ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. “ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ನಡೆಯುತ್ತಿರುವ ಚಳವಳಿಯನ್ನು ನಿಧಾನಗೊಳಿಸುವುದಿಲ್ಲ” ಎಂದು ಅವರಿ ಪ್ರತಿಜ್ಞೆ ಯುಜನತೆಗೆ ಭರವಸೆ ನೀಡಿದ್ದಾರೆ.
ತಮಗೆ ಟೈಫಾಯ್ಡ್ ಆಗಿರುವ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಹಂಚಿಕೊಂಡಿರು ಅಭಿಜೀತ್, ಕಳೆದ “ಕೆಲವು ದಿನಗಳಿಂದ ನಾನು ಅಸ್ವಸ್ಥನಾಗಿದ್ದೇನೆ, ಪ್ರಸ್ತುತ ಚಿಕಿತ್ಸೆ ಪಡೆಯುತ್ತಿರುವೆ” ಎಂದು ಹೇಳಿದ್ದಾರೆ.
ನನ್ನ ಅನಾರೋಗ್ಯದ ಹೊರತಾಗಿಯೂ, ದೇಶಾದ್ಯಂತ ಪ್ರತಿಭಟನೆಗಳನ್ನು ಜೀವಂತವಾಗಿಟ್ಟಿದ್ದಕ್ಕಾಗಿ ಅವರು ಸಿಜೆಪಿ ಬೆಂಬಲಿಗರಿಗೆ ಧನ್ಯವಾದ ಅರ್ಪಿಸಿದರು. “ಚಳುವಳಿ ತನ್ನ ಉದ್ದೇಶವನ್ನು ಸಾಧಿಸುತ್ತದೆ” ಎಂದು ಹೇಳಿದರು.
“ನಿಮಗೆ ತಿಳಿದಿರುವಂತೆ, ಕಳೆದ ಕೆಲವು ದಿನಗಳಿಂದ ನಾನು ಅಸ್ವಸ್ಥನಾಗಿದ್ದೇನೆ. ವೈದ್ಯಕೀಯ ವರದಿಗಳು ಹೊರಬಂದಿವೆ, ನನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ. ಚಿಕಿತ್ಸೆ ಪಡೆಯುತ್ತಿದ್ದೇನೆ, ಇಂಟ್ರಾವೆನಸ್ ಔಷಧಿಗಳನ್ನು ಪಡೆಯುತ್ತಿದ್ದೇನೆ” ಎಂದು ದೀಪ್ಕೆ ಹೇಳಿದರು.
“ಚಿಕಿತ್ಸೆ ನಡೆಯುತ್ತಿದೆ, ಪ್ರತಿದಿನ ನಾನು ಗ್ಲೂಕೋಸ್ ಪಡೆಯುತಿದ್ದೇನೆ. ಆದರೆ ದೇಶಾದ್ಯಂತ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ಎಲ್ಲಾ ಜಿರಳೆಗಳಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ” ಎಂದು ಅವರು ಹೇಳಿದರು.
ಚಳುವಳಿಯನ್ನು ವಿಸ್ತರಿಸಿದ್ದಕ್ಕಾಗಿ ಬೆಂಬಲಿಗರನ್ನು ಅಭಿನಂದಿಸಿದ ಅವರು, ನಿರಂತರ ಶಾಂತಿಯುತ ಪ್ರತಿಭಟನೆಗಳು ತಮ್ಮ ಪ್ರಮುಖ ಬೇಡಿಕೆಯಾದ ಕೇಂದ್ರ ಸಚಿವ ಪ್ರಧಾನ್ ಅವರ ರಾಜೀನಾಮೆಯನ್ನು ಸಾಧಿಸಲು ಸಹಾಯ ಮಾಡುತ್ತದೆ ಎಂದು ದೀಪ್ಕೆ ಹೇಳಿದರು.
“ಈ ಚಳುವಳಿಯನ್ನು ಇಷ್ಟು ದೊಡ್ಡ ಯಶಸ್ಸನ್ನು ಸಾಧಿಸಿದ್ದಕ್ಕಾಗಿ ನಿಮ್ಮೆಲ್ಲರಿಗೂ ಅಭಿನಂದನೆಗಳು. ನಾವು ಹೀಗೆಯೇ ಪ್ರತಿಭಟನೆ ಮುಂದುವರಿಸಿದರೆ, ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಪಡೆಯುತ್ತೇವೆ ಎಂದು ನನಗೆ ಖಚಿತವಾಗಿದೆ” ಎಂದು ಅವರು ಹೇಳಿದರು.
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳ ಆರೋಪದ ಮೇಲೆ ಪ್ರಾರಂಭಿಸಲಾದ ಸಿಜೆಪಿ ನೇತೃತ್ವದ ಆಂದೋಲನವು ಪರೀಕ್ಷಾ ವ್ಯವಸ್ಥೆಯಲ್ಲಿ ಹೊಣೆಗಾರಿಕೆ, ನೇಮಕಾತಿ ಮತ್ತು ಪ್ರವೇಶ ಪರೀಕ್ಷೆಗಳಲ್ಲಿ ಸುಧಾರಣೆಗಳು ಮತ್ತು ಪ್ರಧಾನ್ ಅವರ ರಾಜೀನಾಮೆಯನ್ನು ಒತ್ತಾಯಿಸುತ್ತಿದೆ.
ಜೂನ್ 28 ರಂದು ಆಂದೋಲನದಲ್ಲಿ ಸೇರಿಕೊಂಡು 26 ದಿನಗಳ ಉಪವಾಸ ಸತ್ಯಾಗ್ರಹ ನಡೆಸಿದ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಸೇರಿದಂತೆ ಹಲವಾರು ಸಾರ್ವಜನಿಕ ವ್ಯಕ್ತಿಗಳಿಂದ ಪ್ರತಿಭಟನೆಗೆ ಬೆಂಬಲ ದೊರೆಯಿತು.
ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ಯಾವುದೇ ಪ್ರಕರಣಗಳನ್ನು ದಾಖಲಿಸಲಾಗುವುದಿಲ್ಲ, ಸಂಸತ್ತು ಪರೀಕ್ಷಾ ಸುಧಾರಣೆಗಳು ಮತ್ತು ಹೊಣೆಗಾರಿಕೆಯನ್ನು ಚರ್ಚಿಸಲಿದೆ. ನೀಟ್ ಪತ್ರಿಕೆ ಸೋರಿಕೆಯ ನಂತರ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರವನ್ನು ಸಕಾರಾತ್ಮಕವಾಗಿ ಪರಿಗಣಿಸಲಾಗುವುದು ಎಂದು ಕೇಂದ್ರವು ಲಿಖಿತ ಭರವಸೆ ನೀಡಿದ ನಂತರ ವಾಂಗ್ಚುಕ್ ಈ ವಾರದ ಆರಂಭದಲ್ಲಿ ತಮ್ಮ ಉಪವಾಸವನ್ನು ಕೊನೆಗೊಳಿಸಿದರು.
ವಾಂಗ್ಚುಕ್ ಉಪವಾಸ ಅಂತ್ಯಗೊಳಿಸಿದ್ದರೂ, ಪ್ರಧಾನ್ ತಮ್ಮ ಸ್ಥಾನದಿಂದ ಕೆಳಗಿಳಿಯುವವರೆಗೂ ಜಂತರ್ ಮಂತರ್ನಲ್ಲಿ ಪ್ರತಿಭಟನೆ ಮುಂದುವರಿಯಲಿದೆ ಎಂದು ಸಿಜೆಪಿ ಹೇಳಿದೆ.


