Homeಕರ್ನಾಟಕಧಾರ್ಮಿಕ ಪ್ರತಿನಿಧಿಗಳಿಂದ ನೂತನ ಶಾಸಕರಿಗೆ ತರಬೇತಿ ಶಿಬಿರ ಕೈಬಿಡಿ: ಸ್ಪೀಕರ್ ಖಾದರ್‌ಗೆ 'ಜಾಗೃತ ನಾಗರಿಕರ ಒಕ್ಕೂಟ'ದ...

ಧಾರ್ಮಿಕ ಪ್ರತಿನಿಧಿಗಳಿಂದ ನೂತನ ಶಾಸಕರಿಗೆ ತರಬೇತಿ ಶಿಬಿರ ಕೈಬಿಡಿ: ಸ್ಪೀಕರ್ ಖಾದರ್‌ಗೆ ‘ಜಾಗೃತ ನಾಗರಿಕರ ಒಕ್ಕೂಟ’ದ ಆಗ್ರಹ

- Advertisement -
- Advertisement -

16ನೇ ವಿಧಾನಸಭೆಗೆ ಮೊದಲ ಬಾರಿಗೆ ನೂತನವಾಗಿ ಆಯ್ಕೆಯಾದ 70 ಶಾಸಕರಿಗೆ 3 ದಿನಗಳ ಕಾಲ ಏರ್ಪಡಿಸಿರುವ ತರಬೇತಿ ಶಿಬಿರಕ್ಕೆ ವಿವಾದಿತ ಹಿನ್ನೆಲೆಯ ಸ್ವಾಮೀಜಿ ಹಾಗೂ ಲೇಖಕರನ್ನು ಆಹ್ವಾನಿಸಲಾಗಿರುವ ನಿಟ್ಟಿನಲ್ಲಿ ಸ್ಪೀಕರ್‌ ಯುಟಿ ಖಾದರ್‌ ಅವರ ನಡೆಗೆ ನಾಡಿನಾದ್ಯಂತ ಪ್ರಜ್ಞಾವಂತರು ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ‘ಜಾಗೃತ ನಾಗರಿಕರು ಕರ್ನಾಟಕ’ ಒಕ್ಕೂಟ, ಶಾಸಕರ ತರಬೇತಿ ಶಿಬಿರದ ಕಲಾಪಗಳಿಂದ ಧಾರ್ಮಿಕ ಪ್ರತಿನಿಧಿಗಳ ಪ್ರವಚನವನ್ನು ಕೈ ಬಿಡಬೇಕೆಂದು ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್‌ ಅವರಿಗೆ ಪತ್ರ ಬರೆಯುವ ಮೂಲಕ ಆಗ್ರಹ ಮಾಡಿದ್ದಾರೆ.

‘ಜಾಗೃತ ನಾಗರಿಕರು ಕರ್ನಾಟಕ’ ಬರೆದ ಪತ್ರದ ಸಾರಾಂಶ ಇಲ್ಲಿದೆ..

ಹೊಸತಾಗಿ ಆಯ್ಕೆಯಾಗಿರುವ ರಾಜ್ಯ ಸರಕಾರದಲ್ಲಿ ವಿಧಾನಸಭಾಧ್ಯಕ್ಷರಾಗಿ ಆಯ್ಕೆಯಾಗಿರುವ ತಮಗೆ ಅಭಿನಂದನೆಗಳು. ಹೊಸತಾಗಿ ಆಯ್ಕೆಯಾಗಿರುವ  70 ವಿಧಾನಸಭಾ ಸದಸ್ಯರಿಗೆ ತಾವು ಕರ್ನಾಟಕ ವಿಧಾನಸಭೆಯ ವತಿಯಿಂದ ದಿನಾಂಕ ಜೂನ್‌ 26-27ರ ವರೆಗೆ ವಿಶೇಷ ತರಬೇತಿ ಶಿಬಿರ ಏರ್ಪಡಿಸುವ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೋಡಿದೆವು. ಹೊಸದಾಗಿ ಆಯ್ಕೆಯಾದ ಸದಸ್ಯರಿಗೆ ಸದಸ್ಯರ ಜವಾಬ್ದಾರಿ, ಸದನದಲ್ಲಿ ನಡವಳಿಕೆ, ಶಾಸಕರಾಗಿ ಜನತೆಗೆ ತೋರಿಸಬೇಕಾದ ಹೊಣೆಗಾರಿಕೆ ಇತ್ಯಾದಿಗಳ ಬಗ್ಗೆ ಸದನದ ಹಿರಿಯ ಸದಸ್ಯರ ಜೊತೆ ಸಂವಾದ ಏರ್ಪಡಿಸುವುದು ಸ್ವಾಗತಾರ್ಹ ಕ್ರಮವಾಗಿದೆ. ಆದರೆ ”ಹೊಸ ಶಾಸಕರಿಗೆ ಪ್ರೇರಣಾ ಭಾಷಣ ಮಾಡಲು ರವಿಶಂಕರ್‌ ಗುರೂಜಿ, ಡಾ.ವೀರೇಂದ್ರ ಹೆಗ್ಗಡೆ, ಡಾ.ಗುರುರಾಜ ಕರ್ಜಗಿ, ಬ್ರಹ್ಮ ಕುಮಾರಿ ಆಶಾ ದೀದಿ ಹಾಗೂ ಶಾಂತಿ ಪ್ರಕಾಶನದ ಮಹಮ್ಮದ್‌ ಕುಂಞಿ ಇವರನ್ನು ಕರೆಸುವ ಔಚಿತ್ಯ ಅರ್ಥವಾಗಲಿಲ್ಲ” ಎಂದು ಹೇಳಿದ್ದಾರೆ.

”ಹೊಸ ಶಾಸಕರಿಗೆ ಸಂವಿಧಾನದ ಆಶಯಗಳಾದ ಜಾತ್ಯಾತೀತತೆ, ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವ, ಮತ್ತು ಸಮಾಜವಾದದ ಜೊತೆಗೆ ಸರ್ವೋದಯ, ಜಾತಿ, ಲಿಂಗ, ವರ್ಗ, ಪಂಗಡ,ಭಾಷೆ, ಸಂಸ್ಕೃತಿಗಳ ತಾರತಮ್ಯವಿಲ್ಲದೇ, ಸರ್ವರ ಸಂಕ್ಷೇಮಕ್ಕಾಗಿ ಶ್ರಮಿಸಬೇಕಾದ ಕರ್ತವ್ಯಗಳ ಪ್ರೇರಣೆ ಒದಗಿಸುವ ಪ್ರೇರೇಪಕರು ಬೇಕೇ ಹೊರತೂ, ಧಾರ್ಮಿಕ ಆಧ್ಯಾತ್ಮ ಪ್ರವಚನ ನೀಡುವವರಲ್ಲ. ಸರ್ವಧರ್ಮ ಸಮಭಾವ ಮತ್ತು ಮತ ನಿರಪೇಕ್ಷ ಆಡಳಿತ ಎಂದರೆ ಸರಕಾರದ ಎಲ್ಲ ಕಾರ್ಯಕ್ರಮಗಳಿಗೆ ವಿವಿಧ ಧರ್ಮದ ಪ್ರತಿನಿಧಿಗಳನ್ನು ಕರೆಸಿ ಪ್ರವಚನ ನೀಡುವುದು ಎಂದು ತಾವು ಭಾವಿಸಿದಂತಿದೆ. ಆದರೆ ಜಾತ್ಯಾತೀತತೆ ಮತ್ತು ಮತ ನಿರಪೇಕ್ಷತೆ ಎಂದರೆ ರಾಜಕೀಯದೊಡನೆ ಧರ್ಮವನ್ನು ಬೆರೆಸದೇ ದೂರ ಇಡುವುದು ಎಂಬುದನ್ನು ತಾವು ದಯವಿಟ್ಟು ಮನನ ಮಾಡಿಕೊಳ್ಳಬೇಕು” ಎಂದು ತಿಳಿಸಿದ್ದಾರೆ.

”ಶಾಸಕರಿಗೆ ಬೇಕಾದ ಧಾರ್ಮಿಕ, ಆಧ್ಯಾತ್ಮಿಕ, ಮಾರ್ಗದರ್ಶನ ಒದಗಿಸುವುದು ಶಾಸನ ಸಭೆಯ ಸಭಾಧ್ಯಕ್ಷರಾದ ತಮ್ಮ ಜವಾಬ್ದಾರಿಯಲ್ಲ. ಯಾರಾದರೂ ಶಾಸಕರು ವೈಯಕ್ತಿಕವಾಗಿ ಯಾವುದಾದರೊಂದು ಧಾರ್ಮಿಕ ಆಚರಣೆಯಲ್ಲಿ ಪಾಲ್ಗೊಳ್ಳುವುದು ಅವರ ವೈಯಕ್ತಿಕ ಆಯ್ಕೆ. ಆದರೆ ಶಾಸನ ಸಭೆಯನ್ನು ಪ್ರವೇಶಿಸುವ ಮೊದಲು ಅವರೆಲ್ಲ ಧಾರ್ಮಿಕ ಪ್ರೇರೇಪಣೆ ಪಡೆದು ಬರಬೇಕೆಂದು ತಾವು ಭಾವಿಸಿರುವುದು ಸಂವಿಧಾನದ ನಿಯಮಗಳಿಗೆ ವಿರುದ್ಧವಾಗಿದೆ. ಚುನಾಯಿತ ಪ್ರತಿನಿಧಿಗಳಿಗೆ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ತಾರತಮ್ಯರಹಿತ ಜನಸೇವೆ ಮಾಡುವ ಬಗ್ಗೆ ಹಿತವಚನ ನೀಡುವ ಅಗತ್ಯವಿದೆಯೇ ಹೊರತೂ ಧಾರ್ಮಿಕ ನೆಲೆಯ ಚಿಂತನೆಗಳಲ್ಲ” ಎಂದು ತಿಳಿಹೇಳಿದ್ದಾರೆ.

”ಕರ್ನಾಟಕದ ಜನ, ಕೇವಲ ಧಾರ್ಮಿಕ ವಿಷಯಗಳನ್ನು, ಕೋಮುವಾದದ ಚುನಾವಣೆಗಳನ್ನು ಮಾಡಿಕೊಂಡು ಜನರ ಅಭಿವೃದ್ದಿಯನ್ನು ಕಡೆಗಣಿಸಿ ಭ್ರಷ್ಟಾಚಾರದಲ್ಲಿ ಮುಳುಗಿದ್ದ ಬಿ.ಜೆ.ಪಿ.ಯನ್ನು ಸೋಲಿಸಿ ಕಾಂಗ್ರೆಸ್‌ ಪಕ್ಷವನ್ನು ಅತ್ಯಧಿಕ ಸ್ಥಾನಗಳ ಮೂಲಕ ಅಧಿಕಾರಕ್ಕೆ ತಂದಿದ್ದಾರೆ. ನೀವೂ ಸಹ ಧಾರ್ಮಿಕ ಗುರುಗಳ ಶಿಷ್ಯರಾಗಿ, ಅವರ ಮಾರ್ಗದರ್ಶನದಂತೆ ಗುಪ್ತ ಅಜೆಂಡಾಗಳನ್ನು ಜಾರಿಗೊಳಿಸುತ್ತ ಆಡಳಿತ ನಡೆಸಲಿ ಎಂದಲ್ಲ. ಉದ್ಯೋಗ, ಆರೋಗ್ಯ, ಸಾಮಾಜಿಕ ಭದ್ರತೆ, ದುರ್ಬಲರ ಸಂಕ್ಷೇಮ, ಸಾಂಸ್ಕೃತಿಕ ಬಹುಳತ್ವದ ಬಗ್ಗೆ, ವೈಜ್ಞಾನಿಕ ಮನೋಭಾವಗಳ ಬಗ್ಗೆ ಗೌರವ ಹೊಂದಿ ಕರ್ನಾಟಕದ ಸಮಗ್ರ ಅಭಿವೃದ್ದಿಯನ್ನು ಸಾಧಿಸಲಿ ಎಂದು ಜನರ ನಿರೀಕ್ಷೆ ಇದೆ. ಇದಕ್ಕೆ ಬೇಕಾದ ಪ್ರೇರಣೆ ಒದಗಿಸಲು ಸಂವಿಧಾನ ತಜ್ಞರು, ಅಭಿವೃದ್ದಿ ಚಿಂತಕರು,ರಾಜಕೀಯ ಆರ್ಥಿಕ ಸಾಮಾಜಿಕ ಶಾಸ್ತ್ರಜ್ಞರನ್ನು ಆಹ್ವಾನಿಸಿ ತರಬೇತಿ ಕೊಡಿಸಿರಿ” ಎಂದು ಹೇಳಿದ್ದಾರೆ.

”ತಾವು ಆಹ್ವಾನಿಸಿರುವ ವ್ಯಕ್ತಿಗಳು ಈ ಮೇಲಿನ ಯಾವ ಅಗತ್ಯಗಳನ್ನೂ ಪೂರೈಸುವ ಪರಿಣಿತರಲ್ಲ. ಕೆಲವರಂತೂ ಕೋಮುವಾದಿ ನೀತಿಗಳ ಸಮರ್ಥಕರು, ಹಾಗೂ ಸ್ವಂತದ ವ್ಯವಹಾರಗಳಲ್ಲಿ ವಿವಾದಾಸ್ಪದರೂ ಆಗಿದ್ದಾರೆ. ಇಂತಹವರ ಭಾಷಣಗಳು ಹೊಸ ಶಾಸಕರಿಗೆ ಯಾವ ಬಗೆಯ ಮಾದರಿಗಳನ್ನು ಒದಗಿಸಬಲ್ಲುದು ಎಂಬ ಬಗ್ಗೆ ನಾವು ಆತಂಕಿತರಾಗಿದ್ದೇವೆ. ಇದು ಅದರ ಕುರಿತ ನಮ್ಮ ಪ್ರತಿಭಟನೆಯ ಪತ್ರವಾಗಿದೆ. ಈ ಧಾರ್ಮಿಕ ಪ್ರತಿನಿಧಿಗಳ ಉಪನ್ಯಾಸಗಳನ್ನು ರದ್ದು ಮಾಡಬೇಕೆಂದು ಆಗ್ರಹಿಸುತ್ತೇವೆ. ನಿಮ್ಮ ಒಳ್ಳೆಯತನದ ಬಗ್ಗೆ ಗೌರವವಿದೆ. ಆದರೆ ತಮ್ಮ ಈ ತಪ್ಪು ನಡೆ ಜನತೆಗೆ ತಪ್ಪು ಸಂದೇಶ ಹೋಗಬಾರದೆಂಬ ಕಳಕಳಿ ಉಳ್ಳವರೂ ಆಗಿದ್ದೇವೆ” ಎಂದು ತಿಳಿಸಿದ್ದಾರೆ.

ಶಾಸಕರ ತರಬೇತಿ ಶಿಬಿರದ ಕಲಾಪಗಳಿಂದ ಧಾರ್ಮಿಕ ಪ್ರತಿನಿಧಿಗಳ ಪ್ರವಚನವನ್ನು ಕೈ ಬಿಡಬೇಕೆಂದು ನಮ್ಮ ಒಕ್ಕೊರಲ ಆಗ್ರಹವಾಗಿದೆ ಎಂದು ಡಾ.ಕೆ.ಮರುಳಸಿದ್ದಪ್ಪಡಾ.ಜಿ.ರಾಮಕೃಷ್ಣ, ಡಾ.ವಿಜಯಾ, ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಪ್ರೊ.ರಾಜೇಂದ್ರ ಚೆನ್ನಿ, ಕೆ.ಎಸ್.ವಿಮಲಾ, ಬಿ.ಶ್ರೀಪಾದ ಭಟ್, ಟಿ.ಸುರೇಂದ್ರ ರಾವ್, ಡಾ.ಬಂಜಗೆರೆ ಜಯಪ್ರಕಾಶ್, ಡಾ.ನಿರಂಜನಾರಾಧ್ಯ, ಡಾ.ಮೀನಾಕ್ಷಿ ಬಾಳಿ, ಡಾ.ಎನ್.ಗಾಯತ್ರಿ, ಡಾ.ವಸುಂಧರಾ ಭೂಪತಿ, ರುದ್ರಪ್ಪ ಹುನಗವಾಡಿ ಅವರು ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್‌ ಅವರಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಶಿಬಿರದ ಸಂಪನ್ಮೂಲ ವ್ಯಕ್ತಿಗಳ ಕುರಿತು ಮರು ಪರಿಶೀಲಿಸಿ: ಸ್ಪೀಕರ್ ನಡೆಗೆ ಕಾಂಗ್ರೆಸ್ ಮಾಜಿ ಶಾಸಕರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...