Homeಮುಖಪುಟಜಾತಿ ದೌರ್ಜನ್ಯ: ವೈದ್ಯಕೀಯ ವಿದ್ಯಾರ್ಥಿ ಅಸಹಜ ಸಾವು!

ಜಾತಿ ದೌರ್ಜನ್ಯ: ವೈದ್ಯಕೀಯ ವಿದ್ಯಾರ್ಥಿ ಅಸಹಜ ಸಾವು!

ಜಾತಿವಾದಿ ಕಿರುಕುಳ ಹಾಗೂ ಆಡಳಿತ ಮಂಡಳಿಯ ಉದ್ದೇಶಪೂರ್ವಕ ನಿರ್ಲಕ್ಷ್ಯಕ್ಕಾಗಿ ಅನೇಕರು ಇದನ್ನು ’ಸಾಂಸ್ಥಿಕ ಕೊಲೆ’ ಎಂದು ಕರೆದಿದ್ದಾರೆ.

- Advertisement -
- Advertisement -

ಮಧ್ಯಪ್ರದೇಶದ ಜಬಲ್ಪುರದಲ್ಲಿ ಅಕ್ಟೋಬರ್ 1 ರಂದು ಹಿಂದುಳಿದ ವರ್ಗದ ಡಾ.ಭಾಗವತ್ ದೇವಾಂಗನ್ ಎಂಬ 28 ​​ವರ್ಷ ವಯಸ್ಸಿನ ಪ್ರಥಮ ವರ್ಷದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರನ್ನು “ಮೇಲ್ಜಾತಿ” (ಸವರ್ಣ)ಯ ಸೀನಿಯರ್‌ ವಿದ್ಯಾರ್ಥಿಗಳು ಕೆಲವು ತಿಂಗಳುಗಳಿಂದ ಮಾನಸಿಕವಾಗಿ ಹಿಂಸಿಸುತ್ತಿದ್ದರು ಮತ್ತು ಕಿರುಕುಳ ನೀಡುತ್ತಿದ್ದರು ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.

ಭಾಗವತ್ ದೇವಾಂಗನ್ ಜಂಜಗೀರ್ ಚಂಪಾದ ಸಣ್ಣ ಪಟ್ಟಣವಾದ ರಹೌದ್ ನಿವಾಸಿಯಾಗಿದ್ದು, ಅವರ ತಂದೆ ತಮ್ಮ ಊರಿನಲ್ಲಿ ಪಾತ್ರೆಗಳನ್ನು ಮಾರಾಟ ಮಾಡಿ ಜೀವನ ದೂಡುತ್ತಿದ್ದರು. ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಭಾಗವತ್ ಆರನೆ ತರಗತಿಯ ತನಕ ಸ್ಥಳೀಯ ಶಾಲೆಯಲ್ಲಿ ಅಧ್ಯಯನ ಮಾಡಿದ್ದರು. ನಂತರ ನವೋದಯ ವಿದ್ಯಾಲಯದಲ್ಲಿ 12 ನೇ ತನಕ ಅಧ್ಯಯನ ಮಾಡಿ ಪುಣೆಯ ಬೈರಂಜಿ ಜೀಜೀಭಾಯ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಮುಗಿಸಿದ್ದರು.

ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ, ಕೊಲೆ: ರಾಜ್ಯದಲ್ಲಿ ಸಿಡಿದೆದ್ದ ಆಕ್ರೋಶ -ತೀವ್ರಗೊಂಡ ಸರಣಿ ಪ್ರತಿಭಟನೆಗಳು

ವೈದ್ಯಕೀಯ ವಿದ್ಯಾರ್ಥಿಯಾಗಿ ಭಾಗವತ್ | ಬಿಬಿಸಿ ಹಿಂದಿ

ಐದು ಸೀನಿಯರ್‌ ವಿದ್ಯಾರ್ಥಿಗಳು ನಿರಂತರ ಕಿರುಕುಳ ನೀಡುತ್ತಿರುವುದೇ ಇದಕ್ಕೆ ಕಾರಣ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಜುಲೈ 1 ರಂದು ಕಾಲೇಜಿಗೆ ಸೇರಿದ ಹದಿನೈದು ದಿನಗಳ ನಂತರ, ಭಾಗವತ್ ತಮ್ಮ ಜಾತಿ ಮತ್ತು ಆರ್ಥಿಕ ಹಿನ್ನೆಲೆಯ ಕಾರಣಕ್ಕಾಗಿ ದೈಹಿಕವಾಗಿ ಮತ್ತು ಮಾನಸಿಕವಾಗಿ ಕಿರುಕುಳಕ್ಕೊಳಗಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

“ನಮ್ಮ ಸೀನಿಯರ್ಸ್‌‌‌ ನಮ್ಮ ಜಾತಿ ಮತ್ತು ಬಡತನವನ್ನು ಉಲ್ಲೇಖಿಸಿ ದೈಹಿಕವಾಗಿ ಮತ್ತು ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ ಎಂದು ಭಾಗವತ್ ನನಗೆ ಪ್ರತಿಭಾರಿಯೂ ಹೇಳುತ್ತಿದ್ದ, ಆಡಳಿತ ಮಂಡಳಿಗೆ ಇದು ತಿಳಿದಿತ್ತು. ಆದರೆ ಮಧ್ಯಪ್ರವೇಶಿಸಿಲ್ಲ” ಎಂದು ಮೃತ ಭಾಗವತ್ ಸಹೋದರ ಪ್ರಹ್ಲಾದ್ ಹೇಳಿದ್ದಾರೆ.

“ಸರಿಯಾದ ಅಧ್ಯಯನವಿಲ್ಲದೆ ಮೀಸಲಾತಿ ಆಧಾರದಲ್ಲಿ ಪ್ರವೇಶ ಪಡೆದ್ದಾಗಿ, ತನ್ನನ್ನು ಪದೇ ಪದೇ ’ಅರ್ಹನಲ್ಲದವ’ ಎಂದು ಸೀನಿಯರ್‌ಗಳು ಕರೆಯುತ್ತಾರೆ” ಎಂದು ಹೇಳಿದ್ದಾಗಿ ಪ್ರಹ್ಲಾದ್ ಹೇಳುತ್ತಾರೆ.

ಇದನ್ನೂ ಓದಿ: ದಲಿತ ಚಳವಳಿಯಲ್ಲಿ ಯುವ ನಾಯಕತ್ವ ಅರಳುವ ಸಮಯ

ಕಿರುಕುಳದಿಂದಾಗಿ ಭಾಗವತ್ ಜುಲೈ 24 ರಂದು ಆತ್ಮಹತ್ಯೆಗೆ ಯತ್ನಿಸಿದ್ದರು, ಇದಕ್ಕಾಗಿ ಒಂದು ತಿಂಗಳ ಕಾಲ ಅವರನ್ನು ಮನೆಗೆ ಕಳುಹಿಸಲಾಯಿತ್ತು. ಇದಾಗಿ ಅವರ HOD ಕೋರಿಕೆಯ ಮೇರೆಗೆ ಅವರು ಮರಳಿದ್ದರು ಎನ್ನಲಾಗಿದ್ದು, ಆದರೂ ಕಿರುಕುಳ ನಿಲ್ಲಲಿಲ್ಲ. ವಿಕಾಸ್ ದ್ವಿವೇದಿ, ಸಲ್ಮಾನ್ ಖಾನ್, ಅಮನ್ ಗೌತಮ್, ಶುಭಮ್ ಶಿಂಧೆ ಮತ್ತು ಅಭಿಷೇಕ್ ಗ್ಯಾಮೆ ಮುಂತಾದವರ ವಿರುದ್ಧ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಕುಟುಂಬವು ದೂರು ದಾಖಲಿಸಿದೆ.

ವೈದ್ಯಕೀಯ ಕಾಲೇಜು ಹಾಸ್ಟೆಲ್‌ನ ವಾರ್ಡನ್ ಮತ್ತು ಕಾಲೇಜಿನ ಆಂಟಿ ರ‍್ಯಾಗಿಂಗ್ ಸಮಿತಿಯ ಸದಸ್ಯರಾದ ಡಾ.ಅರವಿಂದ್ ಶರ್ಮಾ ಹಾಸ್ಟೆಲ್ ಒಳಗೆ ರ‍್ಯಾಗಿಂಗ್ ಅಥವಾ ಯಾವುದೇ ರೀತಿಯ ಕಿರುಕುಳ ನಡೆದಿಲ್ಲ ಎಂದು ಹೇಳಿದ್ದಾರೆ.

ಅಕ್ಟೋಬರ್ 7 ರಿಂದ, ಕುಟುಂಬ ಮತ್ತು ಸಮುದಾಯದ ಸದಸ್ಯರು ಪೊಲೀಸ್ ನಿಷ್ಕ್ರಿಯತೆಗಾಗಿ ಕ್ಯಾಂಡಲ್ ಮಾರ್ಚ್ ಮಾಡಿದ್ದು, ಒಂದು ವಾರದಿಂದ ತನಿಖೆ ನಡೆಸುತ್ತಿದ್ದರೂ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. ಉದ್ದೇಶಪೂರ್ವಕವಾಗಿ ವಿಷಯವನ್ನು ಮುಂದೂಡಲು ಪ್ರಯತ್ನಿಸುತ್ತಿದೆ ಎಂದು ಅವರ ಸಮುದಾಯ ಆರೋಪಿಸುತ್ತಿದೆ. ಭಾಗವತ್ ಅವರ ಬಾಲ್ಯ ಸ್ನೇಹಿತ ದಿಲೀಪ್ ದೇವಾಂಗನ್ “ಜಸ್ಟಿಸ್ ಫಾರ್ ಭಾಗವತ್ ದೇವಾಂಗನ್” ಎಂಬ ಅಭಿಯಾನವನ್ನು ಪ್ರಾರಂಭಿಸಿದ್ದಾರೆ ಮತ್ತು ಮಧ್ಯಪ್ರದೇಶದ ಮುಖ್ಯಮಂತ್ರಿಗೆ 1000 ಪೋಸ್ಟ್‌ಕಾರ್ಡ್‌ಗಳನ್ನು ಕಳುಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಛತ್ತೀಸ್‌ಗಡ ಆರೋಗ್ಯ ಸಚಿವ ಟಿ.ಎಸ್.ಸಿಂಗ್‌ದೇವ್ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಗುರುವಾರ ಪತ್ರವೊಂದನ್ನು ಬರೆದಿದ್ದು, ಕಠಿಣವಾದ ರಾಗಿಂಗ್ ವಿರೋಧಿ ನಿಯಮಗಳ ಹೊರತಾಗಿಯೂ, ರ‍್ಯಾಗಿಂಗ್‌ನಿಂದಾಗಿ ವಿದ್ಯಾರ್ಥಿಗಳು ಮಾನಸಿಕ ಮತ್ತು ದೈಹಿಕ ಕಿರುಕುಳ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಸಾಂಸ್ಥಿಕ ಕೊಲೆ

ತಳಸಮುದಾಯದ ವಿದ್ಯಾರ್ಥಿಗಳನ್ನು ಆತ್ಮಹತ್ಯೆಗೆ ತಳ್ಳುವ ವ್ಯವಸ್ಥಿತ ವಿಧಾನದ ಒಂದು ಭಾಗವಾಗಿ ಸೀನಿಯರ್‌ ವಿದ್ಯಾರ್ಥಿಗಳಿಂದ ದೈಹಿಕ ಮತ್ತು ಮಾನಸಿಕವಾಗಿ ನಡೆಯುವ ಜಾತಿವಾದಿ ಕಿರುಕುಳ ಹಾಗೂ ಆಡಳಿತ ಮಂಡಳಿಯ ಉದ್ದೇಶಪೂರ್ವಕ ನಿರ್ಲಕ್ಷ್ಯಕ್ಕಾಗಿ ಈ ಆತ್ಮಹತ್ಯೆಯನ್ನು ಅನೇಕ ಜನರು “ಸಾಂಸ್ಥಿಕ ಕೊಲೆ” ಎಂದು ಕರೆದಿದ್ದಾರೆ.

ಇದನ್ನೂ ಓದಿ: ಚಂದ್ರಶೇಖರ್ ಆಜಾದ್: ಮತ್ತೊಬ್ಬ ದಲಿತ ಸೂರ್ಯನ ಉದಯ

ಭಾರತದ ಪ್ರತಿಯೊಂದು ವಿಶ್ವವಿದ್ಯಾನಿಲಯದಲ್ಲೂ ಜಾತಿವಾದಿ ಹಿಂಸಾಚಾರವನ್ನು ಸಾಂಸ್ಥೀಕರಣಗೊಳಿಸಲಾಗಿದ್ದರೂ, ಇದು ಪಿಜಿ ವೈದ್ಯಕೀಯ ಕಾಲೇಜುಗಳಲ್ಲಿ ಸಾಂಕ್ರಾಮಿಕ ರೋಗವಾಗಿ ಮಾರ್ಪಟ್ಟಿದೆ. ಹಿಂದುಳಿದ ವರ್ಗಗಳ ಮಾನಸಿಕ ಆರೋಗ್ಯಕ್ಕೋಸ್ಕರ ಕೆಲಸ ಮಾಡುತ್ತಿರುವ ’ದಿ ಬ್ಲೂ ಡಾನ್’ ಈ ವಿಷಯದ ಬಗ್ಗೆ ಬರೆದಿದೆ,

2010 ರಲ್ಲಿ ಏಮ್ಸ್‌ನ ದಲಿತ ವೈದ್ಯಕೀಯ ವಿದ್ಯಾರ್ಥಿ ಡಾ.ಬಾಲಮುಕುಂದ್ ಭಾರತಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಡಳಿತ ಮಂಡಳಿಯು ಅವರು ಖಿನ್ನತೆಗೊಳಗಾಗಿದ್ದರು ಎಂದು ಹೇಳಿಕೊಂಡಿದೆ. ಹಾಗಾಗಿ ಅವರ ಮಾನಸಿಕ ಆರೋಗ್ಯವು ಜಾತಿ ಆಧಾರಿತ ಹಿಂಸೆಯಿಂದ ಹೀಗಾಗಿದೆ ಎಂದು ಒಪ್ಪಿಕೊಳ್ಳಲು ನಿರಾಕರಿಸಿತು.

ರೋಹಿತ್ ವೆಮುಲ ಆತ್ಮಹತ್ಯೆ ಪ್ರಕರಣದಲ್ಲೂ ಸರ್ಕಾರ ಸೇರಿದಂತೆ ಆಡಳಿತ ಮಂಡಳಿ ಇದನ್ನೇ ಹೇಳಿದ್ದವು. 2019 ರಲ್ಲಿ ಡಾ. ಪಾಯಲ್ ತಡ್ವಿ ಆತ್ಮಹತ್ಯೆ ಮಾಡಿಕೊಂಡಾಗ, ಆಕೆಯ ಪೋಷಕರು ದೌರ್ಜನ್ಯಕ್ಕೀಡು ಮಾಡಿದ ಮೇಲ್ಜಾತಿಯವರ ವಿರುದ್ಧ ದೂರು ನೀಡಿದರೂ ಮುಂಬೈನ ನಾಯರ್ ಕಾಲೇಜು ಕೂಡ ಇದನ್ನೇ ಹೇಳಿತ್ತು.

Members of Vanchit Bahujan Aghadi protest against Nair Hospital’s management. They sought immediate arrest of culprits responsible for death of Payal Tadvi at Nair Hospital Gate in Mumbai Central. (Photo: Debasish Dey)

ಡಾ. ಪಾಯಲ್ ತಡ್ವಿ ಪ್ರಕರಣದಲ್ಲಿ, ಪ್ರತಿಭಟನಾಕಾರರು ಮತ್ತು ಅವರ ಕುಟುಂಬವು ಪೊಲೀಸರು ಮತ್ತು ಸರ್ಕಾರದ ಮೇಲೆ ಹೆಚ್ಚಿನ ಒತ್ತಡ ಹೇರಿತ್ತಾದರೂ, ಪ್ರಕರಣವನ್ನು ಮುಂದೆ ತೆಗೆದುಕೊಳ್ಳಲಾಗಿಲ್ಲ. ಅಕ್ಟೋಬರ್ 8 ರಂದು ಆರೋಪಿಗಳಿಗೆ ಜಾಮೀನು ನೀಡಲಾಯಿತು. ಸವರ್ಣರಿಂದ ಹಿಂದುಳಿದ ವರ್ಗಗಳ ಮೇಲೆ ಹಿಂಸಾಚಾರ ನಡೆದಾಗೆಲ್ಲ ಪೊಲೀಸರು ಮತ್ತು ಸರ್ಕಾರ ನಿರ್ಲಕ್ಷ್ಯ ವಹಿಸಿ ಸವರ್ಣರನ್ನು ರಕ್ಷಿಸಲು ಪ್ರಯತ್ನಿಸುತ್ತದೆ. ಹತ್ರಾಸ್ ಘಟನೆ ಇದಕ್ಕೆ ಉತ್ತಮ ಉದಾಹರಣೆಯಾಗಿದೆ.

ಇದನ್ನೂ ಓದಿ: 16 ನಿಮಿಷಕ್ಕೊಮ್ಮೆ ದಲಿತರ ವಿರುದ್ಧ ದೌರ್ಜನ್ಯ, ಪ್ರತಿನಿತ್ಯ 6 ದಲಿತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...