Homeಮುಖಪುಟಮಹಿಳಾ ಹೋರಾಟಗಾರ್ತಿಯರಿಗೆ ಅವಮಾನ: ವೀರ ರಾಣಿ ಅಬ್ಬಕ್ಕ ದೇವಿ ಪಾಠ ಕೈಬಿಟ್ಟ ಚಕ್ರತೀರ್ಥ ಸಮಿತಿ

ಮಹಿಳಾ ಹೋರಾಟಗಾರ್ತಿಯರಿಗೆ ಅವಮಾನ: ವೀರ ರಾಣಿ ಅಬ್ಬಕ್ಕ ದೇವಿ ಪಾಠ ಕೈಬಿಟ್ಟ ಚಕ್ರತೀರ್ಥ ಸಮಿತಿ

7ನೇ ತರಗತಿ ಸಮಾಜ ವಿಜ್ಞಾನ-2 ಪಠ್ಯದಿಂದ ಹೋರಾಟಗಾರ್ತಿಯರಾದ ಬಳ್ಳಾರಿ ಸಿದ್ದಮ್ಮ, ಯಶೋಧರಮ್ಮ ದಾಸಪ್ಪ, ಉಮಾಬಾಯಿ ಕುಂದಾಪುರರವರ ಪಾಠ ಕೈಬಿಡಲಾಗಿದೆ.

- Advertisement -
- Advertisement -

ಬಿಜೆಪಿ ಸರ್ಕಾರದ ನೂತನ ಪಠ್ಯ ಪರಿಷ್ಕರಣೆ ಸಮಿತಿಯ ಮಾಡಿರುವ ತಿದ್ದುಪಡಿಗಳಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿ ಮತ್ತೊಂದು ಅನಾಹುತ ಕಂಡುಬಂದಿದೆ. 7ನೇ ತರಗತಿ ಸಮಾಜ ವಿಜ್ಞಾನ-2 ಪಠ್ಯದಿಂದ ಕರ್ನಾಟಕದ ಮಹಿಳಾ ಹೋರಾಟಗಾರರಾದ ಉಲ್ಲಾಳದ ರಾಣಿ ಅಬ್ಬಕ್ಕ ದೇವಿ, ಬಳ್ಳಾರಿ ಸಿದ್ದಮ್ಮ, ಯಶೋಧರಮ್ಮ ದಾಸಪ್ಪ ಮತ್ತು ಉಮಾಬಾಯಿ ಕುಂದಾಪುರರವರ ಪಾಠ ಕೈಬಿಡಲಾಗಿದೆ.

ಕಳೆದ ವರ್ಷ 7ನೇ ತರಗತಿಯ ಮಕ್ಕಳು ‘ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು’ ಎಂಬ ಪಾಠದಲ್ಲಿ ಬಹಳ ವಿವರವಾಗಿ ಕರ್ನಾಟಕದ ಹೋರಾಟಗಾರ್ತಿಯರ ಬಗ್ಗೆ ಅಭ್ಯಸಿಸಿದ್ದರು. ಗಾಂಧಿ ಪೂರ್ವ ಸ್ವಾತಂತ್ರ್ಯ ಹೋರಾಟದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ, ಕೆಳದಿ ಚೆನ್ನಮ್ಮರ ಸಾಲಿನಲ್ಲಿ ನಿಲ್ಲುವ ಮತ್ತೊಬ್ಬ ಮಹಿಳೆ ಎಂದು ಹೆಸರಿಸಿ ರಾಣಿ ಅಬ್ಬಕ್ಕದೇವಿಯವರ ಪಾಠ ಇಡಲಾಗಿತ್ತು. ಅದರಲ್ಲಿ ಅವರು ಪೋರ್ಚುಗೀಸರ ವಿರುದ್ಧ ಕಾದಾಡಿದ್ದ ವಿವರಗಳಿದ್ದವು. ಉಳ್ಳಾಲದ ರಾಣಿ ಅಬ್ಬಕ್ಕ ಪೋರ್ಚುಗೀಸರಿಗೆ ಕಪ್ಪ ಕೊಡಲು ನಿರಾಕರಿಸಿದಾಗ 1568ರಲ್ಲಿ ಅವರು ದಾಳಿ ನಡೆಸುತ್ತಾರೆ. ಅದನ್ನು ಅಬ್ಬಕ್ಕ ಹಿಮ್ಮೆಟ್ಟಿಸಿದ್ದ ವಿವರಗಳನ್ನು ನೀಡಲಾಗಿತ್ತು. ಆದರೆ ನೂತನ ಪಠ್ಯ ಪರಿಷ್ಕರಣೆಯಲ್ಲಿ ಆ ಪಠ್ಯ ಕೈಬಿಡಲಾಗಿದೆ.

ಅದೇ ರೀತಿಯಾಗಿ ಕಳೆದ ವರ್ಷದ ಪಠ್ಯದಲ್ಲಿ ಕರ್ನಾಟಕದ ದಿಟ್ಟ ಹೋರಾಟಗಾರ್ತಿಯರಾದ ಬಳ್ಳಾರಿ ಸಿದ್ದಮ್ಮ, ಯಶೋಧರಮ್ಮ ದಾಸಪ್ಪ ಮತ್ತು ಉಮಾಬಾಯಿ ಕುಂದಾಪುರರವರ ಪಾಠವಿತ್ತು. ಅದನ್ನು ತೆಗೆದುಹಾಕಿರುವ ನೂತನ ಸಮಿತಿಯು ಕರ್ನಾಟಕ ಸಮಾಜಿಮುಖಿ ಚಳವಳಿಗಳ ಎಂಬ ಪಠ್ಯದಲ್ಲಿ ಕೇವಲ ಕಮಲಾದೇವಿ ಚಟ್ಟೋಪಾಧ್ಯಾಯ ಮತ್ತು ಅರುಣಾ ಅಸಫ್ ಅಲಿಯವರ ಪಠ್ಯ ಮಾತ್ರ ಇರಿಸಿಕೊಂಡಿದೆ. ಅವರ ಕುರಿತು ಸಮರ್ಪಕ ವಿವರಗಳಿಲ್ಲದೆ ಕೇವಲ 4 ಪ್ಯಾರಗಳಲ್ಲಿ ಮೇಲುಮಟ್ಟಕ್ಕೆ ಪರಿಚಯಿಸಿ ಕೈತೊಳೆದುಕೊಳ್ಳಲಾಗಿದೆ.

ನಮ್ಮ ಮಕ್ಕಳು ಏಕೆ ಕನ್ನಡದ ಹೋರಾಟಗಾರರ ಬಗ್ಗೆ ಅದರಲ್ಲಿಯೂ ಮಹಿಳಾ ಹೋರಾಟಗಾರ್ತಿಯರ ಬಗ್ಗೆ ತಿಳಿದುಕೊಳ್ಳಬಾರದು ಎಂಬ ಪ್ರಶ್ನೆ ಎದ್ದಿದೆ. “ಕಪ್ಪ, ನಿಮಗೇಕೆ ಕೊಡಬೇಕು ಕಪ್ಪ? ನಮ್ಮ ದೇಶಕ್ಕೆ ಕಳ್ಳರಂತೆ ನುಗ್ಗಿರುವ ನಿಮಗೆ ಕಪ್ಪ ಕೊಟ್ಟು ಹೇಡಿ ಎನಿಸಿಕೊಳ್ಳುವುದಕ್ಕಿಂತ ಹೋರಾಡಿ ಸಾಯುವುದೇ ಲೇಸು” ಎಂದು ಹೇಳಿದ್ದ ವೀರ ರಾಣಿ ಅಬ್ಬಕ್ಕನವರ ಪಠ್ಯ ಕೈಬಿಟ್ಟಿದ್ದೇಕೆ ಎಂದು ನೂತನ ಸಮಿತಿಯು ಉತ್ತರಿಸಬೇಕಿದೆ.

ಅದೇ ರೀತಿಯಾಗಿ ಸ್ವಾತಂತ್ರ್ಯ ಚಳವಳಿಯ ಇತಿಹಾಸದಲ್ಲಿ ಪ್ರಾಣತೆತ್ತ ನೂರಾರು ಮಹಿಳೆಯರ ಜೀವನ ಚಿತ್ರಣಗಳು ಹೂತು ಹೋಗಿವೆ. ಇರುವ ಕೆಲವರ ಬಗ್ಗೆಯಾದರೂ ನಮ್ಮ ಮಕ್ಕಳು ಓದಿ ಅವರನ್ನು ಆದರ್ಶವನ್ನಾಗಿ ಪರಿಗಣಿಸಬೇಕು. ಆದರೆ ನೂತನ ಸಮಿತಿಯು ಅಂತಹ ಮಹಿಳಾ ಹೋರಾಟಗಾರ್ತಿಯರ ಪಠ್ಯವನ್ನೇ ಕೈಬಿಟ್ಟಿರುವುದು ದುರಂತ.

ಇದನ್ನೂ ಓದಿ: ಕನ್ನಡ ದ್ರೋಹಿಯ ಮರು ಪರಿಷ್ಕರಣೆಯಲ್ಲಿ ‘ಡಾ. ರಾಜ್‌’ ಪಠ್ಯ ಇದ್ದರೆ, ಅವರಿಗೆ ಅವಮಾನ ಮಾಡಿದಂತೆ: ವರನಟನ ಪಾಠ ವಾಪಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...