Homeಮುಖಪುಟಅಮೇಥಿಯಲ್ಲಿ 'ಅಬ್ ಕಿ ಬಾರ್ ರಾಬರ್ಟ್ ವಾದ್ರಾ' ಪೋಸ್ಟರ್; ಪ್ರಿಯಾಂಕಾ ಪತಿ ಸ್ಪರ್ಧೆಗೆ ಹೆಚ್ಚಿದ ಒತ್ತಡ

ಅಮೇಥಿಯಲ್ಲಿ ‘ಅಬ್ ಕಿ ಬಾರ್ ರಾಬರ್ಟ್ ವಾದ್ರಾ’ ಪೋಸ್ಟರ್; ಪ್ರಿಯಾಂಕಾ ಪತಿ ಸ್ಪರ್ಧೆಗೆ ಹೆಚ್ಚಿದ ಒತ್ತಡ

- Advertisement -
- Advertisement -

2019ರ ಲೋಕಸಭಾ ಚುನಾವಣೆ ಸೋಲಿನ ನಂತರ ರಾಹುಲ್ ಗಾಂಧಿ ತಮ್ಮ ಕ್ಷೇತ್ರವನ್ನು ಅಮೇಥಿಯಿಂದ ಕೇರಳದ ವಯನಾಡಿಗೆ ಸ್ಥಳಾಂತರಿಸಿದ್ದಾರೆ. ಆದರೆ, ಬಿಜೆಪಿ ಹಾಲಿ ಸಂಸದೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬುದು ಮಾತ್ರ ಇನ್ನೂ ಅಂತಿಮವಾಗಿಲ್ಲ. ಈ ನಡುವೆ, ಕ್ಷೇತ್ರದಲ್ಲಿ ರಾಬರ್ಟ್‌ ವಾದ್ರಾ ಕಣಕ್ಕಿಳಿಯಬೇಕು ಎಂದು ಪೋಸ್ಟರ್ ಅಭಿಯಾನ ಆರಂಭವಾಗಿದೆ.

ಕಾಂಗ್ರೆಸ್‌ನ ಅಮೇಥಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಕೂತೂಹಲದ ನಡುವೆ, ಸ್ಥಳೀಯ ಪಕ್ಷದ ಕಚೇರಿಯ ಹೊರಗೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ಅವರಿಗೆ ಚುನಾವಣಾ ಪ್ರವೇಶಕ್ಕೆ ಒತ್ತಾಯಿಸುವ ಪೋಸ್ಟರ್‌ಗಳು ಕಂಡುಬಂದಿವೆ. ಪೋಸ್ಟರ್‌ಗಳಲ್ಲಿ “ಅಮೇಥಿ ಕಿ ಜನತಾ ಕರೇ ಪುಕಾರ್, ರಾಬರ್ಟ್ ವಾದ್ರಾ ಅಬ್ ಕಿ ಬಾರ್”, ಅಂದರೆ “ಅಮೇಥಿಯ ಜನರು ಈ ಬಾರಿ ರಾಬರ್ಟ್ ವಾದ್ರಾ ಅವರನ್ನು ಬಯಸುತ್ತಾರೆ” ಎಂದು ಬರೆಯಲಾಗಿದೆ.

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನದಲ್ಲಿ ಮೇ 20 ರಂದು ಅಮೇಥಿ ಮತದಾನ ನಡೆಯಲಿದ್ದು, ಮೇ 3 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಬಿಜೆಪಿ ಹಾಲಿ ಸಂಸದೆ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು ತನ್ನ ಅಭ್ಯರ್ಥಿ ಎಂದು ಘೋಷಿಸಿದ್ದರೂ, ಕಾಂಗ್ರೆಸ್ ತನ್ನ ಆಯ್ಕೆಯನ್ನು ಇನ್ನೂ ಹೆಸರಿಸಿಲ್ಲ.

ಅಮೇಥಿಯು ಗಾಂಧಿ ಕುಟುಂಬದ ಸ್ಥಾನವಾಗಿದ್ದು, ಹಿಂದೆ ಸಂಜಯ್ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಪ್ರತಿನಿಧಿಸಿದ್ದರು. 2019ರ ಚುನಾವಣೆಯಲ್ಲಿ, ಕೇರಳದ ವಯನಾಡಿನಲ್ಲಿ ಗೆಲುವು ಸಾಧಿಸಲು ಯಶಸ್ವಿಯಾದ ರಾಹುಲ್ ಗಾಂಧಿ ವಿರುದ್ಧ ಅಮೇಥಿಯಲ್ಲಿ ಸ್ಮೃತಿ ಇರಾನಿ ಅದ್ಭುತ ಜಯ ಸಾಧಿಸಿದರು. ಈ ವರ್ಷವೂ, ರಾಹುಲಗ ಗಾಂಧಿ ಶುಕ್ರವಾರ ಮತ ಚಲಾಯಿಸುವ ವಯನಾಡ್‌ನಿಂದ ಸ್ಪರ್ಧಿಸುತ್ತಿದ್ದಾರೆ. ಮೇ 3 ರವರೆಗೆ ಅಮೇಥಿಗೆ ನಾಮಪತ್ರ ಸಲ್ಲಿಸಲು ಅವಕಾಶವಿದ್ದು, ಕೇರಳದ ಚುನಾವಣೆಯ ನಂತರ ಗಾಂಧಿ ಅವರು ತಮ್ಮ ನಾಮಪತ್ರ ಸಲ್ಲಿಸಬಹುದು ಎನ್ನಲಾಗುತ್ತಿದೆ. ಇತ್ತೀಚೆಗಷ್ಟೇ ಅಮೇಥಿಯಲ್ಲೂ ಅವರೇ ಕಾಂಗ್ರೆಸ್ ಅಭ್ಯರ್ಥಿಯಾಗುತ್ತೀರಾ ಎಂದು ಕೇಳಲಾಗಿತ್ತು. ಪಕ್ಷ ಏನು ಆದೇಶ ನೀಡುತ್ತದೋ ಅದನ್ನು ಮಾಡುತ್ತೇನೆ ಎಂದು ಉತ್ತರಿಸಿದರು.

ಈ ಎಲ್ಲ ಬೆಳವಣಿಗೆಗಳ ನಡುವೆ, “ವಾದ್ರಾ ಅವರು ಅಮೇಥಿಯಲ್ಲಿ ಸ್ಪರ್ಧಿಸಿದರೆ,ಸ್ಮೃತಿ ಆಯ್ಕೆ ಮಾಡುವ ತಮ್ಮ ತಪ್ಪನ್ನು ಸರಿಪಡಿಸುವ ಆಯ್ಕೆ ಜನರಿಗೆ ಇರುತ್ತದೆ ಎಂದು ಅಮೇಥಿಯ ಜನರು ಭಾವಿಸುತ್ತಾರೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು. ಬಳಿಕ, ವಾದ್ರಾ ಕಾಂಗ್ರೆಸ್ ಅಭ್ಯರ್ಥಿ ಎಂದು ಆಗ್ರಹಿಸಿ ಕೆಲವು ಪೋಸ್ಟರ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡತೊಡಗಿದವು.

ಕ್ಷೇತ್ರದಲ್ಲಿ ಇರಾನಿ ಅವರ ಪ್ರಚಾರವು ಭರದಿಂದ ಸಾಗುತ್ತಿದೆ, ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಿಸುವಲ್ಲಿ ವಿಳಂಬವಾಗಿದೆ ಎಂದು ಟೀಕಿಸಿದ್ದಾರೆ. ರಾಹುಲ್ ಗಾಂಧಿ ಮತ್ತು ಅವರ ಬಾವ ವಾದ್ರಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಜಿಜಾಜಿ ಕಿ ನಜರ್ ಹೈ, ಸಾಲೇ ಸಾಹಬ್ ಕ್ಯಾ ಕರೆಂಗೆ. (ಬಾವ ಸೀಟಿನ ಮೇಲೆ ಕಣ್ಣಿಟ್ಟಿದ್ದಾರೆ, ಅವರು (ಗಾಂಧಿ) ಏನು ಮಾಡುತ್ತಾರೆ?) ಬಸ್‌ಗಳಲ್ಲಿ ಪ್ರಯಾಣಿಸುವ ಜನರು ತಮ್ಮ ಆಸನವನ್ನು ಗುರುತಿಸಲು ತಮ್ಮ ಕರವಸ್ತ್ರವನ್ನು ಬಿಡುವ ಕಾಲವಿತ್ತು. ಅವರ ಬಾವ ಈ ಆಸನದ ಮೇಲೆ ಕಣ್ಣಿಟ್ಟಿರುವ ಕಾರಣ ರಾಹುಲ್ ಗಾಂಧಿ ಕೂಡ ತಮ್ಮ ಆಸನವನ್ನು ಗುರುತಿಸಲು ಬರುವುದಿಲ್ಲ” ಎಂದು ಅವರು ಇತ್ತೀಚೆಗೆ ಅಮೇಥಿಯಲ್ಲಿ ಹೇಳಿದರು.

“ಇದು ಎಂದಾದರೂ ನಡೆದಿದೆಯೇ? ಚುನಾವಣೆಗೆ ಕೇವಲ 27 ದಿನಗಳು ಉಳಿದಿವೆ. ಆದರೆ, ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಿಸಿಲ್ಲ. ನಾನು ಐದು ವರ್ಷಗಳಲ್ಲಿ ಮಾಡಿದ್ದನ್ನು, ರಾಹುಲ್ ಗಾಂಧಿ 15 ವರ್ಷಗಳಲ್ಲಿ ಮಾಡಲು ಸಾಧ್ಯವಾಗಲಿಲ್ಲ” ಎಂದು ಅವರು ಹೇಳಿದರು.

ಏಪ್ರಿಲ್ 26ರ ನಂತರ ರಾಹುಲ್ ಗಾಂಧಿ ಅಮೇಥಿಗೆ ಬರುತ್ತಾರೆ ಮತ್ತು ಜಾತಿಯ ಹೆಸರಿನಲ್ಲಿ ಜನರನ್ನು ಒಡೆಯಲು ಪ್ರಯತ್ನಿಸುತ್ತಾರೆ ಎಂದು ಕೇಂದ್ರ ಸಚಿವರು ಆರೋಪಿಸಿದ್ದಾರೆ.

“ಏಪ್ರಿಲ್ 26 ರಂದು ವಯನಾಡಿನಲ್ಲಿ ಮತದಾನದ ನಂತರ, ರಾಹುಲ್ ಗಾಂಧಿ ಇಲ್ಲಿಗೆ ಬಂದು ಅಮೇಥಿ ತನ್ನ ಕುಟುಂಬ ಎಂದು ಎಲ್ಲರಿಗೂ ಹೇಳಲು ಮತ್ತು ಜಾತಿವಾದದ ಬೆಂಕಿಯನ್ನು ಹೊತ್ತಿಸಲಿದ್ದಾರೆ. ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷವು ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಪ್ರತಿಷ್ಠಾಪನಾ ಸಮಾರಂಭದ ಆಹ್ವಾನವನ್ನು ತಿರಸ್ಕರಿಸಿದೆ. ಆದರೆ, ಅವರು ಅಮೇಠಿಯಲ್ಲಿ ದೇವಸ್ಥಾನಗಳ ಸುತ್ತಲೂ ತಿರುಗಾಡುವುದನ್ನು ಕಾಣಬಹುದು, ಆದ್ದರಿಂದ ಎಚ್ಚರಿಕೆಯಿಂದ ಮತ್ತು ಜಾಗರೂಕರಾಗಿರಬೇಕು” ಎಂದು ಅವರು ಸ್ಥಳೀಯ ಸಭೆಯಲ್ಲಿ ಹೇಳಿದರು.

ಇದನ್ನೂ ಓದಿ; ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...