Homeಮುಖಪುಟ‘ಅಭಿಜಿತ್ ಬ್ಯಾನರ್ಜಿ ಬಗ್ಗೆ ಇಡೀ ದೇಶವೇ ಹೆಮ್ಮೆ ಪಡುತ್ತಿದೆ’ : ರಾಹುಲ್ ಗಾಂಧಿ

‘ಅಭಿಜಿತ್ ಬ್ಯಾನರ್ಜಿ ಬಗ್ಗೆ ಇಡೀ ದೇಶವೇ ಹೆಮ್ಮೆ ಪಡುತ್ತಿದೆ’ : ರಾಹುಲ್ ಗಾಂಧಿ

- Advertisement -
- Advertisement -

ಅರ್ಥಶಾಸ್ತ್ರ ವಿಷಯದಲ್ಲಿ ನೊಬೆಲ್ ಪ್ರಶಸ್ತಿ ಪಡೆದು ಭಾರತದ ಕೀರ್ತಿಯನ್ನು ಉತ್ತುಂಗಕ್ಕೇರಿಸಿದ ಅಭಿಜಿತ್ ಬ್ಯಾನರ್ಜಿ ಬಗ್ಗೆ ಬಿಜೆಪಿ ಸಚಿವ ಪೀಯೂಷ್ ಗೋಯಲ್ ನೀಡಿದ್ದ ಹೇಳಿಕೆಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿ, ಇಡೀ ದೇಶವೇ ಅಭಿಜಿತ್ ಬ್ಯಾನರ್ಜಿ ಅವರ ಕಾರ್ಯವನ್ನು ಮೆಚ್ಚಿಕೊಂಡಿದ್ದು, ಲಕ್ಷಾಂತರ ಭಾರತೀಯರು ಅಭಿಜಿತ್ ಅವರ ಬಗ್ಗೆ ಹೆಮ್ಮೆ ಪಡುತ್ತಿದ್ದಾರೆ. ಇದನ್ನು ಅರ್ಥಮಾಡಿಕೊಳ್ಳಿ ಎಂದು ತಿವಿದಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಕೇಂದ್ರ ಸಚಿವ ಪೀಯೂಷ್ ಗೋಯಲ್, ನೊಬೆಲ್ ಪ್ರಶಸ್ತಿ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ ಎಡಪಂಥೀಯ ಚಿಂತನೆಯುಳ್ಳವರು. ಆದರೂ ಅವರು ಭಾರತೀಯರಾಗಿದ್ದು, ನೊಬೆಲ್ ಪ್ರಶಸ್ತಿಗೆ ಭಾಜನರಾಗಿದ್ದು, ಹೆಮ್ಮೆಯ ವಿಷಯ ಎಂದು ಹೇಳುವ ಮೂಲಕ ಸಂಕುಚಿತ ಪ್ರವೃತ್ತಿಯನ್ನು ಹೊರಹಾಕಿದ್ದರು. ಗೋಯಲ್ ಅವರ ವಿಚಾರಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ದೇಶದ ಜನತೆ ಪಕ್ಷ ಭೇದ ಮರೆತು, ಗೋಯಲ್ ಅವರ ಹೇಳಿಕೆಯನ್ನು ಬಲವಾಗಿ ಖಂಡಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹ ಟ್ವೀಟ್ ಮಾಡಿ, ಗೋಯಲ್ ಅವರ ಹೇಳಿಕೆ ಮತ್ತು ಬಿಜೆಪಿಯ ಸಂಕುಚಿತ ಮನಸ್ಥಿತಿಯನ್ನು ಖಂಡಿಸಿದ್ದಾರೆ.

ದೇಶದಲ್ಲಿ ಬಡತನ ಹೋಗಲಾಡಿಸಿ, ಭಾರತದ ಆರ್ಥಿಕತೆಗೆ ಪುಷ್ಠಿ ನೀಡಲು ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಅಳವಡಿಸಿದ್ದ ನ್ಯಾಯ್ ಯೋಜನೆಯನ್ನು ರೂಪಿಸಿದ್ದು, ಅಭಿಜಿತ್ ಬ್ಯಾನರ್ಜಿ  ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಆರ್ಥಿಕ ತಜ್ಞ ಅಭಿಜಿತ್ ಬ್ಯಾನರ್ಜಿ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.

‘ಲಕ್ಷಾಂತರ ಭಾರತೀಯರು ನಿಮ್ಮ ಕೆಲಸದ ಬಗ್ಗೆ ಹೆಮ್ಮೆ ಪಡುತ್ತಾರೆ ಎಂಬುದನ್ನು ಖಚಿತಪಡಿಸಿಕೊಳ್ಳಿ. ನೀವು ದಶಕದಿಂದ ಪ್ರಯತ್ನಿಸಿದ ಕಾರ್ಯವನ್ನು ವೃತ್ತಿಪರರು, ಧರ್ಮಾಂಧರಿಗೆ ವಿವರಿಸಲು ಸಾಧ್ಯವಿಲ್ಲ. ದ್ವೇಷದಿಂದ  ಅವರೆಲ್ಲರೂ ಕುರುಡಾಗಿದ್ದಾರೆ’ ಎಂದು ಟ್ವೀಟ್ ಮಾಡಿದ್ದಾರೆ.

ಇನ್ನೂ ಸುದ್ದಿವಾಹಿನಿಯೊಂದರ ಜತೆ ಮಾತನಾಡಿದ ಆರ್ಥಿಕ ತಜ್ಞ ಅಭಿಜಿತ್ ಬ್ಯಾನರ್ಜಿ, ‘ನಾನು ವೃತ್ತಿಪರನಾಗಿದ್ದು, ಎಲ್ಲರೊಂದಿಗೂ ವೃತ್ತಿಪರನಾಗಿರಲು ಬಯಸುತ್ತೇನೆ. ಕಾಂಗ್ರೆಸ್ ಪಕ್ಷದಂತೆ, ಬಿಜೆಪಿ ಸರ್ಕಾರವು ನಿರ್ದಿಷ್ಟ ಆದಾಯ ಹೆಚ್ಚಿಸುವ ಬಗ್ಗೆ ಕೇಳಿದ್ದರೆ, ನಾನು ಸತ್ಯವನ್ನು ಹೇಳುತ್ತಿರಲಿಲ್ಲವೇ.. ಎಂದು ಪ್ರಶ್ನಿಸಿದ್ದಾರೆ. ಆರ್ಥಿಕ ಚಿಂತನೆಯಲ್ಲಿ ಯಾವುದೇ ಪಕ್ಷಪಾತ ಮಾಡುವುದಿಲ್ಲ. ಪ್ರಧಾನಿ ಮೋದಿ ಅವರು ಗುಜರಾತ್ ಸಿಎಂ ಆಗಿದ್ದಾಗ, ಮಾಲಿನ್ಯ ಮಂಡಳಿಯಲ್ಲಿ ಕೆಲಸ ಮಾಡಿದ್ದನ್ನು ಬ್ಯಾನರ್ಜಿ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಮಾಲೋಚನಾ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಆಘಾತಕಾರಿ ಜಾತಿ ನಿಂದನೆ-ವರದಿ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಸಮುದಾಯ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...