Homeಮುಖಪುಟಬಾಲಕನ ಅಪಹರಣ ಪ್ರಕರಣ: ಎಡಿಜಿಪಿ ಬಂಧನ

ಬಾಲಕನ ಅಪಹರಣ ಪ್ರಕರಣ: ಎಡಿಜಿಪಿ ಬಂಧನ

- Advertisement -
- Advertisement -

ಮದ್ರಾಸ್ ಹೈಕೋರ್ಟ್ ಆದೇಶದ ಮೇರೆಗೆ ತಿರುವಲ್ಲೂರು ಪೊಲೀಸರು ಸೋಮವಾರ, 16 ವರ್ಷದ ಬಾಲಕನ ಅಪಹರಣ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ತಮಿಳುನಾಡಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಎಚ್‌ಎಂ ಜಯರಾಮ್ ಅವರನ್ನು ಬಂಧಿಸಿದ್ದಾರೆ.

ತನಿಖೆಯನ್ನು ತಡೆದಿದ್ದಕ್ಕಾಗಿ ನ್ಯಾಯಾಲಯವು ಕೆ.ವಿ. ಕುಪ್ಪಂ ಶಾಸಕ ಮತ್ತು ಪುಥಿಯಾ ಭಾರತಮ್ ‘ಪೂವೈ’ ಅಧ್ಯಕ್ಷ ಜಗನ್ ಮೂರ್ತಿ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, “ಯಾರೂ ಕಾನೂನಿಗಿಂತ ದೊಡ್ಡವರಲ್ಲ” ಎಂದು ಕಿಡಿಕಾರಿದೆ.

ಬಾಲಕನ ತಾಯಿ ಲಕ್ಷ್ಮಿ ನೀಡಿದ ದೂರಿನ ಮೇರೆಗೆ ಈ ಪ್ರಕರಣ ದಾಖಲಾಗಿದ್ದು, ಅವರ ಹಿರಿಯ ಮಗ ಧನುಷ್ (23) ಕುಟುಂಬದವರ ಇಚ್ಛೆಗೆ ವಿರುದ್ಧವಾಗಿ ವಿಜಯ ಶ್ರೀ (21) ಎಂಬ ಯುವತಿಯನ್ನು ಮದುವೆಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ದಂಪತಿ ತಲೆಮರೆಸಿಕೊಂಡಿದ್ದಾಗ, ಹುಡುಗಿಯ ಕುಟುಂಬವು ಧನುಷ್ ಅವರ ಕಿರಿಯ ಸಹೋದರ ಇಂದ್ರಚಂದ್ (16) ಅವರನ್ನು ಮೇ 10 ರಂದು ತಿರುವಲಂಗಾಡು ಬಳಿಯ ಅವರ ಮನೆಯಿಂದ ಅಪಹರಿಸಿದೆ ಎಂದು ಆರೋಪಿಸಲಾಗಿದೆ. ನಂತರ ಬಾಲಕನನ್ನು ಗಾಯಗೊಂಡ ಸ್ಥಿತಿಯಲ್ಲಿ ಹೋಟೆಲೊಂದರ ಬಳಿ ಬಿಟ್ಟು ಹೋಗಿರುವುದಾಗಿ ವರದಿಯಾಗಿದೆ.

ಲೈವ್‌ಲಾ ಪ್ರಕಾರ, ದಂಪತಿಯನ್ನು ಪತ್ತೆ ಹಚ್ಚಲು ವಿಫಲವಾದ ನಂತರ ಯುವತಿಯ ಕುಟುಂಬ ಸಹಾಯಕ್ಕಾಗಿ ಶಾಸಕರನ್ನು ಸಂಪರ್ಕಿಸಿದೆ. ಶಾಸಕರು ಅಪಹರಣಕ್ಕೆ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಲಾಗಿದೆ ಮತ್ತು ನಂತರ ಪೊಲೀಸರು ಅವರನ್ನು ಪ್ರಶ್ನಿಸದಂತೆ ತಡೆದಿದ್ಧಾರೆ. ಪಕ್ಷದ ಬೆಂಬಲಿಗರು ಅವರ ಮನೆಯನ್ನು ಸುತ್ತುವರೆದಿದ್ದರು.

ಈ ನಡುವೆ, ಎಡಿಜಿಪಿ ಜಯರಾಮ್ ಅವರ ಅಧಿಕೃತ ವಾಹನವನ್ನು ಬಳಸಿಕೊಂಡು ಬಾಲಕನನ್ನು ಅಪಹರಣ ಮಾಡಲಾಗಿದೆ ಎಂದು ಬಂಧಿತ ಇಬ್ಬರು ಶಂಕಿತರು ಒಪ್ಪಿಕೊಂಡಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಅವರ ಜೊತೆ ಮಾಜಿ ಪೊಲೀಸ್ ಅಧಿಕಾರಿ ಮಹೇಶ್ವರಿ ಮತ್ತು ವಕೀಲ ಶರತ್ ಇದ್ದರು ಎನ್ನಲಾಗಿದೆ.

ಶಾಸಕ ಜಗನ್ ಮೂರ್ತಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ. ವೇಲ್ಮುರುಗನ್, ಎಡಿಜಿಪಿ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ವಿಳಂಬ ಮಾಡಿದ್ದಕ್ಕಾಗಿ ಪೊಲೀಸರನ್ನು ಟೀಕಿಸಿದ್ದಾರೆ. ವಿಚಾರಣೆಯ ಸಮಯದಲ್ಲಿ, ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ದಾಮೋದರನ್ ನ್ಯಾಯಾಲಯಕ್ಕೆ ಮಾಹಿತಿ ನೀಡಿ, ಪೊಲೀಸರು ಮೊದಲು ಶಾಸಕರನ್ನು ಪ್ರಶ್ನಿಸಲು ಉದ್ದೇಶಿಸಿದ್ದರಿಂದ ಎಡಿಜಿಪಿ ವಿರುದ್ಧ ಇನ್ನೂ ಪ್ರಕರಣ ದಾಖಲಾಗಿಲ್ಲ ಎಂದಿದ್ದಾರೆ. ನಂತರ ನ್ಯಾಯಾಧೀಶರು ಶಾಸಕರು ಮತ್ತು ಎಡಿಜಿಪಿ ಇಬ್ಬರನ್ನೂ ನ್ಯಾಯಾಲಯಕ್ಕೆ ಹಾಜರಾಪಡಿಸುವಂತೆ ನಿರ್ದೇಶಿಸಿದ್ಧಾರೆ.

ನ್ಯಾಯಾಲಯದಲ್ಲಿ, ನ್ಯಾಯಮೂರ್ತಿ ವೇಲ್ಮುರುಗನ್ ಅವರು ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ : “ನೀವು ಸಾಮಾನ್ಯ ವ್ಯಕ್ತಿಯಲ್ಲ. ನೀವು ನಾಗರಿಕರಿಗೆ ಮಾದರಿಯಾಗಿರಬೇಕು. ಬದಲಾಗಿ, ನೀವು ಮೂರನೇ ದರ್ಜೆಯ ವ್ಯಕ್ತಿಯಂತೆ ವರ್ತಿಸುತ್ತಿದ್ದೀರಿ. ಜನರು ನಿಮಗೆ ಮತ ಹಾಕಲು ಬಿಸಿಲಿನಲ್ಲಿ, ಕೆಲವೊಮ್ಮೆ ಊಟ ಮಾಡದೆ ಬಂದಿರಬಹುದು. ನೀವು ಅವರಿಗೆ ಹೀಗೆ ಸೇವೆ ಮಾಡುತ್ತೀರಾ?” ಎಂದು ಕಿಡಿಕಾರಿದ್ದಾರೆ.

“ಕಾಂಗರೂ ನ್ಯಾಯಾಲಯಗಳ” ಬಳಕೆಯನ್ನು ಟೀಕಿಸಿದ ನ್ಯಾಯಾಲಯ, ಶಾಸಕರು ಕಾನೂನಿಗೆ ಸಹಕರಿಸುವ ಬದಲು ರಾಜಕೀಯ ಶಕ್ತಿಯನ್ನು ಪ್ರದರ್ಶಿಸಿದ್ದಕ್ಕಾಗಿ ತರಾಟೆಗೆ ತೆಗೆದುಕೊಂಡಿದೆ. “ಇಂತಹ ನಡವಳಿಕೆ  ಮುಂದುವರಿದರೆ, ಪ್ರಕರಣದಲ್ಲಿ ಸಹಕರಿಸಿರುವ ಪ್ರತಿಯೊಬ್ಬ ಬೆಂಬಲಿಗರ ವಿರುದ್ಧವೂ ಪ್ರಕರಣ ದಾಖಲಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಈ ಬಲವಾದ ಟೀಕೆಗಳ ನಂತರ, ನ್ಯಾಯಾಲಯವು ಶಾಸಕರಿಗೆ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದೆ. ತನಿಖೆಗೆ ಸಂಪೂರ್ಣವಾಗಿ ಸಹಕರಿಸುವಂತೆ ನಿರ್ದೇಶಿಸಿದೆ. ನ್ಯಾಯಾಧೀಶರು ಪೊಲೀಸರಿಗೆ ಎಡಿಜಿಪಿ ಜಯರಾಮ್ ಅವರನ್ನು ‘ಕಾನೂನಿನ ಪ್ರಕಾರ’ ಬಂಧಿಸುವಂತೆ ನಿರ್ದೇಶಿಸಿದ್ದಾರೆ. ಅಧಿಕಾರಿ ಸೂಕ್ತ ವೇದಿಕೆಯ ಮುಂದೆ ಜಾಮೀನು ಪಡೆಯಲು ಸ್ವತಂತ್ರರು ಎಂದು ಹೇಳಿದ್ದಾರೆ.

ಅಸ್ಸಾಂ | 600 ಕ್ಕೂ ಹೆಚ್ಚು ಮನೆಗಳನ್ನು ಕೆಡವಲು ಪ್ರಾರಂಭಿಸಿದ ಬಿಜೆಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...