Homeಮುಖಪುಟಕಮಲ್ ಹಾಸನ್ ಪಕ್ಷದ ಉಪಾಧ್ಯಕ್ಷನಾಗಿ APJ ಅಬ್ದುಲ್ ಕಲಾಂ ಅವರ ಸಲಹೆಗಾರ!

ಕಮಲ್ ಹಾಸನ್ ಪಕ್ಷದ ಉಪಾಧ್ಯಕ್ಷನಾಗಿ APJ ಅಬ್ದುಲ್ ಕಲಾಂ ಅವರ ಸಲಹೆಗಾರ!

ಆಡಳಿತಾರೂಢ ಬಿಜೆಪಿ ಸರ್ಕಾರ ನೀಡಿದ ಅಡೆತಡೆಗಳಿಂದಾಗಿ ತಾವು ಪ್ರಾರಂಭಿಸಿದ ಅಬ್ದುಲ್ ಕಲಾಂ ವಿಷನ್ ಇಂಡಿಯಾ ಪಕ್ಷವನ್ನು ನೋಂದಾಯಿಸಲು ಸಹ ಸಾಧ್ಯವಾಗಲಿಲ್ಲ ಎಂದು ಪೊನ್ರಾಜ್ ಹೇಳಿದ್ದಾರೆ.

- Advertisement -
- Advertisement -

ಪಂಚರಾಜ್ಯಗಳ ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆ ಚುನಾವಣಾ ಕಣ ರಂಗೇರುತ್ತಿದೆ. ಅದರಲ್ಲೂ ಈ ಬಾರಿ ತಮಿಳುನಾಡು ವಿಧಾನಸಭಾ ಚುನಾವಣೆ ವಿಶೇಷವಾಗಿ ಗಮನ ಸೆಳೆದಿದೆ. ರಾಷ್ಟ್ರೀಯ ಪಕ್ಷಗಳ ಜೊತೆಗೆ ನಟ ಕಮಲ್ ಹಾಸನ್ ಅವರ ನೂತನ ಪಕ್ಷ ಮಕ್ಕಳ್ ನೀಧಿ ಮಯ್ಯಂ ಸಹ ಅದೃಷ್ಟ ಪರೀಕ್ಷೆಗೆ ಇಳಿದಿದೆ.

ಬುಧವಾರ (ಮಾರ್ಚ್ 3) ವಿ. ಪೊನ್ರಾಜ್ ಎಂಬುವವರು ಮಕ್ಕಳ್ ನೀಧಿ ಮಯ್ಯಂ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಅವರನ್ನು ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ವಿ. ಪೊನ್ರಾಜ್ ದಿವಂಗತ ಮಾಜಿ ರಾಷ್ಟ್ರಪತಿ ಎ.ಪಿ.ಜೆ ಅಬ್ದುಲ್ ಕಲಾಂ ಅವರಿಗೆ ವೈಜ್ಞಾನಿಕ ಸಲಹೆಗಾರರಾಗಿದ್ದವರು.

ಚೆನ್ನೈನ ಅಲ್ಪಾರ್‌ಪೇಟ್‌ನಲ್ಲಿ ನಡೆದ ಸಭೆಯಲ್ಲಿ ಪೊನ್ರಾಜ್ ಅವರನ್ನು ಪರಿಚಯಿಸಿದ ಪಕ್ಷದ ಅಧ್ಯಕ್ಷ, ನಟ ಕಮಲ್ ಹಾಸನ್ ಅವರು ಡಾ.ಆರ್.ಮಹೇಂದ್ರನ್ ಅವರೊಂದಿಗೆ ಪೊನ್ರಾಜ್ ಕೂಡ ಪಕ್ಷದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುವುದಾಗಿ ಘೋಷಿಸಿದ್ದಾರೆ.

ಇದನ್ನೂ ಓದಿ: ಮುರುಘಾ ಮಠದ ಅಧಿಕಾರಿಯ ಮೇಲೆ ಅತ್ಯಾಚಾರ ಆರೋಪ: ಪ್ರಕರಣ ಬಯಲಿಗೆಳೆದ ಪತ್ರಕರ್ತನ ವಿರುದ್ಧ ಎಫ್‌ಐಆರ್!

“ದೇಶಕ್ಕಾಗಿ ಅಬ್ದುಲ್ ಕಲಾಂ ಅವರ ದೃಷ್ಟಿಕೋನವನ್ನು ನಿಜವಾಗಿಸುವ ಯಾರೊಂದಿಗಾದರೂ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ. ಕಮಲ್ ಹಾಸನ್ ಅವರಿಂದ ಕರೆ ಬಂದಾಗ, ನಾನು ಪಕ್ಷಕ್ಕೆ ಸೇರಲು ನಿರ್ಧರಿಸಿದೆ. ಕಮಲ್ ಹಾಸನ್ ಅವರ ಸಮರ್ಥ ನಾಯಕತ್ವದಲ್ಲಿ ಅಬ್ದುಲ್ ಕಲಾಂ ಅವರ ಕನಸುಗಳನ್ನು ನನಸು ಮಾಡುವ  ವಿಶ್ವಾಸವಿದೆ ”ಎಂದು ಪೊನ್ರಾಜ್ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸರ್ಕಾರದ ವೈಫಲ್ಯಗಳ ಪ್ರಚಾರ: 100 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನಿಂದ ’ಜನಧ್ವನಿ’ ಜಾಥಾ

ರಾಜಕೀಯ ನೀತಿಗಳನ್ನು ರೂಪಿಸುವಲ್ಲಿ ನಟ ರಜನಿಕಾಂತ್ ಅವರೊಂದಿಗೆ ಒಂದೆರಡು ವರ್ಷಗಳಿಂದ ನಿಕಟವಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಪೊನ್ರಾಜ್ ಹೇಳಿದ್ದಾರೆ. ಆದರೆ ಅವರಿಗೆ ಆರೋಗ್ಯದ ತೊಂದರೆಗಳಿಂದಾಗಿ ಅವರ ಪಕ್ಷ ಘೋಷಣೆಯಾಗಲಿಲ್ಲ ಎಂದಿದ್ದಾರೆ.

ಆಡಳಿತಾರೂಢ ಬಿಜೆಪಿ ಸರ್ಕಾರವು ನೀಡಿದ ಅಡೆತಡೆಗಳಿಂದಾಗಿ ತಾನು ಪ್ರಾರಂಭಿಸಿದ ಅಬ್ದುಲ್ ಕಲಾಂ ವಿಷನ್ ಇಂಡಿಯಾ ಪಕ್ಷವನ್ನು ನೋಂದಾಯಿಸಲು ಸಹ ಸಾಧ್ಯವಾಗಲಿಲ್ಲ ಎಂದು ಪೊನ್ರಾಜ್ ಹೇಳಿದ್ದಾರೆ. ಎಲ್ಲಾ ಯುವಕರು ಮತ್ತು ಮಾಜಿ ರಾಷ್ಟ್ರಪತಿಗಳ ಹೆಸರಿನಲ್ಲಿ ಕಲ್ಯಾಣ ಕ್ಲಬ್‌ಗಳನ್ನು ನಡೆಸುತ್ತಿರುವವರು ತಮಿಳುನಾಡಿನ ಬದಲಾವಣೆಗಾಗಿ ಪಕ್ಷಕ್ಕೆ ಸೇರ್ಪಡೆಯಾಗಿ ಕೆಲಸ ಮಾಡಬೇಕೆಂದು ಪೊನ್ರಾಜ್ ಮನವಿ ಮಾಡಿದ್ದಾರೆ.

ತಮಿಳುನಾಡಿನಲ್ಲಿ ಈ ಬಾರಿ ಘಟಾನುಘಟಿಗಳು ಕಣಕ್ಕಿಳಿಯುವ ಸಾಧ್ಯತೆಗಳಿವೆ. ನಟಿ ಖುಷ್ಬೂ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಕೂಡ ಬಿಜೆಪಿಗೆ ಸೇರ್ಪಡೆಯಾಗಿದ್ದು, ಇತ್ತ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.  ನಟ ಕಮಲ್‌ ಹಾಸನ್, ರಜನಿಕಾಂತ್‌ ಮತ್ತು ಶರತ್ ಕುಮಾರ್‌ ಬೆಂಬಲ ಕೇಳಿದ್ದು, ಚುನಾವಣೆಗೆ ಬಣ್ಣದ ಲೋಕದ ಟಚ್ ನೀಡುತ್ತಿದ್ದಾರೆ.


ಇದನ್ನೂ ಓದಿ: ರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು – ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...