Homeಮುಖಪುಟ'ಮಾನವೀಯತೆ, ನೈತಿಕತೆಯ ಪತನ': ಪ್ಯಾಲೆಸ್ತೀನ್ ವಿಚಾರದಲ್ಲಿ ಮೋದಿ ಸರ್ಕಾರದ ಮೌನ ಟೀಕಿಸಿದ ಸೋನಿಯಾ ಗಾಂಧಿ

‘ಮಾನವೀಯತೆ, ನೈತಿಕತೆಯ ಪತನ’: ಪ್ಯಾಲೆಸ್ತೀನ್ ವಿಚಾರದಲ್ಲಿ ಮೋದಿ ಸರ್ಕಾರದ ಮೌನ ಟೀಕಿಸಿದ ಸೋನಿಯಾ ಗಾಂಧಿ

- Advertisement -
- Advertisement -

ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಹಿಸಿರುವ ‘ಮಹಾ ಮೌನ’ವನ್ನು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಟೀಕಿಸಿದ್ದು, ಇದು ‘ಮಾನವೀಯತೆ ಮತ್ತು ನೈತಿಕತೆಯ ಸಂಪೂರ್ಣ ಪತನ’ ಎಂದಿದ್ದಾರೆ.

ದಿ ಹಿಂದೂ ಪತ್ರಿಕೆಯಲ್ಲಿ ಪ್ರಕಟವಾದ ‘ಭಾರತದ ಮೌನ ಸ್ವರ, ಪ್ಯಾಲೆಸ್ತೀನ್‌ನೊಂದಿಗಿನ ಅಂತರ’ ಎಂಬ ತೀಕ್ಷ್ಣವಾದ ತನ್ನ ಅಭಿಪ್ರಾಯ ಲೇಖನದಲ್ಲಿ, ಸೋನಿಯಾ ಗಾಂಧಿಯವರು “ಭಾರತವು ಇಸ್ರೇಲ್-ಪ್ಯಾಲೆಸ್ತೀನ್ ವಿಷಯದಲ್ಲಿ ತನ್ನ ಹಳೆಯ ನಾಯಕತ್ವವನ್ನು ಮರಳಿ ಪಡೆಯಬೇಕು. ವೈಯಕ್ತಿಕ ರಾಜತಾಂತ್ರಿಕತೆಯನ್ನು ಮೀರಿ, ನ್ಯಾಯ, ಮಾನವ ಹಕ್ಕುಗಳು ಮತ್ತು ಅಂತಾರಾಷ್ಟ್ರೀಯ ಕಾನೂನಿಗೆ ತನ್ನ ಬದ್ಧತೆಯನ್ನು ಮರಳಿ ದೃಢಪಡಿಸಬೇಕೆಂದು ಒತ್ತಾಯಿಸಿದ್ದಾರೆ.

“ಪ್ರಸ್ತುತ ಸರ್ಕಾರದ ಪ್ರತಿಕ್ರಿಯೆಯು ಭಾರತದ ಸಾಂವಿಧಾನಿಕ ಮೌಲ್ಯಗಳು ಅಥವಾ ಕಾರ್ಯತಂತ್ರದ ಹಿತಾಸಕ್ತಿಗಳಿಗಿಂತ ಪ್ರಧಾನಿ ಮೋದಿ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ನಡುವಿನ ವೈಯಕ್ತಿಕ ಸ್ನೇಹದಿಂದ ಹೆಚ್ಚಾಗಿ ಪ್ರೇರಿತವಾಗಿದೆ. ಈ ರೀತಿಯ ರಾಜತಾಂತ್ರಿಕತೆಯು ಸಮರ್ಥನೀಯವಲ್ಲ ಮತ್ತು ವಿದೇಶಾಂಗ ನೀತಿಯನ್ನು ಯಾರೋ ನಿರ್ದೇಶಿಸಲು ಸಾಧ್ಯವಿಲ್ಲ” ಎಂದು ಸೋನಿಯಾ ಗಾಂಧಿ ಟೀಕಿಸಿದ್ದಾರೆ.

ಪ್ಯಾಲೆಸ್ತೀನ್ ಅನ್ನು ಪ್ರತ್ಯೇಕ ರಾಷ್ಟ್ರವನ್ನಾಗಿ ಗುರುತಿಸಿದ ಫ್ರಾನ್ಸ್ , ಇಂಗ್ಲೆಂಡ್, ಕೆನಡಾ, ಪೋರ್ಚುಗಲ್ ಆಸ್ಟ್ರೇಲಿಯಾ ಬಗ್ಗೆ ಉಲ್ಲೇಖಿಸಿದ ಸೋನಿಯಾ ಗಾಂಧಿ, ದೀರ್ಘಕಾಲದಿಂದ ಬಳಲುತ್ತಿರುವ ಪ್ಯಾಲೆಸ್ತೀನ್ ಜನರ ನ್ಯಾಯ ಸಮ್ಮತ ಆಕಾಂಕ್ಷೆಗಳನ್ನು ಈಡೇರಿಸುವ ಮೊದಲ ಹೆಜ್ಜೆ ಇದು ಎಂದು ಹೇಳಿದ್ದಾರೆ. ಇಂದಿನವರೆಗೆ, ವಿಶ್ವಸಂಸ್ಥೆಯ 193 ಸದಸ್ಯ ರಾಷ್ಟ್ರಗಳಲ್ಲಿ 150ಕ್ಕೂ ಹೆಚ್ಚು ದೇಶಗಳು ಪ್ಯಾಲೆಸ್ತೀನ್‌ಗೆ ರಾಷ್ಟ್ರದ ಮಾನ್ಯತೆ ನೀಡಿವೆ ಎಂದಿದ್ದಾರೆ.

ಪ್ಯಾಲೆಸ್ತೀನ್ ಲಿಬರೇಶನ್ ಆರ್ಗನೈಸೇಶನ್‌ಗೆ (ಪಿಎಲ್ಒ) ವರ್ಷಗಳ ಬೆಂಬಲದ ನಂತರ, 1988ರ ನವೆಂಬರ್ 18ರಂದು ಭಾರತ ಅಧಿಕೃತವಾಗಿ ಪ್ಯಾಲೆಸ್ತೀನ್‌ ಅನ್ನು ರಾಷ್ಟ್ರವನ್ನಾಗಿ ಗುರುತಿಸಿತ್ತು. ಈ ವಿಚಾರದಲ್ಲಿ ಭಾರತ ನಾಯಕತ್ವವನ್ನು ಮೆರೆದಿತ್ತು ಎಂದು ಸೋನಿಯಾ ಗಾಂಧಿ ನೆನಪಿಸಿದ್ದಾರೆ.

ಸ್ವಾತಂತ್ರ್ಯಕ್ಕೂ ಮುನ್ನ ದಕ್ಷಿಣ ಆಫ್ರಿಕಾದಲ್ಲಿನ ವರ್ಣಭೇದ ನೀತಿಯ ವಿರುದ್ಧ ಭಾರತ ಧ್ವನಿ ಗೂಡಿಸಿತ್ತು, 1954 ರಿಂದ 1962ರ ನಡುವೆ ನಡೆದ ಅಲ್ಜೀರಿಯಾ ಸ್ವಾತಂತ್ರ್ಯ ಹೋರಾಟಕ್ಕೆ ಭಾರತವು ಬಲವಾಗಿ ಬೆಂಬಲ ನೀಡಿತ್ತು. ಆಧುನಿಕ ಬಾಂಗ್ಲಾದೇಶದ ರಚನೆಯ ವೇಳೆ 1971ರಲ್ಲಿ ಪೂರ್ವ ಪಾಕಿಸ್ತಾನದಲ್ಲಿನ ಹತ್ಯಾಕಾಂಡ ತಡೆಯುವಲ್ಲಿ ಭಾರತ ಪ್ರಮುಖ ಪಾತ್ರ ವಹಿಸಿತ್ತು ಎಂದು ಸೋನಿಯಾ ಗಾಂಧಿ ಲೇಖನದಲ್ಲಿ ಉಲ್ಲೇಖಿಸಿದ್ದಾರೆ.

ಇಸ್ರೇಲ್–ಪ್ಯಾಲೆಸ್ತೀನ್‌ ನಿರ್ಣಾಯಕ ಮತ್ತು ಸೂಕ್ಷ್ಮ ವಿಷಯದ ಬಗ್ಗೆಯೂ ಕೂಡ ಭಾರತವು ಬಹಳ ಹಿಂದಿನಿಂದಲೂ ತತ್ವಬದ್ಧ ನಿಲುವನ್ನು ಕಾಯ್ದುಕೊಂಡಿದೆ. ಶಾಂತಿ ಮತ್ತು ಮಾನವ ಹಕ್ಕುಗಳ ರಕ್ಷಣೆಗೆ ತನ್ನ ಸೂಕ್ಷ್ಮವಾದ ನಿಲುವು ತೆಗೆದುಕೊಂಡಿದೆ. ಪ್ಯಾಲೆಸ್ತೀನ್ ವಿಚಾರದಲ್ಲಿ ಭಾರತವು ನಾಯಕತ್ವ ತೋರಬೇಕು. ಇದು ಈಗ ನ್ಯಾಯ, ಗುರುತು, ಗೌರವ ಮತ್ತು ಮಾನವ ಹಕ್ಕುಗಳ ಹೋರಾಟವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಅಕ್ಟೋಬರ್ 2023ರಲ್ಲಿ ಹಮಾಸ್-ಇಸ್ರೇಲ್ ಸಂಘರ್ಷ ಭುಗಿಲೆದ್ದ ನಂತರ ಗಾಝಾ ಬಿಕ್ಕಟ್ಟಿನ ಬಗ್ಗೆ ಮೋದಿ ಸರ್ಕಾರದ ನಿಲುವನ್ನು ಸೋನಿಯಾ ಗಾಂಧಿಯವರು ಸಾರ್ವಜನಿಕವಾಗಿ ಟೀಕಿಸುತ್ತಿರುವುದು ಇದು ಮೂರನೇ ಬಾರಿಯಾಗಿದೆ.

ಇಸ್ರೇಲ್ ಆಕ್ರಮಣದಲ್ಲಿ 17,000 ಮಕ್ಕಳು ಸೇರಿದಂತೆ 55,000ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ. ಇದು ‘ಜನಾಂಗೀಯ ಹತ್ಯೆಗಿಂತ ಕಡಿಮೆಯಿಲ್ಲ’ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

ಸೋನಮ್ ವಾಂಗ್‌ಚುಕ್ ಸಂಸ್ಥೆಯ ವಿರುದ್ಧ ತನಿಖೆ ಆರಂಭಿಸಿದ ಸಿಬಿಐ: ಲಡಾಖ್ ರಾಜ್ಯತ್ವ ಹೋರಾಟದ ನಡುವೆ ಬೆಳವಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...