Homeಮುಖಪುಟಮಹಿಳಾ ಹೋರಾಟಗಾರ್ತಿಯರಿಗೆ ಅವಮಾನ: ವೀರ ರಾಣಿ ಅಬ್ಬಕ್ಕ ದೇವಿ ಪಾಠ ಕೈಬಿಟ್ಟ ಚಕ್ರತೀರ್ಥ ಸಮಿತಿ

ಮಹಿಳಾ ಹೋರಾಟಗಾರ್ತಿಯರಿಗೆ ಅವಮಾನ: ವೀರ ರಾಣಿ ಅಬ್ಬಕ್ಕ ದೇವಿ ಪಾಠ ಕೈಬಿಟ್ಟ ಚಕ್ರತೀರ್ಥ ಸಮಿತಿ

7ನೇ ತರಗತಿ ಸಮಾಜ ವಿಜ್ಞಾನ-2 ಪಠ್ಯದಿಂದ ಹೋರಾಟಗಾರ್ತಿಯರಾದ ಬಳ್ಳಾರಿ ಸಿದ್ದಮ್ಮ, ಯಶೋಧರಮ್ಮ ದಾಸಪ್ಪ, ಉಮಾಬಾಯಿ ಕುಂದಾಪುರರವರ ಪಾಠ ಕೈಬಿಡಲಾಗಿದೆ.

- Advertisement -
- Advertisement -

ಬಿಜೆಪಿ ಸರ್ಕಾರದ ನೂತನ ಪಠ್ಯ ಪರಿಷ್ಕರಣೆ ಸಮಿತಿಯ ಮಾಡಿರುವ ತಿದ್ದುಪಡಿಗಳಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿ ಮತ್ತೊಂದು ಅನಾಹುತ ಕಂಡುಬಂದಿದೆ. 7ನೇ ತರಗತಿ ಸಮಾಜ ವಿಜ್ಞಾನ-2 ಪಠ್ಯದಿಂದ ಕರ್ನಾಟಕದ ಮಹಿಳಾ ಹೋರಾಟಗಾರರಾದ ಉಲ್ಲಾಳದ ರಾಣಿ ಅಬ್ಬಕ್ಕ ದೇವಿ, ಬಳ್ಳಾರಿ ಸಿದ್ದಮ್ಮ, ಯಶೋಧರಮ್ಮ ದಾಸಪ್ಪ ಮತ್ತು ಉಮಾಬಾಯಿ ಕುಂದಾಪುರರವರ ಪಾಠ ಕೈಬಿಡಲಾಗಿದೆ.

ಕಳೆದ ವರ್ಷ 7ನೇ ತರಗತಿಯ ಮಕ್ಕಳು ‘ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು’ ಎಂಬ ಪಾಠದಲ್ಲಿ ಬಹಳ ವಿವರವಾಗಿ ಕರ್ನಾಟಕದ ಹೋರಾಟಗಾರ್ತಿಯರ ಬಗ್ಗೆ ಅಭ್ಯಸಿಸಿದ್ದರು. ಗಾಂಧಿ ಪೂರ್ವ ಸ್ವಾತಂತ್ರ್ಯ ಹೋರಾಟದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ, ಕೆಳದಿ ಚೆನ್ನಮ್ಮರ ಸಾಲಿನಲ್ಲಿ ನಿಲ್ಲುವ ಮತ್ತೊಬ್ಬ ಮಹಿಳೆ ಎಂದು ಹೆಸರಿಸಿ ರಾಣಿ ಅಬ್ಬಕ್ಕದೇವಿಯವರ ಪಾಠ ಇಡಲಾಗಿತ್ತು. ಅದರಲ್ಲಿ ಅವರು ಪೋರ್ಚುಗೀಸರ ವಿರುದ್ಧ ಕಾದಾಡಿದ್ದ ವಿವರಗಳಿದ್ದವು. ಉಳ್ಳಾಲದ ರಾಣಿ ಅಬ್ಬಕ್ಕ ಪೋರ್ಚುಗೀಸರಿಗೆ ಕಪ್ಪ ಕೊಡಲು ನಿರಾಕರಿಸಿದಾಗ 1568ರಲ್ಲಿ ಅವರು ದಾಳಿ ನಡೆಸುತ್ತಾರೆ. ಅದನ್ನು ಅಬ್ಬಕ್ಕ ಹಿಮ್ಮೆಟ್ಟಿಸಿದ್ದ ವಿವರಗಳನ್ನು ನೀಡಲಾಗಿತ್ತು. ಆದರೆ ನೂತನ ಪಠ್ಯ ಪರಿಷ್ಕರಣೆಯಲ್ಲಿ ಆ ಪಠ್ಯ ಕೈಬಿಡಲಾಗಿದೆ.

ಅದೇ ರೀತಿಯಾಗಿ ಕಳೆದ ವರ್ಷದ ಪಠ್ಯದಲ್ಲಿ ಕರ್ನಾಟಕದ ದಿಟ್ಟ ಹೋರಾಟಗಾರ್ತಿಯರಾದ ಬಳ್ಳಾರಿ ಸಿದ್ದಮ್ಮ, ಯಶೋಧರಮ್ಮ ದಾಸಪ್ಪ ಮತ್ತು ಉಮಾಬಾಯಿ ಕುಂದಾಪುರರವರ ಪಾಠವಿತ್ತು. ಅದನ್ನು ತೆಗೆದುಹಾಕಿರುವ ನೂತನ ಸಮಿತಿಯು ಕರ್ನಾಟಕ ಸಮಾಜಿಮುಖಿ ಚಳವಳಿಗಳ ಎಂಬ ಪಠ್ಯದಲ್ಲಿ ಕೇವಲ ಕಮಲಾದೇವಿ ಚಟ್ಟೋಪಾಧ್ಯಾಯ ಮತ್ತು ಅರುಣಾ ಅಸಫ್ ಅಲಿಯವರ ಪಠ್ಯ ಮಾತ್ರ ಇರಿಸಿಕೊಂಡಿದೆ. ಅವರ ಕುರಿತು ಸಮರ್ಪಕ ವಿವರಗಳಿಲ್ಲದೆ ಕೇವಲ 4 ಪ್ಯಾರಗಳಲ್ಲಿ ಮೇಲುಮಟ್ಟಕ್ಕೆ ಪರಿಚಯಿಸಿ ಕೈತೊಳೆದುಕೊಳ್ಳಲಾಗಿದೆ.

ನಮ್ಮ ಮಕ್ಕಳು ಏಕೆ ಕನ್ನಡದ ಹೋರಾಟಗಾರರ ಬಗ್ಗೆ ಅದರಲ್ಲಿಯೂ ಮಹಿಳಾ ಹೋರಾಟಗಾರ್ತಿಯರ ಬಗ್ಗೆ ತಿಳಿದುಕೊಳ್ಳಬಾರದು ಎಂಬ ಪ್ರಶ್ನೆ ಎದ್ದಿದೆ. “ಕಪ್ಪ, ನಿಮಗೇಕೆ ಕೊಡಬೇಕು ಕಪ್ಪ? ನಮ್ಮ ದೇಶಕ್ಕೆ ಕಳ್ಳರಂತೆ ನುಗ್ಗಿರುವ ನಿಮಗೆ ಕಪ್ಪ ಕೊಟ್ಟು ಹೇಡಿ ಎನಿಸಿಕೊಳ್ಳುವುದಕ್ಕಿಂತ ಹೋರಾಡಿ ಸಾಯುವುದೇ ಲೇಸು” ಎಂದು ಹೇಳಿದ್ದ ವೀರ ರಾಣಿ ಅಬ್ಬಕ್ಕನವರ ಪಠ್ಯ ಕೈಬಿಟ್ಟಿದ್ದೇಕೆ ಎಂದು ನೂತನ ಸಮಿತಿಯು ಉತ್ತರಿಸಬೇಕಿದೆ.

ಅದೇ ರೀತಿಯಾಗಿ ಸ್ವಾತಂತ್ರ್ಯ ಚಳವಳಿಯ ಇತಿಹಾಸದಲ್ಲಿ ಪ್ರಾಣತೆತ್ತ ನೂರಾರು ಮಹಿಳೆಯರ ಜೀವನ ಚಿತ್ರಣಗಳು ಹೂತು ಹೋಗಿವೆ. ಇರುವ ಕೆಲವರ ಬಗ್ಗೆಯಾದರೂ ನಮ್ಮ ಮಕ್ಕಳು ಓದಿ ಅವರನ್ನು ಆದರ್ಶವನ್ನಾಗಿ ಪರಿಗಣಿಸಬೇಕು. ಆದರೆ ನೂತನ ಸಮಿತಿಯು ಅಂತಹ ಮಹಿಳಾ ಹೋರಾಟಗಾರ್ತಿಯರ ಪಠ್ಯವನ್ನೇ ಕೈಬಿಟ್ಟಿರುವುದು ದುರಂತ.

ಇದನ್ನೂ ಓದಿ: ಕನ್ನಡ ದ್ರೋಹಿಯ ಮರು ಪರಿಷ್ಕರಣೆಯಲ್ಲಿ ‘ಡಾ. ರಾಜ್‌’ ಪಠ್ಯ ಇದ್ದರೆ, ಅವರಿಗೆ ಅವಮಾನ ಮಾಡಿದಂತೆ: ವರನಟನ ಪಾಠ ವಾಪಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...