Homeಮುಖಪುಟಕಮಲ್ ಹಾಸನ್ ಪಕ್ಷದ ಉಪಾಧ್ಯಕ್ಷನಾಗಿ APJ ಅಬ್ದುಲ್ ಕಲಾಂ ಅವರ ಸಲಹೆಗಾರ!

ಕಮಲ್ ಹಾಸನ್ ಪಕ್ಷದ ಉಪಾಧ್ಯಕ್ಷನಾಗಿ APJ ಅಬ್ದುಲ್ ಕಲಾಂ ಅವರ ಸಲಹೆಗಾರ!

ಆಡಳಿತಾರೂಢ ಬಿಜೆಪಿ ಸರ್ಕಾರ ನೀಡಿದ ಅಡೆತಡೆಗಳಿಂದಾಗಿ ತಾವು ಪ್ರಾರಂಭಿಸಿದ ಅಬ್ದುಲ್ ಕಲಾಂ ವಿಷನ್ ಇಂಡಿಯಾ ಪಕ್ಷವನ್ನು ನೋಂದಾಯಿಸಲು ಸಹ ಸಾಧ್ಯವಾಗಲಿಲ್ಲ ಎಂದು ಪೊನ್ರಾಜ್ ಹೇಳಿದ್ದಾರೆ.

- Advertisement -
- Advertisement -

ಪಂಚರಾಜ್ಯಗಳ ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆ ಚುನಾವಣಾ ಕಣ ರಂಗೇರುತ್ತಿದೆ. ಅದರಲ್ಲೂ ಈ ಬಾರಿ ತಮಿಳುನಾಡು ವಿಧಾನಸಭಾ ಚುನಾವಣೆ ವಿಶೇಷವಾಗಿ ಗಮನ ಸೆಳೆದಿದೆ. ರಾಷ್ಟ್ರೀಯ ಪಕ್ಷಗಳ ಜೊತೆಗೆ ನಟ ಕಮಲ್ ಹಾಸನ್ ಅವರ ನೂತನ ಪಕ್ಷ ಮಕ್ಕಳ್ ನೀಧಿ ಮಯ್ಯಂ ಸಹ ಅದೃಷ್ಟ ಪರೀಕ್ಷೆಗೆ ಇಳಿದಿದೆ.

ಬುಧವಾರ (ಮಾರ್ಚ್ 3) ವಿ. ಪೊನ್ರಾಜ್ ಎಂಬುವವರು ಮಕ್ಕಳ್ ನೀಧಿ ಮಯ್ಯಂ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಅವರನ್ನು ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ವಿ. ಪೊನ್ರಾಜ್ ದಿವಂಗತ ಮಾಜಿ ರಾಷ್ಟ್ರಪತಿ ಎ.ಪಿ.ಜೆ ಅಬ್ದುಲ್ ಕಲಾಂ ಅವರಿಗೆ ವೈಜ್ಞಾನಿಕ ಸಲಹೆಗಾರರಾಗಿದ್ದವರು.

ಚೆನ್ನೈನ ಅಲ್ಪಾರ್‌ಪೇಟ್‌ನಲ್ಲಿ ನಡೆದ ಸಭೆಯಲ್ಲಿ ಪೊನ್ರಾಜ್ ಅವರನ್ನು ಪರಿಚಯಿಸಿದ ಪಕ್ಷದ ಅಧ್ಯಕ್ಷ, ನಟ ಕಮಲ್ ಹಾಸನ್ ಅವರು ಡಾ.ಆರ್.ಮಹೇಂದ್ರನ್ ಅವರೊಂದಿಗೆ ಪೊನ್ರಾಜ್ ಕೂಡ ಪಕ್ಷದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುವುದಾಗಿ ಘೋಷಿಸಿದ್ದಾರೆ.

ಇದನ್ನೂ ಓದಿ: ಮುರುಘಾ ಮಠದ ಅಧಿಕಾರಿಯ ಮೇಲೆ ಅತ್ಯಾಚಾರ ಆರೋಪ: ಪ್ರಕರಣ ಬಯಲಿಗೆಳೆದ ಪತ್ರಕರ್ತನ ವಿರುದ್ಧ ಎಫ್‌ಐಆರ್!

“ದೇಶಕ್ಕಾಗಿ ಅಬ್ದುಲ್ ಕಲಾಂ ಅವರ ದೃಷ್ಟಿಕೋನವನ್ನು ನಿಜವಾಗಿಸುವ ಯಾರೊಂದಿಗಾದರೂ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ. ಕಮಲ್ ಹಾಸನ್ ಅವರಿಂದ ಕರೆ ಬಂದಾಗ, ನಾನು ಪಕ್ಷಕ್ಕೆ ಸೇರಲು ನಿರ್ಧರಿಸಿದೆ. ಕಮಲ್ ಹಾಸನ್ ಅವರ ಸಮರ್ಥ ನಾಯಕತ್ವದಲ್ಲಿ ಅಬ್ದುಲ್ ಕಲಾಂ ಅವರ ಕನಸುಗಳನ್ನು ನನಸು ಮಾಡುವ  ವಿಶ್ವಾಸವಿದೆ ”ಎಂದು ಪೊನ್ರಾಜ್ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸರ್ಕಾರದ ವೈಫಲ್ಯಗಳ ಪ್ರಚಾರ: 100 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನಿಂದ ’ಜನಧ್ವನಿ’ ಜಾಥಾ

ರಾಜಕೀಯ ನೀತಿಗಳನ್ನು ರೂಪಿಸುವಲ್ಲಿ ನಟ ರಜನಿಕಾಂತ್ ಅವರೊಂದಿಗೆ ಒಂದೆರಡು ವರ್ಷಗಳಿಂದ ನಿಕಟವಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಪೊನ್ರಾಜ್ ಹೇಳಿದ್ದಾರೆ. ಆದರೆ ಅವರಿಗೆ ಆರೋಗ್ಯದ ತೊಂದರೆಗಳಿಂದಾಗಿ ಅವರ ಪಕ್ಷ ಘೋಷಣೆಯಾಗಲಿಲ್ಲ ಎಂದಿದ್ದಾರೆ.

ಆಡಳಿತಾರೂಢ ಬಿಜೆಪಿ ಸರ್ಕಾರವು ನೀಡಿದ ಅಡೆತಡೆಗಳಿಂದಾಗಿ ತಾನು ಪ್ರಾರಂಭಿಸಿದ ಅಬ್ದುಲ್ ಕಲಾಂ ವಿಷನ್ ಇಂಡಿಯಾ ಪಕ್ಷವನ್ನು ನೋಂದಾಯಿಸಲು ಸಹ ಸಾಧ್ಯವಾಗಲಿಲ್ಲ ಎಂದು ಪೊನ್ರಾಜ್ ಹೇಳಿದ್ದಾರೆ. ಎಲ್ಲಾ ಯುವಕರು ಮತ್ತು ಮಾಜಿ ರಾಷ್ಟ್ರಪತಿಗಳ ಹೆಸರಿನಲ್ಲಿ ಕಲ್ಯಾಣ ಕ್ಲಬ್‌ಗಳನ್ನು ನಡೆಸುತ್ತಿರುವವರು ತಮಿಳುನಾಡಿನ ಬದಲಾವಣೆಗಾಗಿ ಪಕ್ಷಕ್ಕೆ ಸೇರ್ಪಡೆಯಾಗಿ ಕೆಲಸ ಮಾಡಬೇಕೆಂದು ಪೊನ್ರಾಜ್ ಮನವಿ ಮಾಡಿದ್ದಾರೆ.

ತಮಿಳುನಾಡಿನಲ್ಲಿ ಈ ಬಾರಿ ಘಟಾನುಘಟಿಗಳು ಕಣಕ್ಕಿಳಿಯುವ ಸಾಧ್ಯತೆಗಳಿವೆ. ನಟಿ ಖುಷ್ಬೂ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಕೂಡ ಬಿಜೆಪಿಗೆ ಸೇರ್ಪಡೆಯಾಗಿದ್ದು, ಇತ್ತ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.  ನಟ ಕಮಲ್‌ ಹಾಸನ್, ರಜನಿಕಾಂತ್‌ ಮತ್ತು ಶರತ್ ಕುಮಾರ್‌ ಬೆಂಬಲ ಕೇಳಿದ್ದು, ಚುನಾವಣೆಗೆ ಬಣ್ಣದ ಲೋಕದ ಟಚ್ ನೀಡುತ್ತಿದ್ದಾರೆ.


ಇದನ್ನೂ ಓದಿ: ರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು – ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...