Homeಸಾಹಿತ್ಯ-ಸಂಸ್ಕೃತಿಪುಸ್ತಕ ವಿಮರ್ಶೆ‘ಜನ್ನತ್ ಮೊಹಲ್ಲಾ’: ಮನುಷ್ಯ ಘನತೆಯನ್ನು ಕಾಪಿಡುವ ಸೃಜನಶೀಲ ಪ್ರಯತ್ನ

‘ಜನ್ನತ್ ಮೊಹಲ್ಲಾ’: ಮನುಷ್ಯ ಘನತೆಯನ್ನು ಕಾಪಿಡುವ ಸೃಜನಶೀಲ ಪ್ರಯತ್ನ

‘ಜನ್ನತ್’ ಎಂದರೆ ಸ್ವರ್ಗ. ಮೊಹಲ್ಲಾದ ಬದುಕನ್ನು ಸ್ವರ್ಗವಾಗಿಸುವ ಕನಸುಗಳ ಚಿತ್ತಾರವೇ ಈ ಕಾದಂಬರಿ.

- Advertisement -
- Advertisement -

‘ಜನ್ನತ್ ಮೊಹಲ್ಲಾ’ ಮತ್ತೆ ಮತ್ತೆ ಓದಿಸಿಕೊಳ್ಳುವ ಅಬ್ಬಾಸ್ ಮೇಲಿನಮನಿ ಅವರ ಮೊದಲ ಕಾದಂಬರಿ. ದ್ವೇಷ-ಪ್ರೀತಿ, ಹಿಂಸೆ-ಅಹಿಂಸೆ, ಸಿಟ್ಟು-ತಾಳ್ಮೆ, ನಿರಾಶೆ-ಭರವಸೆ ಇವುಗಳ ಮುಖಾಮುಖಿಯಲ್ಲಿ ಪ್ರೀತಿ ಅರಳಿಸುವ, ಮನುಷ್ಯ ಘನತೆಯನ್ನು ಕಾಪಿಡುವ ಸೃಜನಶೀಲ ಪ್ರಯತ್ನವಾಗಿ ‘ಜನ್ನತ್ ಮೊಹಲ್ಲಾ’ ಮೂಡಿಬಂದಿದೆ.

‘ಜನ್ನತ್’ ಎಂದರೆ ಸ್ವರ್ಗ. ಮೊಹಲ್ಲಾದ ಬದುಕನ್ನು ಸ್ವರ್ಗವಾಗಿಸುವ ಕನಸುಗಳ ಚಿತ್ತಾರವೇ ಈ ಕಾದಂಬರಿ. ಕನಸುಗಳೆಂದರೆ ಅವಾಸ್ತವಿಕ ಭ್ರಮೆಗಳೂ ಆಗಬಹುದು. ಆದರೆ ಇಲ್ಲಿನ ಕನಸುಗಳಿಗೆ ನೆಲದ ಆಳದೊಳಗೆ ಇಳಿದಿರುವ ಬೇರುಗಳಿವೆ. ನೆಲದ ಮೇಲಣ ಕಡುವಾಸ್ತವಗಳ ದಟ್ಟ ಅರಿವಿದೆ. ಕನಸುಗಳನ್ನು ಛಿದ್ರಗೊಳಿಸುವ ಪ್ರಯತ್ನಗಳ ಎಚ್ಚರಿವಿದೆ. ಕನಸು ಕಾಣುವ ಹಂಬಲಕ್ಕೆ ಇವುಗಳನ್ನು ನಿವಾರಿಸಿಕೊಳ್ಳುವ ಮನುಷ್ಯಪ್ರೀತಿ, ವಿವೇಕ, ಜಾಣ್ಮೆಗಳಿವೆ.

ಕಾದಂಬರಿಯ ಭಾಷೆ ಕಾವ್ಯಾತ್ಮಕವಾದುದು. ಕುತೂಹಲ ಕಾಯ್ದುಕೊಂಡು ಸಾಗುವ ನಿರೂಪಣಾ ಶೈಲಿ ಓದುಗನ ಗಮನವನ್ನು ಅತ್ತಿತ್ತ ವಿಚಲಿಸದಂತೆ ಕೂರಿಸುತ್ತದೆ. ಅಧ್ಯಾಯಗಳ ಶೀರ್ಷಿಕೆಯೇ ಕವಿತೆಯ ಸಾಲುಗಳಂತೆ ಓದುಗನನ್ನು ಸೆಳೆಯುತ್ತವೆ: ‘ಜೀವಪ್ರೀತಿಯ ಗೂಡಿನೊಳಗೆ ಹೊಸ ಸೂರ್ಯನ ಕನಸು’, ನೆಲದಾಳಕ್ಕೆ ಬೇರು ಆಕಾಶಕ್ಕೆ ಗರಿಗಳು’, ‘ಕಾಡು ಬೆಕ್ಕಿನ ಉಪದ್ರವೂ ಪಾರಿವಾಳದ ಪ್ರತಿರೋಧವೂ’, ‘ಮೋಹದ ಮಾಯೆ ಪಾರಿಜಾತ ಪ್ರೀತಿ’, ‘ಜಿನ್ ಮೊರೆತ ಹೊಸಗಾಳಿಯ ತುಡಿತ’, ‘ತಮಂಧದಂತರಾಳದಲ್ಲಿ ಬೆಳಕಿನ ಹಣತೆ’, ‘ಮುಂಗಾರು ಮಳೆಗೆ ಗರಿಗೆದರಿ ಕುಣಿದ ನವಿಲು’, ‘ಚಂದ್ರ ದರ್ಶನಕೆ ಕಪ್ಪು ಮೋಡಗಳ ಆತಂಕ’, ’ಕತ್ತಲು ಗೂಡಿನಿಂದ ಬೆಳಕು ಹುಡುಕುತ್ತ..’ ಹೀಗೆ. ಪ್ರೀತಿ, ಕನಸು, ಅನ್ಯಾಯದ ವಿರುದ್ಧ ಪ್ರತಿಭಟನೆ, ಕತ್ತಲೆಯ ಎದುರು ಬೆಳಕಿನ ಭರವಸೆ ಹೀಗೆ ಈ ಶೀರ್ಷಿಕೆಗಳೇ ಕಾದಂಬರಿಯ ಹಂಬಲವನ್ನು ಮನದಟ್ಟು ಮಾಡುತ್ತವೆ.

ಇಲ್ಲಿಯ ಪಾತ್ರಗಳು ಕಪ್ಪು ಬಿಳುಪಿನದ್ದಲ್ಲ. ಜೀವಪರವಾದ ರೆಹಮಾನ್, ಸೈರಾ, ತಾಹಿರಾ, ಪೇಶ್ ಇಮಾಮರು, ಶಬ್ಬೀರ, ತಸ್ಸೀಮಾ, ರಫೀಕ್, ನೌಷಾದ್, ಮೋಹನ್, ಬಸವಗಂಗ ಸ್ವಾಮಿಗಳಂತೆ ಜೀವವಿರೋಧಿಯಾದ ಮೋದಿನ, ದೌಲಾ, ಲಾಲ್ಯಾ, ಮಸ್ತಾನ, ಸಾಧಿಕನಂತಹವು. ಹೀಗೆ ಎರಡೂ ಮನಸ್ಥಿತಿಯ ಪಾತ್ರಗಳೂ ಇಲ್ಲಿವೆ. ಈ ತದ್ವಿರುದ್ಧ ವ್ಯಕ್ತಿತ್ವಗಳಲ್ಲಿ ಕೆಲವು ಶಾಶ್ವತವಾಗಿಯೇ ಈ ಗುಣಗಳನ್ನು ಹೊಂದಿರುವವು. ಆದರೂ ವಿರಳ ಸಂದರ್ಭಗಳಲ್ಲಿ ಅದರಾಚೆಗೆ ಹೊರಳುವವು. ಬದುಕಿನ ಕಟುವಾದ ಏರಿಳಿತಗಳಲ್ಲಿ ಮನುಷ್ಯರು ಖಳರಾಗುವ ಹೆಜ್ಜೆ ಗುರುತುಗಳನ್ನು ಕಾದಂಬರಿ ಮನೋಜ್ಞವಾಗಿ ಚಿತ್ರಿಸುತ್ತದೆ. ಖಳನೆನಿಸುವ ಜಿಲಾನಿ, ಇಮಾಮರಂತಹ ಪಾತ್ರಗಳು ಆದ್ರ್ರವಾಗಿ ಮಿಡಿಯುವ ಬದುಕಿನ ವಿಸ್ಮಯಗಳನ್ನು ಅಚ್ಚರಿಯಿಂದ ದಾಖಲಿಸುತ್ತದೆ. ಜಮಾಲನಂತಹ ಕೆಲವು ಪಾತ್ರಗಳು ಕ್ರೂರಿಯಾಗಿ ಕಂಡರೂ ಅವರು ಹಾಗಾಗುವಲ್ಲಿ ಅವರ ಬದುಕಿನ ದುರಂತವಿರುವುದನ್ನು ಕಾಣಿಸುತ್ತದೆ.

ಅಧಿಕಾರ, ಹಣದ ದುರಾಶೆಗಳು ಒಟ್ಟಾಗಿ ಬದುಕುವ ಸಮುದಾಯಗಳ ಜನರ ನಡುವೆ ಧರ್ಮ, ಜಾತಿಗಳ ನೆಲೆಯಲ್ಲಿ ಮನಸ್ಸುಗಳನ್ನು ಒಡೆದು ಹಿಂಸಾಚಾರಕ್ಕೆ ಕಾರಣವಾಗುವುದನ್ನು ನೈಜವೆನಿಸುವ ಘಟನಾವಳಿಗಳ ಮೂಲಕ ಕಾದಂಬರಿ ಕಟ್ಟಿಕೊಡುತ್ತವೆ. ಒಂದು ಕಡೆ ಮೋದಿನ ಇದ್ದರೆ ಇನ್ನೊಂದು ಕಡೆ ಕಲ್ಯಾಣಪ್ಪ ಇದ್ದಾನೆ. ಈ ಅಧಿಕಾರದಾಹಿಗಳು, ದುರಾಶೆಯ ಜನರು ಎಲ್ಲ ಸಮುದಾಯಗಳಲ್ಲಿ ಇರುವವರು. ಅವರಿಗೆ ಹಿಂದೂ, ಮುಸ್ಲಿಂ ಎನ್ನುವ ಗುರುತುಗಳಿವೆ. ಈ ಗುರುತುಗಳನ್ನೇ ತಮ್ಮ ಸ್ವಾರ್ಥಕ್ಕಾಗಿ ಬಳಸಿ ಸಮುದಾಯದ ಜನರನ್ನು ಬಲಿಕೊಡುತ್ತಾರೆ. ಇದಕ್ಕೆ ಪ್ರತಿಯಾಗಿ ರೆಹಮಾನ್ ಮತ್ತು ಸಂಗನ ಬಸವಸ್ವಾಮಿಗಳಂತಹ ಜಾತಿ-ಧರ್ಮಗಳಾಚೆ ಜನರ ಏಳಿಗೆ ಮತ್ತು ನೆಮ್ಮದಿ ಬಯಸುವ ಮುಂದಾಳುಗಳು ಭರವಸೆಯಾಗುತ್ತಾರೆ. ಆದರೆ ಮೋದಿನ, ಕಲ್ಯಾಣಪ್ಪನಂತವರ ಅರ್ಭಟಗಳೇ ರಾಜಕೀಯ ಶಕ್ತಿಯನ್ನು ಪಡೆಯುತ್ತ ನಾಡನ್ನು ದುರಂತದತ್ತ ತಳ್ಳುತ್ತಿರುವುದು ಲೇಖಕನನ್ನು ದಿಗ್ಭ್ರಮೆಗೊಳಿಸುವ ಸೂಚನೆಗಳು ಕಾದಂಬರಿಯಲ್ಲಿ ಸಿಗುತ್ತವೆ.

ಎಲ್ಲಾ ಜಾತಿ ಧರ್ಮಗಳಲ್ಲಿಯೂ ಮಹಿಳೆ ಶೋಷಿತಳು. ಮುಸ್ಲಿಂ ಧರ್ಮದಲ್ಲಿಯೂ ಇದು ಎದ್ದು ಕಾಣುತ್ತದೆ. ಈ ಬಗ್ಗೆ ಕಾದಂಬರಿ ಮಹಿಳೆಯರನ್ನು ಘನತೆಯಿಂದ ಕಾಣುತ್ತದೆ. ಖತೀಜಾಬೀಬಿ, ತಾಹಿರಾ, ಸೈರಾರಂಥ ಮಹಿಳೆಯರನ್ನು ಕಾದಂಬರಿ ಉತ್ಸಾಹದಲ್ಲಿ ಚಿತ್ರಿಸುತ್ತದೆ. ಸಾಂಪ್ರದಾಯಿಕ ಬದುಕಿನೊಳಗಿನಿಂದಲೇ ವ್ಯಕ್ತವಾಗುವ ಈ ಮಹಿಳೆಯರ ದಿಟ್ಟತನಗಳನ್ನು ಅವರ ಬದುಕಿನ ಕಥನಗಳ ಮೂಲಕವೇ ಓದುಗನ ಮನಸ್ಸಿನಲ್ಲಿ ಅಚ್ಚಳಿಯದಂತೆ ಮೂಡಿಸುತ್ತದೆ.

ಇದನ್ನು ಓದುವ ಈಗಿನ ತಲೆಮಾರು ಇದನ್ನೊಂದು ಮುಸ್ಲಿಂ ಬದುಕನ್ನು ಹೊರಜಗತ್ತಿಗೆ ಅನಾವರಣಗೊಳಿಸುವ ಕಾದಂಬರಿ ಎಂಬ ತೀರ್ಮಾನಕ್ಕೆ ಬರಬಹುದಾದ ಅಪಾಯವಿದೆ. ಯಾಕೆಂದರೆ ಮೋಹನ, ಸಂಗನಬಸವನ ಸ್ವಾಮಿಗಳು, ಕಲ್ಯಾಣಪ್ಪನಂತಹ ನಾಲ್ಕೈದು ಪಾತ್ರಗಳು ಮಾತ್ರ ಮುಸ್ಲೀಮೇತರರದ್ದಾಗಿವೆ. ಆದರೆ ಇದು ಮುಸ್ಲಿಂ ಬದುಕಿನ ಕಷ್ಟ ಸುಖಗಳನ್ನು ಚಿತ್ರಿಸುವ ಕಾದಂಬರಿಯಲ್ಲ. ಇಲ್ಲಿನ ಪಾತ್ರಗಳ ಹೆಸರು ಬದಲಿಸಿದರೆ ಅದು ಹಿಂದೂ, ಕ್ರಿಶ್ಚಿಯನ್ ಅಥವಾ ಜಗತ್ತಿನ ಯಾವುದೇ ಸಮಾಜದ ಬದುಕೇ ಆಗಿರುತ್ತವೆ.

ಜನ್ನತ್ ಮೊಹಲ್ಲಾವನ್ನು ನಮ್ಮೆದುರಿಟ್ಟು ದಿಢೀರನೇ ಕಣ್ಮರೆಯಾದ ಅಬ್ಬಾಸ್ ಮೇಲಿನಮನಿಯವರು ರಹಮಾನನ ಸಮುದಾಯಪ್ರಜ್ಞೆ, ಇಮಾಮರ ಸ್ವಚ್ಚ ಧಾರ್ಮಿಕಮನಸ್ಸು, ಶಬ್ಬೀರನ ಜೀವನೋತ್ಸಾಹ, ಜಿಲಾನಿಯು ತನ್ನನ್ನು ಮೀರಿ ಕಾಣುವ ದಾರ್ಶನಿಕ ರೂಪದಲ್ಲಿ ನಮ್ಮೊಳಗೆ ಸದಾ ಜೀವಂತವಾಗಿರುತ್ತಾರೆ.

  • ಡಾ.ಸರ್ಜಾಶಂಕರ್ ಹರಳಿಮಠ

ಇದನ್ನೂ ಓದಿ: ಪುಸ್ತಕ ವಿಮರ್ಶೆ: ಜಾತಿ ಬಂತು ಹೇಗೆ? ಕರ್ನಾಟಕದಲ್ಲಿ ಜಾತಿ ವ್ಯವಸ್ಥೆ ಮತ್ತು ಅಸ್ಪೃಶ್ಯತೆಯ ಉಗಮ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...