Homeಮುಖಪುಟಕಮಲ್ ಹಾಸನ್ ಪಕ್ಷದ ಉಪಾಧ್ಯಕ್ಷನಾಗಿ APJ ಅಬ್ದುಲ್ ಕಲಾಂ ಅವರ ಸಲಹೆಗಾರ!

ಕಮಲ್ ಹಾಸನ್ ಪಕ್ಷದ ಉಪಾಧ್ಯಕ್ಷನಾಗಿ APJ ಅಬ್ದುಲ್ ಕಲಾಂ ಅವರ ಸಲಹೆಗಾರ!

ಆಡಳಿತಾರೂಢ ಬಿಜೆಪಿ ಸರ್ಕಾರ ನೀಡಿದ ಅಡೆತಡೆಗಳಿಂದಾಗಿ ತಾವು ಪ್ರಾರಂಭಿಸಿದ ಅಬ್ದುಲ್ ಕಲಾಂ ವಿಷನ್ ಇಂಡಿಯಾ ಪಕ್ಷವನ್ನು ನೋಂದಾಯಿಸಲು ಸಹ ಸಾಧ್ಯವಾಗಲಿಲ್ಲ ಎಂದು ಪೊನ್ರಾಜ್ ಹೇಳಿದ್ದಾರೆ.

- Advertisement -
- Advertisement -

ಪಂಚರಾಜ್ಯಗಳ ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆ ಚುನಾವಣಾ ಕಣ ರಂಗೇರುತ್ತಿದೆ. ಅದರಲ್ಲೂ ಈ ಬಾರಿ ತಮಿಳುನಾಡು ವಿಧಾನಸಭಾ ಚುನಾವಣೆ ವಿಶೇಷವಾಗಿ ಗಮನ ಸೆಳೆದಿದೆ. ರಾಷ್ಟ್ರೀಯ ಪಕ್ಷಗಳ ಜೊತೆಗೆ ನಟ ಕಮಲ್ ಹಾಸನ್ ಅವರ ನೂತನ ಪಕ್ಷ ಮಕ್ಕಳ್ ನೀಧಿ ಮಯ್ಯಂ ಸಹ ಅದೃಷ್ಟ ಪರೀಕ್ಷೆಗೆ ಇಳಿದಿದೆ.

ಬುಧವಾರ (ಮಾರ್ಚ್ 3) ವಿ. ಪೊನ್ರಾಜ್ ಎಂಬುವವರು ಮಕ್ಕಳ್ ನೀಧಿ ಮಯ್ಯಂ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಅವರನ್ನು ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ವಿ. ಪೊನ್ರಾಜ್ ದಿವಂಗತ ಮಾಜಿ ರಾಷ್ಟ್ರಪತಿ ಎ.ಪಿ.ಜೆ ಅಬ್ದುಲ್ ಕಲಾಂ ಅವರಿಗೆ ವೈಜ್ಞಾನಿಕ ಸಲಹೆಗಾರರಾಗಿದ್ದವರು.

ಚೆನ್ನೈನ ಅಲ್ಪಾರ್‌ಪೇಟ್‌ನಲ್ಲಿ ನಡೆದ ಸಭೆಯಲ್ಲಿ ಪೊನ್ರಾಜ್ ಅವರನ್ನು ಪರಿಚಯಿಸಿದ ಪಕ್ಷದ ಅಧ್ಯಕ್ಷ, ನಟ ಕಮಲ್ ಹಾಸನ್ ಅವರು ಡಾ.ಆರ್.ಮಹೇಂದ್ರನ್ ಅವರೊಂದಿಗೆ ಪೊನ್ರಾಜ್ ಕೂಡ ಪಕ್ಷದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುವುದಾಗಿ ಘೋಷಿಸಿದ್ದಾರೆ.

ಇದನ್ನೂ ಓದಿ: ಮುರುಘಾ ಮಠದ ಅಧಿಕಾರಿಯ ಮೇಲೆ ಅತ್ಯಾಚಾರ ಆರೋಪ: ಪ್ರಕರಣ ಬಯಲಿಗೆಳೆದ ಪತ್ರಕರ್ತನ ವಿರುದ್ಧ ಎಫ್‌ಐಆರ್!

“ದೇಶಕ್ಕಾಗಿ ಅಬ್ದುಲ್ ಕಲಾಂ ಅವರ ದೃಷ್ಟಿಕೋನವನ್ನು ನಿಜವಾಗಿಸುವ ಯಾರೊಂದಿಗಾದರೂ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ. ಕಮಲ್ ಹಾಸನ್ ಅವರಿಂದ ಕರೆ ಬಂದಾಗ, ನಾನು ಪಕ್ಷಕ್ಕೆ ಸೇರಲು ನಿರ್ಧರಿಸಿದೆ. ಕಮಲ್ ಹಾಸನ್ ಅವರ ಸಮರ್ಥ ನಾಯಕತ್ವದಲ್ಲಿ ಅಬ್ದುಲ್ ಕಲಾಂ ಅವರ ಕನಸುಗಳನ್ನು ನನಸು ಮಾಡುವ  ವಿಶ್ವಾಸವಿದೆ ”ಎಂದು ಪೊನ್ರಾಜ್ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸರ್ಕಾರದ ವೈಫಲ್ಯಗಳ ಪ್ರಚಾರ: 100 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನಿಂದ ’ಜನಧ್ವನಿ’ ಜಾಥಾ

ರಾಜಕೀಯ ನೀತಿಗಳನ್ನು ರೂಪಿಸುವಲ್ಲಿ ನಟ ರಜನಿಕಾಂತ್ ಅವರೊಂದಿಗೆ ಒಂದೆರಡು ವರ್ಷಗಳಿಂದ ನಿಕಟವಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಪೊನ್ರಾಜ್ ಹೇಳಿದ್ದಾರೆ. ಆದರೆ ಅವರಿಗೆ ಆರೋಗ್ಯದ ತೊಂದರೆಗಳಿಂದಾಗಿ ಅವರ ಪಕ್ಷ ಘೋಷಣೆಯಾಗಲಿಲ್ಲ ಎಂದಿದ್ದಾರೆ.

ಆಡಳಿತಾರೂಢ ಬಿಜೆಪಿ ಸರ್ಕಾರವು ನೀಡಿದ ಅಡೆತಡೆಗಳಿಂದಾಗಿ ತಾನು ಪ್ರಾರಂಭಿಸಿದ ಅಬ್ದುಲ್ ಕಲಾಂ ವಿಷನ್ ಇಂಡಿಯಾ ಪಕ್ಷವನ್ನು ನೋಂದಾಯಿಸಲು ಸಹ ಸಾಧ್ಯವಾಗಲಿಲ್ಲ ಎಂದು ಪೊನ್ರಾಜ್ ಹೇಳಿದ್ದಾರೆ. ಎಲ್ಲಾ ಯುವಕರು ಮತ್ತು ಮಾಜಿ ರಾಷ್ಟ್ರಪತಿಗಳ ಹೆಸರಿನಲ್ಲಿ ಕಲ್ಯಾಣ ಕ್ಲಬ್‌ಗಳನ್ನು ನಡೆಸುತ್ತಿರುವವರು ತಮಿಳುನಾಡಿನ ಬದಲಾವಣೆಗಾಗಿ ಪಕ್ಷಕ್ಕೆ ಸೇರ್ಪಡೆಯಾಗಿ ಕೆಲಸ ಮಾಡಬೇಕೆಂದು ಪೊನ್ರಾಜ್ ಮನವಿ ಮಾಡಿದ್ದಾರೆ.

ತಮಿಳುನಾಡಿನಲ್ಲಿ ಈ ಬಾರಿ ಘಟಾನುಘಟಿಗಳು ಕಣಕ್ಕಿಳಿಯುವ ಸಾಧ್ಯತೆಗಳಿವೆ. ನಟಿ ಖುಷ್ಬೂ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಕೂಡ ಬಿಜೆಪಿಗೆ ಸೇರ್ಪಡೆಯಾಗಿದ್ದು, ಇತ್ತ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.  ನಟ ಕಮಲ್‌ ಹಾಸನ್, ರಜನಿಕಾಂತ್‌ ಮತ್ತು ಶರತ್ ಕುಮಾರ್‌ ಬೆಂಬಲ ಕೇಳಿದ್ದು, ಚುನಾವಣೆಗೆ ಬಣ್ಣದ ಲೋಕದ ಟಚ್ ನೀಡುತ್ತಿದ್ದಾರೆ.


ಇದನ್ನೂ ಓದಿ: ರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು – ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...