಣ ಶಿಕ್ಷಣಕ್ಕಾಗಿ ಮೀಸಲಿಟ್ಟಿದ್ದೇವೆ: ಆತಿಶಿ ಮಾರ್ಲೇನಾ

ಸರ್ಕಾರಗಳು ಖಾಸಗಿ ಶಾಲೆಗಳ ಲಾಬಿಗೆ ಮಣಿಯದೇ ಸರ್ಕಾರಿ ಶಾಲೆಗಳ ಮೂಲ ಸೌಕರ್ಯ ಹಾಗೂ ಬೋಧನಾ ಗುಣಮಟ್ಟವನ್ನು ಅಭಿವೃದ್ಧಿ ಪಡಿಸಬೇಕು.

- Advertisement -
- Advertisement -

“ಮಕ್ಕಳೇ ನಮ್ಮ ರಾಜ್ಯದ ಮುಂದಿನ ಭವಿಷ್ಯ. ಹಾಗಾಗಿ ಅವರಿಗೆ ಉತ್ತಮ ಶಿಕ್ಷಣ ನೀಡಬೇಕೆಂದು ನಿರ್ಧರಿಸಿ, ದೆಹಲಿ ಬಜೆಟ್‌ನಲ್ಲಿ ಶೇ. 25ರಷ್ಟು ಹಣವನ್ನು ಶಿಕ್ಷಣಕ್ಕಾಗಿ ಮೀಸಲಿಟ್ಟಿದ್ದೆವು. ಆದ್ದರಿಂದ ದೆಹಲಿ ಶೈಕ್ಷಣಿಕ ಕ್ರಾಂತಿ ಸಾಧಿಸಲು ಸಾಧ್ಯವಾಯಿತು ಎಂದು ದೆಹಲಿಯ ಎಎಪಿ ಶಾಸಕಿ, ಶಿಕ್ಷಣ ತಜ್ಞೆ ಆತಿಶಿ ಮಾರ್ಲೇನಾ ತಿಳಿಸಿದರು.

ಬೆಂಗಳೂರಿನ ರೋಟರಿ ಹಾಲ್‌ನಲ್ಲಿ ಆಮ್‌ ಆದ್ಮಿ ಪಾರ್ಟಿ ಆಯೋಜಿಸಿದ್ದ “ಶಿಕ್ಷಣ ಸಮ್ಮೇಳನ” ಸಂವಾದದಲ್ಲಿ ಮಾತನಾಡಿದ ಅವರು, “ಏಳು ವರ್ಷಗಳ ಹಿಂದೆ ದೆಹಲಿಯ ಸರ್ಕಾರಿ ಶಾಲೆಗಳು ಕೂಡ ಕರ್ನಾಟಕದ ಈಗಿನ ಸರ್ಕಾರಿ ಶಾಲೆಗಳಂತೆ ಇದ್ದವು. ಶೌಚಾಲಯ, ಬೋರ್ಡ್‌, ಡೆಸ್ಕ್‌, ಟೇಬಲ್‌, ಕೊಠಡಿ ಯಾವುದೂ ಅಲ್ಲಿ ಸರಿಯಾಗಿರಲಿಲ್ಲ. ಇದು ವಿದ್ಯಾರ್ಥಿಗಳ ಕಲಿಕೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತಿತ್ತು. ಈಗ ಪರಿಸ್ಥಿತಿ ಬದಲಾಗಿದೆ ಎಂದು ಅನುಭವ ಹಂಚಿಕೊಂಡರು.

ದೆಹಲಿ ಸರ್ಕಾರದಂತೆ ಕರ್ನಾಟಕ ಸರ್ಕಾರ ಕೂಡ ಕೋವಿಡ್‌ ಸಮಯವನ್ನು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದ ಅವರು ನಾವು ಮೀಸಲಿಟ್ಟ ಹಣದಲ್ಲಿ ಪ್ರತಿ ರೂಪಾಯಿಗೂ ಲೆಕ್ಕವಿಟ್ಟು ಸದ್ಭಳಕೆ ಮಾಡಿಕೊಂಡೆವು ಎಂದರು.

ಶಿಕ್ಷಣದಲ್ಲಿ ಸುಧಾರಣೆ ತರುವುದು ಕಷ್ಟವಲ್ಲ. ಬದಲಾವಣೆ ತರಬೇಕೆಂಬ ಇಚ್ಛಾಶಕ್ತಿ ಸರ್ಕಾರಕ್ಕೆ ಇರಬೇಕು ಅಷ್ಟೇ. ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳ ಸರ್ಕಾರಗಳಿಗೆ ಶಿಕ್ಷಣವು ಆದ್ಯತೆಯ ವಿಷಯವೇ ಆಗಿಲ್ಲ. ಆದ್ದರಿಂದ ದೆಹಲಿಯೇತರ ರಾಜ್ಯಗಳ ಸರ್ಕಾರಿ ಶಾಲೆಗಳು ಈಗಲೂ ಹಿಂದುಳಿದಿವೆ ಎಂದು ಬೇಸರ ವ್ಯಕ್ತಪಡಿಸಿದರು.


ಇದನ್ನೂ ಓದಿ: ಇವು ದೆಹಲಿ ಸರ್ಕಾರಿ ಶಾಲೆ ಮತ್ತು ಸರ್ಕಾರಿ ಆಸ್ಪತ್ರೆಗಳು ಎಂದರೆ ನೀವು ನಂಬುವುದಿಲ್ಲ


ಸರ್ಕಾರಗಳು ಶಿಕ್ಷಣ ಕ್ಷೇತ್ರವನ್ನು ನೋಡುವ ರೀತಿ ಬದಲಾಗಬೇಕು. ಖಾಸಗಿ ಶಾಲೆಗಳ ಲಾಬಿಗೆ ಮಣಿಯದೇ ಸರ್ಕಾರಿ ಶಾಲೆಗಳ ಮೂಲ ಸೌಕರ್ಯ ಹಾಗೂ ಬೋಧನಾ ಗುಣಮಟ್ಟವನ್ನು ಅಭಿವೃದ್ಧಿ ಪಡಿಸಬೇಕು. ಉಪಕರಣಗಳ ಕೊರತೆಯಿಂದಾಗಿ ಕರ್ನಾಟಕದ 65% ಮಕ್ಕಳು ಶಿಕ್ಷಣದಿಂದ ದೂರ ಉಳಿದಿದ್ದಾರೆ. ಕೊರೊನಾವನ್ನು ಬಿಟ್ಟರೆ, ಹಾಳಾಗಿರುವ ಶಿಕ್ಷಣ ವ್ಯವಸ್ಥೆಯೇ ದೇಶಕ್ಕೆ ಹೆಚ್ಚು ಮಾರಕವಾಗಿದೆ ಎಂದು ಆತಿಶಿ ಮಾರ್ಲೇನಾ ಅಭಿಪ್ರಾಯಪಟ್ಟರು.

ದೆಹಲಿಯಲ್ಲಿ ಬೋಧನಾ ಗುಣಮಟ್ಟದ ಅಭಿವೃದ್ಧಿಗೆ ಶಿಕ್ಷಕರನ್ನು ಮಾತ್ರವಲ್ಲದೇ ಪೋಷಕರ ಸಹಾಯವನ್ನೂ ಪಡೆಯಲಾಯಿತು. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರ ನಡುವೆ ಅನೇಕ ಸಲ ಸಭೆ, ಸಂವಾದ ಏರ್ಪಡಿಸಿದೆವು. ಅಲ್ಲಿ ಅಮೂಲ್ಯವಾದ ಸಲಹೆಗಳು ಕೇಳಿಬಂದವು. ಅದನ್ನು ಸರಿಯಾಗಿ ಕಾರ್ಯರೂಪಕ್ಕೆ ತರುವ ಕೆಲಸವನ್ನು ಎಎಪಿ ಸರ್ಕಾರ ಮಾಡಿತು. ಶಿಕ್ಷಕರಿಗೆ ತಜ್ಞರಿಂದ ತರಬೇತಿ ಕೊಡಿಸಲಾಯಿತು. ಆಧುನಿಕ ತಂತ್ರಜ್ಞಾನವನ್ನು ವ್ಯಾಪಕವಾಗಿ ಬಳಸಿಕೊಂಡೆವು. ಈ ಎಲ್ಲಾ ಕ್ರಮಗಳಿಂದ ಪೋಷಕರಿಗೆ ಸರ್ಕಾರದ ಮೇಲೆ ಹೆಮ್ಮೆ ಉಂಟಾಗಿ, ದೆಹಲಿಯ ಪಾಲಿಕೆ ಚುನಾವಣೆಯಲ್ಲಿ ಸ್ವಯಂಪ್ರೇರಣೆಯಿಂದ ಎಎಪಿ ಪರವಾಗಿ ಕೆಲಸ ಮಾಡಿದರು. ಹೀಗೆ ನಾವು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದು ಎಎಪಿಯ ಬೆಳವಣಿಗೆಗೂ ಕಾರಣವಾಯಿತು ಎಂದು ಆತಿಶಿ ಹೇಳಿದರು.

ಕಾರ್ಯಕ್ರಮದಲ್ಲಿ ಆಮ್‌ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿ, ಎಎಪಿ ಮುಖಂಡರಾದ ಎಚ್‌.ಡಿ.ಬಸವರಾಜು, ಶಿಕ್ಷಣ ತಜ್ಞರಾದ ಗುರುರಾಜ್‌ ಕರ್ಜಗಿ, ತಾನ್ಯಾ ಜಯರಾಜ್‌, ಪುಷ್ಪಾ ತಂತ್ರಿ, ಬಿ.ಎಸ್.ಸೂರ್ಯಪ್ರಕಾಶ್‌, ಚಿದಾನಂದ್‌, ಗುರು ಕಾಸಿನಾಥನ್‌, ಸಂಜೀವ್‌ ನರೇನ್‌ ಮತ್ತಿತರರು ಉಪಸ್ಥಿತರಿದ್ದರು.


ಇದನ್ನೂ ಓದಿ: ಕನಸುಗಾರ್ತಿಯೊಬ್ಬಳ ಕಣ್ಣೀರು : ಆತಿಶಿ ಮರ್ಲೀನಾ ಎಂಬ ಶೈಕ್ಷಣಿಕ ಚೈತನ್ಯದ ಕುರಿತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...