Homeಮುಖಪುಟಭಾರತೀಯ ಕಾನೂನುಗಳಿಗೆ ಬದ್ಧರಾಗಿದ್ದೇವೆ: ಸಂಸದೀಯ ಸಮಿತಿ ಮುಂದೆ ಟ್ವಿಟರ್ ಸ್ಪಷ್ಟನೆ

ಭಾರತೀಯ ಕಾನೂನುಗಳಿಗೆ ಬದ್ಧರಾಗಿದ್ದೇವೆ: ಸಂಸದೀಯ ಸಮಿತಿ ಮುಂದೆ ಟ್ವಿಟರ್ ಸ್ಪಷ್ಟನೆ

- Advertisement -
- Advertisement -

ಶಶಿ ತರೂರ್ ನೇತೃತ್ವದ ಸಂಸದೀಯ ಸಮಿತಿಯ ಮುಂದೆ ಹಾಜರಾದ ಟ್ವಿಟರ್ ಇಂಡಿಯಾದ ಪಬ್ಲಿಕ್ ಪಾಲಿಸಿ ಮ್ಯಾನೇಜರ್ ಶಗುಫ್ತ ಕಮ್ರಾನ್ ಮತ್ತು ಕಾನೂನು ಪ್ರತಿನಿಧಿ ಆಯುಶಿ ಕಪೂರ್ ಭಾರತೀಯ ಕಾನೂನುಗಳು ಸರ್ವೋಚ್ಛವಾಗಿದ್ದು, ಅವುಗಳಿಗೆ ಬದ್ಧರಾಗಿರುತ್ತೇವೆ ಎಂದು ತಿಳಿಸಿದ್ದಾರೆ.

ಸಂಸದೀಯ ಸಮಿತಿಯ ವಿಚಾರಣೆ ವೇಳೆ ಸಂಸದೀಯ ಸಮಿತಿಯು ಟ್ವಿಟ್ಟರ್‌ಗೆ ಹಲವು ಕಠಿಣ ಪ್ರಶ್ನೆಗಳನ್ನು ಕೇಳಿತು ಎಂದು ಎನ್‌ಡಿಟಿವಿ ವರದಿ ಮಾಡಿದೆ. ಕಂಪನಿಯು ದೇಶದ ಕಾನೂನನ್ನು ಪಾಲಿಸಲು ಸಿದ್ಧವಿದೆಯೇ ಎಂದು ಸಂಸದೀಯ ಸಮಿತಿಯು ಕೇಳಿದಾಗ ಟ್ವಿಟರ್ ಪ್ರತಿನಿಧಿಗಳು “ಟ್ವಿಟರ್ ತನ್ನದೇ ಆದ ನೀತಿ ನಿಯಮಗಳಿವೆ. ಆದರೆ ಭಾರತೀಯ ಕಾನೂನುಗಳು ಸರ್ವೋಚ್ಛವಾಗಿದ್ದು, ಅವುಗಳಿಗೆ ಬದ್ಧರಾಗಿರುತ್ತೇವೆ” ಎಂದು ಉತ್ತರಿಸಿದೆ.

ನಾವು ಪಾರ್ಲಿಮೆಂಟಿನ ಸ್ಟ್ಯಾಂಡಿಂಗ್ ಕಮಿಟಿಯ ವಿಚಾರಣೆಗೆ ಎಲ್ಲಾ ರೀತಿಯ ಸಹಕಾರವನ್ನು ನೀಡುತ್ತೇವೆ. ದೇಶದ ಜನರ ಸಂವಿಧಾನ ಬದ್ಧ ಹಕ್ಕುಗಳ ರಕ್ಷಣೆಗೆ ಟ್ವಿಟರ್ ಸದಾ ಬದ್ಧವಾಗಿದೆ. ಪಾರದರ್ಶಕತೆ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಜನರ ಖಾಸಗಿತನದೊಂದಿಗೆ ಟ್ವಿಟ್ಟರ್ ಎಂದೂ ರಾಜಿಯಾಗುವುದಿಲ್ಲ ಎಂದು ಕಂಪನಿಯ ವಕ್ತಾರರು ತಿಳಿಸಿದ್ದಾರೆ.

ಜನರ ಸುರಕ್ಷತೆ, ಅಪರಾಧ ತಡೆ, ದೇಶದ ಭದ್ರತೆಗೆ ಸಂಬಂಧಿಸಿದ ಹಾಗೆ ನಾವು ಭಾರತ ಸರ್ಕಾರದೊಂದಿಗಿನ ನಮ್ಮ ಆದ್ಯತೆ ಮತ್ತು ಬದ್ಧತೆಯನ್ನು ಮುಂದುವರೆಸುತ್ತೇವೆ ಎಂದು ಟ್ವಿಟ್ಟರ್ ಪ್ರತಿನಿಧಿಗಳು ತಿಳಿಸಿದ್ದಾರೆ.

ಸಂಸದೀಯ ಸಮಿತಿಯ ವಿಚಾರಣೆಯು ಕೇಂದ್ರ ಸರ್ಕಾರ ಮತ್ತು ಟ್ವಿಟ್ಟರ್ ನಡುವಿನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ನಡೆದಿದೆ. ಟ್ವಿಟ್ಟರ್ ಸಾರ್ವಜನಿಕರ ಸುರಕ್ಷತೆಗೆ ಬದ್ಧವಾಗಿಲ್ಲ ಎಂಬ ಕಾರಣದಿಂದ ಟ್ವಿಟರ್‌ಗೆ ಐಟಿ ಕಾಯ್ದೆಯಡಿ ಸಾಮಾಜಿಕ ಜಾಲತಾಣ ಸಂಸ್ಥೆಗಳಿಗೆ ನೀಡಿದ್ದ ಕಾನೂನಾತ್ಮಕ ರಕ್ಷಣೆಯನ್ನು ಕೇಂದ್ರ ಸರ್ಕಾರ ಬುಧವಾರ ಜೂನ್ 16 ರಂದು ಹಿಂಪಡೆದಿದೆ. ಈಗ ಪ್ರತಿಯೊಂದು ಟ್ವೀಟ್, ಪೋಸ್ಟ್ ಗಳಿಗೆ ಟ್ವಿಟರ್ ನೇರ ಹೊಣೆಯಾಗಿರುತ್ತದೆ. ಟ್ವೀಟ್ ಮಾಡಿದ ವ್ಯಕ್ತಿಗಳ ಜೊತೆಗೆ ಟ್ವಿಟರ್ ಮೇಲೆ ಕ್ರಮ ಜರುಗಿಸುವುದಾಗಿ ಕೇಂದ್ರ ಸರ್ಕಾರ ಹೇಳಿದೆ.

ಮೇ ತಿಂಗಳಿನಲ್ಲಿ ‘ಕಾಂಗ್ರೆಸ್‌ ಟೂಲ್‌ಕಿಟ್’ ಎಂಬ ಟ್ವೀಟ್ ಮಾಡಿದ ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು. ಆ ನಂತರ ಟ್ವಿಟರ್‌ ಆ ಪೋಸ್ಟ್‌ಗಳಿಗೆ ಮ್ಯಾನುಪಲೇಟೆಡ್ ಮೀಡಿಯಾ ಎಂಬ ಟ್ಯಾಗ್‌ ಹಾಕಿತ್ತು. ಮ್ಯಾನುಪಲೇಟೆಡ್ ಮೀಡಿಯಾ ಟ್ಯಾಗ್‌ ಡಿಲೀಟ್ ಮಾಡುವಂತೆ ಟ್ವಿಟರ್‌ಗೆ ಕೆಂದ್ರ ಸರ್ಕಾರ ಆದೇಶಿಸಿತ್ತು. ಆದರೆ ಟ್ವಿಟ್ಟರ್ ಆ ಟ್ಯಾಗ್‌ಗಳನ್ನು ಡಿಲೀಟ್ ಮಾಡಿರಲಿಲ್ಲ. ಅಲ್ಲಿಂದ ಆರಂಭವಾದ ವೈಮನಸ್ಸು ಮುಂದುವರಿದಿದೆ.


ಇದನ್ನೂ ಓದಿ: ಕೊರೊನಾ ನಿಯಮಗಳ ಉಲ್ಲಂಘನೆ, 3ನೇ ಅಲೆಗೆ ಕಾರಣವಾಗಬಹುದು: ದೆಹಲಿ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...