Homeಎಕಾನಮಿಭಾರತದ ಉದ್ಯೋಗ ಖಾತರಿ ಯೋಜನೆಗಳಿಗೆ ವೇತನ ಹೆಚ್ಚಿಸಿ: ಅಭಿಜಿತ್ ಬ್ಯಾನರ್ಜಿ

ಭಾರತದ ಉದ್ಯೋಗ ಖಾತರಿ ಯೋಜನೆಗಳಿಗೆ ವೇತನ ಹೆಚ್ಚಿಸಿ: ಅಭಿಜಿತ್ ಬ್ಯಾನರ್ಜಿ

- Advertisement -
- Advertisement -

ನೊಬೆಲ್ ಪುರಸ್ಕೃತ ಆರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ, ಭಾರತೀಯ ಆರ್ಥಿಕತೆ ಕುಸಿತ ಮತ್ತು ಅದಕ್ಕಾಗಿ ಏನು ಮಾಡಬೇಕು ಎಂಬ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಆರ್ಥಿಕತೆಯ ಅಭಿವೃದ್ಧಿಗೆ ಯಾವ ಕ್ರಮ ಕೈಗೊಳ್ಳಬೇಕು, ಯಾವ ಅಂಶಗಳನ್ನು ಸೇರಿಸಿದರೆ ದೀರ್ಘಾವಧಿಯ ಆರ್ತಿಕ ಕುಸಿತ ತಡೆಯಬಹುದು ಎಂಬುದನ್ನು ತಿಳಿಸಿದ್ದಾರೆ. ಅಲ್ಲದೇ ಏನೇ ಮಾಡಿದರೂ ಕೊನೆಗೆ ಉಳಿಯುವುದು ಪ್ರಾರ್ಥನೆಯೊಂದೇ ಎಂದು ಹೇಳುವ ಮೂಲಕ ಆರ್ಥಿಕತೆಯ ಕುಸಿತದ ಭೀಕರ ಪರಿಣಾಮವನ್ನು ಉಲ್ಲೇಖಿಸಿದ್ದಾರೆ.

ಕಳೆದ ವಾರ ಬ್ರೌನ್ ವಿಶ್ವವಿದ್ಯಾಲಯದಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಆರ್ಥಿಕತೆಯನ್ನು ಸುಗಮ ಹಾದಿಯಲ್ಲಿ ಸಾಗಿಸುವುದು ದುರ್ಗಮ ಹಾದಿಯನ್ನು ಕ್ರಮಿಸಿದಷ್ಟೇ ಕಷ್ಟಕರ. ಆರ್ಥಿಕ ಕುಸಿತ ತಡೆದು, ಅಭಿವೃದ್ಧಿಯತ್ತ ಸಾಗುವುದು, ಪರ್ವತ ಏರಿದಷ್ಟೇ ಸಾಹಸಮಯ.  ಭಾರತೀಯರು ಉತ್ತಮ ಆರ್ಥಿಕತೆಗಾಗಿ ಪ್ರಾರ್ಥಿಸುವ ಅಗತ್ಯತೆಯಿದೆ ಎಂದು ಹೇಳಿದ್ದಾರೆ. ಒಂದು ಗಂಟೆಯ ಭಾಷಣದಲ್ಲಿ ಹಲವು ಅಂಶಗಳ ಬಗ್ಗೆ ಬ್ಯಾನರ್ಜಿ ಮಾತನಾಡಿದ್ದಾರೆ.

ಭಾರತದ ಉದ್ಯೋಗ ಖಾತರಿ ಯೋಜನೆಗಳಿಗೆ ವೇತನ ಹೆಚ್ಚಿಸುವುದು, ರೈತರು ಬೆಳೆದ ಬೆಳೆಗಳಿಗೆ ಬೆಲೆ ಹೆಚ್ಚಳ, ರೂಪಾಯಿ ಇಳಿಕೆಯಾಗುವುದನ್ನು ನಿಯಂತ್ರಿಸಬೇಕು. ಸಾರ್ವಜನಿಕರು ಹೇಗೆ ವರ್ತಿಸುತ್ತಾರೆ, ಜನರನ್ನು ನಿಯಂತ್ರಿಸುವ ಬಗ್ಗೆ ಸರ್ಕಾರ ತಲೆಕೆಡಿಸಿಕೊಳ್ಳದೇ, ಉದ್ಯೋಗ ಖಾತರಿ ಯೋಜನೆಗೆ ಹೆಚ್ಚು ಹಣ ನೀಡಬೇಕು  ಎಂದರು. ಪ್ರಧಾನಮಂತ್ರಿ ಸಚಿವಾಲಯ ಎನ್.ಆರ್.ಇ.ಜಿ.ಎ ನಲ್ಲಿ ಹಸ್ತಕ್ಷೇಪ ಮಾಡುವುದನ್ನು ನಿಲ್ಲಿಸಿ, ವೇತನ ಹೆಚ್ಚಿಸಿ, ಅಭಿವೃದ್ಧಿಗೆ ಅನುಕೂಲ ಮಾಡಿಕೊಡಬೇಕು ಎಂದು ಹೇಳಿದ್ದಾರೆ.

ಸಂಖ್ಯಾಶಾಸ್ತ್ರೀಯ ಸಂಸ್ಥೆಗಳಲ್ಲಿ ರಾಜಕೀಯ ಮಧ್ಯಸ್ಥಿಕೆ ಕೊನೆಗೊಳಿಸಬೇಕೆಂದು ಕೇಂದ್ರಕ್ಕೆ ಪತ್ರ ಬರೆದವರಲ್ಲಿ ಬ್ಯಾನರ್ಜಿ ಕೂಡ ಒಬ್ಬರು. ವೃತ್ತಿ ಜೀವನದಲ್ಲಿ ಹಣಕಾಸಿನ ನೈಜ ಸ್ಥಿತಿಯನ್ನು ಸೃಜನಶೀಲ ಲೆಕ್ಕಪತ್ರದ ಮೂಲಕ ಮರೆಮಾಚುವ ಪ್ರಯತ್ನಸೇರಿದಂತೆ ಸರ್ಕಾರದ ಅನೇಕ ವಿಧಾನಗಳ ಬಗ್ಗೆ ಪ್ರಶ್ನಿಸಿದ್ದಾರೆ. ಸರ್ಕಾರದ ಬಜೆಟ್ ಆರ್ಥಿಕ ಪವಾಡಗಳನ್ನು ಅವಲಂಬಿಸದಿರುವುದೇ ಸೂಕ್ತ. ಸರ್ಕಾರದ ನೀತಿಗಳು ಮತ್ತು ಕಾರ್ಯವಿಧಾನದ ಬಗ್ಗೆ ಮತ್ತು ಸಹಜ ಸಂಗತಿಗಳ ಬಗ್ಗೆ ಹೇಳಿದ್ದಾರೆ.

ಇನ್ನು ಪ್ರಧಾನಿ ಮೋದಿಯವರ ಆಡಳಿತದಲ್ಲಿ ಆರ್ಥಿಕ ಕುಸಿತ ಅತ್ಯಂತ ವಿಲಕ್ಷಣ ಮತ್ತು ವಿಸ್ಮಯಕಾರಿಯಾಗಿದೆ. ಜಿ.ಎಸ್.ಟಿ ಮತ್ತು ನೋಟು ನಿಷೇಧ, ಸರ್ಕಾರ ಮತ್ತು ಕೇಂದ್ರೀಯ ಬ್ಯಾಂಕ್ ವಿತ್ತೀಯ ನಿಯಮಗಳ ಬಗ್ಗೆಯೂ ಟೀಕಿಸಿದರು. ಬರುವ ಏಪ್ರೀಲ್ ಒಳಗೆ ಭಾರತ ಸಾರ್ವತ್ರಿಕ ಮೂಲ ಆದಾಯದತ್ತ ಸಾಗಬೇಕು. ಇದು ಸುಲಭವಲ್ಲ, ಆದರೆ ರಾಜಕೀಯ ಇಚ್ಛಾಶಕ್ತಿಯಿದ್ದರೆ ಇದು ಸಾಧ್ಯ. ಜಿಡಿಪಿ ಪ್ರತಿವರ್ಷ ಹೆಚ್ಚಲು, ಆರ್ಥಿಕತೆಯ ಬೆಳವಣಿಗೆಗೆ ಕೆಲ ಕ್ರಮಗಳನ್ನು ಕೈಗೊಳ್ಳಲು ಅವಕಾಶವಿದೆ. ಭಾರತಕ್ಕೆ ಎಂಟು ನಿರ್ದೇಶನ ನೀಡಲಾಗಿದ್ದು, ಇದು ಹೊರೆಯನ್ನು ಕಡಿಮೆ ಮಾಡುತ್ತೆ. ಅಲ್ಲದೇ ರಾಜ್ಯಗಳ ಸಾಲದ ಹೊರೆಯನ್ನೂ ತಗ್ಗಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...