Homeಅಂತರಾಷ್ಟ್ರೀಯಅಭಿಜಿತ್ ಬ್ಯಾನರ್ಜಿ, ಎಸ್ತರ್ ಡುಫ್ಲೋ ಮತ್ತು ಮೈಕೆಲ್ ಕ್ರೆಮ್ಮರ್ ಅವರಿಗೆ ನೊಬೆಲ್ ಪ್ರಶಸ್ತಿ ಪ್ರಧಾನ

ಅಭಿಜಿತ್ ಬ್ಯಾನರ್ಜಿ, ಎಸ್ತರ್ ಡುಫ್ಲೋ ಮತ್ತು ಮೈಕೆಲ್ ಕ್ರೆಮ್ಮರ್ ಅವರಿಗೆ ನೊಬೆಲ್ ಪ್ರಶಸ್ತಿ ಪ್ರಧಾನ

ಜಾಗತಿಕ ಬಡತನವನ್ನು ಹೋಗಲಾಡಿಸುವ ಪ್ರಾಯೋಗಿಕ ವಿಧಾನಕ್ಕಾಗಿ ಈ ಮೂವರಿಗೆ 2019ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ ನೀಡಲಾಯಿತು.

- Advertisement -
- Advertisement -

ಸ್ಟಾಕ್‌ಹೊಮ್‌ನ ಓಸ್ಲೋದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಭಾರತೀಯ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ, ಅವರ ಪತ್ನಿ ಎಸ್ತರ್ ಡುಫ್ಲೋ ಮತ್ತು ಸಹ ಅರ್ಥಶಾಸ್ತ್ರಜ್ಞ ಮೈಕೆಲ್ ಕ್ರೆಮ್ಮರ್ ಅವರಿಗೆ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಜಾಗತಿಕ ಬಡತನವನ್ನು ಹೋಗಲಾಡಿಸುವ ಪ್ರಾಯೋಗಿಕ ವಿಧಾನಕ್ಕಾಗಿ ಈ ಮೂವರಿಗೆ 2019ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ ನೀಡಲಾಯಿತು.

ಬ್ಯಾನರ್ಜಿ ಧೋತಿ ಮತ್ತು ಬಂದಗಲಾ ಜಾಕೆಟ್ (ಸಾಂಪ್ರದಾಯಿಕ ಭಾರತೀಯ ಉಡುಪು) ಧರಿಸಿದ್ದರೆ, ಪತ್ನಿ ಡುಫ್ಲೋ ಈ ಸಂದರ್ಭಕ್ಕಾಗಿ ನೀಲಿ ಸೀರೆಯನ್ನು ಆರಿಸಿಕೊಂಡರು. ಕ್ರೆಮ್ಮರ್ ಅವರು ಸೂಟ್‌ ಧರಿಸಿ ಮೂವರು ಗಮನ ಸೆಳೆದರು.

ಅಮರ್ತ್ಯ ಸೇನ್ ನಂತರ ಅರ್ಥಶಾಸ್ತ್ರಕ್ಕೆ ನೊಬೆಲ್ ಪ್ರಶಸ್ತಿ ಪಡೆದ ಎರಡನೇ ಭಾರತೀಯ ಅಭಿಜಿತ್‌ ಬ್ಯಾನರ್ಜಿ. ಫೆಬ್ರವರಿ 21, 1961 ರಂದು ಜನಿಸಿದ ಬ್ಯಾನರ್ಜಿ ಅವರು ಕೋಲ್ಕತ್ತಾದ ಪ್ರೆಸಿಡೆನ್ಸಿ ಕಾಲೇಜು ಮತ್ತು ನವದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪಡೆದರು, ಅಲ್ಲಿಂದ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಅವರು 1988 ರಲ್ಲಿ ಹಾರ್ವರ್ಡ್‌ನಲ್ಲಿ ಡಾಕ್ಟರೇಟ್ ಅಧ್ಯಯನವನ್ನು ಪೂರ್ಣಗೊಳಿಸಿದರು.

ಈ ಡಾಕ್ಟರೇಟ್ ಪ್ರಬಂಧವಾದ ಟೈಲ್ ಎಸ್ಸೇಸ್ ಇನ್ ಇನ್ಫರ್ಮೇಷನ್ ಎಕನಾಮಿಕ್ಸ್ ಮತ್ತು ಆರ್ಥಿಕ ಅಭಿವೃದ್ಧಿ, ಮಾಹಿತಿ ಸಿದ್ಧಾಂತ, ಆದಾಯ ವಿತರಣಾ ಸಿದ್ಧಾಂತ ಮತ್ತು ಸ್ಥೂಲ ಅರ್ಥಶಾಸ್ತ್ರ ಇವು ಅವರ ಆಸಕ್ತಿಯ ಕ್ಷೇತ್ರಗಳಾಗಿವೆ.

ಮ್ಯಾಸಚೂಸೆಟ್ಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ) ಗೆ ತೆರಳುವ ಮೊದಲು ಬ್ಯಾನರ್ಜಿ ಹಾರ್ವರ್ಡ್ ಮತ್ತು ಪ್ರಿನ್ಸ್‌ಟನ್‌ನಲ್ಲಿ ಬೋಧಿಸಿದರು. ಅವರು ಪ್ರಸ್ತುತ ಎಂಐಟಿಯಲ್ಲಿ ಫೋರ್ಡ್ ಫೌಂಡೇಶನ್ ಇಂಟರ್ನ್ಯಾಷನಲ್ ಎಕನಾಮಿಕ್ಸ್ ಪ್ರೊಫೆಸರ್ ಆಗಿದ್ದಾರೆ.

ಅವರು ಹಲವಾರು ಲೇಖನಗಳು ಸೇರಿದಂತೆ ಪೂರ್‌ ಎಕನಾಮಿಕ್ಸ್‌ ಪುಸ್ತಕ ಬರೆದಿದ್ದು, ಇದು ವರ್ಷದ ಗೋಲ್ಡ್ಮನ್ ಸ್ಯಾಚ್ಸ್ ಬಿಸಿನೆಸ್ ಬುಕ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಅವರು ಇನ್ನೂ ಮೂರು ಪುಸ್ತಕಗಳ ಸಂಪಾದಕರಾಗಿದ್ದಾರೆ ಮತ್ತು ಎರಡು ಸಾಕ್ಷ್ಯಚಿತ್ರಗಳನ್ನು ನಿರ್ದೇಶಿಸಿದ್ದಾರೆ.

ಅವರು 2015 ರ ನಂತರದ ಅಭಿವೃದ್ಧಿ ಕಾರ್ಯಸೂಚಿಯಲ್ಲಿ ಯುಎನ್ ಸೆಕ್ರೆಟರಿ ಜನರಲ್ ಅವರ ಉನ್ನತ ಮಟ್ಟದ ವ್ಯಕ್ತಿಗಳ ಸಮಿತಿಯಲ್ಲೂ ಸೇವೆ ಸಲ್ಲಿಸಿದರು. ಅಭಿಜಿತ್ ಬ್ಯಾನರ್ಜಿ ಎಸ್ತರ್ ಡುಫ್ಲೋ ಅವರನ್ನು ವಿವಾಹವಾದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...