Homeಮುಖಪುಟಬಾಲಕನ ಅಪಹರಣ ಪ್ರಕರಣ: ಎಡಿಜಿಪಿ ಬಂಧನ

ಬಾಲಕನ ಅಪಹರಣ ಪ್ರಕರಣ: ಎಡಿಜಿಪಿ ಬಂಧನ

- Advertisement -
- Advertisement -

ಮದ್ರಾಸ್ ಹೈಕೋರ್ಟ್ ಆದೇಶದ ಮೇರೆಗೆ ತಿರುವಲ್ಲೂರು ಪೊಲೀಸರು ಸೋಮವಾರ, 16 ವರ್ಷದ ಬಾಲಕನ ಅಪಹರಣ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ತಮಿಳುನಾಡಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಎಚ್‌ಎಂ ಜಯರಾಮ್ ಅವರನ್ನು ಬಂಧಿಸಿದ್ದಾರೆ.

ತನಿಖೆಯನ್ನು ತಡೆದಿದ್ದಕ್ಕಾಗಿ ನ್ಯಾಯಾಲಯವು ಕೆ.ವಿ. ಕುಪ್ಪಂ ಶಾಸಕ ಮತ್ತು ಪುಥಿಯಾ ಭಾರತಮ್ ‘ಪೂವೈ’ ಅಧ್ಯಕ್ಷ ಜಗನ್ ಮೂರ್ತಿ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, “ಯಾರೂ ಕಾನೂನಿಗಿಂತ ದೊಡ್ಡವರಲ್ಲ” ಎಂದು ಕಿಡಿಕಾರಿದೆ.

ಬಾಲಕನ ತಾಯಿ ಲಕ್ಷ್ಮಿ ನೀಡಿದ ದೂರಿನ ಮೇರೆಗೆ ಈ ಪ್ರಕರಣ ದಾಖಲಾಗಿದ್ದು, ಅವರ ಹಿರಿಯ ಮಗ ಧನುಷ್ (23) ಕುಟುಂಬದವರ ಇಚ್ಛೆಗೆ ವಿರುದ್ಧವಾಗಿ ವಿಜಯ ಶ್ರೀ (21) ಎಂಬ ಯುವತಿಯನ್ನು ಮದುವೆಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ದಂಪತಿ ತಲೆಮರೆಸಿಕೊಂಡಿದ್ದಾಗ, ಹುಡುಗಿಯ ಕುಟುಂಬವು ಧನುಷ್ ಅವರ ಕಿರಿಯ ಸಹೋದರ ಇಂದ್ರಚಂದ್ (16) ಅವರನ್ನು ಮೇ 10 ರಂದು ತಿರುವಲಂಗಾಡು ಬಳಿಯ ಅವರ ಮನೆಯಿಂದ ಅಪಹರಿಸಿದೆ ಎಂದು ಆರೋಪಿಸಲಾಗಿದೆ. ನಂತರ ಬಾಲಕನನ್ನು ಗಾಯಗೊಂಡ ಸ್ಥಿತಿಯಲ್ಲಿ ಹೋಟೆಲೊಂದರ ಬಳಿ ಬಿಟ್ಟು ಹೋಗಿರುವುದಾಗಿ ವರದಿಯಾಗಿದೆ.

ಲೈವ್‌ಲಾ ಪ್ರಕಾರ, ದಂಪತಿಯನ್ನು ಪತ್ತೆ ಹಚ್ಚಲು ವಿಫಲವಾದ ನಂತರ ಯುವತಿಯ ಕುಟುಂಬ ಸಹಾಯಕ್ಕಾಗಿ ಶಾಸಕರನ್ನು ಸಂಪರ್ಕಿಸಿದೆ. ಶಾಸಕರು ಅಪಹರಣಕ್ಕೆ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಲಾಗಿದೆ ಮತ್ತು ನಂತರ ಪೊಲೀಸರು ಅವರನ್ನು ಪ್ರಶ್ನಿಸದಂತೆ ತಡೆದಿದ್ಧಾರೆ. ಪಕ್ಷದ ಬೆಂಬಲಿಗರು ಅವರ ಮನೆಯನ್ನು ಸುತ್ತುವರೆದಿದ್ದರು.

ಈ ನಡುವೆ, ಎಡಿಜಿಪಿ ಜಯರಾಮ್ ಅವರ ಅಧಿಕೃತ ವಾಹನವನ್ನು ಬಳಸಿಕೊಂಡು ಬಾಲಕನನ್ನು ಅಪಹರಣ ಮಾಡಲಾಗಿದೆ ಎಂದು ಬಂಧಿತ ಇಬ್ಬರು ಶಂಕಿತರು ಒಪ್ಪಿಕೊಂಡಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಅವರ ಜೊತೆ ಮಾಜಿ ಪೊಲೀಸ್ ಅಧಿಕಾರಿ ಮಹೇಶ್ವರಿ ಮತ್ತು ವಕೀಲ ಶರತ್ ಇದ್ದರು ಎನ್ನಲಾಗಿದೆ.

ಶಾಸಕ ಜಗನ್ ಮೂರ್ತಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ. ವೇಲ್ಮುರುಗನ್, ಎಡಿಜಿಪಿ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ವಿಳಂಬ ಮಾಡಿದ್ದಕ್ಕಾಗಿ ಪೊಲೀಸರನ್ನು ಟೀಕಿಸಿದ್ದಾರೆ. ವಿಚಾರಣೆಯ ಸಮಯದಲ್ಲಿ, ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ದಾಮೋದರನ್ ನ್ಯಾಯಾಲಯಕ್ಕೆ ಮಾಹಿತಿ ನೀಡಿ, ಪೊಲೀಸರು ಮೊದಲು ಶಾಸಕರನ್ನು ಪ್ರಶ್ನಿಸಲು ಉದ್ದೇಶಿಸಿದ್ದರಿಂದ ಎಡಿಜಿಪಿ ವಿರುದ್ಧ ಇನ್ನೂ ಪ್ರಕರಣ ದಾಖಲಾಗಿಲ್ಲ ಎಂದಿದ್ದಾರೆ. ನಂತರ ನ್ಯಾಯಾಧೀಶರು ಶಾಸಕರು ಮತ್ತು ಎಡಿಜಿಪಿ ಇಬ್ಬರನ್ನೂ ನ್ಯಾಯಾಲಯಕ್ಕೆ ಹಾಜರಾಪಡಿಸುವಂತೆ ನಿರ್ದೇಶಿಸಿದ್ಧಾರೆ.

ನ್ಯಾಯಾಲಯದಲ್ಲಿ, ನ್ಯಾಯಮೂರ್ತಿ ವೇಲ್ಮುರುಗನ್ ಅವರು ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ : “ನೀವು ಸಾಮಾನ್ಯ ವ್ಯಕ್ತಿಯಲ್ಲ. ನೀವು ನಾಗರಿಕರಿಗೆ ಮಾದರಿಯಾಗಿರಬೇಕು. ಬದಲಾಗಿ, ನೀವು ಮೂರನೇ ದರ್ಜೆಯ ವ್ಯಕ್ತಿಯಂತೆ ವರ್ತಿಸುತ್ತಿದ್ದೀರಿ. ಜನರು ನಿಮಗೆ ಮತ ಹಾಕಲು ಬಿಸಿಲಿನಲ್ಲಿ, ಕೆಲವೊಮ್ಮೆ ಊಟ ಮಾಡದೆ ಬಂದಿರಬಹುದು. ನೀವು ಅವರಿಗೆ ಹೀಗೆ ಸೇವೆ ಮಾಡುತ್ತೀರಾ?” ಎಂದು ಕಿಡಿಕಾರಿದ್ದಾರೆ.

“ಕಾಂಗರೂ ನ್ಯಾಯಾಲಯಗಳ” ಬಳಕೆಯನ್ನು ಟೀಕಿಸಿದ ನ್ಯಾಯಾಲಯ, ಶಾಸಕರು ಕಾನೂನಿಗೆ ಸಹಕರಿಸುವ ಬದಲು ರಾಜಕೀಯ ಶಕ್ತಿಯನ್ನು ಪ್ರದರ್ಶಿಸಿದ್ದಕ್ಕಾಗಿ ತರಾಟೆಗೆ ತೆಗೆದುಕೊಂಡಿದೆ. “ಇಂತಹ ನಡವಳಿಕೆ  ಮುಂದುವರಿದರೆ, ಪ್ರಕರಣದಲ್ಲಿ ಸಹಕರಿಸಿರುವ ಪ್ರತಿಯೊಬ್ಬ ಬೆಂಬಲಿಗರ ವಿರುದ್ಧವೂ ಪ್ರಕರಣ ದಾಖಲಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಈ ಬಲವಾದ ಟೀಕೆಗಳ ನಂತರ, ನ್ಯಾಯಾಲಯವು ಶಾಸಕರಿಗೆ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದೆ. ತನಿಖೆಗೆ ಸಂಪೂರ್ಣವಾಗಿ ಸಹಕರಿಸುವಂತೆ ನಿರ್ದೇಶಿಸಿದೆ. ನ್ಯಾಯಾಧೀಶರು ಪೊಲೀಸರಿಗೆ ಎಡಿಜಿಪಿ ಜಯರಾಮ್ ಅವರನ್ನು ‘ಕಾನೂನಿನ ಪ್ರಕಾರ’ ಬಂಧಿಸುವಂತೆ ನಿರ್ದೇಶಿಸಿದ್ದಾರೆ. ಅಧಿಕಾರಿ ಸೂಕ್ತ ವೇದಿಕೆಯ ಮುಂದೆ ಜಾಮೀನು ಪಡೆಯಲು ಸ್ವತಂತ್ರರು ಎಂದು ಹೇಳಿದ್ದಾರೆ.

ಅಸ್ಸಾಂ | 600 ಕ್ಕೂ ಹೆಚ್ಚು ಮನೆಗಳನ್ನು ಕೆಡವಲು ಪ್ರಾರಂಭಿಸಿದ ಬಿಜೆಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...