Homeಮುಖಪುಟದೆಹಲಿ ಬಜೆಟ್‌ನ ಶೇ. 25ರಷ್ಟು ಹಣ ಶಿಕ್ಷಣಕ್ಕಾಗಿ ಮೀಸಲಿಟ್ಟಿದ್ದೇವೆ: ಆತಿಶಿ ಮಾರ್ಲೇನಾ

ದೆಹಲಿ ಬಜೆಟ್‌ನ ಶೇ. 25ರಷ್ಟು ಹಣ ಶಿಕ್ಷಣಕ್ಕಾಗಿ ಮೀಸಲಿಟ್ಟಿದ್ದೇವೆ: ಆತಿಶಿ ಮಾರ್ಲೇನಾ

ಸರ್ಕಾರಗಳು ಖಾಸಗಿ ಶಾಲೆಗಳ ಲಾಬಿಗೆ ಮಣಿಯದೇ ಸರ್ಕಾರಿ ಶಾಲೆಗಳ ಮೂಲ ಸೌಕರ್ಯ ಹಾಗೂ ಬೋಧನಾ ಗುಣಮಟ್ಟವನ್ನು ಅಭಿವೃದ್ಧಿ ಪಡಿಸಬೇಕು.

- Advertisement -
- Advertisement -

“ಮಕ್ಕಳೇ ನಮ್ಮ ರಾಜ್ಯದ ಮುಂದಿನ ಭವಿಷ್ಯ. ಹಾಗಾಗಿ ಅವರಿಗೆ ಉತ್ತಮ ಶಿಕ್ಷಣ ನೀಡಬೇಕೆಂದು ನಿರ್ಧರಿಸಿ, ದೆಹಲಿ ಬಜೆಟ್‌ನಲ್ಲಿ ಶೇ. 25ರಷ್ಟು ಹಣವನ್ನು ಶಿಕ್ಷಣಕ್ಕಾಗಿ ಮೀಸಲಿಟ್ಟಿದ್ದೆವು. ಆದ್ದರಿಂದ ದೆಹಲಿ ಶೈಕ್ಷಣಿಕ ಕ್ರಾಂತಿ ಸಾಧಿಸಲು ಸಾಧ್ಯವಾಯಿತು ಎಂದು ದೆಹಲಿಯ ಎಎಪಿ ಶಾಸಕಿ, ಶಿಕ್ಷಣ ತಜ್ಞೆ ಆತಿಶಿ ಮಾರ್ಲೇನಾ ತಿಳಿಸಿದರು.

ಬೆಂಗಳೂರಿನ ರೋಟರಿ ಹಾಲ್‌ನಲ್ಲಿ ಆಮ್‌ ಆದ್ಮಿ ಪಾರ್ಟಿ ಆಯೋಜಿಸಿದ್ದ “ಶಿಕ್ಷಣ ಸಮ್ಮೇಳನ” ಸಂವಾದದಲ್ಲಿ ಮಾತನಾಡಿದ ಅವರು, “ಏಳು ವರ್ಷಗಳ ಹಿಂದೆ ದೆಹಲಿಯ ಸರ್ಕಾರಿ ಶಾಲೆಗಳು ಕೂಡ ಕರ್ನಾಟಕದ ಈಗಿನ ಸರ್ಕಾರಿ ಶಾಲೆಗಳಂತೆ ಇದ್ದವು. ಶೌಚಾಲಯ, ಬೋರ್ಡ್‌, ಡೆಸ್ಕ್‌, ಟೇಬಲ್‌, ಕೊಠಡಿ ಯಾವುದೂ ಅಲ್ಲಿ ಸರಿಯಾಗಿರಲಿಲ್ಲ. ಇದು ವಿದ್ಯಾರ್ಥಿಗಳ ಕಲಿಕೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತಿತ್ತು. ಈಗ ಪರಿಸ್ಥಿತಿ ಬದಲಾಗಿದೆ ಎಂದು ಅನುಭವ ಹಂಚಿಕೊಂಡರು.

ದೆಹಲಿ ಸರ್ಕಾರದಂತೆ ಕರ್ನಾಟಕ ಸರ್ಕಾರ ಕೂಡ ಕೋವಿಡ್‌ ಸಮಯವನ್ನು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದ ಅವರು ನಾವು ಮೀಸಲಿಟ್ಟ ಹಣದಲ್ಲಿ ಪ್ರತಿ ರೂಪಾಯಿಗೂ ಲೆಕ್ಕವಿಟ್ಟು ಸದ್ಭಳಕೆ ಮಾಡಿಕೊಂಡೆವು ಎಂದರು.

ಶಿಕ್ಷಣದಲ್ಲಿ ಸುಧಾರಣೆ ತರುವುದು ಕಷ್ಟವಲ್ಲ. ಬದಲಾವಣೆ ತರಬೇಕೆಂಬ ಇಚ್ಛಾಶಕ್ತಿ ಸರ್ಕಾರಕ್ಕೆ ಇರಬೇಕು ಅಷ್ಟೇ. ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳ ಸರ್ಕಾರಗಳಿಗೆ ಶಿಕ್ಷಣವು ಆದ್ಯತೆಯ ವಿಷಯವೇ ಆಗಿಲ್ಲ. ಆದ್ದರಿಂದ ದೆಹಲಿಯೇತರ ರಾಜ್ಯಗಳ ಸರ್ಕಾರಿ ಶಾಲೆಗಳು ಈಗಲೂ ಹಿಂದುಳಿದಿವೆ ಎಂದು ಬೇಸರ ವ್ಯಕ್ತಪಡಿಸಿದರು.


ಇದನ್ನೂ ಓದಿ: ಇವು ದೆಹಲಿ ಸರ್ಕಾರಿ ಶಾಲೆ ಮತ್ತು ಸರ್ಕಾರಿ ಆಸ್ಪತ್ರೆಗಳು ಎಂದರೆ ನೀವು ನಂಬುವುದಿಲ್ಲ


ಸರ್ಕಾರಗಳು ಶಿಕ್ಷಣ ಕ್ಷೇತ್ರವನ್ನು ನೋಡುವ ರೀತಿ ಬದಲಾಗಬೇಕು. ಖಾಸಗಿ ಶಾಲೆಗಳ ಲಾಬಿಗೆ ಮಣಿಯದೇ ಸರ್ಕಾರಿ ಶಾಲೆಗಳ ಮೂಲ ಸೌಕರ್ಯ ಹಾಗೂ ಬೋಧನಾ ಗುಣಮಟ್ಟವನ್ನು ಅಭಿವೃದ್ಧಿ ಪಡಿಸಬೇಕು. ಉಪಕರಣಗಳ ಕೊರತೆಯಿಂದಾಗಿ ಕರ್ನಾಟಕದ 65% ಮಕ್ಕಳು ಶಿಕ್ಷಣದಿಂದ ದೂರ ಉಳಿದಿದ್ದಾರೆ. ಕೊರೊನಾವನ್ನು ಬಿಟ್ಟರೆ, ಹಾಳಾಗಿರುವ ಶಿಕ್ಷಣ ವ್ಯವಸ್ಥೆಯೇ ದೇಶಕ್ಕೆ ಹೆಚ್ಚು ಮಾರಕವಾಗಿದೆ ಎಂದು ಆತಿಶಿ ಮಾರ್ಲೇನಾ ಅಭಿಪ್ರಾಯಪಟ್ಟರು.

ದೆಹಲಿಯಲ್ಲಿ ಬೋಧನಾ ಗುಣಮಟ್ಟದ ಅಭಿವೃದ್ಧಿಗೆ ಶಿಕ್ಷಕರನ್ನು ಮಾತ್ರವಲ್ಲದೇ ಪೋಷಕರ ಸಹಾಯವನ್ನೂ ಪಡೆಯಲಾಯಿತು. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರ ನಡುವೆ ಅನೇಕ ಸಲ ಸಭೆ, ಸಂವಾದ ಏರ್ಪಡಿಸಿದೆವು. ಅಲ್ಲಿ ಅಮೂಲ್ಯವಾದ ಸಲಹೆಗಳು ಕೇಳಿಬಂದವು. ಅದನ್ನು ಸರಿಯಾಗಿ ಕಾರ್ಯರೂಪಕ್ಕೆ ತರುವ ಕೆಲಸವನ್ನು ಎಎಪಿ ಸರ್ಕಾರ ಮಾಡಿತು. ಶಿಕ್ಷಕರಿಗೆ ತಜ್ಞರಿಂದ ತರಬೇತಿ ಕೊಡಿಸಲಾಯಿತು. ಆಧುನಿಕ ತಂತ್ರಜ್ಞಾನವನ್ನು ವ್ಯಾಪಕವಾಗಿ ಬಳಸಿಕೊಂಡೆವು. ಈ ಎಲ್ಲಾ ಕ್ರಮಗಳಿಂದ ಪೋಷಕರಿಗೆ ಸರ್ಕಾರದ ಮೇಲೆ ಹೆಮ್ಮೆ ಉಂಟಾಗಿ, ದೆಹಲಿಯ ಪಾಲಿಕೆ ಚುನಾವಣೆಯಲ್ಲಿ ಸ್ವಯಂಪ್ರೇರಣೆಯಿಂದ ಎಎಪಿ ಪರವಾಗಿ ಕೆಲಸ ಮಾಡಿದರು. ಹೀಗೆ ನಾವು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದು ಎಎಪಿಯ ಬೆಳವಣಿಗೆಗೂ ಕಾರಣವಾಯಿತು ಎಂದು ಆತಿಶಿ ಹೇಳಿದರು.

ಕಾರ್ಯಕ್ರಮದಲ್ಲಿ ಆಮ್‌ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿ, ಎಎಪಿ ಮುಖಂಡರಾದ ಎಚ್‌.ಡಿ.ಬಸವರಾಜು, ಶಿಕ್ಷಣ ತಜ್ಞರಾದ ಗುರುರಾಜ್‌ ಕರ್ಜಗಿ, ತಾನ್ಯಾ ಜಯರಾಜ್‌, ಪುಷ್ಪಾ ತಂತ್ರಿ, ಬಿ.ಎಸ್.ಸೂರ್ಯಪ್ರಕಾಶ್‌, ಚಿದಾನಂದ್‌, ಗುರು ಕಾಸಿನಾಥನ್‌, ಸಂಜೀವ್‌ ನರೇನ್‌ ಮತ್ತಿತರರು ಉಪಸ್ಥಿತರಿದ್ದರು.


ಇದನ್ನೂ ಓದಿ: ಕನಸುಗಾರ್ತಿಯೊಬ್ಬಳ ಕಣ್ಣೀರು : ಆತಿಶಿ ಮರ್ಲೀನಾ ಎಂಬ ಶೈಕ್ಷಣಿಕ ಚೈತನ್ಯದ ಕುರಿತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...