Homeಎಕಾನಮಿಭಾರತದ ಉದ್ಯೋಗ ಖಾತರಿ ಯೋಜನೆಗಳಿಗೆ ವೇತನ ಹೆಚ್ಚಿಸಿ: ಅಭಿಜಿತ್ ಬ್ಯಾನರ್ಜಿ

ಭಾರತದ ಉದ್ಯೋಗ ಖಾತರಿ ಯೋಜನೆಗಳಿಗೆ ವೇತನ ಹೆಚ್ಚಿಸಿ: ಅಭಿಜಿತ್ ಬ್ಯಾನರ್ಜಿ

- Advertisement -
- Advertisement -

ನೊಬೆಲ್ ಪುರಸ್ಕೃತ ಆರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ, ಭಾರತೀಯ ಆರ್ಥಿಕತೆ ಕುಸಿತ ಮತ್ತು ಅದಕ್ಕಾಗಿ ಏನು ಮಾಡಬೇಕು ಎಂಬ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಆರ್ಥಿಕತೆಯ ಅಭಿವೃದ್ಧಿಗೆ ಯಾವ ಕ್ರಮ ಕೈಗೊಳ್ಳಬೇಕು, ಯಾವ ಅಂಶಗಳನ್ನು ಸೇರಿಸಿದರೆ ದೀರ್ಘಾವಧಿಯ ಆರ್ತಿಕ ಕುಸಿತ ತಡೆಯಬಹುದು ಎಂಬುದನ್ನು ತಿಳಿಸಿದ್ದಾರೆ. ಅಲ್ಲದೇ ಏನೇ ಮಾಡಿದರೂ ಕೊನೆಗೆ ಉಳಿಯುವುದು ಪ್ರಾರ್ಥನೆಯೊಂದೇ ಎಂದು ಹೇಳುವ ಮೂಲಕ ಆರ್ಥಿಕತೆಯ ಕುಸಿತದ ಭೀಕರ ಪರಿಣಾಮವನ್ನು ಉಲ್ಲೇಖಿಸಿದ್ದಾರೆ.

ಕಳೆದ ವಾರ ಬ್ರೌನ್ ವಿಶ್ವವಿದ್ಯಾಲಯದಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಆರ್ಥಿಕತೆಯನ್ನು ಸುಗಮ ಹಾದಿಯಲ್ಲಿ ಸಾಗಿಸುವುದು ದುರ್ಗಮ ಹಾದಿಯನ್ನು ಕ್ರಮಿಸಿದಷ್ಟೇ ಕಷ್ಟಕರ. ಆರ್ಥಿಕ ಕುಸಿತ ತಡೆದು, ಅಭಿವೃದ್ಧಿಯತ್ತ ಸಾಗುವುದು, ಪರ್ವತ ಏರಿದಷ್ಟೇ ಸಾಹಸಮಯ.  ಭಾರತೀಯರು ಉತ್ತಮ ಆರ್ಥಿಕತೆಗಾಗಿ ಪ್ರಾರ್ಥಿಸುವ ಅಗತ್ಯತೆಯಿದೆ ಎಂದು ಹೇಳಿದ್ದಾರೆ. ಒಂದು ಗಂಟೆಯ ಭಾಷಣದಲ್ಲಿ ಹಲವು ಅಂಶಗಳ ಬಗ್ಗೆ ಬ್ಯಾನರ್ಜಿ ಮಾತನಾಡಿದ್ದಾರೆ.

ಭಾರತದ ಉದ್ಯೋಗ ಖಾತರಿ ಯೋಜನೆಗಳಿಗೆ ವೇತನ ಹೆಚ್ಚಿಸುವುದು, ರೈತರು ಬೆಳೆದ ಬೆಳೆಗಳಿಗೆ ಬೆಲೆ ಹೆಚ್ಚಳ, ರೂಪಾಯಿ ಇಳಿಕೆಯಾಗುವುದನ್ನು ನಿಯಂತ್ರಿಸಬೇಕು. ಸಾರ್ವಜನಿಕರು ಹೇಗೆ ವರ್ತಿಸುತ್ತಾರೆ, ಜನರನ್ನು ನಿಯಂತ್ರಿಸುವ ಬಗ್ಗೆ ಸರ್ಕಾರ ತಲೆಕೆಡಿಸಿಕೊಳ್ಳದೇ, ಉದ್ಯೋಗ ಖಾತರಿ ಯೋಜನೆಗೆ ಹೆಚ್ಚು ಹಣ ನೀಡಬೇಕು  ಎಂದರು. ಪ್ರಧಾನಮಂತ್ರಿ ಸಚಿವಾಲಯ ಎನ್.ಆರ್.ಇ.ಜಿ.ಎ ನಲ್ಲಿ ಹಸ್ತಕ್ಷೇಪ ಮಾಡುವುದನ್ನು ನಿಲ್ಲಿಸಿ, ವೇತನ ಹೆಚ್ಚಿಸಿ, ಅಭಿವೃದ್ಧಿಗೆ ಅನುಕೂಲ ಮಾಡಿಕೊಡಬೇಕು ಎಂದು ಹೇಳಿದ್ದಾರೆ.

ಸಂಖ್ಯಾಶಾಸ್ತ್ರೀಯ ಸಂಸ್ಥೆಗಳಲ್ಲಿ ರಾಜಕೀಯ ಮಧ್ಯಸ್ಥಿಕೆ ಕೊನೆಗೊಳಿಸಬೇಕೆಂದು ಕೇಂದ್ರಕ್ಕೆ ಪತ್ರ ಬರೆದವರಲ್ಲಿ ಬ್ಯಾನರ್ಜಿ ಕೂಡ ಒಬ್ಬರು. ವೃತ್ತಿ ಜೀವನದಲ್ಲಿ ಹಣಕಾಸಿನ ನೈಜ ಸ್ಥಿತಿಯನ್ನು ಸೃಜನಶೀಲ ಲೆಕ್ಕಪತ್ರದ ಮೂಲಕ ಮರೆಮಾಚುವ ಪ್ರಯತ್ನಸೇರಿದಂತೆ ಸರ್ಕಾರದ ಅನೇಕ ವಿಧಾನಗಳ ಬಗ್ಗೆ ಪ್ರಶ್ನಿಸಿದ್ದಾರೆ. ಸರ್ಕಾರದ ಬಜೆಟ್ ಆರ್ಥಿಕ ಪವಾಡಗಳನ್ನು ಅವಲಂಬಿಸದಿರುವುದೇ ಸೂಕ್ತ. ಸರ್ಕಾರದ ನೀತಿಗಳು ಮತ್ತು ಕಾರ್ಯವಿಧಾನದ ಬಗ್ಗೆ ಮತ್ತು ಸಹಜ ಸಂಗತಿಗಳ ಬಗ್ಗೆ ಹೇಳಿದ್ದಾರೆ.

ಇನ್ನು ಪ್ರಧಾನಿ ಮೋದಿಯವರ ಆಡಳಿತದಲ್ಲಿ ಆರ್ಥಿಕ ಕುಸಿತ ಅತ್ಯಂತ ವಿಲಕ್ಷಣ ಮತ್ತು ವಿಸ್ಮಯಕಾರಿಯಾಗಿದೆ. ಜಿ.ಎಸ್.ಟಿ ಮತ್ತು ನೋಟು ನಿಷೇಧ, ಸರ್ಕಾರ ಮತ್ತು ಕೇಂದ್ರೀಯ ಬ್ಯಾಂಕ್ ವಿತ್ತೀಯ ನಿಯಮಗಳ ಬಗ್ಗೆಯೂ ಟೀಕಿಸಿದರು. ಬರುವ ಏಪ್ರೀಲ್ ಒಳಗೆ ಭಾರತ ಸಾರ್ವತ್ರಿಕ ಮೂಲ ಆದಾಯದತ್ತ ಸಾಗಬೇಕು. ಇದು ಸುಲಭವಲ್ಲ, ಆದರೆ ರಾಜಕೀಯ ಇಚ್ಛಾಶಕ್ತಿಯಿದ್ದರೆ ಇದು ಸಾಧ್ಯ. ಜಿಡಿಪಿ ಪ್ರತಿವರ್ಷ ಹೆಚ್ಚಲು, ಆರ್ಥಿಕತೆಯ ಬೆಳವಣಿಗೆಗೆ ಕೆಲ ಕ್ರಮಗಳನ್ನು ಕೈಗೊಳ್ಳಲು ಅವಕಾಶವಿದೆ. ಭಾರತಕ್ಕೆ ಎಂಟು ನಿರ್ದೇಶನ ನೀಡಲಾಗಿದ್ದು, ಇದು ಹೊರೆಯನ್ನು ಕಡಿಮೆ ಮಾಡುತ್ತೆ. ಅಲ್ಲದೇ ರಾಜ್ಯಗಳ ಸಾಲದ ಹೊರೆಯನ್ನೂ ತಗ್ಗಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...