Homeಮುಖಪುಟಭಾರತೀಯ ಕಾನೂನುಗಳಿಗೆ ಬದ್ಧರಾಗಿದ್ದೇವೆ: ಸಂಸದೀಯ ಸಮಿತಿ ಮುಂದೆ ಟ್ವಿಟರ್ ಸ್ಪಷ್ಟನೆ

ಭಾರತೀಯ ಕಾನೂನುಗಳಿಗೆ ಬದ್ಧರಾಗಿದ್ದೇವೆ: ಸಂಸದೀಯ ಸಮಿತಿ ಮುಂದೆ ಟ್ವಿಟರ್ ಸ್ಪಷ್ಟನೆ

- Advertisement -
- Advertisement -

ಶಶಿ ತರೂರ್ ನೇತೃತ್ವದ ಸಂಸದೀಯ ಸಮಿತಿಯ ಮುಂದೆ ಹಾಜರಾದ ಟ್ವಿಟರ್ ಇಂಡಿಯಾದ ಪಬ್ಲಿಕ್ ಪಾಲಿಸಿ ಮ್ಯಾನೇಜರ್ ಶಗುಫ್ತ ಕಮ್ರಾನ್ ಮತ್ತು ಕಾನೂನು ಪ್ರತಿನಿಧಿ ಆಯುಶಿ ಕಪೂರ್ ಭಾರತೀಯ ಕಾನೂನುಗಳು ಸರ್ವೋಚ್ಛವಾಗಿದ್ದು, ಅವುಗಳಿಗೆ ಬದ್ಧರಾಗಿರುತ್ತೇವೆ ಎಂದು ತಿಳಿಸಿದ್ದಾರೆ.

ಸಂಸದೀಯ ಸಮಿತಿಯ ವಿಚಾರಣೆ ವೇಳೆ ಸಂಸದೀಯ ಸಮಿತಿಯು ಟ್ವಿಟ್ಟರ್‌ಗೆ ಹಲವು ಕಠಿಣ ಪ್ರಶ್ನೆಗಳನ್ನು ಕೇಳಿತು ಎಂದು ಎನ್‌ಡಿಟಿವಿ ವರದಿ ಮಾಡಿದೆ. ಕಂಪನಿಯು ದೇಶದ ಕಾನೂನನ್ನು ಪಾಲಿಸಲು ಸಿದ್ಧವಿದೆಯೇ ಎಂದು ಸಂಸದೀಯ ಸಮಿತಿಯು ಕೇಳಿದಾಗ ಟ್ವಿಟರ್ ಪ್ರತಿನಿಧಿಗಳು “ಟ್ವಿಟರ್ ತನ್ನದೇ ಆದ ನೀತಿ ನಿಯಮಗಳಿವೆ. ಆದರೆ ಭಾರತೀಯ ಕಾನೂನುಗಳು ಸರ್ವೋಚ್ಛವಾಗಿದ್ದು, ಅವುಗಳಿಗೆ ಬದ್ಧರಾಗಿರುತ್ತೇವೆ” ಎಂದು ಉತ್ತರಿಸಿದೆ.

ನಾವು ಪಾರ್ಲಿಮೆಂಟಿನ ಸ್ಟ್ಯಾಂಡಿಂಗ್ ಕಮಿಟಿಯ ವಿಚಾರಣೆಗೆ ಎಲ್ಲಾ ರೀತಿಯ ಸಹಕಾರವನ್ನು ನೀಡುತ್ತೇವೆ. ದೇಶದ ಜನರ ಸಂವಿಧಾನ ಬದ್ಧ ಹಕ್ಕುಗಳ ರಕ್ಷಣೆಗೆ ಟ್ವಿಟರ್ ಸದಾ ಬದ್ಧವಾಗಿದೆ. ಪಾರದರ್ಶಕತೆ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಜನರ ಖಾಸಗಿತನದೊಂದಿಗೆ ಟ್ವಿಟ್ಟರ್ ಎಂದೂ ರಾಜಿಯಾಗುವುದಿಲ್ಲ ಎಂದು ಕಂಪನಿಯ ವಕ್ತಾರರು ತಿಳಿಸಿದ್ದಾರೆ.

ಜನರ ಸುರಕ್ಷತೆ, ಅಪರಾಧ ತಡೆ, ದೇಶದ ಭದ್ರತೆಗೆ ಸಂಬಂಧಿಸಿದ ಹಾಗೆ ನಾವು ಭಾರತ ಸರ್ಕಾರದೊಂದಿಗಿನ ನಮ್ಮ ಆದ್ಯತೆ ಮತ್ತು ಬದ್ಧತೆಯನ್ನು ಮುಂದುವರೆಸುತ್ತೇವೆ ಎಂದು ಟ್ವಿಟ್ಟರ್ ಪ್ರತಿನಿಧಿಗಳು ತಿಳಿಸಿದ್ದಾರೆ.

ಸಂಸದೀಯ ಸಮಿತಿಯ ವಿಚಾರಣೆಯು ಕೇಂದ್ರ ಸರ್ಕಾರ ಮತ್ತು ಟ್ವಿಟ್ಟರ್ ನಡುವಿನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ನಡೆದಿದೆ. ಟ್ವಿಟ್ಟರ್ ಸಾರ್ವಜನಿಕರ ಸುರಕ್ಷತೆಗೆ ಬದ್ಧವಾಗಿಲ್ಲ ಎಂಬ ಕಾರಣದಿಂದ ಟ್ವಿಟರ್‌ಗೆ ಐಟಿ ಕಾಯ್ದೆಯಡಿ ಸಾಮಾಜಿಕ ಜಾಲತಾಣ ಸಂಸ್ಥೆಗಳಿಗೆ ನೀಡಿದ್ದ ಕಾನೂನಾತ್ಮಕ ರಕ್ಷಣೆಯನ್ನು ಕೇಂದ್ರ ಸರ್ಕಾರ ಬುಧವಾರ ಜೂನ್ 16 ರಂದು ಹಿಂಪಡೆದಿದೆ. ಈಗ ಪ್ರತಿಯೊಂದು ಟ್ವೀಟ್, ಪೋಸ್ಟ್ ಗಳಿಗೆ ಟ್ವಿಟರ್ ನೇರ ಹೊಣೆಯಾಗಿರುತ್ತದೆ. ಟ್ವೀಟ್ ಮಾಡಿದ ವ್ಯಕ್ತಿಗಳ ಜೊತೆಗೆ ಟ್ವಿಟರ್ ಮೇಲೆ ಕ್ರಮ ಜರುಗಿಸುವುದಾಗಿ ಕೇಂದ್ರ ಸರ್ಕಾರ ಹೇಳಿದೆ.

ಮೇ ತಿಂಗಳಿನಲ್ಲಿ ‘ಕಾಂಗ್ರೆಸ್‌ ಟೂಲ್‌ಕಿಟ್’ ಎಂಬ ಟ್ವೀಟ್ ಮಾಡಿದ ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು. ಆ ನಂತರ ಟ್ವಿಟರ್‌ ಆ ಪೋಸ್ಟ್‌ಗಳಿಗೆ ಮ್ಯಾನುಪಲೇಟೆಡ್ ಮೀಡಿಯಾ ಎಂಬ ಟ್ಯಾಗ್‌ ಹಾಕಿತ್ತು. ಮ್ಯಾನುಪಲೇಟೆಡ್ ಮೀಡಿಯಾ ಟ್ಯಾಗ್‌ ಡಿಲೀಟ್ ಮಾಡುವಂತೆ ಟ್ವಿಟರ್‌ಗೆ ಕೆಂದ್ರ ಸರ್ಕಾರ ಆದೇಶಿಸಿತ್ತು. ಆದರೆ ಟ್ವಿಟ್ಟರ್ ಆ ಟ್ಯಾಗ್‌ಗಳನ್ನು ಡಿಲೀಟ್ ಮಾಡಿರಲಿಲ್ಲ. ಅಲ್ಲಿಂದ ಆರಂಭವಾದ ವೈಮನಸ್ಸು ಮುಂದುವರಿದಿದೆ.


ಇದನ್ನೂ ಓದಿ: ಕೊರೊನಾ ನಿಯಮಗಳ ಉಲ್ಲಂಘನೆ, 3ನೇ ಅಲೆಗೆ ಕಾರಣವಾಗಬಹುದು: ದೆಹಲಿ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....