Homeಸಾಹಿತ್ಯ-ಸಂಸ್ಕೃತಿಪುಸ್ತಕ ವಿಮರ್ಶೆ‘ಜನ್ನತ್ ಮೊಹಲ್ಲಾ’: ಮನುಷ್ಯ ಘನತೆಯನ್ನು ಕಾಪಿಡುವ ಸೃಜನಶೀಲ ಪ್ರಯತ್ನ

‘ಜನ್ನತ್ ಮೊಹಲ್ಲಾ’: ಮನುಷ್ಯ ಘನತೆಯನ್ನು ಕಾಪಿಡುವ ಸೃಜನಶೀಲ ಪ್ರಯತ್ನ

‘ಜನ್ನತ್’ ಎಂದರೆ ಸ್ವರ್ಗ. ಮೊಹಲ್ಲಾದ ಬದುಕನ್ನು ಸ್ವರ್ಗವಾಗಿಸುವ ಕನಸುಗಳ ಚಿತ್ತಾರವೇ ಈ ಕಾದಂಬರಿ.

- Advertisement -
- Advertisement -

‘ಜನ್ನತ್ ಮೊಹಲ್ಲಾ’ ಮತ್ತೆ ಮತ್ತೆ ಓದಿಸಿಕೊಳ್ಳುವ ಅಬ್ಬಾಸ್ ಮೇಲಿನಮನಿ ಅವರ ಮೊದಲ ಕಾದಂಬರಿ. ದ್ವೇಷ-ಪ್ರೀತಿ, ಹಿಂಸೆ-ಅಹಿಂಸೆ, ಸಿಟ್ಟು-ತಾಳ್ಮೆ, ನಿರಾಶೆ-ಭರವಸೆ ಇವುಗಳ ಮುಖಾಮುಖಿಯಲ್ಲಿ ಪ್ರೀತಿ ಅರಳಿಸುವ, ಮನುಷ್ಯ ಘನತೆಯನ್ನು ಕಾಪಿಡುವ ಸೃಜನಶೀಲ ಪ್ರಯತ್ನವಾಗಿ ‘ಜನ್ನತ್ ಮೊಹಲ್ಲಾ’ ಮೂಡಿಬಂದಿದೆ.

‘ಜನ್ನತ್’ ಎಂದರೆ ಸ್ವರ್ಗ. ಮೊಹಲ್ಲಾದ ಬದುಕನ್ನು ಸ್ವರ್ಗವಾಗಿಸುವ ಕನಸುಗಳ ಚಿತ್ತಾರವೇ ಈ ಕಾದಂಬರಿ. ಕನಸುಗಳೆಂದರೆ ಅವಾಸ್ತವಿಕ ಭ್ರಮೆಗಳೂ ಆಗಬಹುದು. ಆದರೆ ಇಲ್ಲಿನ ಕನಸುಗಳಿಗೆ ನೆಲದ ಆಳದೊಳಗೆ ಇಳಿದಿರುವ ಬೇರುಗಳಿವೆ. ನೆಲದ ಮೇಲಣ ಕಡುವಾಸ್ತವಗಳ ದಟ್ಟ ಅರಿವಿದೆ. ಕನಸುಗಳನ್ನು ಛಿದ್ರಗೊಳಿಸುವ ಪ್ರಯತ್ನಗಳ ಎಚ್ಚರಿವಿದೆ. ಕನಸು ಕಾಣುವ ಹಂಬಲಕ್ಕೆ ಇವುಗಳನ್ನು ನಿವಾರಿಸಿಕೊಳ್ಳುವ ಮನುಷ್ಯಪ್ರೀತಿ, ವಿವೇಕ, ಜಾಣ್ಮೆಗಳಿವೆ.

ಕಾದಂಬರಿಯ ಭಾಷೆ ಕಾವ್ಯಾತ್ಮಕವಾದುದು. ಕುತೂಹಲ ಕಾಯ್ದುಕೊಂಡು ಸಾಗುವ ನಿರೂಪಣಾ ಶೈಲಿ ಓದುಗನ ಗಮನವನ್ನು ಅತ್ತಿತ್ತ ವಿಚಲಿಸದಂತೆ ಕೂರಿಸುತ್ತದೆ. ಅಧ್ಯಾಯಗಳ ಶೀರ್ಷಿಕೆಯೇ ಕವಿತೆಯ ಸಾಲುಗಳಂತೆ ಓದುಗನನ್ನು ಸೆಳೆಯುತ್ತವೆ: ‘ಜೀವಪ್ರೀತಿಯ ಗೂಡಿನೊಳಗೆ ಹೊಸ ಸೂರ್ಯನ ಕನಸು’, ನೆಲದಾಳಕ್ಕೆ ಬೇರು ಆಕಾಶಕ್ಕೆ ಗರಿಗಳು’, ‘ಕಾಡು ಬೆಕ್ಕಿನ ಉಪದ್ರವೂ ಪಾರಿವಾಳದ ಪ್ರತಿರೋಧವೂ’, ‘ಮೋಹದ ಮಾಯೆ ಪಾರಿಜಾತ ಪ್ರೀತಿ’, ‘ಜಿನ್ ಮೊರೆತ ಹೊಸಗಾಳಿಯ ತುಡಿತ’, ‘ತಮಂಧದಂತರಾಳದಲ್ಲಿ ಬೆಳಕಿನ ಹಣತೆ’, ‘ಮುಂಗಾರು ಮಳೆಗೆ ಗರಿಗೆದರಿ ಕುಣಿದ ನವಿಲು’, ‘ಚಂದ್ರ ದರ್ಶನಕೆ ಕಪ್ಪು ಮೋಡಗಳ ಆತಂಕ’, ’ಕತ್ತಲು ಗೂಡಿನಿಂದ ಬೆಳಕು ಹುಡುಕುತ್ತ..’ ಹೀಗೆ. ಪ್ರೀತಿ, ಕನಸು, ಅನ್ಯಾಯದ ವಿರುದ್ಧ ಪ್ರತಿಭಟನೆ, ಕತ್ತಲೆಯ ಎದುರು ಬೆಳಕಿನ ಭರವಸೆ ಹೀಗೆ ಈ ಶೀರ್ಷಿಕೆಗಳೇ ಕಾದಂಬರಿಯ ಹಂಬಲವನ್ನು ಮನದಟ್ಟು ಮಾಡುತ್ತವೆ.

ಇಲ್ಲಿಯ ಪಾತ್ರಗಳು ಕಪ್ಪು ಬಿಳುಪಿನದ್ದಲ್ಲ. ಜೀವಪರವಾದ ರೆಹಮಾನ್, ಸೈರಾ, ತಾಹಿರಾ, ಪೇಶ್ ಇಮಾಮರು, ಶಬ್ಬೀರ, ತಸ್ಸೀಮಾ, ರಫೀಕ್, ನೌಷಾದ್, ಮೋಹನ್, ಬಸವಗಂಗ ಸ್ವಾಮಿಗಳಂತೆ ಜೀವವಿರೋಧಿಯಾದ ಮೋದಿನ, ದೌಲಾ, ಲಾಲ್ಯಾ, ಮಸ್ತಾನ, ಸಾಧಿಕನಂತಹವು. ಹೀಗೆ ಎರಡೂ ಮನಸ್ಥಿತಿಯ ಪಾತ್ರಗಳೂ ಇಲ್ಲಿವೆ. ಈ ತದ್ವಿರುದ್ಧ ವ್ಯಕ್ತಿತ್ವಗಳಲ್ಲಿ ಕೆಲವು ಶಾಶ್ವತವಾಗಿಯೇ ಈ ಗುಣಗಳನ್ನು ಹೊಂದಿರುವವು. ಆದರೂ ವಿರಳ ಸಂದರ್ಭಗಳಲ್ಲಿ ಅದರಾಚೆಗೆ ಹೊರಳುವವು. ಬದುಕಿನ ಕಟುವಾದ ಏರಿಳಿತಗಳಲ್ಲಿ ಮನುಷ್ಯರು ಖಳರಾಗುವ ಹೆಜ್ಜೆ ಗುರುತುಗಳನ್ನು ಕಾದಂಬರಿ ಮನೋಜ್ಞವಾಗಿ ಚಿತ್ರಿಸುತ್ತದೆ. ಖಳನೆನಿಸುವ ಜಿಲಾನಿ, ಇಮಾಮರಂತಹ ಪಾತ್ರಗಳು ಆದ್ರ್ರವಾಗಿ ಮಿಡಿಯುವ ಬದುಕಿನ ವಿಸ್ಮಯಗಳನ್ನು ಅಚ್ಚರಿಯಿಂದ ದಾಖಲಿಸುತ್ತದೆ. ಜಮಾಲನಂತಹ ಕೆಲವು ಪಾತ್ರಗಳು ಕ್ರೂರಿಯಾಗಿ ಕಂಡರೂ ಅವರು ಹಾಗಾಗುವಲ್ಲಿ ಅವರ ಬದುಕಿನ ದುರಂತವಿರುವುದನ್ನು ಕಾಣಿಸುತ್ತದೆ.

ಅಧಿಕಾರ, ಹಣದ ದುರಾಶೆಗಳು ಒಟ್ಟಾಗಿ ಬದುಕುವ ಸಮುದಾಯಗಳ ಜನರ ನಡುವೆ ಧರ್ಮ, ಜಾತಿಗಳ ನೆಲೆಯಲ್ಲಿ ಮನಸ್ಸುಗಳನ್ನು ಒಡೆದು ಹಿಂಸಾಚಾರಕ್ಕೆ ಕಾರಣವಾಗುವುದನ್ನು ನೈಜವೆನಿಸುವ ಘಟನಾವಳಿಗಳ ಮೂಲಕ ಕಾದಂಬರಿ ಕಟ್ಟಿಕೊಡುತ್ತವೆ. ಒಂದು ಕಡೆ ಮೋದಿನ ಇದ್ದರೆ ಇನ್ನೊಂದು ಕಡೆ ಕಲ್ಯಾಣಪ್ಪ ಇದ್ದಾನೆ. ಈ ಅಧಿಕಾರದಾಹಿಗಳು, ದುರಾಶೆಯ ಜನರು ಎಲ್ಲ ಸಮುದಾಯಗಳಲ್ಲಿ ಇರುವವರು. ಅವರಿಗೆ ಹಿಂದೂ, ಮುಸ್ಲಿಂ ಎನ್ನುವ ಗುರುತುಗಳಿವೆ. ಈ ಗುರುತುಗಳನ್ನೇ ತಮ್ಮ ಸ್ವಾರ್ಥಕ್ಕಾಗಿ ಬಳಸಿ ಸಮುದಾಯದ ಜನರನ್ನು ಬಲಿಕೊಡುತ್ತಾರೆ. ಇದಕ್ಕೆ ಪ್ರತಿಯಾಗಿ ರೆಹಮಾನ್ ಮತ್ತು ಸಂಗನ ಬಸವಸ್ವಾಮಿಗಳಂತಹ ಜಾತಿ-ಧರ್ಮಗಳಾಚೆ ಜನರ ಏಳಿಗೆ ಮತ್ತು ನೆಮ್ಮದಿ ಬಯಸುವ ಮುಂದಾಳುಗಳು ಭರವಸೆಯಾಗುತ್ತಾರೆ. ಆದರೆ ಮೋದಿನ, ಕಲ್ಯಾಣಪ್ಪನಂತವರ ಅರ್ಭಟಗಳೇ ರಾಜಕೀಯ ಶಕ್ತಿಯನ್ನು ಪಡೆಯುತ್ತ ನಾಡನ್ನು ದುರಂತದತ್ತ ತಳ್ಳುತ್ತಿರುವುದು ಲೇಖಕನನ್ನು ದಿಗ್ಭ್ರಮೆಗೊಳಿಸುವ ಸೂಚನೆಗಳು ಕಾದಂಬರಿಯಲ್ಲಿ ಸಿಗುತ್ತವೆ.

ಎಲ್ಲಾ ಜಾತಿ ಧರ್ಮಗಳಲ್ಲಿಯೂ ಮಹಿಳೆ ಶೋಷಿತಳು. ಮುಸ್ಲಿಂ ಧರ್ಮದಲ್ಲಿಯೂ ಇದು ಎದ್ದು ಕಾಣುತ್ತದೆ. ಈ ಬಗ್ಗೆ ಕಾದಂಬರಿ ಮಹಿಳೆಯರನ್ನು ಘನತೆಯಿಂದ ಕಾಣುತ್ತದೆ. ಖತೀಜಾಬೀಬಿ, ತಾಹಿರಾ, ಸೈರಾರಂಥ ಮಹಿಳೆಯರನ್ನು ಕಾದಂಬರಿ ಉತ್ಸಾಹದಲ್ಲಿ ಚಿತ್ರಿಸುತ್ತದೆ. ಸಾಂಪ್ರದಾಯಿಕ ಬದುಕಿನೊಳಗಿನಿಂದಲೇ ವ್ಯಕ್ತವಾಗುವ ಈ ಮಹಿಳೆಯರ ದಿಟ್ಟತನಗಳನ್ನು ಅವರ ಬದುಕಿನ ಕಥನಗಳ ಮೂಲಕವೇ ಓದುಗನ ಮನಸ್ಸಿನಲ್ಲಿ ಅಚ್ಚಳಿಯದಂತೆ ಮೂಡಿಸುತ್ತದೆ.

ಇದನ್ನು ಓದುವ ಈಗಿನ ತಲೆಮಾರು ಇದನ್ನೊಂದು ಮುಸ್ಲಿಂ ಬದುಕನ್ನು ಹೊರಜಗತ್ತಿಗೆ ಅನಾವರಣಗೊಳಿಸುವ ಕಾದಂಬರಿ ಎಂಬ ತೀರ್ಮಾನಕ್ಕೆ ಬರಬಹುದಾದ ಅಪಾಯವಿದೆ. ಯಾಕೆಂದರೆ ಮೋಹನ, ಸಂಗನಬಸವನ ಸ್ವಾಮಿಗಳು, ಕಲ್ಯಾಣಪ್ಪನಂತಹ ನಾಲ್ಕೈದು ಪಾತ್ರಗಳು ಮಾತ್ರ ಮುಸ್ಲೀಮೇತರರದ್ದಾಗಿವೆ. ಆದರೆ ಇದು ಮುಸ್ಲಿಂ ಬದುಕಿನ ಕಷ್ಟ ಸುಖಗಳನ್ನು ಚಿತ್ರಿಸುವ ಕಾದಂಬರಿಯಲ್ಲ. ಇಲ್ಲಿನ ಪಾತ್ರಗಳ ಹೆಸರು ಬದಲಿಸಿದರೆ ಅದು ಹಿಂದೂ, ಕ್ರಿಶ್ಚಿಯನ್ ಅಥವಾ ಜಗತ್ತಿನ ಯಾವುದೇ ಸಮಾಜದ ಬದುಕೇ ಆಗಿರುತ್ತವೆ.

ಜನ್ನತ್ ಮೊಹಲ್ಲಾವನ್ನು ನಮ್ಮೆದುರಿಟ್ಟು ದಿಢೀರನೇ ಕಣ್ಮರೆಯಾದ ಅಬ್ಬಾಸ್ ಮೇಲಿನಮನಿಯವರು ರಹಮಾನನ ಸಮುದಾಯಪ್ರಜ್ಞೆ, ಇಮಾಮರ ಸ್ವಚ್ಚ ಧಾರ್ಮಿಕಮನಸ್ಸು, ಶಬ್ಬೀರನ ಜೀವನೋತ್ಸಾಹ, ಜಿಲಾನಿಯು ತನ್ನನ್ನು ಮೀರಿ ಕಾಣುವ ದಾರ್ಶನಿಕ ರೂಪದಲ್ಲಿ ನಮ್ಮೊಳಗೆ ಸದಾ ಜೀವಂತವಾಗಿರುತ್ತಾರೆ.

  • ಡಾ.ಸರ್ಜಾಶಂಕರ್ ಹರಳಿಮಠ

ಇದನ್ನೂ ಓದಿ: ಪುಸ್ತಕ ವಿಮರ್ಶೆ: ಜಾತಿ ಬಂತು ಹೇಗೆ? ಕರ್ನಾಟಕದಲ್ಲಿ ಜಾತಿ ವ್ಯವಸ್ಥೆ ಮತ್ತು ಅಸ್ಪೃಶ್ಯತೆಯ ಉಗಮ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...