Homeಸಾಹಿತ್ಯ-ಸಂಸ್ಕೃತಿಪುಸ್ತಕ ವಿಮರ್ಶೆ‘ಜನ್ನತ್ ಮೊಹಲ್ಲಾ’: ಮನುಷ್ಯ ಘನತೆಯನ್ನು ಕಾಪಿಡುವ ಸೃಜನಶೀಲ ಪ್ರಯತ್ನ

‘ಜನ್ನತ್ ಮೊಹಲ್ಲಾ’: ಮನುಷ್ಯ ಘನತೆಯನ್ನು ಕಾಪಿಡುವ ಸೃಜನಶೀಲ ಪ್ರಯತ್ನ

‘ಜನ್ನತ್’ ಎಂದರೆ ಸ್ವರ್ಗ. ಮೊಹಲ್ಲಾದ ಬದುಕನ್ನು ಸ್ವರ್ಗವಾಗಿಸುವ ಕನಸುಗಳ ಚಿತ್ತಾರವೇ ಈ ಕಾದಂಬರಿ.

- Advertisement -
- Advertisement -

‘ಜನ್ನತ್ ಮೊಹಲ್ಲಾ’ ಮತ್ತೆ ಮತ್ತೆ ಓದಿಸಿಕೊಳ್ಳುವ ಅಬ್ಬಾಸ್ ಮೇಲಿನಮನಿ ಅವರ ಮೊದಲ ಕಾದಂಬರಿ. ದ್ವೇಷ-ಪ್ರೀತಿ, ಹಿಂಸೆ-ಅಹಿಂಸೆ, ಸಿಟ್ಟು-ತಾಳ್ಮೆ, ನಿರಾಶೆ-ಭರವಸೆ ಇವುಗಳ ಮುಖಾಮುಖಿಯಲ್ಲಿ ಪ್ರೀತಿ ಅರಳಿಸುವ, ಮನುಷ್ಯ ಘನತೆಯನ್ನು ಕಾಪಿಡುವ ಸೃಜನಶೀಲ ಪ್ರಯತ್ನವಾಗಿ ‘ಜನ್ನತ್ ಮೊಹಲ್ಲಾ’ ಮೂಡಿಬಂದಿದೆ.

‘ಜನ್ನತ್’ ಎಂದರೆ ಸ್ವರ್ಗ. ಮೊಹಲ್ಲಾದ ಬದುಕನ್ನು ಸ್ವರ್ಗವಾಗಿಸುವ ಕನಸುಗಳ ಚಿತ್ತಾರವೇ ಈ ಕಾದಂಬರಿ. ಕನಸುಗಳೆಂದರೆ ಅವಾಸ್ತವಿಕ ಭ್ರಮೆಗಳೂ ಆಗಬಹುದು. ಆದರೆ ಇಲ್ಲಿನ ಕನಸುಗಳಿಗೆ ನೆಲದ ಆಳದೊಳಗೆ ಇಳಿದಿರುವ ಬೇರುಗಳಿವೆ. ನೆಲದ ಮೇಲಣ ಕಡುವಾಸ್ತವಗಳ ದಟ್ಟ ಅರಿವಿದೆ. ಕನಸುಗಳನ್ನು ಛಿದ್ರಗೊಳಿಸುವ ಪ್ರಯತ್ನಗಳ ಎಚ್ಚರಿವಿದೆ. ಕನಸು ಕಾಣುವ ಹಂಬಲಕ್ಕೆ ಇವುಗಳನ್ನು ನಿವಾರಿಸಿಕೊಳ್ಳುವ ಮನುಷ್ಯಪ್ರೀತಿ, ವಿವೇಕ, ಜಾಣ್ಮೆಗಳಿವೆ.

ಕಾದಂಬರಿಯ ಭಾಷೆ ಕಾವ್ಯಾತ್ಮಕವಾದುದು. ಕುತೂಹಲ ಕಾಯ್ದುಕೊಂಡು ಸಾಗುವ ನಿರೂಪಣಾ ಶೈಲಿ ಓದುಗನ ಗಮನವನ್ನು ಅತ್ತಿತ್ತ ವಿಚಲಿಸದಂತೆ ಕೂರಿಸುತ್ತದೆ. ಅಧ್ಯಾಯಗಳ ಶೀರ್ಷಿಕೆಯೇ ಕವಿತೆಯ ಸಾಲುಗಳಂತೆ ಓದುಗನನ್ನು ಸೆಳೆಯುತ್ತವೆ: ‘ಜೀವಪ್ರೀತಿಯ ಗೂಡಿನೊಳಗೆ ಹೊಸ ಸೂರ್ಯನ ಕನಸು’, ನೆಲದಾಳಕ್ಕೆ ಬೇರು ಆಕಾಶಕ್ಕೆ ಗರಿಗಳು’, ‘ಕಾಡು ಬೆಕ್ಕಿನ ಉಪದ್ರವೂ ಪಾರಿವಾಳದ ಪ್ರತಿರೋಧವೂ’, ‘ಮೋಹದ ಮಾಯೆ ಪಾರಿಜಾತ ಪ್ರೀತಿ’, ‘ಜಿನ್ ಮೊರೆತ ಹೊಸಗಾಳಿಯ ತುಡಿತ’, ‘ತಮಂಧದಂತರಾಳದಲ್ಲಿ ಬೆಳಕಿನ ಹಣತೆ’, ‘ಮುಂಗಾರು ಮಳೆಗೆ ಗರಿಗೆದರಿ ಕುಣಿದ ನವಿಲು’, ‘ಚಂದ್ರ ದರ್ಶನಕೆ ಕಪ್ಪು ಮೋಡಗಳ ಆತಂಕ’, ’ಕತ್ತಲು ಗೂಡಿನಿಂದ ಬೆಳಕು ಹುಡುಕುತ್ತ..’ ಹೀಗೆ. ಪ್ರೀತಿ, ಕನಸು, ಅನ್ಯಾಯದ ವಿರುದ್ಧ ಪ್ರತಿಭಟನೆ, ಕತ್ತಲೆಯ ಎದುರು ಬೆಳಕಿನ ಭರವಸೆ ಹೀಗೆ ಈ ಶೀರ್ಷಿಕೆಗಳೇ ಕಾದಂಬರಿಯ ಹಂಬಲವನ್ನು ಮನದಟ್ಟು ಮಾಡುತ್ತವೆ.

ಇಲ್ಲಿಯ ಪಾತ್ರಗಳು ಕಪ್ಪು ಬಿಳುಪಿನದ್ದಲ್ಲ. ಜೀವಪರವಾದ ರೆಹಮಾನ್, ಸೈರಾ, ತಾಹಿರಾ, ಪೇಶ್ ಇಮಾಮರು, ಶಬ್ಬೀರ, ತಸ್ಸೀಮಾ, ರಫೀಕ್, ನೌಷಾದ್, ಮೋಹನ್, ಬಸವಗಂಗ ಸ್ವಾಮಿಗಳಂತೆ ಜೀವವಿರೋಧಿಯಾದ ಮೋದಿನ, ದೌಲಾ, ಲಾಲ್ಯಾ, ಮಸ್ತಾನ, ಸಾಧಿಕನಂತಹವು. ಹೀಗೆ ಎರಡೂ ಮನಸ್ಥಿತಿಯ ಪಾತ್ರಗಳೂ ಇಲ್ಲಿವೆ. ಈ ತದ್ವಿರುದ್ಧ ವ್ಯಕ್ತಿತ್ವಗಳಲ್ಲಿ ಕೆಲವು ಶಾಶ್ವತವಾಗಿಯೇ ಈ ಗುಣಗಳನ್ನು ಹೊಂದಿರುವವು. ಆದರೂ ವಿರಳ ಸಂದರ್ಭಗಳಲ್ಲಿ ಅದರಾಚೆಗೆ ಹೊರಳುವವು. ಬದುಕಿನ ಕಟುವಾದ ಏರಿಳಿತಗಳಲ್ಲಿ ಮನುಷ್ಯರು ಖಳರಾಗುವ ಹೆಜ್ಜೆ ಗುರುತುಗಳನ್ನು ಕಾದಂಬರಿ ಮನೋಜ್ಞವಾಗಿ ಚಿತ್ರಿಸುತ್ತದೆ. ಖಳನೆನಿಸುವ ಜಿಲಾನಿ, ಇಮಾಮರಂತಹ ಪಾತ್ರಗಳು ಆದ್ರ್ರವಾಗಿ ಮಿಡಿಯುವ ಬದುಕಿನ ವಿಸ್ಮಯಗಳನ್ನು ಅಚ್ಚರಿಯಿಂದ ದಾಖಲಿಸುತ್ತದೆ. ಜಮಾಲನಂತಹ ಕೆಲವು ಪಾತ್ರಗಳು ಕ್ರೂರಿಯಾಗಿ ಕಂಡರೂ ಅವರು ಹಾಗಾಗುವಲ್ಲಿ ಅವರ ಬದುಕಿನ ದುರಂತವಿರುವುದನ್ನು ಕಾಣಿಸುತ್ತದೆ.

ಅಧಿಕಾರ, ಹಣದ ದುರಾಶೆಗಳು ಒಟ್ಟಾಗಿ ಬದುಕುವ ಸಮುದಾಯಗಳ ಜನರ ನಡುವೆ ಧರ್ಮ, ಜಾತಿಗಳ ನೆಲೆಯಲ್ಲಿ ಮನಸ್ಸುಗಳನ್ನು ಒಡೆದು ಹಿಂಸಾಚಾರಕ್ಕೆ ಕಾರಣವಾಗುವುದನ್ನು ನೈಜವೆನಿಸುವ ಘಟನಾವಳಿಗಳ ಮೂಲಕ ಕಾದಂಬರಿ ಕಟ್ಟಿಕೊಡುತ್ತವೆ. ಒಂದು ಕಡೆ ಮೋದಿನ ಇದ್ದರೆ ಇನ್ನೊಂದು ಕಡೆ ಕಲ್ಯಾಣಪ್ಪ ಇದ್ದಾನೆ. ಈ ಅಧಿಕಾರದಾಹಿಗಳು, ದುರಾಶೆಯ ಜನರು ಎಲ್ಲ ಸಮುದಾಯಗಳಲ್ಲಿ ಇರುವವರು. ಅವರಿಗೆ ಹಿಂದೂ, ಮುಸ್ಲಿಂ ಎನ್ನುವ ಗುರುತುಗಳಿವೆ. ಈ ಗುರುತುಗಳನ್ನೇ ತಮ್ಮ ಸ್ವಾರ್ಥಕ್ಕಾಗಿ ಬಳಸಿ ಸಮುದಾಯದ ಜನರನ್ನು ಬಲಿಕೊಡುತ್ತಾರೆ. ಇದಕ್ಕೆ ಪ್ರತಿಯಾಗಿ ರೆಹಮಾನ್ ಮತ್ತು ಸಂಗನ ಬಸವಸ್ವಾಮಿಗಳಂತಹ ಜಾತಿ-ಧರ್ಮಗಳಾಚೆ ಜನರ ಏಳಿಗೆ ಮತ್ತು ನೆಮ್ಮದಿ ಬಯಸುವ ಮುಂದಾಳುಗಳು ಭರವಸೆಯಾಗುತ್ತಾರೆ. ಆದರೆ ಮೋದಿನ, ಕಲ್ಯಾಣಪ್ಪನಂತವರ ಅರ್ಭಟಗಳೇ ರಾಜಕೀಯ ಶಕ್ತಿಯನ್ನು ಪಡೆಯುತ್ತ ನಾಡನ್ನು ದುರಂತದತ್ತ ತಳ್ಳುತ್ತಿರುವುದು ಲೇಖಕನನ್ನು ದಿಗ್ಭ್ರಮೆಗೊಳಿಸುವ ಸೂಚನೆಗಳು ಕಾದಂಬರಿಯಲ್ಲಿ ಸಿಗುತ್ತವೆ.

ಎಲ್ಲಾ ಜಾತಿ ಧರ್ಮಗಳಲ್ಲಿಯೂ ಮಹಿಳೆ ಶೋಷಿತಳು. ಮುಸ್ಲಿಂ ಧರ್ಮದಲ್ಲಿಯೂ ಇದು ಎದ್ದು ಕಾಣುತ್ತದೆ. ಈ ಬಗ್ಗೆ ಕಾದಂಬರಿ ಮಹಿಳೆಯರನ್ನು ಘನತೆಯಿಂದ ಕಾಣುತ್ತದೆ. ಖತೀಜಾಬೀಬಿ, ತಾಹಿರಾ, ಸೈರಾರಂಥ ಮಹಿಳೆಯರನ್ನು ಕಾದಂಬರಿ ಉತ್ಸಾಹದಲ್ಲಿ ಚಿತ್ರಿಸುತ್ತದೆ. ಸಾಂಪ್ರದಾಯಿಕ ಬದುಕಿನೊಳಗಿನಿಂದಲೇ ವ್ಯಕ್ತವಾಗುವ ಈ ಮಹಿಳೆಯರ ದಿಟ್ಟತನಗಳನ್ನು ಅವರ ಬದುಕಿನ ಕಥನಗಳ ಮೂಲಕವೇ ಓದುಗನ ಮನಸ್ಸಿನಲ್ಲಿ ಅಚ್ಚಳಿಯದಂತೆ ಮೂಡಿಸುತ್ತದೆ.

ಇದನ್ನು ಓದುವ ಈಗಿನ ತಲೆಮಾರು ಇದನ್ನೊಂದು ಮುಸ್ಲಿಂ ಬದುಕನ್ನು ಹೊರಜಗತ್ತಿಗೆ ಅನಾವರಣಗೊಳಿಸುವ ಕಾದಂಬರಿ ಎಂಬ ತೀರ್ಮಾನಕ್ಕೆ ಬರಬಹುದಾದ ಅಪಾಯವಿದೆ. ಯಾಕೆಂದರೆ ಮೋಹನ, ಸಂಗನಬಸವನ ಸ್ವಾಮಿಗಳು, ಕಲ್ಯಾಣಪ್ಪನಂತಹ ನಾಲ್ಕೈದು ಪಾತ್ರಗಳು ಮಾತ್ರ ಮುಸ್ಲೀಮೇತರರದ್ದಾಗಿವೆ. ಆದರೆ ಇದು ಮುಸ್ಲಿಂ ಬದುಕಿನ ಕಷ್ಟ ಸುಖಗಳನ್ನು ಚಿತ್ರಿಸುವ ಕಾದಂಬರಿಯಲ್ಲ. ಇಲ್ಲಿನ ಪಾತ್ರಗಳ ಹೆಸರು ಬದಲಿಸಿದರೆ ಅದು ಹಿಂದೂ, ಕ್ರಿಶ್ಚಿಯನ್ ಅಥವಾ ಜಗತ್ತಿನ ಯಾವುದೇ ಸಮಾಜದ ಬದುಕೇ ಆಗಿರುತ್ತವೆ.

ಜನ್ನತ್ ಮೊಹಲ್ಲಾವನ್ನು ನಮ್ಮೆದುರಿಟ್ಟು ದಿಢೀರನೇ ಕಣ್ಮರೆಯಾದ ಅಬ್ಬಾಸ್ ಮೇಲಿನಮನಿಯವರು ರಹಮಾನನ ಸಮುದಾಯಪ್ರಜ್ಞೆ, ಇಮಾಮರ ಸ್ವಚ್ಚ ಧಾರ್ಮಿಕಮನಸ್ಸು, ಶಬ್ಬೀರನ ಜೀವನೋತ್ಸಾಹ, ಜಿಲಾನಿಯು ತನ್ನನ್ನು ಮೀರಿ ಕಾಣುವ ದಾರ್ಶನಿಕ ರೂಪದಲ್ಲಿ ನಮ್ಮೊಳಗೆ ಸದಾ ಜೀವಂತವಾಗಿರುತ್ತಾರೆ.

  • ಡಾ.ಸರ್ಜಾಶಂಕರ್ ಹರಳಿಮಠ

ಇದನ್ನೂ ಓದಿ: ಪುಸ್ತಕ ವಿಮರ್ಶೆ: ಜಾತಿ ಬಂತು ಹೇಗೆ? ಕರ್ನಾಟಕದಲ್ಲಿ ಜಾತಿ ವ್ಯವಸ್ಥೆ ಮತ್ತು ಅಸ್ಪೃಶ್ಯತೆಯ ಉಗಮ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...