Homeಮುಖಪುಟದುಡಿಯುವ ಮಹಿಳೆಗೆ ಪರಿತ್ಯಕ್ತ ಪತಿ ಆರ್ಥಿಕ ಸಹಾಯ ನಿರಾಕರಿಸುವಂತಿಲ್ಲ: ಬಾಂಬೆ ಹೈಕೋರ್ಟ್

ದುಡಿಯುವ ಮಹಿಳೆಗೆ ಪರಿತ್ಯಕ್ತ ಪತಿ ಆರ್ಥಿಕ ಸಹಾಯ ನಿರಾಕರಿಸುವಂತಿಲ್ಲ: ಬಾಂಬೆ ಹೈಕೋರ್ಟ್

- Advertisement -
- Advertisement -

ಸಂಪಾದಿಸುತ್ತಿದ್ದಾರೆ ಎಂಬ ಕಾರಣಕ್ಕಾಗಿ ಮಹಿಳೆಯೊಬ್ಬರಿಗೆ ಪರಿತ್ಯಕ್ತ ಪತಿಯಿಂದ ಆರ್ಥಿಕ ಬೆಂಬಲವನ್ನು ಪಡೆಯುವುದನ್ನು ನಿಲ್ಲಿಸಲು ಸಾಧ್ಯವಿಲ್ಲ ಎಂದು ಬಾಂಬೆ ಹೈಕೋರ್ಟ್ ತೀರ್ಪು ನೀಡಿದೆ. ಮಹಿಳೆಯರು ತಮ್ಮ ಜೀವನ ಮಟ್ಟವನ್ನು ಕಾಯ್ದುಕೊಳ್ಳಬೇಕಾಗಿರುವುದರಿಂದ ಅವರಿಗೆ ಆರ್ಥಿಕ ಬೆಂಬಲದ ಅಗತ್ಯವಿದೆ ಎಂದು ಕೋರ್ಟ್‌ ಹೇಳಿದೆ. ದುಡಿಯುವ ಮಹಿಳೆಗೆ ಪರಿತ್ಯಕ್ತ

ನ್ಯಾಯಮೂರ್ತಿ ಮಂಜುಷಾ ದೇಶಪಾಂಡೆ ಅವರ ಪೀಠವು ಜೂನ್ 18ರಂದು ನೀಡಲಾದ ಗುರುವಾರ ಲಭ್ಯವಾಗುವಂತೆ ಮಾಡಿದ್ದು, ಪತ್ನಿಯು ಬೇರ್ಪಡುವ ಮೊದಲು ಒಗ್ಗಿಕೊಂಡಿದ್ದ ಜೀವನಮಟ್ಟವನ್ನು ಪಡೆಯಲು ಅರ್ಹರು ಎಂದು ಹೇಳಿದೆ.

ಆಗಸ್ಟ್ 2023 ರ ಕುಟುಂಬ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಪತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ತನ್ನ ಪತ್ನಿಗೆ ಮಾಸಿಕ 15,000 ರೂ.ಗಳ ಜೀವನಾಂಶವನ್ನು ಪಾವತಿಸುವಂತೆ ಕುಟುಂಬ ನ್ಯಾಯಾಲಯದ ಆದೇಶದ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ತನ್ನ ಪತ್ನಿ ತಿಂಗಳಿಗೆ 25,000 ರೂ.ಗಳಿಗಿಂತ ಹೆಚ್ಚು ಆದಾಯ ಗಳಿಸುವ ಉದ್ಯೋಗಸ್ಥ ಮಹಿಳೆಯಾಗಿದ್ದು, ಆದ್ದರಿಂದ ಅವರು “ಹೆಚ್ಚಿನ” ಜೀವನಾಂಶವನ್ನು ಪಡೆಯಲು ಅರ್ಹರಲ್ಲ ಎಂದು ಪತಿ ಹೇಳಿದ್ದಾರೆ.

ವಿಚಾರಣೆ ನಡೆಸಿದ ಹೈಕೋರ್ಟ್‌, ಪತ್ನಿ ಆದಾಯ ಗಳಿಸುತ್ತಿದ್ದರೂ, ಅವರು ತನ್ನ ಕೆಲಸಕ್ಕಾಗಿ ಪ್ರತಿದಿನ ದೀರ್ಘ ದೂರ ಪ್ರಯಾಣಿಸಬೇಕಾಗುತ್ತದೆ. ಈ ಆದಾಯವು ಅವರ ಸ್ವಂತ ಜೀವನ ನಿರ್ವಹಣೆಗೆ ಸಾಕಾಗುವುದಿಲ್ಲ. ಅಂತಹ ಆದಾಯದೊಂದಿಗೆ, ಅವರು ಯೋಗ್ಯ ಜೀವನವನ್ನು ನಡೆಸುವ ಸ್ಥಿತಿಯಲ್ಲಿಲ್ಲ ಎಂದು ಹೈಕೋರ್ಟ್ ಹೇಳಿದೆ.

“ಹೆಂಡತಿ ಸಂಪಾದಿಸುತ್ತಿದ್ದಾಳೆ ಎಂಬ ಕಾರಣಕ್ಕಾಗಿ, ಅವರು ತಮ್ಮ ವೈವಾಹಿಕ ಮನೆಯಲ್ಲಿ ಒಗ್ಗಿಕೊಂಡಿರುವ ಜೀವನಮಟ್ಟದೊಂದಿಗೆ ತನ್ನ ಗಂಡನಿಂದ ಆರ್ಥಿಕ ಬೆಂಬಲವನ್ನು ನಿರಾಕರಿಸಲಾಗುವುದಿಲ್ಲ” ಎಂದು ನ್ಯಾಯಮೂರ್ತಿ ದೇಶಪಾಂಡೆ ಹೇಳಿದ್ದಾರೆ. ಪುರುಷನು ಮಹಿಳೆಗಿಂತ ಹೆಚ್ಚು ಸಂಪಾದಿಸುತ್ತಾನೆ ಮತ್ತು ಯಾವುದೇ ಆರ್ಥಿಕ ಜವಾಬ್ದಾರಿಗಳನ್ನು ಹೊಂದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ತನ್ನ ಮಾಸಿಕ ಗಳಿಕೆಯು ತನ್ನ ಹೆಂಡತಿಗೆ ಪ್ರತಿ ತಿಂಗಳು 15,000 ರೂ.ಗಳನ್ನು ನೀಡುವಷ್ಟು ಇಲ್ಲ. ಜೊತೆಗೆ ಈ ಗಳಿಕೆಯಲ್ಲೆ ತನ್ನ ಅನಾರೋಗ್ಯ ಪೀಡಿತ ಪೋಷಕರನ್ನು ಸಹ ನೋಡಿಕೊಳ್ಳಬೇಕು ಎಂದು ಪತಿ ಅರ್ಜಿಯಲ್ಲಿ ಹೇಳಿದ್ದರು. ಆದಾಗ್ಯೂ, ತಾನು ಆರ್ಥಿಕವಾಗಿ ಸ್ಥಿರವಾಗಿಲ್ಲ ಎಂಬ ಪತಿಯ ಹೇಳಿಕೆಯನ್ನು ಮಹಿಳೆಯು ನಿರಾಕರಿಸಿದ್ದು, ಪತಿಯು ತಿಂಗಳಿಗೆ 1 ಲಕ್ಷ ರೂ.ಗಳಿಗಿಂತ ಹೆಚ್ಚು ಸಂಪಾದಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ನ್ಯಾಯಾಲಯವು ತನ್ನ ಆದೇಶದಲ್ಲಿ, ಮಹಿಳೆ ಪ್ರಸ್ತುತ ತನ್ನ ಪೋಷಕರು ಮತ್ತು ಸಹೋದರನೊಂದಿಗೆ ವಾಸಿಸುತ್ತಿದ್ದಾರೆ. ಆದರೆ ಅದು ಅವರೆಲ್ಲರಿಗೂ ಅನಾನುಕೂಲತೆ ಮತ್ತು ಕಷ್ಟವನ್ನು ಉಂಟುಮಾಡಬಹುದು. ಪತಿಯ ಪೋಷಕರು ಅವನ ಮೇಲೆ ಅವಲಂಬಿತವಾಗಿಲ್ಲ, ಏಕೆಂದರೆ ಅವರ ತಂದೆಗೆ ಮಾಸಿಕ 28,000 ರೂ.ಗಳ ಪಿಂಚಣಿ ಸಿಗುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಪುರುಷ ಮತ್ತು ಮಹಿಳೆಯ ಆದಾಯದಲ್ಲಿ ಭಾರಿ ವ್ಯತ್ಯಾಸವಿದ್ದು, ಇದನ್ನು ಹೋಲಿಸಲಾಗುವುದಿಲ್ಲ ಎಂದು ಹೇಳಿದ ಹೈಕೋರ್ಟ್, ಕುಟುಂಬ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಲು ನಿರಾಕರಿಸಿದೆ. ದುಡಿಯುವ ಮಹಿಳೆಗೆ ಪರಿತ್ಯಕ್ತ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸಂವಿಧಾನವೇ ಸುಪ್ರೀಂ, ಸಂಸತ್ತಲ್ಲ: ಸಿಜೆಐ ಬಿ.ಆರ್ ಗವಾಯಿ

ಸಂವಿಧಾನವೇ ಸುಪ್ರೀಂ, ಸಂಸತ್ತಲ್ಲ: ಸಿಜೆಐ ಬಿ.ಆರ್ ಗವಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ...

ಪಂಜಾಬ್: ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳಕ್ಕೆ ಅಧಿಕಾರಿ ಆತ್ಮಹತ್ಯೆ; ಅಮೃತಸರದಲ್ಲಿ ಶವಪರೀಕ್ಷೆಗೆ ಕುಟುಂಬ ಒಪ್ಪಿಗೆ

ಪಂಜಾಬ್‌ನ ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಗೋದಾಮು ನಿಗಮದ ಅಧಿಕಾರಿ ಗಗನ್‌ದೀಪ್ ಸಿಂಗ್ ರಾಂಧವ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಅಮೃತಸರದಲ್ಲಿ ನಡೆಸಲಾಗುವುದು...

ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ...

ದಾವಣಗೆರೆ: ನಿಮ್ಮ ದೇಶಭಕ್ತಿ ಪ್ರಶ್ನಿಸುವ ಅಯೋಗ್ಯರಿಗೆ ಮತ ಹಾಕಬೇಡಿ; ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ದಾವಣಗೆರೆ: ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿದ, ಅವರ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇವತ್ತು ಯಾವುದೋ ಅಸಮಾಧಾನಕ್ಕೆ ಬಿಜೆಪಿಗೆ ಮತ ಹಾಕದರೆ ನಿಮ್ಮ ಅಸ್ತಿತ್ವಕ್ಕೆ ಕುತ್ತು ಬರುತ್ತದೆ. ಇಂತಹ ಅಯೋಗ್ಯರಿಗೆ ಮತ...

ಭಜನ್‌ಪುರ ಹತ್ಯೆ: ದೇವಾಲಯದ ಬಳಿ ಇರಿತಕ್ಕೊಳಗಾಗಿದ್ದ 18 ವರ್ಷದ ಮುಸ್ಲಿಂ ಯುವಕ ಸಾವು 

"ದೇವಾಲಯದ ಬಳಿ ಇರಿತಕ್ಕೊಳಗಾಗಿದ್ದ 18 ವರ್ಷದ ಮೊಹಮ್ಮದ್ ಆಸಿಫ್ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾನೆ" ಎಂದು ಭಜನ್‌ಪುರ ಹತ್ಯೆಯ ಬಗ್ಗೆ ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಮುಂಜಾನೆ ಈಶಾನ್ಯ ದೆಹಲಿಯ ಭಜನ್‌ಪುರ ಪ್ರದೇಶದಲ್ಲಿ 18 ವರ್ಷದ ಯುವಕನೊಬ್ಬನನ್ನು...