Homeಎಕಾನಮಿಭಾರತದ ಉದ್ಯೋಗ ಖಾತರಿ ಯೋಜನೆಗಳಿಗೆ ವೇತನ ಹೆಚ್ಚಿಸಿ: ಅಭಿಜಿತ್ ಬ್ಯಾನರ್ಜಿ

ಭಾರತದ ಉದ್ಯೋಗ ಖಾತರಿ ಯೋಜನೆಗಳಿಗೆ ವೇತನ ಹೆಚ್ಚಿಸಿ: ಅಭಿಜಿತ್ ಬ್ಯಾನರ್ಜಿ

- Advertisement -
- Advertisement -

ನೊಬೆಲ್ ಪುರಸ್ಕೃತ ಆರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ, ಭಾರತೀಯ ಆರ್ಥಿಕತೆ ಕುಸಿತ ಮತ್ತು ಅದಕ್ಕಾಗಿ ಏನು ಮಾಡಬೇಕು ಎಂಬ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಆರ್ಥಿಕತೆಯ ಅಭಿವೃದ್ಧಿಗೆ ಯಾವ ಕ್ರಮ ಕೈಗೊಳ್ಳಬೇಕು, ಯಾವ ಅಂಶಗಳನ್ನು ಸೇರಿಸಿದರೆ ದೀರ್ಘಾವಧಿಯ ಆರ್ತಿಕ ಕುಸಿತ ತಡೆಯಬಹುದು ಎಂಬುದನ್ನು ತಿಳಿಸಿದ್ದಾರೆ. ಅಲ್ಲದೇ ಏನೇ ಮಾಡಿದರೂ ಕೊನೆಗೆ ಉಳಿಯುವುದು ಪ್ರಾರ್ಥನೆಯೊಂದೇ ಎಂದು ಹೇಳುವ ಮೂಲಕ ಆರ್ಥಿಕತೆಯ ಕುಸಿತದ ಭೀಕರ ಪರಿಣಾಮವನ್ನು ಉಲ್ಲೇಖಿಸಿದ್ದಾರೆ.

ಕಳೆದ ವಾರ ಬ್ರೌನ್ ವಿಶ್ವವಿದ್ಯಾಲಯದಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಆರ್ಥಿಕತೆಯನ್ನು ಸುಗಮ ಹಾದಿಯಲ್ಲಿ ಸಾಗಿಸುವುದು ದುರ್ಗಮ ಹಾದಿಯನ್ನು ಕ್ರಮಿಸಿದಷ್ಟೇ ಕಷ್ಟಕರ. ಆರ್ಥಿಕ ಕುಸಿತ ತಡೆದು, ಅಭಿವೃದ್ಧಿಯತ್ತ ಸಾಗುವುದು, ಪರ್ವತ ಏರಿದಷ್ಟೇ ಸಾಹಸಮಯ.  ಭಾರತೀಯರು ಉತ್ತಮ ಆರ್ಥಿಕತೆಗಾಗಿ ಪ್ರಾರ್ಥಿಸುವ ಅಗತ್ಯತೆಯಿದೆ ಎಂದು ಹೇಳಿದ್ದಾರೆ. ಒಂದು ಗಂಟೆಯ ಭಾಷಣದಲ್ಲಿ ಹಲವು ಅಂಶಗಳ ಬಗ್ಗೆ ಬ್ಯಾನರ್ಜಿ ಮಾತನಾಡಿದ್ದಾರೆ.

ಭಾರತದ ಉದ್ಯೋಗ ಖಾತರಿ ಯೋಜನೆಗಳಿಗೆ ವೇತನ ಹೆಚ್ಚಿಸುವುದು, ರೈತರು ಬೆಳೆದ ಬೆಳೆಗಳಿಗೆ ಬೆಲೆ ಹೆಚ್ಚಳ, ರೂಪಾಯಿ ಇಳಿಕೆಯಾಗುವುದನ್ನು ನಿಯಂತ್ರಿಸಬೇಕು. ಸಾರ್ವಜನಿಕರು ಹೇಗೆ ವರ್ತಿಸುತ್ತಾರೆ, ಜನರನ್ನು ನಿಯಂತ್ರಿಸುವ ಬಗ್ಗೆ ಸರ್ಕಾರ ತಲೆಕೆಡಿಸಿಕೊಳ್ಳದೇ, ಉದ್ಯೋಗ ಖಾತರಿ ಯೋಜನೆಗೆ ಹೆಚ್ಚು ಹಣ ನೀಡಬೇಕು  ಎಂದರು. ಪ್ರಧಾನಮಂತ್ರಿ ಸಚಿವಾಲಯ ಎನ್.ಆರ್.ಇ.ಜಿ.ಎ ನಲ್ಲಿ ಹಸ್ತಕ್ಷೇಪ ಮಾಡುವುದನ್ನು ನಿಲ್ಲಿಸಿ, ವೇತನ ಹೆಚ್ಚಿಸಿ, ಅಭಿವೃದ್ಧಿಗೆ ಅನುಕೂಲ ಮಾಡಿಕೊಡಬೇಕು ಎಂದು ಹೇಳಿದ್ದಾರೆ.

ಸಂಖ್ಯಾಶಾಸ್ತ್ರೀಯ ಸಂಸ್ಥೆಗಳಲ್ಲಿ ರಾಜಕೀಯ ಮಧ್ಯಸ್ಥಿಕೆ ಕೊನೆಗೊಳಿಸಬೇಕೆಂದು ಕೇಂದ್ರಕ್ಕೆ ಪತ್ರ ಬರೆದವರಲ್ಲಿ ಬ್ಯಾನರ್ಜಿ ಕೂಡ ಒಬ್ಬರು. ವೃತ್ತಿ ಜೀವನದಲ್ಲಿ ಹಣಕಾಸಿನ ನೈಜ ಸ್ಥಿತಿಯನ್ನು ಸೃಜನಶೀಲ ಲೆಕ್ಕಪತ್ರದ ಮೂಲಕ ಮರೆಮಾಚುವ ಪ್ರಯತ್ನಸೇರಿದಂತೆ ಸರ್ಕಾರದ ಅನೇಕ ವಿಧಾನಗಳ ಬಗ್ಗೆ ಪ್ರಶ್ನಿಸಿದ್ದಾರೆ. ಸರ್ಕಾರದ ಬಜೆಟ್ ಆರ್ಥಿಕ ಪವಾಡಗಳನ್ನು ಅವಲಂಬಿಸದಿರುವುದೇ ಸೂಕ್ತ. ಸರ್ಕಾರದ ನೀತಿಗಳು ಮತ್ತು ಕಾರ್ಯವಿಧಾನದ ಬಗ್ಗೆ ಮತ್ತು ಸಹಜ ಸಂಗತಿಗಳ ಬಗ್ಗೆ ಹೇಳಿದ್ದಾರೆ.

ಇನ್ನು ಪ್ರಧಾನಿ ಮೋದಿಯವರ ಆಡಳಿತದಲ್ಲಿ ಆರ್ಥಿಕ ಕುಸಿತ ಅತ್ಯಂತ ವಿಲಕ್ಷಣ ಮತ್ತು ವಿಸ್ಮಯಕಾರಿಯಾಗಿದೆ. ಜಿ.ಎಸ್.ಟಿ ಮತ್ತು ನೋಟು ನಿಷೇಧ, ಸರ್ಕಾರ ಮತ್ತು ಕೇಂದ್ರೀಯ ಬ್ಯಾಂಕ್ ವಿತ್ತೀಯ ನಿಯಮಗಳ ಬಗ್ಗೆಯೂ ಟೀಕಿಸಿದರು. ಬರುವ ಏಪ್ರೀಲ್ ಒಳಗೆ ಭಾರತ ಸಾರ್ವತ್ರಿಕ ಮೂಲ ಆದಾಯದತ್ತ ಸಾಗಬೇಕು. ಇದು ಸುಲಭವಲ್ಲ, ಆದರೆ ರಾಜಕೀಯ ಇಚ್ಛಾಶಕ್ತಿಯಿದ್ದರೆ ಇದು ಸಾಧ್ಯ. ಜಿಡಿಪಿ ಪ್ರತಿವರ್ಷ ಹೆಚ್ಚಲು, ಆರ್ಥಿಕತೆಯ ಬೆಳವಣಿಗೆಗೆ ಕೆಲ ಕ್ರಮಗಳನ್ನು ಕೈಗೊಳ್ಳಲು ಅವಕಾಶವಿದೆ. ಭಾರತಕ್ಕೆ ಎಂಟು ನಿರ್ದೇಶನ ನೀಡಲಾಗಿದ್ದು, ಇದು ಹೊರೆಯನ್ನು ಕಡಿಮೆ ಮಾಡುತ್ತೆ. ಅಲ್ಲದೇ ರಾಜ್ಯಗಳ ಸಾಲದ ಹೊರೆಯನ್ನೂ ತಗ್ಗಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...