Homeಮುಖಪುಟಮಹಿಳಾ ಹೋರಾಟಗಾರ್ತಿಯರಿಗೆ ಅವಮಾನ: ವೀರ ರಾಣಿ ಅಬ್ಬಕ್ಕ ದೇವಿ ಪಾಠ ಕೈಬಿಟ್ಟ ಚಕ್ರತೀರ್ಥ ಸಮಿತಿ

ಮಹಿಳಾ ಹೋರಾಟಗಾರ್ತಿಯರಿಗೆ ಅವಮಾನ: ವೀರ ರಾಣಿ ಅಬ್ಬಕ್ಕ ದೇವಿ ಪಾಠ ಕೈಬಿಟ್ಟ ಚಕ್ರತೀರ್ಥ ಸಮಿತಿ

7ನೇ ತರಗತಿ ಸಮಾಜ ವಿಜ್ಞಾನ-2 ಪಠ್ಯದಿಂದ ಹೋರಾಟಗಾರ್ತಿಯರಾದ ಬಳ್ಳಾರಿ ಸಿದ್ದಮ್ಮ, ಯಶೋಧರಮ್ಮ ದಾಸಪ್ಪ, ಉಮಾಬಾಯಿ ಕುಂದಾಪುರರವರ ಪಾಠ ಕೈಬಿಡಲಾಗಿದೆ.

- Advertisement -
- Advertisement -

ಬಿಜೆಪಿ ಸರ್ಕಾರದ ನೂತನ ಪಠ್ಯ ಪರಿಷ್ಕರಣೆ ಸಮಿತಿಯ ಮಾಡಿರುವ ತಿದ್ದುಪಡಿಗಳಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿ ಮತ್ತೊಂದು ಅನಾಹುತ ಕಂಡುಬಂದಿದೆ. 7ನೇ ತರಗತಿ ಸಮಾಜ ವಿಜ್ಞಾನ-2 ಪಠ್ಯದಿಂದ ಕರ್ನಾಟಕದ ಮಹಿಳಾ ಹೋರಾಟಗಾರರಾದ ಉಲ್ಲಾಳದ ರಾಣಿ ಅಬ್ಬಕ್ಕ ದೇವಿ, ಬಳ್ಳಾರಿ ಸಿದ್ದಮ್ಮ, ಯಶೋಧರಮ್ಮ ದಾಸಪ್ಪ ಮತ್ತು ಉಮಾಬಾಯಿ ಕುಂದಾಪುರರವರ ಪಾಠ ಕೈಬಿಡಲಾಗಿದೆ.

ಕಳೆದ ವರ್ಷ 7ನೇ ತರಗತಿಯ ಮಕ್ಕಳು ‘ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು’ ಎಂಬ ಪಾಠದಲ್ಲಿ ಬಹಳ ವಿವರವಾಗಿ ಕರ್ನಾಟಕದ ಹೋರಾಟಗಾರ್ತಿಯರ ಬಗ್ಗೆ ಅಭ್ಯಸಿಸಿದ್ದರು. ಗಾಂಧಿ ಪೂರ್ವ ಸ್ವಾತಂತ್ರ್ಯ ಹೋರಾಟದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ, ಕೆಳದಿ ಚೆನ್ನಮ್ಮರ ಸಾಲಿನಲ್ಲಿ ನಿಲ್ಲುವ ಮತ್ತೊಬ್ಬ ಮಹಿಳೆ ಎಂದು ಹೆಸರಿಸಿ ರಾಣಿ ಅಬ್ಬಕ್ಕದೇವಿಯವರ ಪಾಠ ಇಡಲಾಗಿತ್ತು. ಅದರಲ್ಲಿ ಅವರು ಪೋರ್ಚುಗೀಸರ ವಿರುದ್ಧ ಕಾದಾಡಿದ್ದ ವಿವರಗಳಿದ್ದವು. ಉಳ್ಳಾಲದ ರಾಣಿ ಅಬ್ಬಕ್ಕ ಪೋರ್ಚುಗೀಸರಿಗೆ ಕಪ್ಪ ಕೊಡಲು ನಿರಾಕರಿಸಿದಾಗ 1568ರಲ್ಲಿ ಅವರು ದಾಳಿ ನಡೆಸುತ್ತಾರೆ. ಅದನ್ನು ಅಬ್ಬಕ್ಕ ಹಿಮ್ಮೆಟ್ಟಿಸಿದ್ದ ವಿವರಗಳನ್ನು ನೀಡಲಾಗಿತ್ತು. ಆದರೆ ನೂತನ ಪಠ್ಯ ಪರಿಷ್ಕರಣೆಯಲ್ಲಿ ಆ ಪಠ್ಯ ಕೈಬಿಡಲಾಗಿದೆ.

ಅದೇ ರೀತಿಯಾಗಿ ಕಳೆದ ವರ್ಷದ ಪಠ್ಯದಲ್ಲಿ ಕರ್ನಾಟಕದ ದಿಟ್ಟ ಹೋರಾಟಗಾರ್ತಿಯರಾದ ಬಳ್ಳಾರಿ ಸಿದ್ದಮ್ಮ, ಯಶೋಧರಮ್ಮ ದಾಸಪ್ಪ ಮತ್ತು ಉಮಾಬಾಯಿ ಕುಂದಾಪುರರವರ ಪಾಠವಿತ್ತು. ಅದನ್ನು ತೆಗೆದುಹಾಕಿರುವ ನೂತನ ಸಮಿತಿಯು ಕರ್ನಾಟಕ ಸಮಾಜಿಮುಖಿ ಚಳವಳಿಗಳ ಎಂಬ ಪಠ್ಯದಲ್ಲಿ ಕೇವಲ ಕಮಲಾದೇವಿ ಚಟ್ಟೋಪಾಧ್ಯಾಯ ಮತ್ತು ಅರುಣಾ ಅಸಫ್ ಅಲಿಯವರ ಪಠ್ಯ ಮಾತ್ರ ಇರಿಸಿಕೊಂಡಿದೆ. ಅವರ ಕುರಿತು ಸಮರ್ಪಕ ವಿವರಗಳಿಲ್ಲದೆ ಕೇವಲ 4 ಪ್ಯಾರಗಳಲ್ಲಿ ಮೇಲುಮಟ್ಟಕ್ಕೆ ಪರಿಚಯಿಸಿ ಕೈತೊಳೆದುಕೊಳ್ಳಲಾಗಿದೆ.

ನಮ್ಮ ಮಕ್ಕಳು ಏಕೆ ಕನ್ನಡದ ಹೋರಾಟಗಾರರ ಬಗ್ಗೆ ಅದರಲ್ಲಿಯೂ ಮಹಿಳಾ ಹೋರಾಟಗಾರ್ತಿಯರ ಬಗ್ಗೆ ತಿಳಿದುಕೊಳ್ಳಬಾರದು ಎಂಬ ಪ್ರಶ್ನೆ ಎದ್ದಿದೆ. “ಕಪ್ಪ, ನಿಮಗೇಕೆ ಕೊಡಬೇಕು ಕಪ್ಪ? ನಮ್ಮ ದೇಶಕ್ಕೆ ಕಳ್ಳರಂತೆ ನುಗ್ಗಿರುವ ನಿಮಗೆ ಕಪ್ಪ ಕೊಟ್ಟು ಹೇಡಿ ಎನಿಸಿಕೊಳ್ಳುವುದಕ್ಕಿಂತ ಹೋರಾಡಿ ಸಾಯುವುದೇ ಲೇಸು” ಎಂದು ಹೇಳಿದ್ದ ವೀರ ರಾಣಿ ಅಬ್ಬಕ್ಕನವರ ಪಠ್ಯ ಕೈಬಿಟ್ಟಿದ್ದೇಕೆ ಎಂದು ನೂತನ ಸಮಿತಿಯು ಉತ್ತರಿಸಬೇಕಿದೆ.

ಅದೇ ರೀತಿಯಾಗಿ ಸ್ವಾತಂತ್ರ್ಯ ಚಳವಳಿಯ ಇತಿಹಾಸದಲ್ಲಿ ಪ್ರಾಣತೆತ್ತ ನೂರಾರು ಮಹಿಳೆಯರ ಜೀವನ ಚಿತ್ರಣಗಳು ಹೂತು ಹೋಗಿವೆ. ಇರುವ ಕೆಲವರ ಬಗ್ಗೆಯಾದರೂ ನಮ್ಮ ಮಕ್ಕಳು ಓದಿ ಅವರನ್ನು ಆದರ್ಶವನ್ನಾಗಿ ಪರಿಗಣಿಸಬೇಕು. ಆದರೆ ನೂತನ ಸಮಿತಿಯು ಅಂತಹ ಮಹಿಳಾ ಹೋರಾಟಗಾರ್ತಿಯರ ಪಠ್ಯವನ್ನೇ ಕೈಬಿಟ್ಟಿರುವುದು ದುರಂತ.

ಇದನ್ನೂ ಓದಿ: ಕನ್ನಡ ದ್ರೋಹಿಯ ಮರು ಪರಿಷ್ಕರಣೆಯಲ್ಲಿ ‘ಡಾ. ರಾಜ್‌’ ಪಠ್ಯ ಇದ್ದರೆ, ಅವರಿಗೆ ಅವಮಾನ ಮಾಡಿದಂತೆ: ವರನಟನ ಪಾಠ ವಾಪಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...