Homeಮುಖಪುಟಮಹಿಳಾ ಹೋರಾಟಗಾರ್ತಿಯರಿಗೆ ಅವಮಾನ: ವೀರ ರಾಣಿ ಅಬ್ಬಕ್ಕ ದೇವಿ ಪಾಠ ಕೈಬಿಟ್ಟ ಚಕ್ರತೀರ್ಥ ಸಮಿತಿ

ಮಹಿಳಾ ಹೋರಾಟಗಾರ್ತಿಯರಿಗೆ ಅವಮಾನ: ವೀರ ರಾಣಿ ಅಬ್ಬಕ್ಕ ದೇವಿ ಪಾಠ ಕೈಬಿಟ್ಟ ಚಕ್ರತೀರ್ಥ ಸಮಿತಿ

7ನೇ ತರಗತಿ ಸಮಾಜ ವಿಜ್ಞಾನ-2 ಪಠ್ಯದಿಂದ ಹೋರಾಟಗಾರ್ತಿಯರಾದ ಬಳ್ಳಾರಿ ಸಿದ್ದಮ್ಮ, ಯಶೋಧರಮ್ಮ ದಾಸಪ್ಪ, ಉಮಾಬಾಯಿ ಕುಂದಾಪುರರವರ ಪಾಠ ಕೈಬಿಡಲಾಗಿದೆ.

- Advertisement -
- Advertisement -

ಬಿಜೆಪಿ ಸರ್ಕಾರದ ನೂತನ ಪಠ್ಯ ಪರಿಷ್ಕರಣೆ ಸಮಿತಿಯ ಮಾಡಿರುವ ತಿದ್ದುಪಡಿಗಳಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿ ಮತ್ತೊಂದು ಅನಾಹುತ ಕಂಡುಬಂದಿದೆ. 7ನೇ ತರಗತಿ ಸಮಾಜ ವಿಜ್ಞಾನ-2 ಪಠ್ಯದಿಂದ ಕರ್ನಾಟಕದ ಮಹಿಳಾ ಹೋರಾಟಗಾರರಾದ ಉಲ್ಲಾಳದ ರಾಣಿ ಅಬ್ಬಕ್ಕ ದೇವಿ, ಬಳ್ಳಾರಿ ಸಿದ್ದಮ್ಮ, ಯಶೋಧರಮ್ಮ ದಾಸಪ್ಪ ಮತ್ತು ಉಮಾಬಾಯಿ ಕುಂದಾಪುರರವರ ಪಾಠ ಕೈಬಿಡಲಾಗಿದೆ.

ಕಳೆದ ವರ್ಷ 7ನೇ ತರಗತಿಯ ಮಕ್ಕಳು ‘ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು’ ಎಂಬ ಪಾಠದಲ್ಲಿ ಬಹಳ ವಿವರವಾಗಿ ಕರ್ನಾಟಕದ ಹೋರಾಟಗಾರ್ತಿಯರ ಬಗ್ಗೆ ಅಭ್ಯಸಿಸಿದ್ದರು. ಗಾಂಧಿ ಪೂರ್ವ ಸ್ವಾತಂತ್ರ್ಯ ಹೋರಾಟದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ, ಕೆಳದಿ ಚೆನ್ನಮ್ಮರ ಸಾಲಿನಲ್ಲಿ ನಿಲ್ಲುವ ಮತ್ತೊಬ್ಬ ಮಹಿಳೆ ಎಂದು ಹೆಸರಿಸಿ ರಾಣಿ ಅಬ್ಬಕ್ಕದೇವಿಯವರ ಪಾಠ ಇಡಲಾಗಿತ್ತು. ಅದರಲ್ಲಿ ಅವರು ಪೋರ್ಚುಗೀಸರ ವಿರುದ್ಧ ಕಾದಾಡಿದ್ದ ವಿವರಗಳಿದ್ದವು. ಉಳ್ಳಾಲದ ರಾಣಿ ಅಬ್ಬಕ್ಕ ಪೋರ್ಚುಗೀಸರಿಗೆ ಕಪ್ಪ ಕೊಡಲು ನಿರಾಕರಿಸಿದಾಗ 1568ರಲ್ಲಿ ಅವರು ದಾಳಿ ನಡೆಸುತ್ತಾರೆ. ಅದನ್ನು ಅಬ್ಬಕ್ಕ ಹಿಮ್ಮೆಟ್ಟಿಸಿದ್ದ ವಿವರಗಳನ್ನು ನೀಡಲಾಗಿತ್ತು. ಆದರೆ ನೂತನ ಪಠ್ಯ ಪರಿಷ್ಕರಣೆಯಲ್ಲಿ ಆ ಪಠ್ಯ ಕೈಬಿಡಲಾಗಿದೆ.

ಅದೇ ರೀತಿಯಾಗಿ ಕಳೆದ ವರ್ಷದ ಪಠ್ಯದಲ್ಲಿ ಕರ್ನಾಟಕದ ದಿಟ್ಟ ಹೋರಾಟಗಾರ್ತಿಯರಾದ ಬಳ್ಳಾರಿ ಸಿದ್ದಮ್ಮ, ಯಶೋಧರಮ್ಮ ದಾಸಪ್ಪ ಮತ್ತು ಉಮಾಬಾಯಿ ಕುಂದಾಪುರರವರ ಪಾಠವಿತ್ತು. ಅದನ್ನು ತೆಗೆದುಹಾಕಿರುವ ನೂತನ ಸಮಿತಿಯು ಕರ್ನಾಟಕ ಸಮಾಜಿಮುಖಿ ಚಳವಳಿಗಳ ಎಂಬ ಪಠ್ಯದಲ್ಲಿ ಕೇವಲ ಕಮಲಾದೇವಿ ಚಟ್ಟೋಪಾಧ್ಯಾಯ ಮತ್ತು ಅರುಣಾ ಅಸಫ್ ಅಲಿಯವರ ಪಠ್ಯ ಮಾತ್ರ ಇರಿಸಿಕೊಂಡಿದೆ. ಅವರ ಕುರಿತು ಸಮರ್ಪಕ ವಿವರಗಳಿಲ್ಲದೆ ಕೇವಲ 4 ಪ್ಯಾರಗಳಲ್ಲಿ ಮೇಲುಮಟ್ಟಕ್ಕೆ ಪರಿಚಯಿಸಿ ಕೈತೊಳೆದುಕೊಳ್ಳಲಾಗಿದೆ.

ನಮ್ಮ ಮಕ್ಕಳು ಏಕೆ ಕನ್ನಡದ ಹೋರಾಟಗಾರರ ಬಗ್ಗೆ ಅದರಲ್ಲಿಯೂ ಮಹಿಳಾ ಹೋರಾಟಗಾರ್ತಿಯರ ಬಗ್ಗೆ ತಿಳಿದುಕೊಳ್ಳಬಾರದು ಎಂಬ ಪ್ರಶ್ನೆ ಎದ್ದಿದೆ. “ಕಪ್ಪ, ನಿಮಗೇಕೆ ಕೊಡಬೇಕು ಕಪ್ಪ? ನಮ್ಮ ದೇಶಕ್ಕೆ ಕಳ್ಳರಂತೆ ನುಗ್ಗಿರುವ ನಿಮಗೆ ಕಪ್ಪ ಕೊಟ್ಟು ಹೇಡಿ ಎನಿಸಿಕೊಳ್ಳುವುದಕ್ಕಿಂತ ಹೋರಾಡಿ ಸಾಯುವುದೇ ಲೇಸು” ಎಂದು ಹೇಳಿದ್ದ ವೀರ ರಾಣಿ ಅಬ್ಬಕ್ಕನವರ ಪಠ್ಯ ಕೈಬಿಟ್ಟಿದ್ದೇಕೆ ಎಂದು ನೂತನ ಸಮಿತಿಯು ಉತ್ತರಿಸಬೇಕಿದೆ.

ಅದೇ ರೀತಿಯಾಗಿ ಸ್ವಾತಂತ್ರ್ಯ ಚಳವಳಿಯ ಇತಿಹಾಸದಲ್ಲಿ ಪ್ರಾಣತೆತ್ತ ನೂರಾರು ಮಹಿಳೆಯರ ಜೀವನ ಚಿತ್ರಣಗಳು ಹೂತು ಹೋಗಿವೆ. ಇರುವ ಕೆಲವರ ಬಗ್ಗೆಯಾದರೂ ನಮ್ಮ ಮಕ್ಕಳು ಓದಿ ಅವರನ್ನು ಆದರ್ಶವನ್ನಾಗಿ ಪರಿಗಣಿಸಬೇಕು. ಆದರೆ ನೂತನ ಸಮಿತಿಯು ಅಂತಹ ಮಹಿಳಾ ಹೋರಾಟಗಾರ್ತಿಯರ ಪಠ್ಯವನ್ನೇ ಕೈಬಿಟ್ಟಿರುವುದು ದುರಂತ.

ಇದನ್ನೂ ಓದಿ: ಕನ್ನಡ ದ್ರೋಹಿಯ ಮರು ಪರಿಷ್ಕರಣೆಯಲ್ಲಿ ‘ಡಾ. ರಾಜ್‌’ ಪಠ್ಯ ಇದ್ದರೆ, ಅವರಿಗೆ ಅವಮಾನ ಮಾಡಿದಂತೆ: ವರನಟನ ಪಾಠ ವಾಪಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...