Homeಕರ್ನಾಟಕಧಾರ್ಮಿಕ ಪ್ರತಿನಿಧಿಗಳಿಂದ ನೂತನ ಶಾಸಕರಿಗೆ ತರಬೇತಿ ಶಿಬಿರ ಕೈಬಿಡಿ: ಸ್ಪೀಕರ್ ಖಾದರ್‌ಗೆ 'ಜಾಗೃತ ನಾಗರಿಕರ ಒಕ್ಕೂಟ'ದ...

ಧಾರ್ಮಿಕ ಪ್ರತಿನಿಧಿಗಳಿಂದ ನೂತನ ಶಾಸಕರಿಗೆ ತರಬೇತಿ ಶಿಬಿರ ಕೈಬಿಡಿ: ಸ್ಪೀಕರ್ ಖಾದರ್‌ಗೆ ‘ಜಾಗೃತ ನಾಗರಿಕರ ಒಕ್ಕೂಟ’ದ ಆಗ್ರಹ

- Advertisement -
- Advertisement -

16ನೇ ವಿಧಾನಸಭೆಗೆ ಮೊದಲ ಬಾರಿಗೆ ನೂತನವಾಗಿ ಆಯ್ಕೆಯಾದ 70 ಶಾಸಕರಿಗೆ 3 ದಿನಗಳ ಕಾಲ ಏರ್ಪಡಿಸಿರುವ ತರಬೇತಿ ಶಿಬಿರಕ್ಕೆ ವಿವಾದಿತ ಹಿನ್ನೆಲೆಯ ಸ್ವಾಮೀಜಿ ಹಾಗೂ ಲೇಖಕರನ್ನು ಆಹ್ವಾನಿಸಲಾಗಿರುವ ನಿಟ್ಟಿನಲ್ಲಿ ಸ್ಪೀಕರ್‌ ಯುಟಿ ಖಾದರ್‌ ಅವರ ನಡೆಗೆ ನಾಡಿನಾದ್ಯಂತ ಪ್ರಜ್ಞಾವಂತರು ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ‘ಜಾಗೃತ ನಾಗರಿಕರು ಕರ್ನಾಟಕ’ ಒಕ್ಕೂಟ, ಶಾಸಕರ ತರಬೇತಿ ಶಿಬಿರದ ಕಲಾಪಗಳಿಂದ ಧಾರ್ಮಿಕ ಪ್ರತಿನಿಧಿಗಳ ಪ್ರವಚನವನ್ನು ಕೈ ಬಿಡಬೇಕೆಂದು ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್‌ ಅವರಿಗೆ ಪತ್ರ ಬರೆಯುವ ಮೂಲಕ ಆಗ್ರಹ ಮಾಡಿದ್ದಾರೆ.

‘ಜಾಗೃತ ನಾಗರಿಕರು ಕರ್ನಾಟಕ’ ಬರೆದ ಪತ್ರದ ಸಾರಾಂಶ ಇಲ್ಲಿದೆ..

ಹೊಸತಾಗಿ ಆಯ್ಕೆಯಾಗಿರುವ ರಾಜ್ಯ ಸರಕಾರದಲ್ಲಿ ವಿಧಾನಸಭಾಧ್ಯಕ್ಷರಾಗಿ ಆಯ್ಕೆಯಾಗಿರುವ ತಮಗೆ ಅಭಿನಂದನೆಗಳು. ಹೊಸತಾಗಿ ಆಯ್ಕೆಯಾಗಿರುವ  70 ವಿಧಾನಸಭಾ ಸದಸ್ಯರಿಗೆ ತಾವು ಕರ್ನಾಟಕ ವಿಧಾನಸಭೆಯ ವತಿಯಿಂದ ದಿನಾಂಕ ಜೂನ್‌ 26-27ರ ವರೆಗೆ ವಿಶೇಷ ತರಬೇತಿ ಶಿಬಿರ ಏರ್ಪಡಿಸುವ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೋಡಿದೆವು. ಹೊಸದಾಗಿ ಆಯ್ಕೆಯಾದ ಸದಸ್ಯರಿಗೆ ಸದಸ್ಯರ ಜವಾಬ್ದಾರಿ, ಸದನದಲ್ಲಿ ನಡವಳಿಕೆ, ಶಾಸಕರಾಗಿ ಜನತೆಗೆ ತೋರಿಸಬೇಕಾದ ಹೊಣೆಗಾರಿಕೆ ಇತ್ಯಾದಿಗಳ ಬಗ್ಗೆ ಸದನದ ಹಿರಿಯ ಸದಸ್ಯರ ಜೊತೆ ಸಂವಾದ ಏರ್ಪಡಿಸುವುದು ಸ್ವಾಗತಾರ್ಹ ಕ್ರಮವಾಗಿದೆ. ಆದರೆ ”ಹೊಸ ಶಾಸಕರಿಗೆ ಪ್ರೇರಣಾ ಭಾಷಣ ಮಾಡಲು ರವಿಶಂಕರ್‌ ಗುರೂಜಿ, ಡಾ.ವೀರೇಂದ್ರ ಹೆಗ್ಗಡೆ, ಡಾ.ಗುರುರಾಜ ಕರ್ಜಗಿ, ಬ್ರಹ್ಮ ಕುಮಾರಿ ಆಶಾ ದೀದಿ ಹಾಗೂ ಶಾಂತಿ ಪ್ರಕಾಶನದ ಮಹಮ್ಮದ್‌ ಕುಂಞಿ ಇವರನ್ನು ಕರೆಸುವ ಔಚಿತ್ಯ ಅರ್ಥವಾಗಲಿಲ್ಲ” ಎಂದು ಹೇಳಿದ್ದಾರೆ.

”ಹೊಸ ಶಾಸಕರಿಗೆ ಸಂವಿಧಾನದ ಆಶಯಗಳಾದ ಜಾತ್ಯಾತೀತತೆ, ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವ, ಮತ್ತು ಸಮಾಜವಾದದ ಜೊತೆಗೆ ಸರ್ವೋದಯ, ಜಾತಿ, ಲಿಂಗ, ವರ್ಗ, ಪಂಗಡ,ಭಾಷೆ, ಸಂಸ್ಕೃತಿಗಳ ತಾರತಮ್ಯವಿಲ್ಲದೇ, ಸರ್ವರ ಸಂಕ್ಷೇಮಕ್ಕಾಗಿ ಶ್ರಮಿಸಬೇಕಾದ ಕರ್ತವ್ಯಗಳ ಪ್ರೇರಣೆ ಒದಗಿಸುವ ಪ್ರೇರೇಪಕರು ಬೇಕೇ ಹೊರತೂ, ಧಾರ್ಮಿಕ ಆಧ್ಯಾತ್ಮ ಪ್ರವಚನ ನೀಡುವವರಲ್ಲ. ಸರ್ವಧರ್ಮ ಸಮಭಾವ ಮತ್ತು ಮತ ನಿರಪೇಕ್ಷ ಆಡಳಿತ ಎಂದರೆ ಸರಕಾರದ ಎಲ್ಲ ಕಾರ್ಯಕ್ರಮಗಳಿಗೆ ವಿವಿಧ ಧರ್ಮದ ಪ್ರತಿನಿಧಿಗಳನ್ನು ಕರೆಸಿ ಪ್ರವಚನ ನೀಡುವುದು ಎಂದು ತಾವು ಭಾವಿಸಿದಂತಿದೆ. ಆದರೆ ಜಾತ್ಯಾತೀತತೆ ಮತ್ತು ಮತ ನಿರಪೇಕ್ಷತೆ ಎಂದರೆ ರಾಜಕೀಯದೊಡನೆ ಧರ್ಮವನ್ನು ಬೆರೆಸದೇ ದೂರ ಇಡುವುದು ಎಂಬುದನ್ನು ತಾವು ದಯವಿಟ್ಟು ಮನನ ಮಾಡಿಕೊಳ್ಳಬೇಕು” ಎಂದು ತಿಳಿಸಿದ್ದಾರೆ.

”ಶಾಸಕರಿಗೆ ಬೇಕಾದ ಧಾರ್ಮಿಕ, ಆಧ್ಯಾತ್ಮಿಕ, ಮಾರ್ಗದರ್ಶನ ಒದಗಿಸುವುದು ಶಾಸನ ಸಭೆಯ ಸಭಾಧ್ಯಕ್ಷರಾದ ತಮ್ಮ ಜವಾಬ್ದಾರಿಯಲ್ಲ. ಯಾರಾದರೂ ಶಾಸಕರು ವೈಯಕ್ತಿಕವಾಗಿ ಯಾವುದಾದರೊಂದು ಧಾರ್ಮಿಕ ಆಚರಣೆಯಲ್ಲಿ ಪಾಲ್ಗೊಳ್ಳುವುದು ಅವರ ವೈಯಕ್ತಿಕ ಆಯ್ಕೆ. ಆದರೆ ಶಾಸನ ಸಭೆಯನ್ನು ಪ್ರವೇಶಿಸುವ ಮೊದಲು ಅವರೆಲ್ಲ ಧಾರ್ಮಿಕ ಪ್ರೇರೇಪಣೆ ಪಡೆದು ಬರಬೇಕೆಂದು ತಾವು ಭಾವಿಸಿರುವುದು ಸಂವಿಧಾನದ ನಿಯಮಗಳಿಗೆ ವಿರುದ್ಧವಾಗಿದೆ. ಚುನಾಯಿತ ಪ್ರತಿನಿಧಿಗಳಿಗೆ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ತಾರತಮ್ಯರಹಿತ ಜನಸೇವೆ ಮಾಡುವ ಬಗ್ಗೆ ಹಿತವಚನ ನೀಡುವ ಅಗತ್ಯವಿದೆಯೇ ಹೊರತೂ ಧಾರ್ಮಿಕ ನೆಲೆಯ ಚಿಂತನೆಗಳಲ್ಲ” ಎಂದು ತಿಳಿಹೇಳಿದ್ದಾರೆ.

”ಕರ್ನಾಟಕದ ಜನ, ಕೇವಲ ಧಾರ್ಮಿಕ ವಿಷಯಗಳನ್ನು, ಕೋಮುವಾದದ ಚುನಾವಣೆಗಳನ್ನು ಮಾಡಿಕೊಂಡು ಜನರ ಅಭಿವೃದ್ದಿಯನ್ನು ಕಡೆಗಣಿಸಿ ಭ್ರಷ್ಟಾಚಾರದಲ್ಲಿ ಮುಳುಗಿದ್ದ ಬಿ.ಜೆ.ಪಿ.ಯನ್ನು ಸೋಲಿಸಿ ಕಾಂಗ್ರೆಸ್‌ ಪಕ್ಷವನ್ನು ಅತ್ಯಧಿಕ ಸ್ಥಾನಗಳ ಮೂಲಕ ಅಧಿಕಾರಕ್ಕೆ ತಂದಿದ್ದಾರೆ. ನೀವೂ ಸಹ ಧಾರ್ಮಿಕ ಗುರುಗಳ ಶಿಷ್ಯರಾಗಿ, ಅವರ ಮಾರ್ಗದರ್ಶನದಂತೆ ಗುಪ್ತ ಅಜೆಂಡಾಗಳನ್ನು ಜಾರಿಗೊಳಿಸುತ್ತ ಆಡಳಿತ ನಡೆಸಲಿ ಎಂದಲ್ಲ. ಉದ್ಯೋಗ, ಆರೋಗ್ಯ, ಸಾಮಾಜಿಕ ಭದ್ರತೆ, ದುರ್ಬಲರ ಸಂಕ್ಷೇಮ, ಸಾಂಸ್ಕೃತಿಕ ಬಹುಳತ್ವದ ಬಗ್ಗೆ, ವೈಜ್ಞಾನಿಕ ಮನೋಭಾವಗಳ ಬಗ್ಗೆ ಗೌರವ ಹೊಂದಿ ಕರ್ನಾಟಕದ ಸಮಗ್ರ ಅಭಿವೃದ್ದಿಯನ್ನು ಸಾಧಿಸಲಿ ಎಂದು ಜನರ ನಿರೀಕ್ಷೆ ಇದೆ. ಇದಕ್ಕೆ ಬೇಕಾದ ಪ್ರೇರಣೆ ಒದಗಿಸಲು ಸಂವಿಧಾನ ತಜ್ಞರು, ಅಭಿವೃದ್ದಿ ಚಿಂತಕರು,ರಾಜಕೀಯ ಆರ್ಥಿಕ ಸಾಮಾಜಿಕ ಶಾಸ್ತ್ರಜ್ಞರನ್ನು ಆಹ್ವಾನಿಸಿ ತರಬೇತಿ ಕೊಡಿಸಿರಿ” ಎಂದು ಹೇಳಿದ್ದಾರೆ.

”ತಾವು ಆಹ್ವಾನಿಸಿರುವ ವ್ಯಕ್ತಿಗಳು ಈ ಮೇಲಿನ ಯಾವ ಅಗತ್ಯಗಳನ್ನೂ ಪೂರೈಸುವ ಪರಿಣಿತರಲ್ಲ. ಕೆಲವರಂತೂ ಕೋಮುವಾದಿ ನೀತಿಗಳ ಸಮರ್ಥಕರು, ಹಾಗೂ ಸ್ವಂತದ ವ್ಯವಹಾರಗಳಲ್ಲಿ ವಿವಾದಾಸ್ಪದರೂ ಆಗಿದ್ದಾರೆ. ಇಂತಹವರ ಭಾಷಣಗಳು ಹೊಸ ಶಾಸಕರಿಗೆ ಯಾವ ಬಗೆಯ ಮಾದರಿಗಳನ್ನು ಒದಗಿಸಬಲ್ಲುದು ಎಂಬ ಬಗ್ಗೆ ನಾವು ಆತಂಕಿತರಾಗಿದ್ದೇವೆ. ಇದು ಅದರ ಕುರಿತ ನಮ್ಮ ಪ್ರತಿಭಟನೆಯ ಪತ್ರವಾಗಿದೆ. ಈ ಧಾರ್ಮಿಕ ಪ್ರತಿನಿಧಿಗಳ ಉಪನ್ಯಾಸಗಳನ್ನು ರದ್ದು ಮಾಡಬೇಕೆಂದು ಆಗ್ರಹಿಸುತ್ತೇವೆ. ನಿಮ್ಮ ಒಳ್ಳೆಯತನದ ಬಗ್ಗೆ ಗೌರವವಿದೆ. ಆದರೆ ತಮ್ಮ ಈ ತಪ್ಪು ನಡೆ ಜನತೆಗೆ ತಪ್ಪು ಸಂದೇಶ ಹೋಗಬಾರದೆಂಬ ಕಳಕಳಿ ಉಳ್ಳವರೂ ಆಗಿದ್ದೇವೆ” ಎಂದು ತಿಳಿಸಿದ್ದಾರೆ.

ಶಾಸಕರ ತರಬೇತಿ ಶಿಬಿರದ ಕಲಾಪಗಳಿಂದ ಧಾರ್ಮಿಕ ಪ್ರತಿನಿಧಿಗಳ ಪ್ರವಚನವನ್ನು ಕೈ ಬಿಡಬೇಕೆಂದು ನಮ್ಮ ಒಕ್ಕೊರಲ ಆಗ್ರಹವಾಗಿದೆ ಎಂದು ಡಾ.ಕೆ.ಮರುಳಸಿದ್ದಪ್ಪಡಾ.ಜಿ.ರಾಮಕೃಷ್ಣ, ಡಾ.ವಿಜಯಾ, ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಪ್ರೊ.ರಾಜೇಂದ್ರ ಚೆನ್ನಿ, ಕೆ.ಎಸ್.ವಿಮಲಾ, ಬಿ.ಶ್ರೀಪಾದ ಭಟ್, ಟಿ.ಸುರೇಂದ್ರ ರಾವ್, ಡಾ.ಬಂಜಗೆರೆ ಜಯಪ್ರಕಾಶ್, ಡಾ.ನಿರಂಜನಾರಾಧ್ಯ, ಡಾ.ಮೀನಾಕ್ಷಿ ಬಾಳಿ, ಡಾ.ಎನ್.ಗಾಯತ್ರಿ, ಡಾ.ವಸುಂಧರಾ ಭೂಪತಿ, ರುದ್ರಪ್ಪ ಹುನಗವಾಡಿ ಅವರು ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್‌ ಅವರಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಶಿಬಿರದ ಸಂಪನ್ಮೂಲ ವ್ಯಕ್ತಿಗಳ ಕುರಿತು ಮರು ಪರಿಶೀಲಿಸಿ: ಸ್ಪೀಕರ್ ನಡೆಗೆ ಕಾಂಗ್ರೆಸ್ ಮಾಜಿ ಶಾಸಕರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...