Homeಕರ್ನಾಟಕಧಾರ್ಮಿಕ ಪ್ರತಿನಿಧಿಗಳಿಂದ ನೂತನ ಶಾಸಕರಿಗೆ ತರಬೇತಿ ಶಿಬಿರ ಕೈಬಿಡಿ: ಸ್ಪೀಕರ್ ಖಾದರ್‌ಗೆ 'ಜಾಗೃತ ನಾಗರಿಕರ ಒಕ್ಕೂಟ'ದ...

ಧಾರ್ಮಿಕ ಪ್ರತಿನಿಧಿಗಳಿಂದ ನೂತನ ಶಾಸಕರಿಗೆ ತರಬೇತಿ ಶಿಬಿರ ಕೈಬಿಡಿ: ಸ್ಪೀಕರ್ ಖಾದರ್‌ಗೆ ‘ಜಾಗೃತ ನಾಗರಿಕರ ಒಕ್ಕೂಟ’ದ ಆಗ್ರಹ

- Advertisement -
- Advertisement -

16ನೇ ವಿಧಾನಸಭೆಗೆ ಮೊದಲ ಬಾರಿಗೆ ನೂತನವಾಗಿ ಆಯ್ಕೆಯಾದ 70 ಶಾಸಕರಿಗೆ 3 ದಿನಗಳ ಕಾಲ ಏರ್ಪಡಿಸಿರುವ ತರಬೇತಿ ಶಿಬಿರಕ್ಕೆ ವಿವಾದಿತ ಹಿನ್ನೆಲೆಯ ಸ್ವಾಮೀಜಿ ಹಾಗೂ ಲೇಖಕರನ್ನು ಆಹ್ವಾನಿಸಲಾಗಿರುವ ನಿಟ್ಟಿನಲ್ಲಿ ಸ್ಪೀಕರ್‌ ಯುಟಿ ಖಾದರ್‌ ಅವರ ನಡೆಗೆ ನಾಡಿನಾದ್ಯಂತ ಪ್ರಜ್ಞಾವಂತರು ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ‘ಜಾಗೃತ ನಾಗರಿಕರು ಕರ್ನಾಟಕ’ ಒಕ್ಕೂಟ, ಶಾಸಕರ ತರಬೇತಿ ಶಿಬಿರದ ಕಲಾಪಗಳಿಂದ ಧಾರ್ಮಿಕ ಪ್ರತಿನಿಧಿಗಳ ಪ್ರವಚನವನ್ನು ಕೈ ಬಿಡಬೇಕೆಂದು ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್‌ ಅವರಿಗೆ ಪತ್ರ ಬರೆಯುವ ಮೂಲಕ ಆಗ್ರಹ ಮಾಡಿದ್ದಾರೆ.

‘ಜಾಗೃತ ನಾಗರಿಕರು ಕರ್ನಾಟಕ’ ಬರೆದ ಪತ್ರದ ಸಾರಾಂಶ ಇಲ್ಲಿದೆ..

ಹೊಸತಾಗಿ ಆಯ್ಕೆಯಾಗಿರುವ ರಾಜ್ಯ ಸರಕಾರದಲ್ಲಿ ವಿಧಾನಸಭಾಧ್ಯಕ್ಷರಾಗಿ ಆಯ್ಕೆಯಾಗಿರುವ ತಮಗೆ ಅಭಿನಂದನೆಗಳು. ಹೊಸತಾಗಿ ಆಯ್ಕೆಯಾಗಿರುವ  70 ವಿಧಾನಸಭಾ ಸದಸ್ಯರಿಗೆ ತಾವು ಕರ್ನಾಟಕ ವಿಧಾನಸಭೆಯ ವತಿಯಿಂದ ದಿನಾಂಕ ಜೂನ್‌ 26-27ರ ವರೆಗೆ ವಿಶೇಷ ತರಬೇತಿ ಶಿಬಿರ ಏರ್ಪಡಿಸುವ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೋಡಿದೆವು. ಹೊಸದಾಗಿ ಆಯ್ಕೆಯಾದ ಸದಸ್ಯರಿಗೆ ಸದಸ್ಯರ ಜವಾಬ್ದಾರಿ, ಸದನದಲ್ಲಿ ನಡವಳಿಕೆ, ಶಾಸಕರಾಗಿ ಜನತೆಗೆ ತೋರಿಸಬೇಕಾದ ಹೊಣೆಗಾರಿಕೆ ಇತ್ಯಾದಿಗಳ ಬಗ್ಗೆ ಸದನದ ಹಿರಿಯ ಸದಸ್ಯರ ಜೊತೆ ಸಂವಾದ ಏರ್ಪಡಿಸುವುದು ಸ್ವಾಗತಾರ್ಹ ಕ್ರಮವಾಗಿದೆ. ಆದರೆ ”ಹೊಸ ಶಾಸಕರಿಗೆ ಪ್ರೇರಣಾ ಭಾಷಣ ಮಾಡಲು ರವಿಶಂಕರ್‌ ಗುರೂಜಿ, ಡಾ.ವೀರೇಂದ್ರ ಹೆಗ್ಗಡೆ, ಡಾ.ಗುರುರಾಜ ಕರ್ಜಗಿ, ಬ್ರಹ್ಮ ಕುಮಾರಿ ಆಶಾ ದೀದಿ ಹಾಗೂ ಶಾಂತಿ ಪ್ರಕಾಶನದ ಮಹಮ್ಮದ್‌ ಕುಂಞಿ ಇವರನ್ನು ಕರೆಸುವ ಔಚಿತ್ಯ ಅರ್ಥವಾಗಲಿಲ್ಲ” ಎಂದು ಹೇಳಿದ್ದಾರೆ.

”ಹೊಸ ಶಾಸಕರಿಗೆ ಸಂವಿಧಾನದ ಆಶಯಗಳಾದ ಜಾತ್ಯಾತೀತತೆ, ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವ, ಮತ್ತು ಸಮಾಜವಾದದ ಜೊತೆಗೆ ಸರ್ವೋದಯ, ಜಾತಿ, ಲಿಂಗ, ವರ್ಗ, ಪಂಗಡ,ಭಾಷೆ, ಸಂಸ್ಕೃತಿಗಳ ತಾರತಮ್ಯವಿಲ್ಲದೇ, ಸರ್ವರ ಸಂಕ್ಷೇಮಕ್ಕಾಗಿ ಶ್ರಮಿಸಬೇಕಾದ ಕರ್ತವ್ಯಗಳ ಪ್ರೇರಣೆ ಒದಗಿಸುವ ಪ್ರೇರೇಪಕರು ಬೇಕೇ ಹೊರತೂ, ಧಾರ್ಮಿಕ ಆಧ್ಯಾತ್ಮ ಪ್ರವಚನ ನೀಡುವವರಲ್ಲ. ಸರ್ವಧರ್ಮ ಸಮಭಾವ ಮತ್ತು ಮತ ನಿರಪೇಕ್ಷ ಆಡಳಿತ ಎಂದರೆ ಸರಕಾರದ ಎಲ್ಲ ಕಾರ್ಯಕ್ರಮಗಳಿಗೆ ವಿವಿಧ ಧರ್ಮದ ಪ್ರತಿನಿಧಿಗಳನ್ನು ಕರೆಸಿ ಪ್ರವಚನ ನೀಡುವುದು ಎಂದು ತಾವು ಭಾವಿಸಿದಂತಿದೆ. ಆದರೆ ಜಾತ್ಯಾತೀತತೆ ಮತ್ತು ಮತ ನಿರಪೇಕ್ಷತೆ ಎಂದರೆ ರಾಜಕೀಯದೊಡನೆ ಧರ್ಮವನ್ನು ಬೆರೆಸದೇ ದೂರ ಇಡುವುದು ಎಂಬುದನ್ನು ತಾವು ದಯವಿಟ್ಟು ಮನನ ಮಾಡಿಕೊಳ್ಳಬೇಕು” ಎಂದು ತಿಳಿಸಿದ್ದಾರೆ.

”ಶಾಸಕರಿಗೆ ಬೇಕಾದ ಧಾರ್ಮಿಕ, ಆಧ್ಯಾತ್ಮಿಕ, ಮಾರ್ಗದರ್ಶನ ಒದಗಿಸುವುದು ಶಾಸನ ಸಭೆಯ ಸಭಾಧ್ಯಕ್ಷರಾದ ತಮ್ಮ ಜವಾಬ್ದಾರಿಯಲ್ಲ. ಯಾರಾದರೂ ಶಾಸಕರು ವೈಯಕ್ತಿಕವಾಗಿ ಯಾವುದಾದರೊಂದು ಧಾರ್ಮಿಕ ಆಚರಣೆಯಲ್ಲಿ ಪಾಲ್ಗೊಳ್ಳುವುದು ಅವರ ವೈಯಕ್ತಿಕ ಆಯ್ಕೆ. ಆದರೆ ಶಾಸನ ಸಭೆಯನ್ನು ಪ್ರವೇಶಿಸುವ ಮೊದಲು ಅವರೆಲ್ಲ ಧಾರ್ಮಿಕ ಪ್ರೇರೇಪಣೆ ಪಡೆದು ಬರಬೇಕೆಂದು ತಾವು ಭಾವಿಸಿರುವುದು ಸಂವಿಧಾನದ ನಿಯಮಗಳಿಗೆ ವಿರುದ್ಧವಾಗಿದೆ. ಚುನಾಯಿತ ಪ್ರತಿನಿಧಿಗಳಿಗೆ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ತಾರತಮ್ಯರಹಿತ ಜನಸೇವೆ ಮಾಡುವ ಬಗ್ಗೆ ಹಿತವಚನ ನೀಡುವ ಅಗತ್ಯವಿದೆಯೇ ಹೊರತೂ ಧಾರ್ಮಿಕ ನೆಲೆಯ ಚಿಂತನೆಗಳಲ್ಲ” ಎಂದು ತಿಳಿಹೇಳಿದ್ದಾರೆ.

”ಕರ್ನಾಟಕದ ಜನ, ಕೇವಲ ಧಾರ್ಮಿಕ ವಿಷಯಗಳನ್ನು, ಕೋಮುವಾದದ ಚುನಾವಣೆಗಳನ್ನು ಮಾಡಿಕೊಂಡು ಜನರ ಅಭಿವೃದ್ದಿಯನ್ನು ಕಡೆಗಣಿಸಿ ಭ್ರಷ್ಟಾಚಾರದಲ್ಲಿ ಮುಳುಗಿದ್ದ ಬಿ.ಜೆ.ಪಿ.ಯನ್ನು ಸೋಲಿಸಿ ಕಾಂಗ್ರೆಸ್‌ ಪಕ್ಷವನ್ನು ಅತ್ಯಧಿಕ ಸ್ಥಾನಗಳ ಮೂಲಕ ಅಧಿಕಾರಕ್ಕೆ ತಂದಿದ್ದಾರೆ. ನೀವೂ ಸಹ ಧಾರ್ಮಿಕ ಗುರುಗಳ ಶಿಷ್ಯರಾಗಿ, ಅವರ ಮಾರ್ಗದರ್ಶನದಂತೆ ಗುಪ್ತ ಅಜೆಂಡಾಗಳನ್ನು ಜಾರಿಗೊಳಿಸುತ್ತ ಆಡಳಿತ ನಡೆಸಲಿ ಎಂದಲ್ಲ. ಉದ್ಯೋಗ, ಆರೋಗ್ಯ, ಸಾಮಾಜಿಕ ಭದ್ರತೆ, ದುರ್ಬಲರ ಸಂಕ್ಷೇಮ, ಸಾಂಸ್ಕೃತಿಕ ಬಹುಳತ್ವದ ಬಗ್ಗೆ, ವೈಜ್ಞಾನಿಕ ಮನೋಭಾವಗಳ ಬಗ್ಗೆ ಗೌರವ ಹೊಂದಿ ಕರ್ನಾಟಕದ ಸಮಗ್ರ ಅಭಿವೃದ್ದಿಯನ್ನು ಸಾಧಿಸಲಿ ಎಂದು ಜನರ ನಿರೀಕ್ಷೆ ಇದೆ. ಇದಕ್ಕೆ ಬೇಕಾದ ಪ್ರೇರಣೆ ಒದಗಿಸಲು ಸಂವಿಧಾನ ತಜ್ಞರು, ಅಭಿವೃದ್ದಿ ಚಿಂತಕರು,ರಾಜಕೀಯ ಆರ್ಥಿಕ ಸಾಮಾಜಿಕ ಶಾಸ್ತ್ರಜ್ಞರನ್ನು ಆಹ್ವಾನಿಸಿ ತರಬೇತಿ ಕೊಡಿಸಿರಿ” ಎಂದು ಹೇಳಿದ್ದಾರೆ.

”ತಾವು ಆಹ್ವಾನಿಸಿರುವ ವ್ಯಕ್ತಿಗಳು ಈ ಮೇಲಿನ ಯಾವ ಅಗತ್ಯಗಳನ್ನೂ ಪೂರೈಸುವ ಪರಿಣಿತರಲ್ಲ. ಕೆಲವರಂತೂ ಕೋಮುವಾದಿ ನೀತಿಗಳ ಸಮರ್ಥಕರು, ಹಾಗೂ ಸ್ವಂತದ ವ್ಯವಹಾರಗಳಲ್ಲಿ ವಿವಾದಾಸ್ಪದರೂ ಆಗಿದ್ದಾರೆ. ಇಂತಹವರ ಭಾಷಣಗಳು ಹೊಸ ಶಾಸಕರಿಗೆ ಯಾವ ಬಗೆಯ ಮಾದರಿಗಳನ್ನು ಒದಗಿಸಬಲ್ಲುದು ಎಂಬ ಬಗ್ಗೆ ನಾವು ಆತಂಕಿತರಾಗಿದ್ದೇವೆ. ಇದು ಅದರ ಕುರಿತ ನಮ್ಮ ಪ್ರತಿಭಟನೆಯ ಪತ್ರವಾಗಿದೆ. ಈ ಧಾರ್ಮಿಕ ಪ್ರತಿನಿಧಿಗಳ ಉಪನ್ಯಾಸಗಳನ್ನು ರದ್ದು ಮಾಡಬೇಕೆಂದು ಆಗ್ರಹಿಸುತ್ತೇವೆ. ನಿಮ್ಮ ಒಳ್ಳೆಯತನದ ಬಗ್ಗೆ ಗೌರವವಿದೆ. ಆದರೆ ತಮ್ಮ ಈ ತಪ್ಪು ನಡೆ ಜನತೆಗೆ ತಪ್ಪು ಸಂದೇಶ ಹೋಗಬಾರದೆಂಬ ಕಳಕಳಿ ಉಳ್ಳವರೂ ಆಗಿದ್ದೇವೆ” ಎಂದು ತಿಳಿಸಿದ್ದಾರೆ.

ಶಾಸಕರ ತರಬೇತಿ ಶಿಬಿರದ ಕಲಾಪಗಳಿಂದ ಧಾರ್ಮಿಕ ಪ್ರತಿನಿಧಿಗಳ ಪ್ರವಚನವನ್ನು ಕೈ ಬಿಡಬೇಕೆಂದು ನಮ್ಮ ಒಕ್ಕೊರಲ ಆಗ್ರಹವಾಗಿದೆ ಎಂದು ಡಾ.ಕೆ.ಮರುಳಸಿದ್ದಪ್ಪಡಾ.ಜಿ.ರಾಮಕೃಷ್ಣ, ಡಾ.ವಿಜಯಾ, ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಪ್ರೊ.ರಾಜೇಂದ್ರ ಚೆನ್ನಿ, ಕೆ.ಎಸ್.ವಿಮಲಾ, ಬಿ.ಶ್ರೀಪಾದ ಭಟ್, ಟಿ.ಸುರೇಂದ್ರ ರಾವ್, ಡಾ.ಬಂಜಗೆರೆ ಜಯಪ್ರಕಾಶ್, ಡಾ.ನಿರಂಜನಾರಾಧ್ಯ, ಡಾ.ಮೀನಾಕ್ಷಿ ಬಾಳಿ, ಡಾ.ಎನ್.ಗಾಯತ್ರಿ, ಡಾ.ವಸುಂಧರಾ ಭೂಪತಿ, ರುದ್ರಪ್ಪ ಹುನಗವಾಡಿ ಅವರು ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್‌ ಅವರಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಶಿಬಿರದ ಸಂಪನ್ಮೂಲ ವ್ಯಕ್ತಿಗಳ ಕುರಿತು ಮರು ಪರಿಶೀಲಿಸಿ: ಸ್ಪೀಕರ್ ನಡೆಗೆ ಕಾಂಗ್ರೆಸ್ ಮಾಜಿ ಶಾಸಕರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...