Homeಅಂತರಾಷ್ಟ್ರೀಯಅಭಿಜಿತ್ ಬ್ಯಾನರ್ಜಿ, ಎಸ್ತರ್ ಡುಫ್ಲೋ ಮತ್ತು ಮೈಕೆಲ್ ಕ್ರೆಮ್ಮರ್ ಅವರಿಗೆ ನೊಬೆಲ್ ಪ್ರಶಸ್ತಿ ಪ್ರಧಾನ

ಅಭಿಜಿತ್ ಬ್ಯಾನರ್ಜಿ, ಎಸ್ತರ್ ಡುಫ್ಲೋ ಮತ್ತು ಮೈಕೆಲ್ ಕ್ರೆಮ್ಮರ್ ಅವರಿಗೆ ನೊಬೆಲ್ ಪ್ರಶಸ್ತಿ ಪ್ರಧಾನ

ಜಾಗತಿಕ ಬಡತನವನ್ನು ಹೋಗಲಾಡಿಸುವ ಪ್ರಾಯೋಗಿಕ ವಿಧಾನಕ್ಕಾಗಿ ಈ ಮೂವರಿಗೆ 2019ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ ನೀಡಲಾಯಿತು.

- Advertisement -
- Advertisement -

ಸ್ಟಾಕ್‌ಹೊಮ್‌ನ ಓಸ್ಲೋದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಭಾರತೀಯ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ, ಅವರ ಪತ್ನಿ ಎಸ್ತರ್ ಡುಫ್ಲೋ ಮತ್ತು ಸಹ ಅರ್ಥಶಾಸ್ತ್ರಜ್ಞ ಮೈಕೆಲ್ ಕ್ರೆಮ್ಮರ್ ಅವರಿಗೆ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಜಾಗತಿಕ ಬಡತನವನ್ನು ಹೋಗಲಾಡಿಸುವ ಪ್ರಾಯೋಗಿಕ ವಿಧಾನಕ್ಕಾಗಿ ಈ ಮೂವರಿಗೆ 2019ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ ನೀಡಲಾಯಿತು.

ಬ್ಯಾನರ್ಜಿ ಧೋತಿ ಮತ್ತು ಬಂದಗಲಾ ಜಾಕೆಟ್ (ಸಾಂಪ್ರದಾಯಿಕ ಭಾರತೀಯ ಉಡುಪು) ಧರಿಸಿದ್ದರೆ, ಪತ್ನಿ ಡುಫ್ಲೋ ಈ ಸಂದರ್ಭಕ್ಕಾಗಿ ನೀಲಿ ಸೀರೆಯನ್ನು ಆರಿಸಿಕೊಂಡರು. ಕ್ರೆಮ್ಮರ್ ಅವರು ಸೂಟ್‌ ಧರಿಸಿ ಮೂವರು ಗಮನ ಸೆಳೆದರು.

ಅಮರ್ತ್ಯ ಸೇನ್ ನಂತರ ಅರ್ಥಶಾಸ್ತ್ರಕ್ಕೆ ನೊಬೆಲ್ ಪ್ರಶಸ್ತಿ ಪಡೆದ ಎರಡನೇ ಭಾರತೀಯ ಅಭಿಜಿತ್‌ ಬ್ಯಾನರ್ಜಿ. ಫೆಬ್ರವರಿ 21, 1961 ರಂದು ಜನಿಸಿದ ಬ್ಯಾನರ್ಜಿ ಅವರು ಕೋಲ್ಕತ್ತಾದ ಪ್ರೆಸಿಡೆನ್ಸಿ ಕಾಲೇಜು ಮತ್ತು ನವದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪಡೆದರು, ಅಲ್ಲಿಂದ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಅವರು 1988 ರಲ್ಲಿ ಹಾರ್ವರ್ಡ್‌ನಲ್ಲಿ ಡಾಕ್ಟರೇಟ್ ಅಧ್ಯಯನವನ್ನು ಪೂರ್ಣಗೊಳಿಸಿದರು.

ಈ ಡಾಕ್ಟರೇಟ್ ಪ್ರಬಂಧವಾದ ಟೈಲ್ ಎಸ್ಸೇಸ್ ಇನ್ ಇನ್ಫರ್ಮೇಷನ್ ಎಕನಾಮಿಕ್ಸ್ ಮತ್ತು ಆರ್ಥಿಕ ಅಭಿವೃದ್ಧಿ, ಮಾಹಿತಿ ಸಿದ್ಧಾಂತ, ಆದಾಯ ವಿತರಣಾ ಸಿದ್ಧಾಂತ ಮತ್ತು ಸ್ಥೂಲ ಅರ್ಥಶಾಸ್ತ್ರ ಇವು ಅವರ ಆಸಕ್ತಿಯ ಕ್ಷೇತ್ರಗಳಾಗಿವೆ.

ಮ್ಯಾಸಚೂಸೆಟ್ಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ) ಗೆ ತೆರಳುವ ಮೊದಲು ಬ್ಯಾನರ್ಜಿ ಹಾರ್ವರ್ಡ್ ಮತ್ತು ಪ್ರಿನ್ಸ್‌ಟನ್‌ನಲ್ಲಿ ಬೋಧಿಸಿದರು. ಅವರು ಪ್ರಸ್ತುತ ಎಂಐಟಿಯಲ್ಲಿ ಫೋರ್ಡ್ ಫೌಂಡೇಶನ್ ಇಂಟರ್ನ್ಯಾಷನಲ್ ಎಕನಾಮಿಕ್ಸ್ ಪ್ರೊಫೆಸರ್ ಆಗಿದ್ದಾರೆ.

ಅವರು ಹಲವಾರು ಲೇಖನಗಳು ಸೇರಿದಂತೆ ಪೂರ್‌ ಎಕನಾಮಿಕ್ಸ್‌ ಪುಸ್ತಕ ಬರೆದಿದ್ದು, ಇದು ವರ್ಷದ ಗೋಲ್ಡ್ಮನ್ ಸ್ಯಾಚ್ಸ್ ಬಿಸಿನೆಸ್ ಬುಕ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಅವರು ಇನ್ನೂ ಮೂರು ಪುಸ್ತಕಗಳ ಸಂಪಾದಕರಾಗಿದ್ದಾರೆ ಮತ್ತು ಎರಡು ಸಾಕ್ಷ್ಯಚಿತ್ರಗಳನ್ನು ನಿರ್ದೇಶಿಸಿದ್ದಾರೆ.

ಅವರು 2015 ರ ನಂತರದ ಅಭಿವೃದ್ಧಿ ಕಾರ್ಯಸೂಚಿಯಲ್ಲಿ ಯುಎನ್ ಸೆಕ್ರೆಟರಿ ಜನರಲ್ ಅವರ ಉನ್ನತ ಮಟ್ಟದ ವ್ಯಕ್ತಿಗಳ ಸಮಿತಿಯಲ್ಲೂ ಸೇವೆ ಸಲ್ಲಿಸಿದರು. ಅಭಿಜಿತ್ ಬ್ಯಾನರ್ಜಿ ಎಸ್ತರ್ ಡುಫ್ಲೋ ಅವರನ್ನು ವಿವಾಹವಾದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...