Homeಮುಖಪುಟಮಹಿಳಾ ಹೋರಾಟಗಾರ್ತಿಯರಿಗೆ ಅವಮಾನ: ವೀರ ರಾಣಿ ಅಬ್ಬಕ್ಕ ದೇವಿ ಪಾಠ ಕೈಬಿಟ್ಟ ಚಕ್ರತೀರ್ಥ ಸಮಿತಿ

ಮಹಿಳಾ ಹೋರಾಟಗಾರ್ತಿಯರಿಗೆ ಅವಮಾನ: ವೀರ ರಾಣಿ ಅಬ್ಬಕ್ಕ ದೇವಿ ಪಾಠ ಕೈಬಿಟ್ಟ ಚಕ್ರತೀರ್ಥ ಸಮಿತಿ

7ನೇ ತರಗತಿ ಸಮಾಜ ವಿಜ್ಞಾನ-2 ಪಠ್ಯದಿಂದ ಹೋರಾಟಗಾರ್ತಿಯರಾದ ಬಳ್ಳಾರಿ ಸಿದ್ದಮ್ಮ, ಯಶೋಧರಮ್ಮ ದಾಸಪ್ಪ, ಉಮಾಬಾಯಿ ಕುಂದಾಪುರರವರ ಪಾಠ ಕೈಬಿಡಲಾಗಿದೆ.

- Advertisement -
- Advertisement -

ಬಿಜೆಪಿ ಸರ್ಕಾರದ ನೂತನ ಪಠ್ಯ ಪರಿಷ್ಕರಣೆ ಸಮಿತಿಯ ಮಾಡಿರುವ ತಿದ್ದುಪಡಿಗಳಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿ ಮತ್ತೊಂದು ಅನಾಹುತ ಕಂಡುಬಂದಿದೆ. 7ನೇ ತರಗತಿ ಸಮಾಜ ವಿಜ್ಞಾನ-2 ಪಠ್ಯದಿಂದ ಕರ್ನಾಟಕದ ಮಹಿಳಾ ಹೋರಾಟಗಾರರಾದ ಉಲ್ಲಾಳದ ರಾಣಿ ಅಬ್ಬಕ್ಕ ದೇವಿ, ಬಳ್ಳಾರಿ ಸಿದ್ದಮ್ಮ, ಯಶೋಧರಮ್ಮ ದಾಸಪ್ಪ ಮತ್ತು ಉಮಾಬಾಯಿ ಕುಂದಾಪುರರವರ ಪಾಠ ಕೈಬಿಡಲಾಗಿದೆ.

ಕಳೆದ ವರ್ಷ 7ನೇ ತರಗತಿಯ ಮಕ್ಕಳು ‘ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು’ ಎಂಬ ಪಾಠದಲ್ಲಿ ಬಹಳ ವಿವರವಾಗಿ ಕರ್ನಾಟಕದ ಹೋರಾಟಗಾರ್ತಿಯರ ಬಗ್ಗೆ ಅಭ್ಯಸಿಸಿದ್ದರು. ಗಾಂಧಿ ಪೂರ್ವ ಸ್ವಾತಂತ್ರ್ಯ ಹೋರಾಟದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ, ಕೆಳದಿ ಚೆನ್ನಮ್ಮರ ಸಾಲಿನಲ್ಲಿ ನಿಲ್ಲುವ ಮತ್ತೊಬ್ಬ ಮಹಿಳೆ ಎಂದು ಹೆಸರಿಸಿ ರಾಣಿ ಅಬ್ಬಕ್ಕದೇವಿಯವರ ಪಾಠ ಇಡಲಾಗಿತ್ತು. ಅದರಲ್ಲಿ ಅವರು ಪೋರ್ಚುಗೀಸರ ವಿರುದ್ಧ ಕಾದಾಡಿದ್ದ ವಿವರಗಳಿದ್ದವು. ಉಳ್ಳಾಲದ ರಾಣಿ ಅಬ್ಬಕ್ಕ ಪೋರ್ಚುಗೀಸರಿಗೆ ಕಪ್ಪ ಕೊಡಲು ನಿರಾಕರಿಸಿದಾಗ 1568ರಲ್ಲಿ ಅವರು ದಾಳಿ ನಡೆಸುತ್ತಾರೆ. ಅದನ್ನು ಅಬ್ಬಕ್ಕ ಹಿಮ್ಮೆಟ್ಟಿಸಿದ್ದ ವಿವರಗಳನ್ನು ನೀಡಲಾಗಿತ್ತು. ಆದರೆ ನೂತನ ಪಠ್ಯ ಪರಿಷ್ಕರಣೆಯಲ್ಲಿ ಆ ಪಠ್ಯ ಕೈಬಿಡಲಾಗಿದೆ.

ಅದೇ ರೀತಿಯಾಗಿ ಕಳೆದ ವರ್ಷದ ಪಠ್ಯದಲ್ಲಿ ಕರ್ನಾಟಕದ ದಿಟ್ಟ ಹೋರಾಟಗಾರ್ತಿಯರಾದ ಬಳ್ಳಾರಿ ಸಿದ್ದಮ್ಮ, ಯಶೋಧರಮ್ಮ ದಾಸಪ್ಪ ಮತ್ತು ಉಮಾಬಾಯಿ ಕುಂದಾಪುರರವರ ಪಾಠವಿತ್ತು. ಅದನ್ನು ತೆಗೆದುಹಾಕಿರುವ ನೂತನ ಸಮಿತಿಯು ಕರ್ನಾಟಕ ಸಮಾಜಿಮುಖಿ ಚಳವಳಿಗಳ ಎಂಬ ಪಠ್ಯದಲ್ಲಿ ಕೇವಲ ಕಮಲಾದೇವಿ ಚಟ್ಟೋಪಾಧ್ಯಾಯ ಮತ್ತು ಅರುಣಾ ಅಸಫ್ ಅಲಿಯವರ ಪಠ್ಯ ಮಾತ್ರ ಇರಿಸಿಕೊಂಡಿದೆ. ಅವರ ಕುರಿತು ಸಮರ್ಪಕ ವಿವರಗಳಿಲ್ಲದೆ ಕೇವಲ 4 ಪ್ಯಾರಗಳಲ್ಲಿ ಮೇಲುಮಟ್ಟಕ್ಕೆ ಪರಿಚಯಿಸಿ ಕೈತೊಳೆದುಕೊಳ್ಳಲಾಗಿದೆ.

ನಮ್ಮ ಮಕ್ಕಳು ಏಕೆ ಕನ್ನಡದ ಹೋರಾಟಗಾರರ ಬಗ್ಗೆ ಅದರಲ್ಲಿಯೂ ಮಹಿಳಾ ಹೋರಾಟಗಾರ್ತಿಯರ ಬಗ್ಗೆ ತಿಳಿದುಕೊಳ್ಳಬಾರದು ಎಂಬ ಪ್ರಶ್ನೆ ಎದ್ದಿದೆ. “ಕಪ್ಪ, ನಿಮಗೇಕೆ ಕೊಡಬೇಕು ಕಪ್ಪ? ನಮ್ಮ ದೇಶಕ್ಕೆ ಕಳ್ಳರಂತೆ ನುಗ್ಗಿರುವ ನಿಮಗೆ ಕಪ್ಪ ಕೊಟ್ಟು ಹೇಡಿ ಎನಿಸಿಕೊಳ್ಳುವುದಕ್ಕಿಂತ ಹೋರಾಡಿ ಸಾಯುವುದೇ ಲೇಸು” ಎಂದು ಹೇಳಿದ್ದ ವೀರ ರಾಣಿ ಅಬ್ಬಕ್ಕನವರ ಪಠ್ಯ ಕೈಬಿಟ್ಟಿದ್ದೇಕೆ ಎಂದು ನೂತನ ಸಮಿತಿಯು ಉತ್ತರಿಸಬೇಕಿದೆ.

ಅದೇ ರೀತಿಯಾಗಿ ಸ್ವಾತಂತ್ರ್ಯ ಚಳವಳಿಯ ಇತಿಹಾಸದಲ್ಲಿ ಪ್ರಾಣತೆತ್ತ ನೂರಾರು ಮಹಿಳೆಯರ ಜೀವನ ಚಿತ್ರಣಗಳು ಹೂತು ಹೋಗಿವೆ. ಇರುವ ಕೆಲವರ ಬಗ್ಗೆಯಾದರೂ ನಮ್ಮ ಮಕ್ಕಳು ಓದಿ ಅವರನ್ನು ಆದರ್ಶವನ್ನಾಗಿ ಪರಿಗಣಿಸಬೇಕು. ಆದರೆ ನೂತನ ಸಮಿತಿಯು ಅಂತಹ ಮಹಿಳಾ ಹೋರಾಟಗಾರ್ತಿಯರ ಪಠ್ಯವನ್ನೇ ಕೈಬಿಟ್ಟಿರುವುದು ದುರಂತ.

ಇದನ್ನೂ ಓದಿ: ಕನ್ನಡ ದ್ರೋಹಿಯ ಮರು ಪರಿಷ್ಕರಣೆಯಲ್ಲಿ ‘ಡಾ. ರಾಜ್‌’ ಪಠ್ಯ ಇದ್ದರೆ, ಅವರಿಗೆ ಅವಮಾನ ಮಾಡಿದಂತೆ: ವರನಟನ ಪಾಠ ವಾಪಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...