Homeಎಕಾನಮಿಭಾರತದ ಉದ್ಯೋಗ ಖಾತರಿ ಯೋಜನೆಗಳಿಗೆ ವೇತನ ಹೆಚ್ಚಿಸಿ: ಅಭಿಜಿತ್ ಬ್ಯಾನರ್ಜಿ

ಭಾರತದ ಉದ್ಯೋಗ ಖಾತರಿ ಯೋಜನೆಗಳಿಗೆ ವೇತನ ಹೆಚ್ಚಿಸಿ: ಅಭಿಜಿತ್ ಬ್ಯಾನರ್ಜಿ

- Advertisement -
- Advertisement -

ನೊಬೆಲ್ ಪುರಸ್ಕೃತ ಆರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ, ಭಾರತೀಯ ಆರ್ಥಿಕತೆ ಕುಸಿತ ಮತ್ತು ಅದಕ್ಕಾಗಿ ಏನು ಮಾಡಬೇಕು ಎಂಬ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಆರ್ಥಿಕತೆಯ ಅಭಿವೃದ್ಧಿಗೆ ಯಾವ ಕ್ರಮ ಕೈಗೊಳ್ಳಬೇಕು, ಯಾವ ಅಂಶಗಳನ್ನು ಸೇರಿಸಿದರೆ ದೀರ್ಘಾವಧಿಯ ಆರ್ತಿಕ ಕುಸಿತ ತಡೆಯಬಹುದು ಎಂಬುದನ್ನು ತಿಳಿಸಿದ್ದಾರೆ. ಅಲ್ಲದೇ ಏನೇ ಮಾಡಿದರೂ ಕೊನೆಗೆ ಉಳಿಯುವುದು ಪ್ರಾರ್ಥನೆಯೊಂದೇ ಎಂದು ಹೇಳುವ ಮೂಲಕ ಆರ್ಥಿಕತೆಯ ಕುಸಿತದ ಭೀಕರ ಪರಿಣಾಮವನ್ನು ಉಲ್ಲೇಖಿಸಿದ್ದಾರೆ.

ಕಳೆದ ವಾರ ಬ್ರೌನ್ ವಿಶ್ವವಿದ್ಯಾಲಯದಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಆರ್ಥಿಕತೆಯನ್ನು ಸುಗಮ ಹಾದಿಯಲ್ಲಿ ಸಾಗಿಸುವುದು ದುರ್ಗಮ ಹಾದಿಯನ್ನು ಕ್ರಮಿಸಿದಷ್ಟೇ ಕಷ್ಟಕರ. ಆರ್ಥಿಕ ಕುಸಿತ ತಡೆದು, ಅಭಿವೃದ್ಧಿಯತ್ತ ಸಾಗುವುದು, ಪರ್ವತ ಏರಿದಷ್ಟೇ ಸಾಹಸಮಯ.  ಭಾರತೀಯರು ಉತ್ತಮ ಆರ್ಥಿಕತೆಗಾಗಿ ಪ್ರಾರ್ಥಿಸುವ ಅಗತ್ಯತೆಯಿದೆ ಎಂದು ಹೇಳಿದ್ದಾರೆ. ಒಂದು ಗಂಟೆಯ ಭಾಷಣದಲ್ಲಿ ಹಲವು ಅಂಶಗಳ ಬಗ್ಗೆ ಬ್ಯಾನರ್ಜಿ ಮಾತನಾಡಿದ್ದಾರೆ.

ಭಾರತದ ಉದ್ಯೋಗ ಖಾತರಿ ಯೋಜನೆಗಳಿಗೆ ವೇತನ ಹೆಚ್ಚಿಸುವುದು, ರೈತರು ಬೆಳೆದ ಬೆಳೆಗಳಿಗೆ ಬೆಲೆ ಹೆಚ್ಚಳ, ರೂಪಾಯಿ ಇಳಿಕೆಯಾಗುವುದನ್ನು ನಿಯಂತ್ರಿಸಬೇಕು. ಸಾರ್ವಜನಿಕರು ಹೇಗೆ ವರ್ತಿಸುತ್ತಾರೆ, ಜನರನ್ನು ನಿಯಂತ್ರಿಸುವ ಬಗ್ಗೆ ಸರ್ಕಾರ ತಲೆಕೆಡಿಸಿಕೊಳ್ಳದೇ, ಉದ್ಯೋಗ ಖಾತರಿ ಯೋಜನೆಗೆ ಹೆಚ್ಚು ಹಣ ನೀಡಬೇಕು  ಎಂದರು. ಪ್ರಧಾನಮಂತ್ರಿ ಸಚಿವಾಲಯ ಎನ್.ಆರ್.ಇ.ಜಿ.ಎ ನಲ್ಲಿ ಹಸ್ತಕ್ಷೇಪ ಮಾಡುವುದನ್ನು ನಿಲ್ಲಿಸಿ, ವೇತನ ಹೆಚ್ಚಿಸಿ, ಅಭಿವೃದ್ಧಿಗೆ ಅನುಕೂಲ ಮಾಡಿಕೊಡಬೇಕು ಎಂದು ಹೇಳಿದ್ದಾರೆ.

ಸಂಖ್ಯಾಶಾಸ್ತ್ರೀಯ ಸಂಸ್ಥೆಗಳಲ್ಲಿ ರಾಜಕೀಯ ಮಧ್ಯಸ್ಥಿಕೆ ಕೊನೆಗೊಳಿಸಬೇಕೆಂದು ಕೇಂದ್ರಕ್ಕೆ ಪತ್ರ ಬರೆದವರಲ್ಲಿ ಬ್ಯಾನರ್ಜಿ ಕೂಡ ಒಬ್ಬರು. ವೃತ್ತಿ ಜೀವನದಲ್ಲಿ ಹಣಕಾಸಿನ ನೈಜ ಸ್ಥಿತಿಯನ್ನು ಸೃಜನಶೀಲ ಲೆಕ್ಕಪತ್ರದ ಮೂಲಕ ಮರೆಮಾಚುವ ಪ್ರಯತ್ನಸೇರಿದಂತೆ ಸರ್ಕಾರದ ಅನೇಕ ವಿಧಾನಗಳ ಬಗ್ಗೆ ಪ್ರಶ್ನಿಸಿದ್ದಾರೆ. ಸರ್ಕಾರದ ಬಜೆಟ್ ಆರ್ಥಿಕ ಪವಾಡಗಳನ್ನು ಅವಲಂಬಿಸದಿರುವುದೇ ಸೂಕ್ತ. ಸರ್ಕಾರದ ನೀತಿಗಳು ಮತ್ತು ಕಾರ್ಯವಿಧಾನದ ಬಗ್ಗೆ ಮತ್ತು ಸಹಜ ಸಂಗತಿಗಳ ಬಗ್ಗೆ ಹೇಳಿದ್ದಾರೆ.

ಇನ್ನು ಪ್ರಧಾನಿ ಮೋದಿಯವರ ಆಡಳಿತದಲ್ಲಿ ಆರ್ಥಿಕ ಕುಸಿತ ಅತ್ಯಂತ ವಿಲಕ್ಷಣ ಮತ್ತು ವಿಸ್ಮಯಕಾರಿಯಾಗಿದೆ. ಜಿ.ಎಸ್.ಟಿ ಮತ್ತು ನೋಟು ನಿಷೇಧ, ಸರ್ಕಾರ ಮತ್ತು ಕೇಂದ್ರೀಯ ಬ್ಯಾಂಕ್ ವಿತ್ತೀಯ ನಿಯಮಗಳ ಬಗ್ಗೆಯೂ ಟೀಕಿಸಿದರು. ಬರುವ ಏಪ್ರೀಲ್ ಒಳಗೆ ಭಾರತ ಸಾರ್ವತ್ರಿಕ ಮೂಲ ಆದಾಯದತ್ತ ಸಾಗಬೇಕು. ಇದು ಸುಲಭವಲ್ಲ, ಆದರೆ ರಾಜಕೀಯ ಇಚ್ಛಾಶಕ್ತಿಯಿದ್ದರೆ ಇದು ಸಾಧ್ಯ. ಜಿಡಿಪಿ ಪ್ರತಿವರ್ಷ ಹೆಚ್ಚಲು, ಆರ್ಥಿಕತೆಯ ಬೆಳವಣಿಗೆಗೆ ಕೆಲ ಕ್ರಮಗಳನ್ನು ಕೈಗೊಳ್ಳಲು ಅವಕಾಶವಿದೆ. ಭಾರತಕ್ಕೆ ಎಂಟು ನಿರ್ದೇಶನ ನೀಡಲಾಗಿದ್ದು, ಇದು ಹೊರೆಯನ್ನು ಕಡಿಮೆ ಮಾಡುತ್ತೆ. ಅಲ್ಲದೇ ರಾಜ್ಯಗಳ ಸಾಲದ ಹೊರೆಯನ್ನೂ ತಗ್ಗಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...