Homeಕರ್ನಾಟಕಧಾರ್ಮಿಕ ಪ್ರತಿನಿಧಿಗಳಿಂದ ನೂತನ ಶಾಸಕರಿಗೆ ತರಬೇತಿ ಶಿಬಿರ ಕೈಬಿಡಿ: ಸ್ಪೀಕರ್ ಖಾದರ್‌ಗೆ 'ಜಾಗೃತ ನಾಗರಿಕರ ಒಕ್ಕೂಟ'ದ...

ಧಾರ್ಮಿಕ ಪ್ರತಿನಿಧಿಗಳಿಂದ ನೂತನ ಶಾಸಕರಿಗೆ ತರಬೇತಿ ಶಿಬಿರ ಕೈಬಿಡಿ: ಸ್ಪೀಕರ್ ಖಾದರ್‌ಗೆ ‘ಜಾಗೃತ ನಾಗರಿಕರ ಒಕ್ಕೂಟ’ದ ಆಗ್ರಹ

- Advertisement -
- Advertisement -

16ನೇ ವಿಧಾನಸಭೆಗೆ ಮೊದಲ ಬಾರಿಗೆ ನೂತನವಾಗಿ ಆಯ್ಕೆಯಾದ 70 ಶಾಸಕರಿಗೆ 3 ದಿನಗಳ ಕಾಲ ಏರ್ಪಡಿಸಿರುವ ತರಬೇತಿ ಶಿಬಿರಕ್ಕೆ ವಿವಾದಿತ ಹಿನ್ನೆಲೆಯ ಸ್ವಾಮೀಜಿ ಹಾಗೂ ಲೇಖಕರನ್ನು ಆಹ್ವಾನಿಸಲಾಗಿರುವ ನಿಟ್ಟಿನಲ್ಲಿ ಸ್ಪೀಕರ್‌ ಯುಟಿ ಖಾದರ್‌ ಅವರ ನಡೆಗೆ ನಾಡಿನಾದ್ಯಂತ ಪ್ರಜ್ಞಾವಂತರು ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ‘ಜಾಗೃತ ನಾಗರಿಕರು ಕರ್ನಾಟಕ’ ಒಕ್ಕೂಟ, ಶಾಸಕರ ತರಬೇತಿ ಶಿಬಿರದ ಕಲಾಪಗಳಿಂದ ಧಾರ್ಮಿಕ ಪ್ರತಿನಿಧಿಗಳ ಪ್ರವಚನವನ್ನು ಕೈ ಬಿಡಬೇಕೆಂದು ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್‌ ಅವರಿಗೆ ಪತ್ರ ಬರೆಯುವ ಮೂಲಕ ಆಗ್ರಹ ಮಾಡಿದ್ದಾರೆ.

‘ಜಾಗೃತ ನಾಗರಿಕರು ಕರ್ನಾಟಕ’ ಬರೆದ ಪತ್ರದ ಸಾರಾಂಶ ಇಲ್ಲಿದೆ..

ಹೊಸತಾಗಿ ಆಯ್ಕೆಯಾಗಿರುವ ರಾಜ್ಯ ಸರಕಾರದಲ್ಲಿ ವಿಧಾನಸಭಾಧ್ಯಕ್ಷರಾಗಿ ಆಯ್ಕೆಯಾಗಿರುವ ತಮಗೆ ಅಭಿನಂದನೆಗಳು. ಹೊಸತಾಗಿ ಆಯ್ಕೆಯಾಗಿರುವ  70 ವಿಧಾನಸಭಾ ಸದಸ್ಯರಿಗೆ ತಾವು ಕರ್ನಾಟಕ ವಿಧಾನಸಭೆಯ ವತಿಯಿಂದ ದಿನಾಂಕ ಜೂನ್‌ 26-27ರ ವರೆಗೆ ವಿಶೇಷ ತರಬೇತಿ ಶಿಬಿರ ಏರ್ಪಡಿಸುವ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೋಡಿದೆವು. ಹೊಸದಾಗಿ ಆಯ್ಕೆಯಾದ ಸದಸ್ಯರಿಗೆ ಸದಸ್ಯರ ಜವಾಬ್ದಾರಿ, ಸದನದಲ್ಲಿ ನಡವಳಿಕೆ, ಶಾಸಕರಾಗಿ ಜನತೆಗೆ ತೋರಿಸಬೇಕಾದ ಹೊಣೆಗಾರಿಕೆ ಇತ್ಯಾದಿಗಳ ಬಗ್ಗೆ ಸದನದ ಹಿರಿಯ ಸದಸ್ಯರ ಜೊತೆ ಸಂವಾದ ಏರ್ಪಡಿಸುವುದು ಸ್ವಾಗತಾರ್ಹ ಕ್ರಮವಾಗಿದೆ. ಆದರೆ ”ಹೊಸ ಶಾಸಕರಿಗೆ ಪ್ರೇರಣಾ ಭಾಷಣ ಮಾಡಲು ರವಿಶಂಕರ್‌ ಗುರೂಜಿ, ಡಾ.ವೀರೇಂದ್ರ ಹೆಗ್ಗಡೆ, ಡಾ.ಗುರುರಾಜ ಕರ್ಜಗಿ, ಬ್ರಹ್ಮ ಕುಮಾರಿ ಆಶಾ ದೀದಿ ಹಾಗೂ ಶಾಂತಿ ಪ್ರಕಾಶನದ ಮಹಮ್ಮದ್‌ ಕುಂಞಿ ಇವರನ್ನು ಕರೆಸುವ ಔಚಿತ್ಯ ಅರ್ಥವಾಗಲಿಲ್ಲ” ಎಂದು ಹೇಳಿದ್ದಾರೆ.

”ಹೊಸ ಶಾಸಕರಿಗೆ ಸಂವಿಧಾನದ ಆಶಯಗಳಾದ ಜಾತ್ಯಾತೀತತೆ, ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವ, ಮತ್ತು ಸಮಾಜವಾದದ ಜೊತೆಗೆ ಸರ್ವೋದಯ, ಜಾತಿ, ಲಿಂಗ, ವರ್ಗ, ಪಂಗಡ,ಭಾಷೆ, ಸಂಸ್ಕೃತಿಗಳ ತಾರತಮ್ಯವಿಲ್ಲದೇ, ಸರ್ವರ ಸಂಕ್ಷೇಮಕ್ಕಾಗಿ ಶ್ರಮಿಸಬೇಕಾದ ಕರ್ತವ್ಯಗಳ ಪ್ರೇರಣೆ ಒದಗಿಸುವ ಪ್ರೇರೇಪಕರು ಬೇಕೇ ಹೊರತೂ, ಧಾರ್ಮಿಕ ಆಧ್ಯಾತ್ಮ ಪ್ರವಚನ ನೀಡುವವರಲ್ಲ. ಸರ್ವಧರ್ಮ ಸಮಭಾವ ಮತ್ತು ಮತ ನಿರಪೇಕ್ಷ ಆಡಳಿತ ಎಂದರೆ ಸರಕಾರದ ಎಲ್ಲ ಕಾರ್ಯಕ್ರಮಗಳಿಗೆ ವಿವಿಧ ಧರ್ಮದ ಪ್ರತಿನಿಧಿಗಳನ್ನು ಕರೆಸಿ ಪ್ರವಚನ ನೀಡುವುದು ಎಂದು ತಾವು ಭಾವಿಸಿದಂತಿದೆ. ಆದರೆ ಜಾತ್ಯಾತೀತತೆ ಮತ್ತು ಮತ ನಿರಪೇಕ್ಷತೆ ಎಂದರೆ ರಾಜಕೀಯದೊಡನೆ ಧರ್ಮವನ್ನು ಬೆರೆಸದೇ ದೂರ ಇಡುವುದು ಎಂಬುದನ್ನು ತಾವು ದಯವಿಟ್ಟು ಮನನ ಮಾಡಿಕೊಳ್ಳಬೇಕು” ಎಂದು ತಿಳಿಸಿದ್ದಾರೆ.

”ಶಾಸಕರಿಗೆ ಬೇಕಾದ ಧಾರ್ಮಿಕ, ಆಧ್ಯಾತ್ಮಿಕ, ಮಾರ್ಗದರ್ಶನ ಒದಗಿಸುವುದು ಶಾಸನ ಸಭೆಯ ಸಭಾಧ್ಯಕ್ಷರಾದ ತಮ್ಮ ಜವಾಬ್ದಾರಿಯಲ್ಲ. ಯಾರಾದರೂ ಶಾಸಕರು ವೈಯಕ್ತಿಕವಾಗಿ ಯಾವುದಾದರೊಂದು ಧಾರ್ಮಿಕ ಆಚರಣೆಯಲ್ಲಿ ಪಾಲ್ಗೊಳ್ಳುವುದು ಅವರ ವೈಯಕ್ತಿಕ ಆಯ್ಕೆ. ಆದರೆ ಶಾಸನ ಸಭೆಯನ್ನು ಪ್ರವೇಶಿಸುವ ಮೊದಲು ಅವರೆಲ್ಲ ಧಾರ್ಮಿಕ ಪ್ರೇರೇಪಣೆ ಪಡೆದು ಬರಬೇಕೆಂದು ತಾವು ಭಾವಿಸಿರುವುದು ಸಂವಿಧಾನದ ನಿಯಮಗಳಿಗೆ ವಿರುದ್ಧವಾಗಿದೆ. ಚುನಾಯಿತ ಪ್ರತಿನಿಧಿಗಳಿಗೆ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ತಾರತಮ್ಯರಹಿತ ಜನಸೇವೆ ಮಾಡುವ ಬಗ್ಗೆ ಹಿತವಚನ ನೀಡುವ ಅಗತ್ಯವಿದೆಯೇ ಹೊರತೂ ಧಾರ್ಮಿಕ ನೆಲೆಯ ಚಿಂತನೆಗಳಲ್ಲ” ಎಂದು ತಿಳಿಹೇಳಿದ್ದಾರೆ.

”ಕರ್ನಾಟಕದ ಜನ, ಕೇವಲ ಧಾರ್ಮಿಕ ವಿಷಯಗಳನ್ನು, ಕೋಮುವಾದದ ಚುನಾವಣೆಗಳನ್ನು ಮಾಡಿಕೊಂಡು ಜನರ ಅಭಿವೃದ್ದಿಯನ್ನು ಕಡೆಗಣಿಸಿ ಭ್ರಷ್ಟಾಚಾರದಲ್ಲಿ ಮುಳುಗಿದ್ದ ಬಿ.ಜೆ.ಪಿ.ಯನ್ನು ಸೋಲಿಸಿ ಕಾಂಗ್ರೆಸ್‌ ಪಕ್ಷವನ್ನು ಅತ್ಯಧಿಕ ಸ್ಥಾನಗಳ ಮೂಲಕ ಅಧಿಕಾರಕ್ಕೆ ತಂದಿದ್ದಾರೆ. ನೀವೂ ಸಹ ಧಾರ್ಮಿಕ ಗುರುಗಳ ಶಿಷ್ಯರಾಗಿ, ಅವರ ಮಾರ್ಗದರ್ಶನದಂತೆ ಗುಪ್ತ ಅಜೆಂಡಾಗಳನ್ನು ಜಾರಿಗೊಳಿಸುತ್ತ ಆಡಳಿತ ನಡೆಸಲಿ ಎಂದಲ್ಲ. ಉದ್ಯೋಗ, ಆರೋಗ್ಯ, ಸಾಮಾಜಿಕ ಭದ್ರತೆ, ದುರ್ಬಲರ ಸಂಕ್ಷೇಮ, ಸಾಂಸ್ಕೃತಿಕ ಬಹುಳತ್ವದ ಬಗ್ಗೆ, ವೈಜ್ಞಾನಿಕ ಮನೋಭಾವಗಳ ಬಗ್ಗೆ ಗೌರವ ಹೊಂದಿ ಕರ್ನಾಟಕದ ಸಮಗ್ರ ಅಭಿವೃದ್ದಿಯನ್ನು ಸಾಧಿಸಲಿ ಎಂದು ಜನರ ನಿರೀಕ್ಷೆ ಇದೆ. ಇದಕ್ಕೆ ಬೇಕಾದ ಪ್ರೇರಣೆ ಒದಗಿಸಲು ಸಂವಿಧಾನ ತಜ್ಞರು, ಅಭಿವೃದ್ದಿ ಚಿಂತಕರು,ರಾಜಕೀಯ ಆರ್ಥಿಕ ಸಾಮಾಜಿಕ ಶಾಸ್ತ್ರಜ್ಞರನ್ನು ಆಹ್ವಾನಿಸಿ ತರಬೇತಿ ಕೊಡಿಸಿರಿ” ಎಂದು ಹೇಳಿದ್ದಾರೆ.

”ತಾವು ಆಹ್ವಾನಿಸಿರುವ ವ್ಯಕ್ತಿಗಳು ಈ ಮೇಲಿನ ಯಾವ ಅಗತ್ಯಗಳನ್ನೂ ಪೂರೈಸುವ ಪರಿಣಿತರಲ್ಲ. ಕೆಲವರಂತೂ ಕೋಮುವಾದಿ ನೀತಿಗಳ ಸಮರ್ಥಕರು, ಹಾಗೂ ಸ್ವಂತದ ವ್ಯವಹಾರಗಳಲ್ಲಿ ವಿವಾದಾಸ್ಪದರೂ ಆಗಿದ್ದಾರೆ. ಇಂತಹವರ ಭಾಷಣಗಳು ಹೊಸ ಶಾಸಕರಿಗೆ ಯಾವ ಬಗೆಯ ಮಾದರಿಗಳನ್ನು ಒದಗಿಸಬಲ್ಲುದು ಎಂಬ ಬಗ್ಗೆ ನಾವು ಆತಂಕಿತರಾಗಿದ್ದೇವೆ. ಇದು ಅದರ ಕುರಿತ ನಮ್ಮ ಪ್ರತಿಭಟನೆಯ ಪತ್ರವಾಗಿದೆ. ಈ ಧಾರ್ಮಿಕ ಪ್ರತಿನಿಧಿಗಳ ಉಪನ್ಯಾಸಗಳನ್ನು ರದ್ದು ಮಾಡಬೇಕೆಂದು ಆಗ್ರಹಿಸುತ್ತೇವೆ. ನಿಮ್ಮ ಒಳ್ಳೆಯತನದ ಬಗ್ಗೆ ಗೌರವವಿದೆ. ಆದರೆ ತಮ್ಮ ಈ ತಪ್ಪು ನಡೆ ಜನತೆಗೆ ತಪ್ಪು ಸಂದೇಶ ಹೋಗಬಾರದೆಂಬ ಕಳಕಳಿ ಉಳ್ಳವರೂ ಆಗಿದ್ದೇವೆ” ಎಂದು ತಿಳಿಸಿದ್ದಾರೆ.

ಶಾಸಕರ ತರಬೇತಿ ಶಿಬಿರದ ಕಲಾಪಗಳಿಂದ ಧಾರ್ಮಿಕ ಪ್ರತಿನಿಧಿಗಳ ಪ್ರವಚನವನ್ನು ಕೈ ಬಿಡಬೇಕೆಂದು ನಮ್ಮ ಒಕ್ಕೊರಲ ಆಗ್ರಹವಾಗಿದೆ ಎಂದು ಡಾ.ಕೆ.ಮರುಳಸಿದ್ದಪ್ಪಡಾ.ಜಿ.ರಾಮಕೃಷ್ಣ, ಡಾ.ವಿಜಯಾ, ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಪ್ರೊ.ರಾಜೇಂದ್ರ ಚೆನ್ನಿ, ಕೆ.ಎಸ್.ವಿಮಲಾ, ಬಿ.ಶ್ರೀಪಾದ ಭಟ್, ಟಿ.ಸುರೇಂದ್ರ ರಾವ್, ಡಾ.ಬಂಜಗೆರೆ ಜಯಪ್ರಕಾಶ್, ಡಾ.ನಿರಂಜನಾರಾಧ್ಯ, ಡಾ.ಮೀನಾಕ್ಷಿ ಬಾಳಿ, ಡಾ.ಎನ್.ಗಾಯತ್ರಿ, ಡಾ.ವಸುಂಧರಾ ಭೂಪತಿ, ರುದ್ರಪ್ಪ ಹುನಗವಾಡಿ ಅವರು ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್‌ ಅವರಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಶಿಬಿರದ ಸಂಪನ್ಮೂಲ ವ್ಯಕ್ತಿಗಳ ಕುರಿತು ಮರು ಪರಿಶೀಲಿಸಿ: ಸ್ಪೀಕರ್ ನಡೆಗೆ ಕಾಂಗ್ರೆಸ್ ಮಾಜಿ ಶಾಸಕರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...