Homeಕರ್ನಾಟಕಧಾರ್ಮಿಕ ಪ್ರತಿನಿಧಿಗಳಿಂದ ನೂತನ ಶಾಸಕರಿಗೆ ತರಬೇತಿ ಶಿಬಿರ ಕೈಬಿಡಿ: ಸ್ಪೀಕರ್ ಖಾದರ್‌ಗೆ 'ಜಾಗೃತ ನಾಗರಿಕರ ಒಕ್ಕೂಟ'ದ...

ಧಾರ್ಮಿಕ ಪ್ರತಿನಿಧಿಗಳಿಂದ ನೂತನ ಶಾಸಕರಿಗೆ ತರಬೇತಿ ಶಿಬಿರ ಕೈಬಿಡಿ: ಸ್ಪೀಕರ್ ಖಾದರ್‌ಗೆ ‘ಜಾಗೃತ ನಾಗರಿಕರ ಒಕ್ಕೂಟ’ದ ಆಗ್ರಹ

- Advertisement -
- Advertisement -

16ನೇ ವಿಧಾನಸಭೆಗೆ ಮೊದಲ ಬಾರಿಗೆ ನೂತನವಾಗಿ ಆಯ್ಕೆಯಾದ 70 ಶಾಸಕರಿಗೆ 3 ದಿನಗಳ ಕಾಲ ಏರ್ಪಡಿಸಿರುವ ತರಬೇತಿ ಶಿಬಿರಕ್ಕೆ ವಿವಾದಿತ ಹಿನ್ನೆಲೆಯ ಸ್ವಾಮೀಜಿ ಹಾಗೂ ಲೇಖಕರನ್ನು ಆಹ್ವಾನಿಸಲಾಗಿರುವ ನಿಟ್ಟಿನಲ್ಲಿ ಸ್ಪೀಕರ್‌ ಯುಟಿ ಖಾದರ್‌ ಅವರ ನಡೆಗೆ ನಾಡಿನಾದ್ಯಂತ ಪ್ರಜ್ಞಾವಂತರು ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ‘ಜಾಗೃತ ನಾಗರಿಕರು ಕರ್ನಾಟಕ’ ಒಕ್ಕೂಟ, ಶಾಸಕರ ತರಬೇತಿ ಶಿಬಿರದ ಕಲಾಪಗಳಿಂದ ಧಾರ್ಮಿಕ ಪ್ರತಿನಿಧಿಗಳ ಪ್ರವಚನವನ್ನು ಕೈ ಬಿಡಬೇಕೆಂದು ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್‌ ಅವರಿಗೆ ಪತ್ರ ಬರೆಯುವ ಮೂಲಕ ಆಗ್ರಹ ಮಾಡಿದ್ದಾರೆ.

‘ಜಾಗೃತ ನಾಗರಿಕರು ಕರ್ನಾಟಕ’ ಬರೆದ ಪತ್ರದ ಸಾರಾಂಶ ಇಲ್ಲಿದೆ..

ಹೊಸತಾಗಿ ಆಯ್ಕೆಯಾಗಿರುವ ರಾಜ್ಯ ಸರಕಾರದಲ್ಲಿ ವಿಧಾನಸಭಾಧ್ಯಕ್ಷರಾಗಿ ಆಯ್ಕೆಯಾಗಿರುವ ತಮಗೆ ಅಭಿನಂದನೆಗಳು. ಹೊಸತಾಗಿ ಆಯ್ಕೆಯಾಗಿರುವ  70 ವಿಧಾನಸಭಾ ಸದಸ್ಯರಿಗೆ ತಾವು ಕರ್ನಾಟಕ ವಿಧಾನಸಭೆಯ ವತಿಯಿಂದ ದಿನಾಂಕ ಜೂನ್‌ 26-27ರ ವರೆಗೆ ವಿಶೇಷ ತರಬೇತಿ ಶಿಬಿರ ಏರ್ಪಡಿಸುವ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೋಡಿದೆವು. ಹೊಸದಾಗಿ ಆಯ್ಕೆಯಾದ ಸದಸ್ಯರಿಗೆ ಸದಸ್ಯರ ಜವಾಬ್ದಾರಿ, ಸದನದಲ್ಲಿ ನಡವಳಿಕೆ, ಶಾಸಕರಾಗಿ ಜನತೆಗೆ ತೋರಿಸಬೇಕಾದ ಹೊಣೆಗಾರಿಕೆ ಇತ್ಯಾದಿಗಳ ಬಗ್ಗೆ ಸದನದ ಹಿರಿಯ ಸದಸ್ಯರ ಜೊತೆ ಸಂವಾದ ಏರ್ಪಡಿಸುವುದು ಸ್ವಾಗತಾರ್ಹ ಕ್ರಮವಾಗಿದೆ. ಆದರೆ ”ಹೊಸ ಶಾಸಕರಿಗೆ ಪ್ರೇರಣಾ ಭಾಷಣ ಮಾಡಲು ರವಿಶಂಕರ್‌ ಗುರೂಜಿ, ಡಾ.ವೀರೇಂದ್ರ ಹೆಗ್ಗಡೆ, ಡಾ.ಗುರುರಾಜ ಕರ್ಜಗಿ, ಬ್ರಹ್ಮ ಕುಮಾರಿ ಆಶಾ ದೀದಿ ಹಾಗೂ ಶಾಂತಿ ಪ್ರಕಾಶನದ ಮಹಮ್ಮದ್‌ ಕುಂಞಿ ಇವರನ್ನು ಕರೆಸುವ ಔಚಿತ್ಯ ಅರ್ಥವಾಗಲಿಲ್ಲ” ಎಂದು ಹೇಳಿದ್ದಾರೆ.

”ಹೊಸ ಶಾಸಕರಿಗೆ ಸಂವಿಧಾನದ ಆಶಯಗಳಾದ ಜಾತ್ಯಾತೀತತೆ, ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವ, ಮತ್ತು ಸಮಾಜವಾದದ ಜೊತೆಗೆ ಸರ್ವೋದಯ, ಜಾತಿ, ಲಿಂಗ, ವರ್ಗ, ಪಂಗಡ,ಭಾಷೆ, ಸಂಸ್ಕೃತಿಗಳ ತಾರತಮ್ಯವಿಲ್ಲದೇ, ಸರ್ವರ ಸಂಕ್ಷೇಮಕ್ಕಾಗಿ ಶ್ರಮಿಸಬೇಕಾದ ಕರ್ತವ್ಯಗಳ ಪ್ರೇರಣೆ ಒದಗಿಸುವ ಪ್ರೇರೇಪಕರು ಬೇಕೇ ಹೊರತೂ, ಧಾರ್ಮಿಕ ಆಧ್ಯಾತ್ಮ ಪ್ರವಚನ ನೀಡುವವರಲ್ಲ. ಸರ್ವಧರ್ಮ ಸಮಭಾವ ಮತ್ತು ಮತ ನಿರಪೇಕ್ಷ ಆಡಳಿತ ಎಂದರೆ ಸರಕಾರದ ಎಲ್ಲ ಕಾರ್ಯಕ್ರಮಗಳಿಗೆ ವಿವಿಧ ಧರ್ಮದ ಪ್ರತಿನಿಧಿಗಳನ್ನು ಕರೆಸಿ ಪ್ರವಚನ ನೀಡುವುದು ಎಂದು ತಾವು ಭಾವಿಸಿದಂತಿದೆ. ಆದರೆ ಜಾತ್ಯಾತೀತತೆ ಮತ್ತು ಮತ ನಿರಪೇಕ್ಷತೆ ಎಂದರೆ ರಾಜಕೀಯದೊಡನೆ ಧರ್ಮವನ್ನು ಬೆರೆಸದೇ ದೂರ ಇಡುವುದು ಎಂಬುದನ್ನು ತಾವು ದಯವಿಟ್ಟು ಮನನ ಮಾಡಿಕೊಳ್ಳಬೇಕು” ಎಂದು ತಿಳಿಸಿದ್ದಾರೆ.

”ಶಾಸಕರಿಗೆ ಬೇಕಾದ ಧಾರ್ಮಿಕ, ಆಧ್ಯಾತ್ಮಿಕ, ಮಾರ್ಗದರ್ಶನ ಒದಗಿಸುವುದು ಶಾಸನ ಸಭೆಯ ಸಭಾಧ್ಯಕ್ಷರಾದ ತಮ್ಮ ಜವಾಬ್ದಾರಿಯಲ್ಲ. ಯಾರಾದರೂ ಶಾಸಕರು ವೈಯಕ್ತಿಕವಾಗಿ ಯಾವುದಾದರೊಂದು ಧಾರ್ಮಿಕ ಆಚರಣೆಯಲ್ಲಿ ಪಾಲ್ಗೊಳ್ಳುವುದು ಅವರ ವೈಯಕ್ತಿಕ ಆಯ್ಕೆ. ಆದರೆ ಶಾಸನ ಸಭೆಯನ್ನು ಪ್ರವೇಶಿಸುವ ಮೊದಲು ಅವರೆಲ್ಲ ಧಾರ್ಮಿಕ ಪ್ರೇರೇಪಣೆ ಪಡೆದು ಬರಬೇಕೆಂದು ತಾವು ಭಾವಿಸಿರುವುದು ಸಂವಿಧಾನದ ನಿಯಮಗಳಿಗೆ ವಿರುದ್ಧವಾಗಿದೆ. ಚುನಾಯಿತ ಪ್ರತಿನಿಧಿಗಳಿಗೆ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ತಾರತಮ್ಯರಹಿತ ಜನಸೇವೆ ಮಾಡುವ ಬಗ್ಗೆ ಹಿತವಚನ ನೀಡುವ ಅಗತ್ಯವಿದೆಯೇ ಹೊರತೂ ಧಾರ್ಮಿಕ ನೆಲೆಯ ಚಿಂತನೆಗಳಲ್ಲ” ಎಂದು ತಿಳಿಹೇಳಿದ್ದಾರೆ.

”ಕರ್ನಾಟಕದ ಜನ, ಕೇವಲ ಧಾರ್ಮಿಕ ವಿಷಯಗಳನ್ನು, ಕೋಮುವಾದದ ಚುನಾವಣೆಗಳನ್ನು ಮಾಡಿಕೊಂಡು ಜನರ ಅಭಿವೃದ್ದಿಯನ್ನು ಕಡೆಗಣಿಸಿ ಭ್ರಷ್ಟಾಚಾರದಲ್ಲಿ ಮುಳುಗಿದ್ದ ಬಿ.ಜೆ.ಪಿ.ಯನ್ನು ಸೋಲಿಸಿ ಕಾಂಗ್ರೆಸ್‌ ಪಕ್ಷವನ್ನು ಅತ್ಯಧಿಕ ಸ್ಥಾನಗಳ ಮೂಲಕ ಅಧಿಕಾರಕ್ಕೆ ತಂದಿದ್ದಾರೆ. ನೀವೂ ಸಹ ಧಾರ್ಮಿಕ ಗುರುಗಳ ಶಿಷ್ಯರಾಗಿ, ಅವರ ಮಾರ್ಗದರ್ಶನದಂತೆ ಗುಪ್ತ ಅಜೆಂಡಾಗಳನ್ನು ಜಾರಿಗೊಳಿಸುತ್ತ ಆಡಳಿತ ನಡೆಸಲಿ ಎಂದಲ್ಲ. ಉದ್ಯೋಗ, ಆರೋಗ್ಯ, ಸಾಮಾಜಿಕ ಭದ್ರತೆ, ದುರ್ಬಲರ ಸಂಕ್ಷೇಮ, ಸಾಂಸ್ಕೃತಿಕ ಬಹುಳತ್ವದ ಬಗ್ಗೆ, ವೈಜ್ಞಾನಿಕ ಮನೋಭಾವಗಳ ಬಗ್ಗೆ ಗೌರವ ಹೊಂದಿ ಕರ್ನಾಟಕದ ಸಮಗ್ರ ಅಭಿವೃದ್ದಿಯನ್ನು ಸಾಧಿಸಲಿ ಎಂದು ಜನರ ನಿರೀಕ್ಷೆ ಇದೆ. ಇದಕ್ಕೆ ಬೇಕಾದ ಪ್ರೇರಣೆ ಒದಗಿಸಲು ಸಂವಿಧಾನ ತಜ್ಞರು, ಅಭಿವೃದ್ದಿ ಚಿಂತಕರು,ರಾಜಕೀಯ ಆರ್ಥಿಕ ಸಾಮಾಜಿಕ ಶಾಸ್ತ್ರಜ್ಞರನ್ನು ಆಹ್ವಾನಿಸಿ ತರಬೇತಿ ಕೊಡಿಸಿರಿ” ಎಂದು ಹೇಳಿದ್ದಾರೆ.

”ತಾವು ಆಹ್ವಾನಿಸಿರುವ ವ್ಯಕ್ತಿಗಳು ಈ ಮೇಲಿನ ಯಾವ ಅಗತ್ಯಗಳನ್ನೂ ಪೂರೈಸುವ ಪರಿಣಿತರಲ್ಲ. ಕೆಲವರಂತೂ ಕೋಮುವಾದಿ ನೀತಿಗಳ ಸಮರ್ಥಕರು, ಹಾಗೂ ಸ್ವಂತದ ವ್ಯವಹಾರಗಳಲ್ಲಿ ವಿವಾದಾಸ್ಪದರೂ ಆಗಿದ್ದಾರೆ. ಇಂತಹವರ ಭಾಷಣಗಳು ಹೊಸ ಶಾಸಕರಿಗೆ ಯಾವ ಬಗೆಯ ಮಾದರಿಗಳನ್ನು ಒದಗಿಸಬಲ್ಲುದು ಎಂಬ ಬಗ್ಗೆ ನಾವು ಆತಂಕಿತರಾಗಿದ್ದೇವೆ. ಇದು ಅದರ ಕುರಿತ ನಮ್ಮ ಪ್ರತಿಭಟನೆಯ ಪತ್ರವಾಗಿದೆ. ಈ ಧಾರ್ಮಿಕ ಪ್ರತಿನಿಧಿಗಳ ಉಪನ್ಯಾಸಗಳನ್ನು ರದ್ದು ಮಾಡಬೇಕೆಂದು ಆಗ್ರಹಿಸುತ್ತೇವೆ. ನಿಮ್ಮ ಒಳ್ಳೆಯತನದ ಬಗ್ಗೆ ಗೌರವವಿದೆ. ಆದರೆ ತಮ್ಮ ಈ ತಪ್ಪು ನಡೆ ಜನತೆಗೆ ತಪ್ಪು ಸಂದೇಶ ಹೋಗಬಾರದೆಂಬ ಕಳಕಳಿ ಉಳ್ಳವರೂ ಆಗಿದ್ದೇವೆ” ಎಂದು ತಿಳಿಸಿದ್ದಾರೆ.

ಶಾಸಕರ ತರಬೇತಿ ಶಿಬಿರದ ಕಲಾಪಗಳಿಂದ ಧಾರ್ಮಿಕ ಪ್ರತಿನಿಧಿಗಳ ಪ್ರವಚನವನ್ನು ಕೈ ಬಿಡಬೇಕೆಂದು ನಮ್ಮ ಒಕ್ಕೊರಲ ಆಗ್ರಹವಾಗಿದೆ ಎಂದು ಡಾ.ಕೆ.ಮರುಳಸಿದ್ದಪ್ಪಡಾ.ಜಿ.ರಾಮಕೃಷ್ಣ, ಡಾ.ವಿಜಯಾ, ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಪ್ರೊ.ರಾಜೇಂದ್ರ ಚೆನ್ನಿ, ಕೆ.ಎಸ್.ವಿಮಲಾ, ಬಿ.ಶ್ರೀಪಾದ ಭಟ್, ಟಿ.ಸುರೇಂದ್ರ ರಾವ್, ಡಾ.ಬಂಜಗೆರೆ ಜಯಪ್ರಕಾಶ್, ಡಾ.ನಿರಂಜನಾರಾಧ್ಯ, ಡಾ.ಮೀನಾಕ್ಷಿ ಬಾಳಿ, ಡಾ.ಎನ್.ಗಾಯತ್ರಿ, ಡಾ.ವಸುಂಧರಾ ಭೂಪತಿ, ರುದ್ರಪ್ಪ ಹುನಗವಾಡಿ ಅವರು ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್‌ ಅವರಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಶಿಬಿರದ ಸಂಪನ್ಮೂಲ ವ್ಯಕ್ತಿಗಳ ಕುರಿತು ಮರು ಪರಿಶೀಲಿಸಿ: ಸ್ಪೀಕರ್ ನಡೆಗೆ ಕಾಂಗ್ರೆಸ್ ಮಾಜಿ ಶಾಸಕರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...