Homeಎಕಾನಮಿಭಾರತದ ಉದ್ಯೋಗ ಖಾತರಿ ಯೋಜನೆಗಳಿಗೆ ವೇತನ ಹೆಚ್ಚಿಸಿ: ಅಭಿಜಿತ್ ಬ್ಯಾನರ್ಜಿ

ಭಾರತದ ಉದ್ಯೋಗ ಖಾತರಿ ಯೋಜನೆಗಳಿಗೆ ವೇತನ ಹೆಚ್ಚಿಸಿ: ಅಭಿಜಿತ್ ಬ್ಯಾನರ್ಜಿ

- Advertisement -
- Advertisement -

ನೊಬೆಲ್ ಪುರಸ್ಕೃತ ಆರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ, ಭಾರತೀಯ ಆರ್ಥಿಕತೆ ಕುಸಿತ ಮತ್ತು ಅದಕ್ಕಾಗಿ ಏನು ಮಾಡಬೇಕು ಎಂಬ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಆರ್ಥಿಕತೆಯ ಅಭಿವೃದ್ಧಿಗೆ ಯಾವ ಕ್ರಮ ಕೈಗೊಳ್ಳಬೇಕು, ಯಾವ ಅಂಶಗಳನ್ನು ಸೇರಿಸಿದರೆ ದೀರ್ಘಾವಧಿಯ ಆರ್ತಿಕ ಕುಸಿತ ತಡೆಯಬಹುದು ಎಂಬುದನ್ನು ತಿಳಿಸಿದ್ದಾರೆ. ಅಲ್ಲದೇ ಏನೇ ಮಾಡಿದರೂ ಕೊನೆಗೆ ಉಳಿಯುವುದು ಪ್ರಾರ್ಥನೆಯೊಂದೇ ಎಂದು ಹೇಳುವ ಮೂಲಕ ಆರ್ಥಿಕತೆಯ ಕುಸಿತದ ಭೀಕರ ಪರಿಣಾಮವನ್ನು ಉಲ್ಲೇಖಿಸಿದ್ದಾರೆ.

ಕಳೆದ ವಾರ ಬ್ರೌನ್ ವಿಶ್ವವಿದ್ಯಾಲಯದಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಆರ್ಥಿಕತೆಯನ್ನು ಸುಗಮ ಹಾದಿಯಲ್ಲಿ ಸಾಗಿಸುವುದು ದುರ್ಗಮ ಹಾದಿಯನ್ನು ಕ್ರಮಿಸಿದಷ್ಟೇ ಕಷ್ಟಕರ. ಆರ್ಥಿಕ ಕುಸಿತ ತಡೆದು, ಅಭಿವೃದ್ಧಿಯತ್ತ ಸಾಗುವುದು, ಪರ್ವತ ಏರಿದಷ್ಟೇ ಸಾಹಸಮಯ.  ಭಾರತೀಯರು ಉತ್ತಮ ಆರ್ಥಿಕತೆಗಾಗಿ ಪ್ರಾರ್ಥಿಸುವ ಅಗತ್ಯತೆಯಿದೆ ಎಂದು ಹೇಳಿದ್ದಾರೆ. ಒಂದು ಗಂಟೆಯ ಭಾಷಣದಲ್ಲಿ ಹಲವು ಅಂಶಗಳ ಬಗ್ಗೆ ಬ್ಯಾನರ್ಜಿ ಮಾತನಾಡಿದ್ದಾರೆ.

ಭಾರತದ ಉದ್ಯೋಗ ಖಾತರಿ ಯೋಜನೆಗಳಿಗೆ ವೇತನ ಹೆಚ್ಚಿಸುವುದು, ರೈತರು ಬೆಳೆದ ಬೆಳೆಗಳಿಗೆ ಬೆಲೆ ಹೆಚ್ಚಳ, ರೂಪಾಯಿ ಇಳಿಕೆಯಾಗುವುದನ್ನು ನಿಯಂತ್ರಿಸಬೇಕು. ಸಾರ್ವಜನಿಕರು ಹೇಗೆ ವರ್ತಿಸುತ್ತಾರೆ, ಜನರನ್ನು ನಿಯಂತ್ರಿಸುವ ಬಗ್ಗೆ ಸರ್ಕಾರ ತಲೆಕೆಡಿಸಿಕೊಳ್ಳದೇ, ಉದ್ಯೋಗ ಖಾತರಿ ಯೋಜನೆಗೆ ಹೆಚ್ಚು ಹಣ ನೀಡಬೇಕು  ಎಂದರು. ಪ್ರಧಾನಮಂತ್ರಿ ಸಚಿವಾಲಯ ಎನ್.ಆರ್.ಇ.ಜಿ.ಎ ನಲ್ಲಿ ಹಸ್ತಕ್ಷೇಪ ಮಾಡುವುದನ್ನು ನಿಲ್ಲಿಸಿ, ವೇತನ ಹೆಚ್ಚಿಸಿ, ಅಭಿವೃದ್ಧಿಗೆ ಅನುಕೂಲ ಮಾಡಿಕೊಡಬೇಕು ಎಂದು ಹೇಳಿದ್ದಾರೆ.

ಸಂಖ್ಯಾಶಾಸ್ತ್ರೀಯ ಸಂಸ್ಥೆಗಳಲ್ಲಿ ರಾಜಕೀಯ ಮಧ್ಯಸ್ಥಿಕೆ ಕೊನೆಗೊಳಿಸಬೇಕೆಂದು ಕೇಂದ್ರಕ್ಕೆ ಪತ್ರ ಬರೆದವರಲ್ಲಿ ಬ್ಯಾನರ್ಜಿ ಕೂಡ ಒಬ್ಬರು. ವೃತ್ತಿ ಜೀವನದಲ್ಲಿ ಹಣಕಾಸಿನ ನೈಜ ಸ್ಥಿತಿಯನ್ನು ಸೃಜನಶೀಲ ಲೆಕ್ಕಪತ್ರದ ಮೂಲಕ ಮರೆಮಾಚುವ ಪ್ರಯತ್ನಸೇರಿದಂತೆ ಸರ್ಕಾರದ ಅನೇಕ ವಿಧಾನಗಳ ಬಗ್ಗೆ ಪ್ರಶ್ನಿಸಿದ್ದಾರೆ. ಸರ್ಕಾರದ ಬಜೆಟ್ ಆರ್ಥಿಕ ಪವಾಡಗಳನ್ನು ಅವಲಂಬಿಸದಿರುವುದೇ ಸೂಕ್ತ. ಸರ್ಕಾರದ ನೀತಿಗಳು ಮತ್ತು ಕಾರ್ಯವಿಧಾನದ ಬಗ್ಗೆ ಮತ್ತು ಸಹಜ ಸಂಗತಿಗಳ ಬಗ್ಗೆ ಹೇಳಿದ್ದಾರೆ.

ಇನ್ನು ಪ್ರಧಾನಿ ಮೋದಿಯವರ ಆಡಳಿತದಲ್ಲಿ ಆರ್ಥಿಕ ಕುಸಿತ ಅತ್ಯಂತ ವಿಲಕ್ಷಣ ಮತ್ತು ವಿಸ್ಮಯಕಾರಿಯಾಗಿದೆ. ಜಿ.ಎಸ್.ಟಿ ಮತ್ತು ನೋಟು ನಿಷೇಧ, ಸರ್ಕಾರ ಮತ್ತು ಕೇಂದ್ರೀಯ ಬ್ಯಾಂಕ್ ವಿತ್ತೀಯ ನಿಯಮಗಳ ಬಗ್ಗೆಯೂ ಟೀಕಿಸಿದರು. ಬರುವ ಏಪ್ರೀಲ್ ಒಳಗೆ ಭಾರತ ಸಾರ್ವತ್ರಿಕ ಮೂಲ ಆದಾಯದತ್ತ ಸಾಗಬೇಕು. ಇದು ಸುಲಭವಲ್ಲ, ಆದರೆ ರಾಜಕೀಯ ಇಚ್ಛಾಶಕ್ತಿಯಿದ್ದರೆ ಇದು ಸಾಧ್ಯ. ಜಿಡಿಪಿ ಪ್ರತಿವರ್ಷ ಹೆಚ್ಚಲು, ಆರ್ಥಿಕತೆಯ ಬೆಳವಣಿಗೆಗೆ ಕೆಲ ಕ್ರಮಗಳನ್ನು ಕೈಗೊಳ್ಳಲು ಅವಕಾಶವಿದೆ. ಭಾರತಕ್ಕೆ ಎಂಟು ನಿರ್ದೇಶನ ನೀಡಲಾಗಿದ್ದು, ಇದು ಹೊರೆಯನ್ನು ಕಡಿಮೆ ಮಾಡುತ್ತೆ. ಅಲ್ಲದೇ ರಾಜ್ಯಗಳ ಸಾಲದ ಹೊರೆಯನ್ನೂ ತಗ್ಗಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...