Homeಅಂತರಾಷ್ಟ್ರೀಯಅಭಿಜಿತ್ ಬ್ಯಾನರ್ಜಿ, ಎಸ್ತರ್ ಡುಫ್ಲೋ ಮತ್ತು ಮೈಕೆಲ್ ಕ್ರೆಮ್ಮರ್ ಅವರಿಗೆ ನೊಬೆಲ್ ಪ್ರಶಸ್ತಿ ಪ್ರಧಾನ

ಅಭಿಜಿತ್ ಬ್ಯಾನರ್ಜಿ, ಎಸ್ತರ್ ಡುಫ್ಲೋ ಮತ್ತು ಮೈಕೆಲ್ ಕ್ರೆಮ್ಮರ್ ಅವರಿಗೆ ನೊಬೆಲ್ ಪ್ರಶಸ್ತಿ ಪ್ರಧಾನ

ಜಾಗತಿಕ ಬಡತನವನ್ನು ಹೋಗಲಾಡಿಸುವ ಪ್ರಾಯೋಗಿಕ ವಿಧಾನಕ್ಕಾಗಿ ಈ ಮೂವರಿಗೆ 2019ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ ನೀಡಲಾಯಿತು.

- Advertisement -
- Advertisement -

ಸ್ಟಾಕ್‌ಹೊಮ್‌ನ ಓಸ್ಲೋದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಭಾರತೀಯ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ, ಅವರ ಪತ್ನಿ ಎಸ್ತರ್ ಡುಫ್ಲೋ ಮತ್ತು ಸಹ ಅರ್ಥಶಾಸ್ತ್ರಜ್ಞ ಮೈಕೆಲ್ ಕ್ರೆಮ್ಮರ್ ಅವರಿಗೆ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಜಾಗತಿಕ ಬಡತನವನ್ನು ಹೋಗಲಾಡಿಸುವ ಪ್ರಾಯೋಗಿಕ ವಿಧಾನಕ್ಕಾಗಿ ಈ ಮೂವರಿಗೆ 2019ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ ನೀಡಲಾಯಿತು.

ಬ್ಯಾನರ್ಜಿ ಧೋತಿ ಮತ್ತು ಬಂದಗಲಾ ಜಾಕೆಟ್ (ಸಾಂಪ್ರದಾಯಿಕ ಭಾರತೀಯ ಉಡುಪು) ಧರಿಸಿದ್ದರೆ, ಪತ್ನಿ ಡುಫ್ಲೋ ಈ ಸಂದರ್ಭಕ್ಕಾಗಿ ನೀಲಿ ಸೀರೆಯನ್ನು ಆರಿಸಿಕೊಂಡರು. ಕ್ರೆಮ್ಮರ್ ಅವರು ಸೂಟ್‌ ಧರಿಸಿ ಮೂವರು ಗಮನ ಸೆಳೆದರು.

ಅಮರ್ತ್ಯ ಸೇನ್ ನಂತರ ಅರ್ಥಶಾಸ್ತ್ರಕ್ಕೆ ನೊಬೆಲ್ ಪ್ರಶಸ್ತಿ ಪಡೆದ ಎರಡನೇ ಭಾರತೀಯ ಅಭಿಜಿತ್‌ ಬ್ಯಾನರ್ಜಿ. ಫೆಬ್ರವರಿ 21, 1961 ರಂದು ಜನಿಸಿದ ಬ್ಯಾನರ್ಜಿ ಅವರು ಕೋಲ್ಕತ್ತಾದ ಪ್ರೆಸಿಡೆನ್ಸಿ ಕಾಲೇಜು ಮತ್ತು ನವದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪಡೆದರು, ಅಲ್ಲಿಂದ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಅವರು 1988 ರಲ್ಲಿ ಹಾರ್ವರ್ಡ್‌ನಲ್ಲಿ ಡಾಕ್ಟರೇಟ್ ಅಧ್ಯಯನವನ್ನು ಪೂರ್ಣಗೊಳಿಸಿದರು.

ಈ ಡಾಕ್ಟರೇಟ್ ಪ್ರಬಂಧವಾದ ಟೈಲ್ ಎಸ್ಸೇಸ್ ಇನ್ ಇನ್ಫರ್ಮೇಷನ್ ಎಕನಾಮಿಕ್ಸ್ ಮತ್ತು ಆರ್ಥಿಕ ಅಭಿವೃದ್ಧಿ, ಮಾಹಿತಿ ಸಿದ್ಧಾಂತ, ಆದಾಯ ವಿತರಣಾ ಸಿದ್ಧಾಂತ ಮತ್ತು ಸ್ಥೂಲ ಅರ್ಥಶಾಸ್ತ್ರ ಇವು ಅವರ ಆಸಕ್ತಿಯ ಕ್ಷೇತ್ರಗಳಾಗಿವೆ.

ಮ್ಯಾಸಚೂಸೆಟ್ಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ) ಗೆ ತೆರಳುವ ಮೊದಲು ಬ್ಯಾನರ್ಜಿ ಹಾರ್ವರ್ಡ್ ಮತ್ತು ಪ್ರಿನ್ಸ್‌ಟನ್‌ನಲ್ಲಿ ಬೋಧಿಸಿದರು. ಅವರು ಪ್ರಸ್ತುತ ಎಂಐಟಿಯಲ್ಲಿ ಫೋರ್ಡ್ ಫೌಂಡೇಶನ್ ಇಂಟರ್ನ್ಯಾಷನಲ್ ಎಕನಾಮಿಕ್ಸ್ ಪ್ರೊಫೆಸರ್ ಆಗಿದ್ದಾರೆ.

ಅವರು ಹಲವಾರು ಲೇಖನಗಳು ಸೇರಿದಂತೆ ಪೂರ್‌ ಎಕನಾಮಿಕ್ಸ್‌ ಪುಸ್ತಕ ಬರೆದಿದ್ದು, ಇದು ವರ್ಷದ ಗೋಲ್ಡ್ಮನ್ ಸ್ಯಾಚ್ಸ್ ಬಿಸಿನೆಸ್ ಬುಕ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಅವರು ಇನ್ನೂ ಮೂರು ಪುಸ್ತಕಗಳ ಸಂಪಾದಕರಾಗಿದ್ದಾರೆ ಮತ್ತು ಎರಡು ಸಾಕ್ಷ್ಯಚಿತ್ರಗಳನ್ನು ನಿರ್ದೇಶಿಸಿದ್ದಾರೆ.

ಅವರು 2015 ರ ನಂತರದ ಅಭಿವೃದ್ಧಿ ಕಾರ್ಯಸೂಚಿಯಲ್ಲಿ ಯುಎನ್ ಸೆಕ್ರೆಟರಿ ಜನರಲ್ ಅವರ ಉನ್ನತ ಮಟ್ಟದ ವ್ಯಕ್ತಿಗಳ ಸಮಿತಿಯಲ್ಲೂ ಸೇವೆ ಸಲ್ಲಿಸಿದರು. ಅಭಿಜಿತ್ ಬ್ಯಾನರ್ಜಿ ಎಸ್ತರ್ ಡುಫ್ಲೋ ಅವರನ್ನು ವಿವಾಹವಾದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...