Homeಮುಖಪುಟಮಹಿಳಾ ಹೋರಾಟಗಾರ್ತಿಯರಿಗೆ ಅವಮಾನ: ವೀರ ರಾಣಿ ಅಬ್ಬಕ್ಕ ದೇವಿ ಪಾಠ ಕೈಬಿಟ್ಟ ಚಕ್ರತೀರ್ಥ ಸಮಿತಿ

ಮಹಿಳಾ ಹೋರಾಟಗಾರ್ತಿಯರಿಗೆ ಅವಮಾನ: ವೀರ ರಾಣಿ ಅಬ್ಬಕ್ಕ ದೇವಿ ಪಾಠ ಕೈಬಿಟ್ಟ ಚಕ್ರತೀರ್ಥ ಸಮಿತಿ

7ನೇ ತರಗತಿ ಸಮಾಜ ವಿಜ್ಞಾನ-2 ಪಠ್ಯದಿಂದ ಹೋರಾಟಗಾರ್ತಿಯರಾದ ಬಳ್ಳಾರಿ ಸಿದ್ದಮ್ಮ, ಯಶೋಧರಮ್ಮ ದಾಸಪ್ಪ, ಉಮಾಬಾಯಿ ಕುಂದಾಪುರರವರ ಪಾಠ ಕೈಬಿಡಲಾಗಿದೆ.

- Advertisement -
- Advertisement -

ಬಿಜೆಪಿ ಸರ್ಕಾರದ ನೂತನ ಪಠ್ಯ ಪರಿಷ್ಕರಣೆ ಸಮಿತಿಯ ಮಾಡಿರುವ ತಿದ್ದುಪಡಿಗಳಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿ ಮತ್ತೊಂದು ಅನಾಹುತ ಕಂಡುಬಂದಿದೆ. 7ನೇ ತರಗತಿ ಸಮಾಜ ವಿಜ್ಞಾನ-2 ಪಠ್ಯದಿಂದ ಕರ್ನಾಟಕದ ಮಹಿಳಾ ಹೋರಾಟಗಾರರಾದ ಉಲ್ಲಾಳದ ರಾಣಿ ಅಬ್ಬಕ್ಕ ದೇವಿ, ಬಳ್ಳಾರಿ ಸಿದ್ದಮ್ಮ, ಯಶೋಧರಮ್ಮ ದಾಸಪ್ಪ ಮತ್ತು ಉಮಾಬಾಯಿ ಕುಂದಾಪುರರವರ ಪಾಠ ಕೈಬಿಡಲಾಗಿದೆ.

ಕಳೆದ ವರ್ಷ 7ನೇ ತರಗತಿಯ ಮಕ್ಕಳು ‘ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು’ ಎಂಬ ಪಾಠದಲ್ಲಿ ಬಹಳ ವಿವರವಾಗಿ ಕರ್ನಾಟಕದ ಹೋರಾಟಗಾರ್ತಿಯರ ಬಗ್ಗೆ ಅಭ್ಯಸಿಸಿದ್ದರು. ಗಾಂಧಿ ಪೂರ್ವ ಸ್ವಾತಂತ್ರ್ಯ ಹೋರಾಟದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ, ಕೆಳದಿ ಚೆನ್ನಮ್ಮರ ಸಾಲಿನಲ್ಲಿ ನಿಲ್ಲುವ ಮತ್ತೊಬ್ಬ ಮಹಿಳೆ ಎಂದು ಹೆಸರಿಸಿ ರಾಣಿ ಅಬ್ಬಕ್ಕದೇವಿಯವರ ಪಾಠ ಇಡಲಾಗಿತ್ತು. ಅದರಲ್ಲಿ ಅವರು ಪೋರ್ಚುಗೀಸರ ವಿರುದ್ಧ ಕಾದಾಡಿದ್ದ ವಿವರಗಳಿದ್ದವು. ಉಳ್ಳಾಲದ ರಾಣಿ ಅಬ್ಬಕ್ಕ ಪೋರ್ಚುಗೀಸರಿಗೆ ಕಪ್ಪ ಕೊಡಲು ನಿರಾಕರಿಸಿದಾಗ 1568ರಲ್ಲಿ ಅವರು ದಾಳಿ ನಡೆಸುತ್ತಾರೆ. ಅದನ್ನು ಅಬ್ಬಕ್ಕ ಹಿಮ್ಮೆಟ್ಟಿಸಿದ್ದ ವಿವರಗಳನ್ನು ನೀಡಲಾಗಿತ್ತು. ಆದರೆ ನೂತನ ಪಠ್ಯ ಪರಿಷ್ಕರಣೆಯಲ್ಲಿ ಆ ಪಠ್ಯ ಕೈಬಿಡಲಾಗಿದೆ.

ಅದೇ ರೀತಿಯಾಗಿ ಕಳೆದ ವರ್ಷದ ಪಠ್ಯದಲ್ಲಿ ಕರ್ನಾಟಕದ ದಿಟ್ಟ ಹೋರಾಟಗಾರ್ತಿಯರಾದ ಬಳ್ಳಾರಿ ಸಿದ್ದಮ್ಮ, ಯಶೋಧರಮ್ಮ ದಾಸಪ್ಪ ಮತ್ತು ಉಮಾಬಾಯಿ ಕುಂದಾಪುರರವರ ಪಾಠವಿತ್ತು. ಅದನ್ನು ತೆಗೆದುಹಾಕಿರುವ ನೂತನ ಸಮಿತಿಯು ಕರ್ನಾಟಕ ಸಮಾಜಿಮುಖಿ ಚಳವಳಿಗಳ ಎಂಬ ಪಠ್ಯದಲ್ಲಿ ಕೇವಲ ಕಮಲಾದೇವಿ ಚಟ್ಟೋಪಾಧ್ಯಾಯ ಮತ್ತು ಅರುಣಾ ಅಸಫ್ ಅಲಿಯವರ ಪಠ್ಯ ಮಾತ್ರ ಇರಿಸಿಕೊಂಡಿದೆ. ಅವರ ಕುರಿತು ಸಮರ್ಪಕ ವಿವರಗಳಿಲ್ಲದೆ ಕೇವಲ 4 ಪ್ಯಾರಗಳಲ್ಲಿ ಮೇಲುಮಟ್ಟಕ್ಕೆ ಪರಿಚಯಿಸಿ ಕೈತೊಳೆದುಕೊಳ್ಳಲಾಗಿದೆ.

ನಮ್ಮ ಮಕ್ಕಳು ಏಕೆ ಕನ್ನಡದ ಹೋರಾಟಗಾರರ ಬಗ್ಗೆ ಅದರಲ್ಲಿಯೂ ಮಹಿಳಾ ಹೋರಾಟಗಾರ್ತಿಯರ ಬಗ್ಗೆ ತಿಳಿದುಕೊಳ್ಳಬಾರದು ಎಂಬ ಪ್ರಶ್ನೆ ಎದ್ದಿದೆ. “ಕಪ್ಪ, ನಿಮಗೇಕೆ ಕೊಡಬೇಕು ಕಪ್ಪ? ನಮ್ಮ ದೇಶಕ್ಕೆ ಕಳ್ಳರಂತೆ ನುಗ್ಗಿರುವ ನಿಮಗೆ ಕಪ್ಪ ಕೊಟ್ಟು ಹೇಡಿ ಎನಿಸಿಕೊಳ್ಳುವುದಕ್ಕಿಂತ ಹೋರಾಡಿ ಸಾಯುವುದೇ ಲೇಸು” ಎಂದು ಹೇಳಿದ್ದ ವೀರ ರಾಣಿ ಅಬ್ಬಕ್ಕನವರ ಪಠ್ಯ ಕೈಬಿಟ್ಟಿದ್ದೇಕೆ ಎಂದು ನೂತನ ಸಮಿತಿಯು ಉತ್ತರಿಸಬೇಕಿದೆ.

ಅದೇ ರೀತಿಯಾಗಿ ಸ್ವಾತಂತ್ರ್ಯ ಚಳವಳಿಯ ಇತಿಹಾಸದಲ್ಲಿ ಪ್ರಾಣತೆತ್ತ ನೂರಾರು ಮಹಿಳೆಯರ ಜೀವನ ಚಿತ್ರಣಗಳು ಹೂತು ಹೋಗಿವೆ. ಇರುವ ಕೆಲವರ ಬಗ್ಗೆಯಾದರೂ ನಮ್ಮ ಮಕ್ಕಳು ಓದಿ ಅವರನ್ನು ಆದರ್ಶವನ್ನಾಗಿ ಪರಿಗಣಿಸಬೇಕು. ಆದರೆ ನೂತನ ಸಮಿತಿಯು ಅಂತಹ ಮಹಿಳಾ ಹೋರಾಟಗಾರ್ತಿಯರ ಪಠ್ಯವನ್ನೇ ಕೈಬಿಟ್ಟಿರುವುದು ದುರಂತ.

ಇದನ್ನೂ ಓದಿ: ಕನ್ನಡ ದ್ರೋಹಿಯ ಮರು ಪರಿಷ್ಕರಣೆಯಲ್ಲಿ ‘ಡಾ. ರಾಜ್‌’ ಪಠ್ಯ ಇದ್ದರೆ, ಅವರಿಗೆ ಅವಮಾನ ಮಾಡಿದಂತೆ: ವರನಟನ ಪಾಠ ವಾಪಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...

ಡಿಲಿಮಿಟೇಷನ್ ಮೂಲಕ ದಕ್ಷಿಣ ಭಾರತದ ಪ್ರಭಾವ ಕಸಿದುಕೊಳ್ಳಲು ಬಿಜೆಪಿಯಿಂದ ಪಿತೂರಿ: ರೇವಂತ್ ರೆಡ್ಡಿ

ಜನಸಂಖ್ಯೆ ಅನುಪಾತದ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡಣೆಯು ದಕ್ಷಿಣ ರಾಜ್ಯಗಳಿಗೆ ಅನ್ಯಾಯವನ್ನುಂಟು ಮಾಡುತ್ತದೆ ಎಂದು ಎಚ್ಚರಿಸಿದ ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ, ರಾಜಕೀಯ ಪಕ್ಷಗಳು ಮತ್ತು ಇತರರೊಂದಿಗೆ ವ್ಯಾಪಕ ಸಮಾಲೋಚನೆಯ...

ನೋಯ್ಡಾ ಕಾರ್ಮಿಕ ಪ್ರತಿಭಟನೆ: 300ಕ್ಕೂ ಹೆಚ್ಚು ಜನರ ಬಂಧನ, 7 ಎಫ್‌ಐಆರ್‌: ಅಶಾಂತಿಯ ಹಿಂದೆ ‘ಸಂಘಟಿತ ಸಿಂಡಿಕೇಟ್’ ಕುರಿತು ತನಿಖೆ

ನೋಯ್ಡಾದಲ್ಲಿ ಹಿಂಸಾತ್ಮಕವಾಗಿ ತಿರುಗಿದ ಕಾರ್ಮಿಕರ ಪ್ರತಿಭಟನೆಗೆ ಸಂಬಂಧಿಸಿದಂತೆ 300ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಮತ್ತು ಏಳು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಗೌತಮ್ ಬುದ್ಧ ನಗರ ಪೊಲೀಸ್ ಆಯುಕ್ತ ಲಕ್ಷ್ಮಿ ಸಿಂಗ್ ಮಂಗಳವಾರ ಹೇಳಿದ್ದಾರೆ,...

“ಜೀವನದಲ್ಲಿ ಮೊದಲ ಬಾರಿಗೆ ಒಬ್ರು ನನ್ನನ್ನು ವಿಚಾರಣೆಯಿಂದ ಹಿಂದೆ ಸರಿಯುವಂತೆ ಕೇಳಿಕೊಂಡಿದ್ದಾರೆ” : ಕೇಜ್ರಿವಾಲ್ ಅರ್ಜಿ ಕುರಿತ ಆದೇಶ ಕಾಯ್ದಿರಿಸಿದ ನ್ಯಾ. ಶರ್ಮಾ

ಅಬಕಾರಿ ನೀತಿ ಪ್ರಕರಣದಲ್ಲಿ ತಮ್ಮನ್ನು ಖುಲಾಸೆಗೊಳಿಸಿದ ಆದೇಶದ ವಿರುದ್ಧ ಸಿಬಿಐ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿಯ ವಿಚಾರಣೆಯಿಂದ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಹಿಂದೆ ಸರಿಯಬೇಕು ಎಂದು ಕೋರಿ ಮಾಜಿ ಮುಖ್ಯಮಂತ್ರಿ ಅರವಿಂದ್...

ಜಮ್ಮು-ಕಾಶ್ಮೀರ| ನಕಲಿ ಗೋರಕ್ಷಕರು ಬೆನ್ನಟ್ಟಿದ್ದರಿಂದ ನದಿಗೆ ಹಾರಿದ ವ್ಯಕ್ತಿ ಕಣ್ಮರೆ; ನಾಲ್ವರ ಬಂಧನ

ಜಮ್ಮು ಕಾಶ್ಮೀರದ ರಾಂಬನ್ ಜಿಲ್ಲೆಯ ರಾಮ್ಸೂ ಪ್ರದೇಶದ ಹೆದ್ದಾರಿಯಲ್ಲಿ ಗೋರಕ್ಷಕರು ವ್ಯಕ್ತಿಯೊಬ್ಬನನ್ನು ಬೆನ್ನಟ್ಟಿದ್ದರಿಂದ ಹೆದರಿದ ಆತ ಸುರಕ್ಷತೆಗಾಗಿ ನದಿಗೆ ಹಾರಿದ್ದಾನೆ. ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. ರಾಂಬನ್ ಜಿಲ್ಲೆಯ ಉಖ್ರಾಲ್ ತಹಸಿಲ್‌ನ ಪೋಗಲ್‌ನ ಮುಂಡ್‌ಖಾಲ್...