Homeಮುಖಪುಟಮಹಿಳಾ ಹೋರಾಟಗಾರ್ತಿಯರಿಗೆ ಅವಮಾನ: ವೀರ ರಾಣಿ ಅಬ್ಬಕ್ಕ ದೇವಿ ಪಾಠ ಕೈಬಿಟ್ಟ ಚಕ್ರತೀರ್ಥ ಸಮಿತಿ

ಮಹಿಳಾ ಹೋರಾಟಗಾರ್ತಿಯರಿಗೆ ಅವಮಾನ: ವೀರ ರಾಣಿ ಅಬ್ಬಕ್ಕ ದೇವಿ ಪಾಠ ಕೈಬಿಟ್ಟ ಚಕ್ರತೀರ್ಥ ಸಮಿತಿ

7ನೇ ತರಗತಿ ಸಮಾಜ ವಿಜ್ಞಾನ-2 ಪಠ್ಯದಿಂದ ಹೋರಾಟಗಾರ್ತಿಯರಾದ ಬಳ್ಳಾರಿ ಸಿದ್ದಮ್ಮ, ಯಶೋಧರಮ್ಮ ದಾಸಪ್ಪ, ಉಮಾಬಾಯಿ ಕುಂದಾಪುರರವರ ಪಾಠ ಕೈಬಿಡಲಾಗಿದೆ.

- Advertisement -
- Advertisement -

ಬಿಜೆಪಿ ಸರ್ಕಾರದ ನೂತನ ಪಠ್ಯ ಪರಿಷ್ಕರಣೆ ಸಮಿತಿಯ ಮಾಡಿರುವ ತಿದ್ದುಪಡಿಗಳಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿ ಮತ್ತೊಂದು ಅನಾಹುತ ಕಂಡುಬಂದಿದೆ. 7ನೇ ತರಗತಿ ಸಮಾಜ ವಿಜ್ಞಾನ-2 ಪಠ್ಯದಿಂದ ಕರ್ನಾಟಕದ ಮಹಿಳಾ ಹೋರಾಟಗಾರರಾದ ಉಲ್ಲಾಳದ ರಾಣಿ ಅಬ್ಬಕ್ಕ ದೇವಿ, ಬಳ್ಳಾರಿ ಸಿದ್ದಮ್ಮ, ಯಶೋಧರಮ್ಮ ದಾಸಪ್ಪ ಮತ್ತು ಉಮಾಬಾಯಿ ಕುಂದಾಪುರರವರ ಪಾಠ ಕೈಬಿಡಲಾಗಿದೆ.

ಕಳೆದ ವರ್ಷ 7ನೇ ತರಗತಿಯ ಮಕ್ಕಳು ‘ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು’ ಎಂಬ ಪಾಠದಲ್ಲಿ ಬಹಳ ವಿವರವಾಗಿ ಕರ್ನಾಟಕದ ಹೋರಾಟಗಾರ್ತಿಯರ ಬಗ್ಗೆ ಅಭ್ಯಸಿಸಿದ್ದರು. ಗಾಂಧಿ ಪೂರ್ವ ಸ್ವಾತಂತ್ರ್ಯ ಹೋರಾಟದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ, ಕೆಳದಿ ಚೆನ್ನಮ್ಮರ ಸಾಲಿನಲ್ಲಿ ನಿಲ್ಲುವ ಮತ್ತೊಬ್ಬ ಮಹಿಳೆ ಎಂದು ಹೆಸರಿಸಿ ರಾಣಿ ಅಬ್ಬಕ್ಕದೇವಿಯವರ ಪಾಠ ಇಡಲಾಗಿತ್ತು. ಅದರಲ್ಲಿ ಅವರು ಪೋರ್ಚುಗೀಸರ ವಿರುದ್ಧ ಕಾದಾಡಿದ್ದ ವಿವರಗಳಿದ್ದವು. ಉಳ್ಳಾಲದ ರಾಣಿ ಅಬ್ಬಕ್ಕ ಪೋರ್ಚುಗೀಸರಿಗೆ ಕಪ್ಪ ಕೊಡಲು ನಿರಾಕರಿಸಿದಾಗ 1568ರಲ್ಲಿ ಅವರು ದಾಳಿ ನಡೆಸುತ್ತಾರೆ. ಅದನ್ನು ಅಬ್ಬಕ್ಕ ಹಿಮ್ಮೆಟ್ಟಿಸಿದ್ದ ವಿವರಗಳನ್ನು ನೀಡಲಾಗಿತ್ತು. ಆದರೆ ನೂತನ ಪಠ್ಯ ಪರಿಷ್ಕರಣೆಯಲ್ಲಿ ಆ ಪಠ್ಯ ಕೈಬಿಡಲಾಗಿದೆ.

ಅದೇ ರೀತಿಯಾಗಿ ಕಳೆದ ವರ್ಷದ ಪಠ್ಯದಲ್ಲಿ ಕರ್ನಾಟಕದ ದಿಟ್ಟ ಹೋರಾಟಗಾರ್ತಿಯರಾದ ಬಳ್ಳಾರಿ ಸಿದ್ದಮ್ಮ, ಯಶೋಧರಮ್ಮ ದಾಸಪ್ಪ ಮತ್ತು ಉಮಾಬಾಯಿ ಕುಂದಾಪುರರವರ ಪಾಠವಿತ್ತು. ಅದನ್ನು ತೆಗೆದುಹಾಕಿರುವ ನೂತನ ಸಮಿತಿಯು ಕರ್ನಾಟಕ ಸಮಾಜಿಮುಖಿ ಚಳವಳಿಗಳ ಎಂಬ ಪಠ್ಯದಲ್ಲಿ ಕೇವಲ ಕಮಲಾದೇವಿ ಚಟ್ಟೋಪಾಧ್ಯಾಯ ಮತ್ತು ಅರುಣಾ ಅಸಫ್ ಅಲಿಯವರ ಪಠ್ಯ ಮಾತ್ರ ಇರಿಸಿಕೊಂಡಿದೆ. ಅವರ ಕುರಿತು ಸಮರ್ಪಕ ವಿವರಗಳಿಲ್ಲದೆ ಕೇವಲ 4 ಪ್ಯಾರಗಳಲ್ಲಿ ಮೇಲುಮಟ್ಟಕ್ಕೆ ಪರಿಚಯಿಸಿ ಕೈತೊಳೆದುಕೊಳ್ಳಲಾಗಿದೆ.

ನಮ್ಮ ಮಕ್ಕಳು ಏಕೆ ಕನ್ನಡದ ಹೋರಾಟಗಾರರ ಬಗ್ಗೆ ಅದರಲ್ಲಿಯೂ ಮಹಿಳಾ ಹೋರಾಟಗಾರ್ತಿಯರ ಬಗ್ಗೆ ತಿಳಿದುಕೊಳ್ಳಬಾರದು ಎಂಬ ಪ್ರಶ್ನೆ ಎದ್ದಿದೆ. “ಕಪ್ಪ, ನಿಮಗೇಕೆ ಕೊಡಬೇಕು ಕಪ್ಪ? ನಮ್ಮ ದೇಶಕ್ಕೆ ಕಳ್ಳರಂತೆ ನುಗ್ಗಿರುವ ನಿಮಗೆ ಕಪ್ಪ ಕೊಟ್ಟು ಹೇಡಿ ಎನಿಸಿಕೊಳ್ಳುವುದಕ್ಕಿಂತ ಹೋರಾಡಿ ಸಾಯುವುದೇ ಲೇಸು” ಎಂದು ಹೇಳಿದ್ದ ವೀರ ರಾಣಿ ಅಬ್ಬಕ್ಕನವರ ಪಠ್ಯ ಕೈಬಿಟ್ಟಿದ್ದೇಕೆ ಎಂದು ನೂತನ ಸಮಿತಿಯು ಉತ್ತರಿಸಬೇಕಿದೆ.

ಅದೇ ರೀತಿಯಾಗಿ ಸ್ವಾತಂತ್ರ್ಯ ಚಳವಳಿಯ ಇತಿಹಾಸದಲ್ಲಿ ಪ್ರಾಣತೆತ್ತ ನೂರಾರು ಮಹಿಳೆಯರ ಜೀವನ ಚಿತ್ರಣಗಳು ಹೂತು ಹೋಗಿವೆ. ಇರುವ ಕೆಲವರ ಬಗ್ಗೆಯಾದರೂ ನಮ್ಮ ಮಕ್ಕಳು ಓದಿ ಅವರನ್ನು ಆದರ್ಶವನ್ನಾಗಿ ಪರಿಗಣಿಸಬೇಕು. ಆದರೆ ನೂತನ ಸಮಿತಿಯು ಅಂತಹ ಮಹಿಳಾ ಹೋರಾಟಗಾರ್ತಿಯರ ಪಠ್ಯವನ್ನೇ ಕೈಬಿಟ್ಟಿರುವುದು ದುರಂತ.

ಇದನ್ನೂ ಓದಿ: ಕನ್ನಡ ದ್ರೋಹಿಯ ಮರು ಪರಿಷ್ಕರಣೆಯಲ್ಲಿ ‘ಡಾ. ರಾಜ್‌’ ಪಠ್ಯ ಇದ್ದರೆ, ಅವರಿಗೆ ಅವಮಾನ ಮಾಡಿದಂತೆ: ವರನಟನ ಪಾಠ ವಾಪಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...