Homeಎಕಾನಮಿಭಾರತದ ಉದ್ಯೋಗ ಖಾತರಿ ಯೋಜನೆಗಳಿಗೆ ವೇತನ ಹೆಚ್ಚಿಸಿ: ಅಭಿಜಿತ್ ಬ್ಯಾನರ್ಜಿ

ಭಾರತದ ಉದ್ಯೋಗ ಖಾತರಿ ಯೋಜನೆಗಳಿಗೆ ವೇತನ ಹೆಚ್ಚಿಸಿ: ಅಭಿಜಿತ್ ಬ್ಯಾನರ್ಜಿ

- Advertisement -
- Advertisement -

ನೊಬೆಲ್ ಪುರಸ್ಕೃತ ಆರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ, ಭಾರತೀಯ ಆರ್ಥಿಕತೆ ಕುಸಿತ ಮತ್ತು ಅದಕ್ಕಾಗಿ ಏನು ಮಾಡಬೇಕು ಎಂಬ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಆರ್ಥಿಕತೆಯ ಅಭಿವೃದ್ಧಿಗೆ ಯಾವ ಕ್ರಮ ಕೈಗೊಳ್ಳಬೇಕು, ಯಾವ ಅಂಶಗಳನ್ನು ಸೇರಿಸಿದರೆ ದೀರ್ಘಾವಧಿಯ ಆರ್ತಿಕ ಕುಸಿತ ತಡೆಯಬಹುದು ಎಂಬುದನ್ನು ತಿಳಿಸಿದ್ದಾರೆ. ಅಲ್ಲದೇ ಏನೇ ಮಾಡಿದರೂ ಕೊನೆಗೆ ಉಳಿಯುವುದು ಪ್ರಾರ್ಥನೆಯೊಂದೇ ಎಂದು ಹೇಳುವ ಮೂಲಕ ಆರ್ಥಿಕತೆಯ ಕುಸಿತದ ಭೀಕರ ಪರಿಣಾಮವನ್ನು ಉಲ್ಲೇಖಿಸಿದ್ದಾರೆ.

ಕಳೆದ ವಾರ ಬ್ರೌನ್ ವಿಶ್ವವಿದ್ಯಾಲಯದಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಆರ್ಥಿಕತೆಯನ್ನು ಸುಗಮ ಹಾದಿಯಲ್ಲಿ ಸಾಗಿಸುವುದು ದುರ್ಗಮ ಹಾದಿಯನ್ನು ಕ್ರಮಿಸಿದಷ್ಟೇ ಕಷ್ಟಕರ. ಆರ್ಥಿಕ ಕುಸಿತ ತಡೆದು, ಅಭಿವೃದ್ಧಿಯತ್ತ ಸಾಗುವುದು, ಪರ್ವತ ಏರಿದಷ್ಟೇ ಸಾಹಸಮಯ.  ಭಾರತೀಯರು ಉತ್ತಮ ಆರ್ಥಿಕತೆಗಾಗಿ ಪ್ರಾರ್ಥಿಸುವ ಅಗತ್ಯತೆಯಿದೆ ಎಂದು ಹೇಳಿದ್ದಾರೆ. ಒಂದು ಗಂಟೆಯ ಭಾಷಣದಲ್ಲಿ ಹಲವು ಅಂಶಗಳ ಬಗ್ಗೆ ಬ್ಯಾನರ್ಜಿ ಮಾತನಾಡಿದ್ದಾರೆ.

ಭಾರತದ ಉದ್ಯೋಗ ಖಾತರಿ ಯೋಜನೆಗಳಿಗೆ ವೇತನ ಹೆಚ್ಚಿಸುವುದು, ರೈತರು ಬೆಳೆದ ಬೆಳೆಗಳಿಗೆ ಬೆಲೆ ಹೆಚ್ಚಳ, ರೂಪಾಯಿ ಇಳಿಕೆಯಾಗುವುದನ್ನು ನಿಯಂತ್ರಿಸಬೇಕು. ಸಾರ್ವಜನಿಕರು ಹೇಗೆ ವರ್ತಿಸುತ್ತಾರೆ, ಜನರನ್ನು ನಿಯಂತ್ರಿಸುವ ಬಗ್ಗೆ ಸರ್ಕಾರ ತಲೆಕೆಡಿಸಿಕೊಳ್ಳದೇ, ಉದ್ಯೋಗ ಖಾತರಿ ಯೋಜನೆಗೆ ಹೆಚ್ಚು ಹಣ ನೀಡಬೇಕು  ಎಂದರು. ಪ್ರಧಾನಮಂತ್ರಿ ಸಚಿವಾಲಯ ಎನ್.ಆರ್.ಇ.ಜಿ.ಎ ನಲ್ಲಿ ಹಸ್ತಕ್ಷೇಪ ಮಾಡುವುದನ್ನು ನಿಲ್ಲಿಸಿ, ವೇತನ ಹೆಚ್ಚಿಸಿ, ಅಭಿವೃದ್ಧಿಗೆ ಅನುಕೂಲ ಮಾಡಿಕೊಡಬೇಕು ಎಂದು ಹೇಳಿದ್ದಾರೆ.

ಸಂಖ್ಯಾಶಾಸ್ತ್ರೀಯ ಸಂಸ್ಥೆಗಳಲ್ಲಿ ರಾಜಕೀಯ ಮಧ್ಯಸ್ಥಿಕೆ ಕೊನೆಗೊಳಿಸಬೇಕೆಂದು ಕೇಂದ್ರಕ್ಕೆ ಪತ್ರ ಬರೆದವರಲ್ಲಿ ಬ್ಯಾನರ್ಜಿ ಕೂಡ ಒಬ್ಬರು. ವೃತ್ತಿ ಜೀವನದಲ್ಲಿ ಹಣಕಾಸಿನ ನೈಜ ಸ್ಥಿತಿಯನ್ನು ಸೃಜನಶೀಲ ಲೆಕ್ಕಪತ್ರದ ಮೂಲಕ ಮರೆಮಾಚುವ ಪ್ರಯತ್ನಸೇರಿದಂತೆ ಸರ್ಕಾರದ ಅನೇಕ ವಿಧಾನಗಳ ಬಗ್ಗೆ ಪ್ರಶ್ನಿಸಿದ್ದಾರೆ. ಸರ್ಕಾರದ ಬಜೆಟ್ ಆರ್ಥಿಕ ಪವಾಡಗಳನ್ನು ಅವಲಂಬಿಸದಿರುವುದೇ ಸೂಕ್ತ. ಸರ್ಕಾರದ ನೀತಿಗಳು ಮತ್ತು ಕಾರ್ಯವಿಧಾನದ ಬಗ್ಗೆ ಮತ್ತು ಸಹಜ ಸಂಗತಿಗಳ ಬಗ್ಗೆ ಹೇಳಿದ್ದಾರೆ.

ಇನ್ನು ಪ್ರಧಾನಿ ಮೋದಿಯವರ ಆಡಳಿತದಲ್ಲಿ ಆರ್ಥಿಕ ಕುಸಿತ ಅತ್ಯಂತ ವಿಲಕ್ಷಣ ಮತ್ತು ವಿಸ್ಮಯಕಾರಿಯಾಗಿದೆ. ಜಿ.ಎಸ್.ಟಿ ಮತ್ತು ನೋಟು ನಿಷೇಧ, ಸರ್ಕಾರ ಮತ್ತು ಕೇಂದ್ರೀಯ ಬ್ಯಾಂಕ್ ವಿತ್ತೀಯ ನಿಯಮಗಳ ಬಗ್ಗೆಯೂ ಟೀಕಿಸಿದರು. ಬರುವ ಏಪ್ರೀಲ್ ಒಳಗೆ ಭಾರತ ಸಾರ್ವತ್ರಿಕ ಮೂಲ ಆದಾಯದತ್ತ ಸಾಗಬೇಕು. ಇದು ಸುಲಭವಲ್ಲ, ಆದರೆ ರಾಜಕೀಯ ಇಚ್ಛಾಶಕ್ತಿಯಿದ್ದರೆ ಇದು ಸಾಧ್ಯ. ಜಿಡಿಪಿ ಪ್ರತಿವರ್ಷ ಹೆಚ್ಚಲು, ಆರ್ಥಿಕತೆಯ ಬೆಳವಣಿಗೆಗೆ ಕೆಲ ಕ್ರಮಗಳನ್ನು ಕೈಗೊಳ್ಳಲು ಅವಕಾಶವಿದೆ. ಭಾರತಕ್ಕೆ ಎಂಟು ನಿರ್ದೇಶನ ನೀಡಲಾಗಿದ್ದು, ಇದು ಹೊರೆಯನ್ನು ಕಡಿಮೆ ಮಾಡುತ್ತೆ. ಅಲ್ಲದೇ ರಾಜ್ಯಗಳ ಸಾಲದ ಹೊರೆಯನ್ನೂ ತಗ್ಗಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...