Homeಮುಖಪುಟಮಹಿಳಾ ಹೋರಾಟಗಾರ್ತಿಯರಿಗೆ ಅವಮಾನ: ವೀರ ರಾಣಿ ಅಬ್ಬಕ್ಕ ದೇವಿ ಪಾಠ ಕೈಬಿಟ್ಟ ಚಕ್ರತೀರ್ಥ ಸಮಿತಿ

ಮಹಿಳಾ ಹೋರಾಟಗಾರ್ತಿಯರಿಗೆ ಅವಮಾನ: ವೀರ ರಾಣಿ ಅಬ್ಬಕ್ಕ ದೇವಿ ಪಾಠ ಕೈಬಿಟ್ಟ ಚಕ್ರತೀರ್ಥ ಸಮಿತಿ

7ನೇ ತರಗತಿ ಸಮಾಜ ವಿಜ್ಞಾನ-2 ಪಠ್ಯದಿಂದ ಹೋರಾಟಗಾರ್ತಿಯರಾದ ಬಳ್ಳಾರಿ ಸಿದ್ದಮ್ಮ, ಯಶೋಧರಮ್ಮ ದಾಸಪ್ಪ, ಉಮಾಬಾಯಿ ಕುಂದಾಪುರರವರ ಪಾಠ ಕೈಬಿಡಲಾಗಿದೆ.

- Advertisement -
- Advertisement -

ಬಿಜೆಪಿ ಸರ್ಕಾರದ ನೂತನ ಪಠ್ಯ ಪರಿಷ್ಕರಣೆ ಸಮಿತಿಯ ಮಾಡಿರುವ ತಿದ್ದುಪಡಿಗಳಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿ ಮತ್ತೊಂದು ಅನಾಹುತ ಕಂಡುಬಂದಿದೆ. 7ನೇ ತರಗತಿ ಸಮಾಜ ವಿಜ್ಞಾನ-2 ಪಠ್ಯದಿಂದ ಕರ್ನಾಟಕದ ಮಹಿಳಾ ಹೋರಾಟಗಾರರಾದ ಉಲ್ಲಾಳದ ರಾಣಿ ಅಬ್ಬಕ್ಕ ದೇವಿ, ಬಳ್ಳಾರಿ ಸಿದ್ದಮ್ಮ, ಯಶೋಧರಮ್ಮ ದಾಸಪ್ಪ ಮತ್ತು ಉಮಾಬಾಯಿ ಕುಂದಾಪುರರವರ ಪಾಠ ಕೈಬಿಡಲಾಗಿದೆ.

ಕಳೆದ ವರ್ಷ 7ನೇ ತರಗತಿಯ ಮಕ್ಕಳು ‘ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು’ ಎಂಬ ಪಾಠದಲ್ಲಿ ಬಹಳ ವಿವರವಾಗಿ ಕರ್ನಾಟಕದ ಹೋರಾಟಗಾರ್ತಿಯರ ಬಗ್ಗೆ ಅಭ್ಯಸಿಸಿದ್ದರು. ಗಾಂಧಿ ಪೂರ್ವ ಸ್ವಾತಂತ್ರ್ಯ ಹೋರಾಟದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ, ಕೆಳದಿ ಚೆನ್ನಮ್ಮರ ಸಾಲಿನಲ್ಲಿ ನಿಲ್ಲುವ ಮತ್ತೊಬ್ಬ ಮಹಿಳೆ ಎಂದು ಹೆಸರಿಸಿ ರಾಣಿ ಅಬ್ಬಕ್ಕದೇವಿಯವರ ಪಾಠ ಇಡಲಾಗಿತ್ತು. ಅದರಲ್ಲಿ ಅವರು ಪೋರ್ಚುಗೀಸರ ವಿರುದ್ಧ ಕಾದಾಡಿದ್ದ ವಿವರಗಳಿದ್ದವು. ಉಳ್ಳಾಲದ ರಾಣಿ ಅಬ್ಬಕ್ಕ ಪೋರ್ಚುಗೀಸರಿಗೆ ಕಪ್ಪ ಕೊಡಲು ನಿರಾಕರಿಸಿದಾಗ 1568ರಲ್ಲಿ ಅವರು ದಾಳಿ ನಡೆಸುತ್ತಾರೆ. ಅದನ್ನು ಅಬ್ಬಕ್ಕ ಹಿಮ್ಮೆಟ್ಟಿಸಿದ್ದ ವಿವರಗಳನ್ನು ನೀಡಲಾಗಿತ್ತು. ಆದರೆ ನೂತನ ಪಠ್ಯ ಪರಿಷ್ಕರಣೆಯಲ್ಲಿ ಆ ಪಠ್ಯ ಕೈಬಿಡಲಾಗಿದೆ.

ಅದೇ ರೀತಿಯಾಗಿ ಕಳೆದ ವರ್ಷದ ಪಠ್ಯದಲ್ಲಿ ಕರ್ನಾಟಕದ ದಿಟ್ಟ ಹೋರಾಟಗಾರ್ತಿಯರಾದ ಬಳ್ಳಾರಿ ಸಿದ್ದಮ್ಮ, ಯಶೋಧರಮ್ಮ ದಾಸಪ್ಪ ಮತ್ತು ಉಮಾಬಾಯಿ ಕುಂದಾಪುರರವರ ಪಾಠವಿತ್ತು. ಅದನ್ನು ತೆಗೆದುಹಾಕಿರುವ ನೂತನ ಸಮಿತಿಯು ಕರ್ನಾಟಕ ಸಮಾಜಿಮುಖಿ ಚಳವಳಿಗಳ ಎಂಬ ಪಠ್ಯದಲ್ಲಿ ಕೇವಲ ಕಮಲಾದೇವಿ ಚಟ್ಟೋಪಾಧ್ಯಾಯ ಮತ್ತು ಅರುಣಾ ಅಸಫ್ ಅಲಿಯವರ ಪಠ್ಯ ಮಾತ್ರ ಇರಿಸಿಕೊಂಡಿದೆ. ಅವರ ಕುರಿತು ಸಮರ್ಪಕ ವಿವರಗಳಿಲ್ಲದೆ ಕೇವಲ 4 ಪ್ಯಾರಗಳಲ್ಲಿ ಮೇಲುಮಟ್ಟಕ್ಕೆ ಪರಿಚಯಿಸಿ ಕೈತೊಳೆದುಕೊಳ್ಳಲಾಗಿದೆ.

ನಮ್ಮ ಮಕ್ಕಳು ಏಕೆ ಕನ್ನಡದ ಹೋರಾಟಗಾರರ ಬಗ್ಗೆ ಅದರಲ್ಲಿಯೂ ಮಹಿಳಾ ಹೋರಾಟಗಾರ್ತಿಯರ ಬಗ್ಗೆ ತಿಳಿದುಕೊಳ್ಳಬಾರದು ಎಂಬ ಪ್ರಶ್ನೆ ಎದ್ದಿದೆ. “ಕಪ್ಪ, ನಿಮಗೇಕೆ ಕೊಡಬೇಕು ಕಪ್ಪ? ನಮ್ಮ ದೇಶಕ್ಕೆ ಕಳ್ಳರಂತೆ ನುಗ್ಗಿರುವ ನಿಮಗೆ ಕಪ್ಪ ಕೊಟ್ಟು ಹೇಡಿ ಎನಿಸಿಕೊಳ್ಳುವುದಕ್ಕಿಂತ ಹೋರಾಡಿ ಸಾಯುವುದೇ ಲೇಸು” ಎಂದು ಹೇಳಿದ್ದ ವೀರ ರಾಣಿ ಅಬ್ಬಕ್ಕನವರ ಪಠ್ಯ ಕೈಬಿಟ್ಟಿದ್ದೇಕೆ ಎಂದು ನೂತನ ಸಮಿತಿಯು ಉತ್ತರಿಸಬೇಕಿದೆ.

ಅದೇ ರೀತಿಯಾಗಿ ಸ್ವಾತಂತ್ರ್ಯ ಚಳವಳಿಯ ಇತಿಹಾಸದಲ್ಲಿ ಪ್ರಾಣತೆತ್ತ ನೂರಾರು ಮಹಿಳೆಯರ ಜೀವನ ಚಿತ್ರಣಗಳು ಹೂತು ಹೋಗಿವೆ. ಇರುವ ಕೆಲವರ ಬಗ್ಗೆಯಾದರೂ ನಮ್ಮ ಮಕ್ಕಳು ಓದಿ ಅವರನ್ನು ಆದರ್ಶವನ್ನಾಗಿ ಪರಿಗಣಿಸಬೇಕು. ಆದರೆ ನೂತನ ಸಮಿತಿಯು ಅಂತಹ ಮಹಿಳಾ ಹೋರಾಟಗಾರ್ತಿಯರ ಪಠ್ಯವನ್ನೇ ಕೈಬಿಟ್ಟಿರುವುದು ದುರಂತ.

ಇದನ್ನೂ ಓದಿ: ಕನ್ನಡ ದ್ರೋಹಿಯ ಮರು ಪರಿಷ್ಕರಣೆಯಲ್ಲಿ ‘ಡಾ. ರಾಜ್‌’ ಪಠ್ಯ ಇದ್ದರೆ, ಅವರಿಗೆ ಅವಮಾನ ಮಾಡಿದಂತೆ: ವರನಟನ ಪಾಠ ವಾಪಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...

ನ್ಯೂಯಾರ್ಕ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ: RSS ಮತ್ತು ಸಂಸ್ಥೆಯ ನಂಟಿನ ರಹಸ್ಯ ಬಯಲು

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಶನಿವಾರ ನ್ಯೂಯಾರ್ಕ್‌ನ ಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್ಸ್’ ಎಂಬ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವರದಿಗಳ ಪ್ರಕಾರ,...

ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಲಿರುವ, ಶನಿವಾರ (ಆ.29) ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ 'ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್' ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರು...

ಶಿವಮೊಗ್ಗ| ಈದ್-ಎ-ಮಿಲಾದ್ ರ್‍ಯಾಲಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಗಾಗಿ ನಿರ್ಮಿಸಲಾಗಿದ್ದ ಕಟೌಟ್ ಒಂದರ ಮೇಲೆ ಫೆಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪೊಲೀಸರು ಮೂವರು ಮುಸ್ಲಿಂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನಿಹಾಲ್ ಉರುಫ್ ಬೆಕ್ಕು,...

ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ FIR: ಹೈಕೋರ್ಟ್ ಆದೇಶ ಉಲ್ಲಂಘನೆ ಆರೋಪ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಕೋಲ್ಕತ್ತಾ ಪೊಲೀಸರು ಸ್ವಯಂಪ್ರೇರಿತ (Suo Motu) ದೂರು ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ವಿದ್ಯಾರ್ಥಿ...

ಈದ್ ಮಿಲಾದ್ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನ; ಭಜರಂಗದಳ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಈದ್-ಎ-ಮಿಲಾದ್ ಪೋಸ್ಟರ್‌ಗಳ ವಿಚಾರವಾಗಿ ಗುಂಪುಗಳ ನಡುವೆ ಶತ್ರುತ್ವ ಸೃಷ್ಟಿಸಲು ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನಿಸಿದ ಆರೋಪದ ಮೇಲೆ ಕಲಬುರಗಿಯಲ್ಲಿ ಭಜರಂಗದಳದ ಕಾರ್ಯಕರ್ತನೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಯ ಭಾಗವಾಗಿ...

ವೆನೆಜುವೆಲಾ ತೈಲ ನಿಕ್ಷೇಪಗಳ ಮೇಲೆ ಅಮೆರಿಕ ನಿಯಂತ್ರಣ: ಜಾಗತಿಕ ರಾಜಕಾರಣದಲ್ಲಿ ತಲ್ಲಣ!

ವಾಷಿಂಗ್ಟನ್/ಕಾರಕಾಸ್: ವಿಶ್ವದಲ್ಲೇ ಅತಿ ಹೆಚ್ಚು ಕಚ್ಚಾ ತೈಲ ನಿಕ್ಷೇಪ ಹೊಂದಿರುವ ವೆನೆಜುವೆಲಾ ದೇಶದ 65 ಬಿಲಿಯನ್ ಬ್ಯಾರೆಲ್‌ಗಿಂತ ಹೆಚ್ಚು ಸಾಬೀತಾದ ತೈಲ ನಿಕ್ಷೇಪಗಳ ಮೇಲೆ ಬಹುಮತ ನಿಯಂತ್ರಣ ಸಾಧಿಸುವ ಒಪ್ಪಂದವನ್ನು ಅಮೆರಿಕ ಮಾಡಿಕೊಂಡಿದೆ....

ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ; ಇದು ಬಿಜೆಪಿಯ ಗೆಲುವಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಸಚಿವರಾಗಿದ್ದ ಬಿ. ನಾಗೇಂದ್ರ ಅವರು ಸಾರ್ವಜನಿಕ ಜೀವನದಲ್ಲಿ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯ ಗೆಲುವೂ ಅಲ್ಲ, ವಿಪಕ್ಷ ನಾಯಕರ ಹೋರಾಟದ ಗೆಲುವೂ ಅಲ್ಲ. ಇದೊಂದು ದಲಿತ ಸಮುದಾಯ ನಾಯಕರ...