Homeಮುಖಪುಟಮಹಿಳಾ ಹೋರಾಟಗಾರ್ತಿಯರಿಗೆ ಅವಮಾನ: ವೀರ ರಾಣಿ ಅಬ್ಬಕ್ಕ ದೇವಿ ಪಾಠ ಕೈಬಿಟ್ಟ ಚಕ್ರತೀರ್ಥ ಸಮಿತಿ

ಮಹಿಳಾ ಹೋರಾಟಗಾರ್ತಿಯರಿಗೆ ಅವಮಾನ: ವೀರ ರಾಣಿ ಅಬ್ಬಕ್ಕ ದೇವಿ ಪಾಠ ಕೈಬಿಟ್ಟ ಚಕ್ರತೀರ್ಥ ಸಮಿತಿ

7ನೇ ತರಗತಿ ಸಮಾಜ ವಿಜ್ಞಾನ-2 ಪಠ್ಯದಿಂದ ಹೋರಾಟಗಾರ್ತಿಯರಾದ ಬಳ್ಳಾರಿ ಸಿದ್ದಮ್ಮ, ಯಶೋಧರಮ್ಮ ದಾಸಪ್ಪ, ಉಮಾಬಾಯಿ ಕುಂದಾಪುರರವರ ಪಾಠ ಕೈಬಿಡಲಾಗಿದೆ.

- Advertisement -
- Advertisement -

ಬಿಜೆಪಿ ಸರ್ಕಾರದ ನೂತನ ಪಠ್ಯ ಪರಿಷ್ಕರಣೆ ಸಮಿತಿಯ ಮಾಡಿರುವ ತಿದ್ದುಪಡಿಗಳಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿ ಮತ್ತೊಂದು ಅನಾಹುತ ಕಂಡುಬಂದಿದೆ. 7ನೇ ತರಗತಿ ಸಮಾಜ ವಿಜ್ಞಾನ-2 ಪಠ್ಯದಿಂದ ಕರ್ನಾಟಕದ ಮಹಿಳಾ ಹೋರಾಟಗಾರರಾದ ಉಲ್ಲಾಳದ ರಾಣಿ ಅಬ್ಬಕ್ಕ ದೇವಿ, ಬಳ್ಳಾರಿ ಸಿದ್ದಮ್ಮ, ಯಶೋಧರಮ್ಮ ದಾಸಪ್ಪ ಮತ್ತು ಉಮಾಬಾಯಿ ಕುಂದಾಪುರರವರ ಪಾಠ ಕೈಬಿಡಲಾಗಿದೆ.

ಕಳೆದ ವರ್ಷ 7ನೇ ತರಗತಿಯ ಮಕ್ಕಳು ‘ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು’ ಎಂಬ ಪಾಠದಲ್ಲಿ ಬಹಳ ವಿವರವಾಗಿ ಕರ್ನಾಟಕದ ಹೋರಾಟಗಾರ್ತಿಯರ ಬಗ್ಗೆ ಅಭ್ಯಸಿಸಿದ್ದರು. ಗಾಂಧಿ ಪೂರ್ವ ಸ್ವಾತಂತ್ರ್ಯ ಹೋರಾಟದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ, ಕೆಳದಿ ಚೆನ್ನಮ್ಮರ ಸಾಲಿನಲ್ಲಿ ನಿಲ್ಲುವ ಮತ್ತೊಬ್ಬ ಮಹಿಳೆ ಎಂದು ಹೆಸರಿಸಿ ರಾಣಿ ಅಬ್ಬಕ್ಕದೇವಿಯವರ ಪಾಠ ಇಡಲಾಗಿತ್ತು. ಅದರಲ್ಲಿ ಅವರು ಪೋರ್ಚುಗೀಸರ ವಿರುದ್ಧ ಕಾದಾಡಿದ್ದ ವಿವರಗಳಿದ್ದವು. ಉಳ್ಳಾಲದ ರಾಣಿ ಅಬ್ಬಕ್ಕ ಪೋರ್ಚುಗೀಸರಿಗೆ ಕಪ್ಪ ಕೊಡಲು ನಿರಾಕರಿಸಿದಾಗ 1568ರಲ್ಲಿ ಅವರು ದಾಳಿ ನಡೆಸುತ್ತಾರೆ. ಅದನ್ನು ಅಬ್ಬಕ್ಕ ಹಿಮ್ಮೆಟ್ಟಿಸಿದ್ದ ವಿವರಗಳನ್ನು ನೀಡಲಾಗಿತ್ತು. ಆದರೆ ನೂತನ ಪಠ್ಯ ಪರಿಷ್ಕರಣೆಯಲ್ಲಿ ಆ ಪಠ್ಯ ಕೈಬಿಡಲಾಗಿದೆ.

ಅದೇ ರೀತಿಯಾಗಿ ಕಳೆದ ವರ್ಷದ ಪಠ್ಯದಲ್ಲಿ ಕರ್ನಾಟಕದ ದಿಟ್ಟ ಹೋರಾಟಗಾರ್ತಿಯರಾದ ಬಳ್ಳಾರಿ ಸಿದ್ದಮ್ಮ, ಯಶೋಧರಮ್ಮ ದಾಸಪ್ಪ ಮತ್ತು ಉಮಾಬಾಯಿ ಕುಂದಾಪುರರವರ ಪಾಠವಿತ್ತು. ಅದನ್ನು ತೆಗೆದುಹಾಕಿರುವ ನೂತನ ಸಮಿತಿಯು ಕರ್ನಾಟಕ ಸಮಾಜಿಮುಖಿ ಚಳವಳಿಗಳ ಎಂಬ ಪಠ್ಯದಲ್ಲಿ ಕೇವಲ ಕಮಲಾದೇವಿ ಚಟ್ಟೋಪಾಧ್ಯಾಯ ಮತ್ತು ಅರುಣಾ ಅಸಫ್ ಅಲಿಯವರ ಪಠ್ಯ ಮಾತ್ರ ಇರಿಸಿಕೊಂಡಿದೆ. ಅವರ ಕುರಿತು ಸಮರ್ಪಕ ವಿವರಗಳಿಲ್ಲದೆ ಕೇವಲ 4 ಪ್ಯಾರಗಳಲ್ಲಿ ಮೇಲುಮಟ್ಟಕ್ಕೆ ಪರಿಚಯಿಸಿ ಕೈತೊಳೆದುಕೊಳ್ಳಲಾಗಿದೆ.

ನಮ್ಮ ಮಕ್ಕಳು ಏಕೆ ಕನ್ನಡದ ಹೋರಾಟಗಾರರ ಬಗ್ಗೆ ಅದರಲ್ಲಿಯೂ ಮಹಿಳಾ ಹೋರಾಟಗಾರ್ತಿಯರ ಬಗ್ಗೆ ತಿಳಿದುಕೊಳ್ಳಬಾರದು ಎಂಬ ಪ್ರಶ್ನೆ ಎದ್ದಿದೆ. “ಕಪ್ಪ, ನಿಮಗೇಕೆ ಕೊಡಬೇಕು ಕಪ್ಪ? ನಮ್ಮ ದೇಶಕ್ಕೆ ಕಳ್ಳರಂತೆ ನುಗ್ಗಿರುವ ನಿಮಗೆ ಕಪ್ಪ ಕೊಟ್ಟು ಹೇಡಿ ಎನಿಸಿಕೊಳ್ಳುವುದಕ್ಕಿಂತ ಹೋರಾಡಿ ಸಾಯುವುದೇ ಲೇಸು” ಎಂದು ಹೇಳಿದ್ದ ವೀರ ರಾಣಿ ಅಬ್ಬಕ್ಕನವರ ಪಠ್ಯ ಕೈಬಿಟ್ಟಿದ್ದೇಕೆ ಎಂದು ನೂತನ ಸಮಿತಿಯು ಉತ್ತರಿಸಬೇಕಿದೆ.

ಅದೇ ರೀತಿಯಾಗಿ ಸ್ವಾತಂತ್ರ್ಯ ಚಳವಳಿಯ ಇತಿಹಾಸದಲ್ಲಿ ಪ್ರಾಣತೆತ್ತ ನೂರಾರು ಮಹಿಳೆಯರ ಜೀವನ ಚಿತ್ರಣಗಳು ಹೂತು ಹೋಗಿವೆ. ಇರುವ ಕೆಲವರ ಬಗ್ಗೆಯಾದರೂ ನಮ್ಮ ಮಕ್ಕಳು ಓದಿ ಅವರನ್ನು ಆದರ್ಶವನ್ನಾಗಿ ಪರಿಗಣಿಸಬೇಕು. ಆದರೆ ನೂತನ ಸಮಿತಿಯು ಅಂತಹ ಮಹಿಳಾ ಹೋರಾಟಗಾರ್ತಿಯರ ಪಠ್ಯವನ್ನೇ ಕೈಬಿಟ್ಟಿರುವುದು ದುರಂತ.

ಇದನ್ನೂ ಓದಿ: ಕನ್ನಡ ದ್ರೋಹಿಯ ಮರು ಪರಿಷ್ಕರಣೆಯಲ್ಲಿ ‘ಡಾ. ರಾಜ್‌’ ಪಠ್ಯ ಇದ್ದರೆ, ಅವರಿಗೆ ಅವಮಾನ ಮಾಡಿದಂತೆ: ವರನಟನ ಪಾಠ ವಾಪಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋವಿಡ್-19 ಲಸಿಕೆ ಮತ್ತು ಯುವ ವಯಸ್ಕರ ಹಠಾತ್ ಸಾವುಗಳ ನಡುವೆ ಯಾವುದೇ ವೈಜ್ಞಾನಿಕ ಸಂಬಂಧ ಕಂಡುಬಂದಿಲ್ಲ: ಏಮ್ಸ್ ಅಧ್ಯಯನ

ನವದೆಹಲಿ: ದೆಹಲಿಯ ಏಮ್ಸ್‌ನಲ್ಲಿ ನಡೆಸಿದ ಒಂದು ವರ್ಷದ ಸಮಗ್ರ, ಶವಪರೀಕ್ಷೆ ಆಧಾರಿತ ವೀಕ್ಷಣಾ ಅಧ್ಯಯನವು, ಯುವ ವಯಸ್ಕರಲ್ಲಿ ಕೋವಿಡ್-19 ಲಸಿಕೆಯನ್ನು ಹಠಾತ್ ಸಾವುಗಳೊಂದಿಗೆ ಸಂಪರ್ಕಿಸುವ ಯಾವುದೇ ಪುರಾವೆಗಳು ಕಂಡುಬಂದಿಲ್ಲ, ಇದು ಕೋವಿಡ್ ಲಸಿಕೆಗಳ...

ಬಿಜೆಪಿ ಜನ ನಾಟಕೀಯರು, ದೇಶದ್ರೋಹಿಗಳು; ಅವರನ್ನು ಅಧಿಕಾರದಿಂದ ಕಿತ್ತೊಗೆಯಬೇಕು: ಮಲ್ಲಿಕಾರ್ಜುನ ಖರ್ಗೆ

"ಬಿಜೆಪಿಯವರು 'ಗದ್ದಾರ್‌ಗಳು' (ದೇಶದ್ರೋಹಿಗಳು) ಮತ್ತು 'ಡ್ರಮೆಬಾಜ್' (ನಾಟಕೀಯದಲ್ಲಿ ತೊಡಗಿಸಿಕೊಳ್ಳುವವರು). ಅವರನ್ನು ಅಧಿಕಾರದಿಂದ ತೆಗೆದುಹಾಕಬೇಕು" ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ಕೊಟ್ಟಿದ್ದಾರೆ.  ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ವೋಟ್ ಚೋರಿ ಕುರಿತ...

ಆಸ್ಟ್ರೇಲಿಯಾ | ಸಿಡ್ನಿಯ ಬೋಂಡಿ ಬೀಚ್‌ನಲ್ಲಿ ಗುಂಡಿನ ದಾಳಿ : 12 ಜನರು ಸಾವು

ಭಾನುವಾರ (ಡಿ.14) ಆಸ್ಟ್ರೇಲಿಯಾದ ಸಿಡ್ನಿ ನಗರದ ಪ್ರಸಿದ್ಧ ಬೋಂಡಿ ಬೀಚ್‌ನಲ್ಲಿ ಆಯೋಜಿಸಿದ್ದ ಯಹೂದಿ ಸಮುದಾಯದ 'ಹನುಕ್ಕಾ' ಕಾರ್ಯಕ್ರಮದಲ್ಲಿ ಇಬ್ಬರು ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ ಪರಿಣಾಮ 12 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ....

ಕೋಲ್ಕತ್ತಾದಲ್ಲಿ ನಡೆದ ಅವ್ಯವಸ್ಥೆ: ‘ಮೆಸ್ಸಿ ಭಾರತ ಪ್ರವಾಸ 2025’ರ ಪ್ರಮುಖ ಆಯೋಜಕರಿಗೆ 14 ದಿನಗಳ ಕಸ್ಟಡಿ

ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೊಡ್ಡ ಪ್ರಮಾಣದ ಅವ್ಯವಸ್ಥೆ ಉಂಟಾದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಪೊಲೀಸರು ಲಿಯೋನೆಲ್ ಮೆಸ್ಸಿ ಅವರ ಇಂಡಿಯಾ ಟೂರ್ 2025 ರ ಪ್ರಮುಖ ಆಯೋಜಕರನ್ನು ವಶಕ್ಕೆ ಪಡೆದಿದ್ದಾರೆ.  ಈ ಘಟನೆಯು ಪ್ರತಿಭಟನೆಗಳಿಗೆ...

ಹೆಡ್ಗೆವಾರ್ ಸ್ಮಾರಕ ಭೇಟಿ ತಪ್ಪಿಸಿಕೊಂಡ ಅಜಿತ್ ಪವಾರ್ : ನಮ್ಮದು ಅಂಬೇಡ್ಕರ್, ಫುಲೆ ಸಿದ್ಧಾಂತ ಎಂದ ಎನ್‌ಸಿಪಿ ವಕ್ತಾರ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಭಾನುವಾರ (ಡಿ.14) ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಸಂಸ್ಥಾಪಕ ಕೆ.ಬಿ. ಹೆಡ್ಗೆವಾರ್ ಸ್ಮಾರಕ ಭೇಟಿ ಕಾರ್ಯಕ್ರಮದಿಂದ ತಪ್ಪಿಸಿಕೊಂಡಿದ್ದು, ಅವರ ಪಕ್ಷ ಎನ್‌ಸಿಪಿ ರಾಜ್ಯದ ಅಭಿವೃದ್ಧಿಗಾಗಿ ಮಹಾಯುತಿ ಮೈತ್ರಿಕೂಟಕ್ಕೆ ಸೇರಿರುವುದಾಗಿ ಒತ್ತಿ...

ದೆಹಲಿಗೆ ಬರುವ ನಮ್ಮ ವಾಹನಗಳನ್ನು ಬಿಜೆಪಿ ಸರ್ಕಾರ ತಡೆಯುತ್ತಿದೆ : ಡಿಕೆಶಿ

ದೆಹಲಿ ಬರುತ್ತಿರುವ ನಮ್ಮವರ ವಾಹನಗಳನ್ನು ಬಿಜೆಪಿ ಸರ್ಕಾರ ತಡೆಯುತ್ತಿದೆ ಎಂಬ ಮಾಹಿತಿ ಬಂದಿದೆ. ಈ ಬಿಜೆಪಿಯವರಿಗೆ ಯಾಕಿಷ್ಟು ಆತಂಕ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಶ್ನಿಸಿದರು. ರಾಹುಲ್ ಗಾಂಧಿ ನೇತೃತ್ವದಲ್ಲಿ ದೆಹಲಿಯ ರಾಮ್‌ಲೀಲಾ...

ಹೊಸೂರು ವಿಮಾನ ನಿಲ್ದಾಣ: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ 12 ಹಳ್ಳಿಗಳಿಂದ 2,900 ಎಕರೆ ಸ್ವಾಧೀನ ಸಾಧ್ಯತೆ

ಚೆನ್ನೈ: ಬೆಂಗಳೂರಿಗೆ ಬಹಳ ಹತ್ತಿರದಲ್ಲಿರುವ ವೇಗವಾಗಿ ಬೆಳೆಯುತ್ತಿರುವ ಕೈಗಾರಿಕಾ ನಗರ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ 12 ಹಳ್ಳಿಗಳಲ್ಲಿ ಸರ್ಕಾರಿ ಸ್ವಾಮ್ಯದ 800 ಎಕರೆ ಸೇರಿದಂತೆ ಸುಮಾರು 3,000...

ಸೋನಮ್ ವಾಂಗ್‌ಚುಕ್ ಸಂಸ್ಥೆ ಅನುಕರಣೀಯ ಕೆಲಸ ಮಾಡುತ್ತಿದೆ, ಯುಜಿಸಿ ಮಾನ್ಯತೆ ನೀಡಬೇಕು ಎಂದ ಸಂಸದೀಯ ಸಮಿತಿ

ಲಡಾಖ್‌ನ ಶಿಕ್ಷಣ ತಜ್ಞ ಹಾಗೂ ಹೋರಾಟಗಾರ ಸೋನಮ್ ವಾಂಗ್‌ಚುಕ್ ಸ್ಥಾಪಿಸಿರುವ ಹಿಮಾಲಯನ್ ಇನ್ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ಸ್ (ಹೆಚ್‌ಐಎಎಲ್‌) 'ಅನುಕರಣೀಯ' ಕೆಲಸ ಮಾಡುತ್ತಿದೆ. ಹಾಗಾಗಿ, ಆ ಸಂಸ್ಥೆಗೆ ವಿಶ್ವವಿದ್ಯಾಲಯ ಅನುದಾನ ಆಯೋಗದಿಂದ (ಯುಜಿಸಿ) ಮಾನ್ಯತೆ...

ಮುಸ್ಲಿಂ ಎಂದು ಪರಿಶೀಲಿಸಿ ಗುಂಪುಹಲ್ಲೆ: ತೀವ್ರ ದಾಳಿಗೆ ಒಳಗಾಗಿದ್ದ 50 ವರ್ಷದ ಬಟ್ಟೆ ವ್ಯಾಪಾರಿ  ಸಾವು

ನವಾಡಾ ಜಿಲ್ಲೆಯ ರೋಹ್ ಪೊಲೀಸ್ ಠಾಣೆ ಪ್ರದೇಶದಲ್ಲಿ ನಡೆದ ಗುಂಪು ಹಲ್ಲೆಯಲ್ಲಿ ಕ್ರೂರವಾಗಿ ಹಲ್ಲೆಗೊಳಗಾಗಿದ್ದ 50 ವರ್ಷದ ಬಟ್ಟೆ ವ್ಯಾಪಾರಿ ಮೊಹಮ್ಮದ್ ಅಥರ್ ಹುಸೇನ್ ಶುಕ್ರವಾರ ತಡರಾತ್ರಿ ಬಿಹಾರ್ಷರೀಫ್ ಸದರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಡಿಸೆಂಬರ್...

ಅಮೆರಿಕಾದ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಗುಂಡಿನ ದಾಳಿ: 2 ಸಾವು, 8 ಜನರಿಗೆ ತೀವ್ರ ಗಾಯಗಳಾಗಿವೆ

ಅಮೆರಿಕಾದ ರೊಡ್ ಐಲ್ಯಂಡ್ ರಾಜ್ಯದ ಪ್ರೊವಿಡೆನ್ಸ್ ನಗರದಲ್ಲಿರುವ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಪರೀಕ್ಷೆ ಸಮಯದಲ್ಲಿ ಎಂಜಿನಿಯರಿಂಗ್ ಕಟ್ಟಡದಲ್ಲಿ ಗುಂಡಿನ ದಾಳಿ ನಡೆದಿದೆ, ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 8 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.  ಡಿಸೆಂಬರ್ 13ರ,...