Homeಮುಖಪುಟಮಹಿಳಾ ಹೋರಾಟಗಾರ್ತಿಯರಿಗೆ ಅವಮಾನ: ವೀರ ರಾಣಿ ಅಬ್ಬಕ್ಕ ದೇವಿ ಪಾಠ ಕೈಬಿಟ್ಟ ಚಕ್ರತೀರ್ಥ ಸಮಿತಿ

ಮಹಿಳಾ ಹೋರಾಟಗಾರ್ತಿಯರಿಗೆ ಅವಮಾನ: ವೀರ ರಾಣಿ ಅಬ್ಬಕ್ಕ ದೇವಿ ಪಾಠ ಕೈಬಿಟ್ಟ ಚಕ್ರತೀರ್ಥ ಸಮಿತಿ

7ನೇ ತರಗತಿ ಸಮಾಜ ವಿಜ್ಞಾನ-2 ಪಠ್ಯದಿಂದ ಹೋರಾಟಗಾರ್ತಿಯರಾದ ಬಳ್ಳಾರಿ ಸಿದ್ದಮ್ಮ, ಯಶೋಧರಮ್ಮ ದಾಸಪ್ಪ, ಉಮಾಬಾಯಿ ಕುಂದಾಪುರರವರ ಪಾಠ ಕೈಬಿಡಲಾಗಿದೆ.

- Advertisement -
- Advertisement -

ಬಿಜೆಪಿ ಸರ್ಕಾರದ ನೂತನ ಪಠ್ಯ ಪರಿಷ್ಕರಣೆ ಸಮಿತಿಯ ಮಾಡಿರುವ ತಿದ್ದುಪಡಿಗಳಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿ ಮತ್ತೊಂದು ಅನಾಹುತ ಕಂಡುಬಂದಿದೆ. 7ನೇ ತರಗತಿ ಸಮಾಜ ವಿಜ್ಞಾನ-2 ಪಠ್ಯದಿಂದ ಕರ್ನಾಟಕದ ಮಹಿಳಾ ಹೋರಾಟಗಾರರಾದ ಉಲ್ಲಾಳದ ರಾಣಿ ಅಬ್ಬಕ್ಕ ದೇವಿ, ಬಳ್ಳಾರಿ ಸಿದ್ದಮ್ಮ, ಯಶೋಧರಮ್ಮ ದಾಸಪ್ಪ ಮತ್ತು ಉಮಾಬಾಯಿ ಕುಂದಾಪುರರವರ ಪಾಠ ಕೈಬಿಡಲಾಗಿದೆ.

ಕಳೆದ ವರ್ಷ 7ನೇ ತರಗತಿಯ ಮಕ್ಕಳು ‘ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು’ ಎಂಬ ಪಾಠದಲ್ಲಿ ಬಹಳ ವಿವರವಾಗಿ ಕರ್ನಾಟಕದ ಹೋರಾಟಗಾರ್ತಿಯರ ಬಗ್ಗೆ ಅಭ್ಯಸಿಸಿದ್ದರು. ಗಾಂಧಿ ಪೂರ್ವ ಸ್ವಾತಂತ್ರ್ಯ ಹೋರಾಟದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ, ಕೆಳದಿ ಚೆನ್ನಮ್ಮರ ಸಾಲಿನಲ್ಲಿ ನಿಲ್ಲುವ ಮತ್ತೊಬ್ಬ ಮಹಿಳೆ ಎಂದು ಹೆಸರಿಸಿ ರಾಣಿ ಅಬ್ಬಕ್ಕದೇವಿಯವರ ಪಾಠ ಇಡಲಾಗಿತ್ತು. ಅದರಲ್ಲಿ ಅವರು ಪೋರ್ಚುಗೀಸರ ವಿರುದ್ಧ ಕಾದಾಡಿದ್ದ ವಿವರಗಳಿದ್ದವು. ಉಳ್ಳಾಲದ ರಾಣಿ ಅಬ್ಬಕ್ಕ ಪೋರ್ಚುಗೀಸರಿಗೆ ಕಪ್ಪ ಕೊಡಲು ನಿರಾಕರಿಸಿದಾಗ 1568ರಲ್ಲಿ ಅವರು ದಾಳಿ ನಡೆಸುತ್ತಾರೆ. ಅದನ್ನು ಅಬ್ಬಕ್ಕ ಹಿಮ್ಮೆಟ್ಟಿಸಿದ್ದ ವಿವರಗಳನ್ನು ನೀಡಲಾಗಿತ್ತು. ಆದರೆ ನೂತನ ಪಠ್ಯ ಪರಿಷ್ಕರಣೆಯಲ್ಲಿ ಆ ಪಠ್ಯ ಕೈಬಿಡಲಾಗಿದೆ.

ಅದೇ ರೀತಿಯಾಗಿ ಕಳೆದ ವರ್ಷದ ಪಠ್ಯದಲ್ಲಿ ಕರ್ನಾಟಕದ ದಿಟ್ಟ ಹೋರಾಟಗಾರ್ತಿಯರಾದ ಬಳ್ಳಾರಿ ಸಿದ್ದಮ್ಮ, ಯಶೋಧರಮ್ಮ ದಾಸಪ್ಪ ಮತ್ತು ಉಮಾಬಾಯಿ ಕುಂದಾಪುರರವರ ಪಾಠವಿತ್ತು. ಅದನ್ನು ತೆಗೆದುಹಾಕಿರುವ ನೂತನ ಸಮಿತಿಯು ಕರ್ನಾಟಕ ಸಮಾಜಿಮುಖಿ ಚಳವಳಿಗಳ ಎಂಬ ಪಠ್ಯದಲ್ಲಿ ಕೇವಲ ಕಮಲಾದೇವಿ ಚಟ್ಟೋಪಾಧ್ಯಾಯ ಮತ್ತು ಅರುಣಾ ಅಸಫ್ ಅಲಿಯವರ ಪಠ್ಯ ಮಾತ್ರ ಇರಿಸಿಕೊಂಡಿದೆ. ಅವರ ಕುರಿತು ಸಮರ್ಪಕ ವಿವರಗಳಿಲ್ಲದೆ ಕೇವಲ 4 ಪ್ಯಾರಗಳಲ್ಲಿ ಮೇಲುಮಟ್ಟಕ್ಕೆ ಪರಿಚಯಿಸಿ ಕೈತೊಳೆದುಕೊಳ್ಳಲಾಗಿದೆ.

ನಮ್ಮ ಮಕ್ಕಳು ಏಕೆ ಕನ್ನಡದ ಹೋರಾಟಗಾರರ ಬಗ್ಗೆ ಅದರಲ್ಲಿಯೂ ಮಹಿಳಾ ಹೋರಾಟಗಾರ್ತಿಯರ ಬಗ್ಗೆ ತಿಳಿದುಕೊಳ್ಳಬಾರದು ಎಂಬ ಪ್ರಶ್ನೆ ಎದ್ದಿದೆ. “ಕಪ್ಪ, ನಿಮಗೇಕೆ ಕೊಡಬೇಕು ಕಪ್ಪ? ನಮ್ಮ ದೇಶಕ್ಕೆ ಕಳ್ಳರಂತೆ ನುಗ್ಗಿರುವ ನಿಮಗೆ ಕಪ್ಪ ಕೊಟ್ಟು ಹೇಡಿ ಎನಿಸಿಕೊಳ್ಳುವುದಕ್ಕಿಂತ ಹೋರಾಡಿ ಸಾಯುವುದೇ ಲೇಸು” ಎಂದು ಹೇಳಿದ್ದ ವೀರ ರಾಣಿ ಅಬ್ಬಕ್ಕನವರ ಪಠ್ಯ ಕೈಬಿಟ್ಟಿದ್ದೇಕೆ ಎಂದು ನೂತನ ಸಮಿತಿಯು ಉತ್ತರಿಸಬೇಕಿದೆ.

ಅದೇ ರೀತಿಯಾಗಿ ಸ್ವಾತಂತ್ರ್ಯ ಚಳವಳಿಯ ಇತಿಹಾಸದಲ್ಲಿ ಪ್ರಾಣತೆತ್ತ ನೂರಾರು ಮಹಿಳೆಯರ ಜೀವನ ಚಿತ್ರಣಗಳು ಹೂತು ಹೋಗಿವೆ. ಇರುವ ಕೆಲವರ ಬಗ್ಗೆಯಾದರೂ ನಮ್ಮ ಮಕ್ಕಳು ಓದಿ ಅವರನ್ನು ಆದರ್ಶವನ್ನಾಗಿ ಪರಿಗಣಿಸಬೇಕು. ಆದರೆ ನೂತನ ಸಮಿತಿಯು ಅಂತಹ ಮಹಿಳಾ ಹೋರಾಟಗಾರ್ತಿಯರ ಪಠ್ಯವನ್ನೇ ಕೈಬಿಟ್ಟಿರುವುದು ದುರಂತ.

ಇದನ್ನೂ ಓದಿ: ಕನ್ನಡ ದ್ರೋಹಿಯ ಮರು ಪರಿಷ್ಕರಣೆಯಲ್ಲಿ ‘ಡಾ. ರಾಜ್‌’ ಪಠ್ಯ ಇದ್ದರೆ, ಅವರಿಗೆ ಅವಮಾನ ಮಾಡಿದಂತೆ: ವರನಟನ ಪಾಠ ವಾಪಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುತ್ತಿಗೆ ಕಾರ್ಮಿಕ ಪದ್ಧತಿ ರದ್ದುಪಡಿಸಿ, ನೇರ ವೇತನ ಪಾವತಿ ಜಾರಿಗೊಳಿಸಿ, ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸಲು ಆಗ್ರಹಿಸಿ ಎಐಸಿಸಿಟಿಯು ಪ್ರತಿಭಟನೆ

ಬೆಂಗಳೂರು: ರಾಜ್ಯಾದ್ಯಂತ ವಿವಿಧ ವಲಯಗಳಲ್ಲಿ ದುಡಿಯುತ್ತಿರುವ ಗುತ್ತಿಗೆ, ಹೊರಗುತ್ತಿಗೆ, ದಿನಗೂಲಿ ಹಾಗೂ ತಾತ್ಕಾಲಿಕ ಕಾರ್ಮಿಕರ ಶೋಷಣೆ ತಡೆಗಟ್ಟಿ, ಅವರಿಗೆ ಉದ್ಯೋಗ ಭದ್ರತೆ ಮತ್ತು ಸಾಮಾಜಿಕ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ...

ಯುಜಿಸಿ ಇಕ್ವಿಟಿ ನಿಯಮಗಳು ಮರುಪರಿಶೀಲನೆಯಲ್ಲಿವೆ: ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ ಸರ್ಕಾರ

ಕ್ಯಾಂಪಸ್‌ಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟುವ ಕುರಿತಾದ 2026 ರ ವಿಶ್ವವಿದ್ಯಾಲಯ ಅನುದಾನ ಆಯೋಗದ ಇಕ್ವಿಟಿ ನಿಯಮಗಳು ಮರುಪರಿಶೀಲನೆಯಲ್ಲಿವೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಜನವರಿ 29 ರಂದು, ಸುಪ್ರೀಂ...

ಅಲ್ಪಸಂಖ್ಯಾತರ ಮೇಲಿನ ದಾಳಿ ಹಿನ್ನೆಲೆ: ಭಾಗವತ್ ಭೇಟಿಗೂ ಮುನ್ನ ಆರ್‌ಎಸ್‌ಎಸ್ ನಾಯಕರನ್ನು ದೂರವಿಡುವಂತೆ ವಾಷಿಂಗ್ಟನ್‌ಗೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ ಒತ್ತಾಯ

ವಾಷಿಂಗ್ಟನ್: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಅಮೆರಿಕ ಭೇಟಿಗೆ ಮುನ್ನ, ಅವರೊಂದಿಗೆ ಉನ್ನತ ಮಟ್ಟದ ರಾಜತಾಂತ್ರಿಕ ಮಾತುಕತೆಗಳನ್ನು ತಡೆಹಿಡಿಯಬೇಕು ಮತ್ತು ಸಂಘದ ಪ್ರಮುಖ ನಾಯಕರ ವಿರುದ್ಧ ನಿರ್ಬಂಧಗಳನ್ನು...

ಮೋಹನ್ ಭಾಗವತ್‌ ಅಮೆರಿಕ ಪ್ರವಾಸಕ್ಕೆ ವಿರೋಧ: RSSಗೆ ನಿರ್ಬಂಧದ ಭೀತಿ

ಆರ್‌ಎಸ್‌ಎಸ್ (RSS) ಸಂಘಟನೆಯ ವಿರುದ್ಧ ನಿರ್ಬಂಧಗಳನ್ನು ವಿಧಿಸುವಂತೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಕುರಿತ ಸಲಹಾ ಮಂಡಳಿಯ (USCIRF) ಅಧಿಕಾರಿಗಳು ಅಮೆರಿಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಶೀಘ್ರದಲ್ಲೇ ಅಮೆರಿಕಕ್ಕೆ ಭೇಟಿ ನೀಡಲಿರುವ RSS ಸರಸಂಘಚಾಲಕ ಮೋಹನ್ ಭಾಗವತ್...

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಕೇರಳದ ಟ್ರಾನ್ಸ್ ಜೆಂಡರ್ ಮೇಕಪ್ ಕಲಾವಿದೆ ಜಾನ್ಮೋನಿ ದಾಸ್ ಬಂಧನ

ಕೋಝಿಕ್ಕೋಡ್: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಸಾರ್ವಜನಿಕವಾಗಿ ಅವಮಾನಕಾರಿ ಹಾಗೂ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇರೆಗೆ ಕೇರಳದ ಪ್ರಸಿದ್ಧ ಸೆಲೆಬ್ರಿಟಿ ಮೇಕಪ್ ಆರ್ಟಿಸ್ಟ್ ಹಾಗೂ ಬಿಗ್ ಬಾಸ್ ಮಾಜಿ...

ಎರಡು ಚರಣಗಳ ‘ವಂದೇ ಮಾತರಂ’ ನಿಲುವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್

ವಂದೇ ಮಾತರಂ ವಿವಾದ ತೀವ್ರಗೊಳ್ಳುತ್ತಿರುವಂತೆಯೇ, ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ತೀವ್ರ ಟೀಕೆಗಳ ನಡುವೆಯೂ ಕಾಂಗ್ರೆಸ್ ಪಕ್ಷವು ತನ್ನ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆಯ ಮೊದಲ ಎರಡು ಚರಣಗಳನ್ನು ಹಾಡುವ ತನ್ನ ದೀರ್ಘಕಾಲದ ಪದ್ಧತಿಯನ್ನು...

31ನೇ ದಕ್ಷಿಣ ವಲಯ ಮಂಡಳಿ ಸಭೆ : ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡುವಂತೆ ಸಿಎಂ ಡಿ.ಕೆ ಶಿವಕುಮಾರ್ ಒತ್ತಾಯ

ಕರ್ನಾಟಕ ಬಲಿಷ್ಠವಾದಾಗ, ದಕ್ಷಿಣ ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ದಕ್ಷಿಣ ಭಾರತ ಬಲಿಷ್ಠವಾದಾಗ, ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ನಾವು ಭಾರತದ ಅಭಿವೃದ್ಧಿಯ ಪಾಲುದಾರರು. ನಮಗೆ ನಮ್ಮ ನಿಧಿಗಳಲ್ಲಿ, ನಮ್ಮ ಧ್ವನಿಯಲ್ಲಿ ನ್ಯಾಯ ಬೇಕು. ನಮಗೆ...

ರಾಯಚೂರು| ಬಾವಿಯಲ್ಲಿ ದಲಿತ ಯುವತಿ ಮೃತದೇಹ ಪತ್ತೆ; ಅತ್ಯಾಚಾರ-ಕೊಲೆ ಶಂಕೆ

ನಿನ್ನೆ ರಾತ್ರಿ ಬಯಲು ಶೌಚಾಲಯಕ್ಕೆಂದು ಮನೆಯಿಂದ ಹೊರಹೋಗಿದ್ದ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಇಂದು ಬೆಳಗ್ಗೆ ಜಮೀನಿನಲ್ಲಿದ್ದ ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಕ್ರಾಣಿ ಗ್ರಾಮದಲ್ಲಿ ಘಟನೆ ನಡೆಸಿದ್ದು, ಮೃತ...

ನಕಲಿ ಔಷಧ ಜಾಲದ ಸುಳಿವು ನೀಡಿದವರಿಗೆ ₹50,000 ನಗದು ಬಹುಮಾನ: ಆರೋಗ್ಯ ಇಲಾಖೆ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ನಕಲಿ ಔಷಧ ಜಾಲದ ವಿರುದ್ಧ ಆರೋಗ್ಯ ಇಲಾಖೆ ಸಮರ ಸಾರಿದೆ. ರಾಜ್ಯದಲ್ಲಿ ನಕಲಿ ಔಷಧಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಹಾಗೂ ಪೂರೈಕೆ ಕುರಿತು ನಿಖರ ಮಾಹಿತಿ ನೀಡುವ...

ಎಬಿವಿಪಿ ಮತ್ತು ಎಡಪಂಥೀಯ ಗುಂಪುಗಳ ನಡುವೆ ವಾಗ್ವಾದ: ಮಧ್ಯರಾತ್ರಿ ಜಾದವ್‌ಪುರ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಳಿ ನಡೆಸಿದ ಹಿಂದುತ್ವವಾದಿ ಗುಂಪು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಪ್ರತಿಷ್ಠಿತ ಜಾದವ್‌ಪುರ ವಿಶ್ವವಿದ್ಯಾಲಯದ (ಜೆ ಯು) ಕ್ಯಾಂಪಸ್‌ ಮೇಲೆ ತಡರಾತ್ರಿ ಹಿಂದುತ್ವವಾದಿ ಸಂಘಟನೆಗೆ ಸೇರಿದ ಗುಂಪೊಂದು ಭೀಕರ ದಾಳಿ ನಡೆಸಿದ್ದು, ವಿಶ್ವವಿದ್ಯಾಲಯದ ಆಸ್ತಿಪಾಸ್ತಿ ಧ್ವಂಸಗೊಳಿಸಿ ಹಲವು ವಿದ್ಯಾರ್ಥಿಗಳನ್ನು ತೀವ್ರವಾಗಿ...