Homeಮುಖಪುಟಜಾತಿ ದೌರ್ಜನ್ಯ: ವೈದ್ಯಕೀಯ ವಿದ್ಯಾರ್ಥಿ ಅಸಹಜ ಸಾವು!

ಜಾತಿ ದೌರ್ಜನ್ಯ: ವೈದ್ಯಕೀಯ ವಿದ್ಯಾರ್ಥಿ ಅಸಹಜ ಸಾವು!

ಜಾತಿವಾದಿ ಕಿರುಕುಳ ಹಾಗೂ ಆಡಳಿತ ಮಂಡಳಿಯ ಉದ್ದೇಶಪೂರ್ವಕ ನಿರ್ಲಕ್ಷ್ಯಕ್ಕಾಗಿ ಅನೇಕರು ಇದನ್ನು ’ಸಾಂಸ್ಥಿಕ ಕೊಲೆ’ ಎಂದು ಕರೆದಿದ್ದಾರೆ.

- Advertisement -
- Advertisement -

ಮಧ್ಯಪ್ರದೇಶದ ಜಬಲ್ಪುರದಲ್ಲಿ ಅಕ್ಟೋಬರ್ 1 ರಂದು ಹಿಂದುಳಿದ ವರ್ಗದ ಡಾ.ಭಾಗವತ್ ದೇವಾಂಗನ್ ಎಂಬ 28 ​​ವರ್ಷ ವಯಸ್ಸಿನ ಪ್ರಥಮ ವರ್ಷದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರನ್ನು “ಮೇಲ್ಜಾತಿ” (ಸವರ್ಣ)ಯ ಸೀನಿಯರ್‌ ವಿದ್ಯಾರ್ಥಿಗಳು ಕೆಲವು ತಿಂಗಳುಗಳಿಂದ ಮಾನಸಿಕವಾಗಿ ಹಿಂಸಿಸುತ್ತಿದ್ದರು ಮತ್ತು ಕಿರುಕುಳ ನೀಡುತ್ತಿದ್ದರು ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.

ಭಾಗವತ್ ದೇವಾಂಗನ್ ಜಂಜಗೀರ್ ಚಂಪಾದ ಸಣ್ಣ ಪಟ್ಟಣವಾದ ರಹೌದ್ ನಿವಾಸಿಯಾಗಿದ್ದು, ಅವರ ತಂದೆ ತಮ್ಮ ಊರಿನಲ್ಲಿ ಪಾತ್ರೆಗಳನ್ನು ಮಾರಾಟ ಮಾಡಿ ಜೀವನ ದೂಡುತ್ತಿದ್ದರು. ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಭಾಗವತ್ ಆರನೆ ತರಗತಿಯ ತನಕ ಸ್ಥಳೀಯ ಶಾಲೆಯಲ್ಲಿ ಅಧ್ಯಯನ ಮಾಡಿದ್ದರು. ನಂತರ ನವೋದಯ ವಿದ್ಯಾಲಯದಲ್ಲಿ 12 ನೇ ತನಕ ಅಧ್ಯಯನ ಮಾಡಿ ಪುಣೆಯ ಬೈರಂಜಿ ಜೀಜೀಭಾಯ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಮುಗಿಸಿದ್ದರು.

ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ, ಕೊಲೆ: ರಾಜ್ಯದಲ್ಲಿ ಸಿಡಿದೆದ್ದ ಆಕ್ರೋಶ -ತೀವ್ರಗೊಂಡ ಸರಣಿ ಪ್ರತಿಭಟನೆಗಳು

ವೈದ್ಯಕೀಯ ವಿದ್ಯಾರ್ಥಿಯಾಗಿ ಭಾಗವತ್ | ಬಿಬಿಸಿ ಹಿಂದಿ

ಐದು ಸೀನಿಯರ್‌ ವಿದ್ಯಾರ್ಥಿಗಳು ನಿರಂತರ ಕಿರುಕುಳ ನೀಡುತ್ತಿರುವುದೇ ಇದಕ್ಕೆ ಕಾರಣ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಜುಲೈ 1 ರಂದು ಕಾಲೇಜಿಗೆ ಸೇರಿದ ಹದಿನೈದು ದಿನಗಳ ನಂತರ, ಭಾಗವತ್ ತಮ್ಮ ಜಾತಿ ಮತ್ತು ಆರ್ಥಿಕ ಹಿನ್ನೆಲೆಯ ಕಾರಣಕ್ಕಾಗಿ ದೈಹಿಕವಾಗಿ ಮತ್ತು ಮಾನಸಿಕವಾಗಿ ಕಿರುಕುಳಕ್ಕೊಳಗಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

“ನಮ್ಮ ಸೀನಿಯರ್ಸ್‌‌‌ ನಮ್ಮ ಜಾತಿ ಮತ್ತು ಬಡತನವನ್ನು ಉಲ್ಲೇಖಿಸಿ ದೈಹಿಕವಾಗಿ ಮತ್ತು ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ ಎಂದು ಭಾಗವತ್ ನನಗೆ ಪ್ರತಿಭಾರಿಯೂ ಹೇಳುತ್ತಿದ್ದ, ಆಡಳಿತ ಮಂಡಳಿಗೆ ಇದು ತಿಳಿದಿತ್ತು. ಆದರೆ ಮಧ್ಯಪ್ರವೇಶಿಸಿಲ್ಲ” ಎಂದು ಮೃತ ಭಾಗವತ್ ಸಹೋದರ ಪ್ರಹ್ಲಾದ್ ಹೇಳಿದ್ದಾರೆ.

“ಸರಿಯಾದ ಅಧ್ಯಯನವಿಲ್ಲದೆ ಮೀಸಲಾತಿ ಆಧಾರದಲ್ಲಿ ಪ್ರವೇಶ ಪಡೆದ್ದಾಗಿ, ತನ್ನನ್ನು ಪದೇ ಪದೇ ’ಅರ್ಹನಲ್ಲದವ’ ಎಂದು ಸೀನಿಯರ್‌ಗಳು ಕರೆಯುತ್ತಾರೆ” ಎಂದು ಹೇಳಿದ್ದಾಗಿ ಪ್ರಹ್ಲಾದ್ ಹೇಳುತ್ತಾರೆ.

ಇದನ್ನೂ ಓದಿ: ದಲಿತ ಚಳವಳಿಯಲ್ಲಿ ಯುವ ನಾಯಕತ್ವ ಅರಳುವ ಸಮಯ

ಕಿರುಕುಳದಿಂದಾಗಿ ಭಾಗವತ್ ಜುಲೈ 24 ರಂದು ಆತ್ಮಹತ್ಯೆಗೆ ಯತ್ನಿಸಿದ್ದರು, ಇದಕ್ಕಾಗಿ ಒಂದು ತಿಂಗಳ ಕಾಲ ಅವರನ್ನು ಮನೆಗೆ ಕಳುಹಿಸಲಾಯಿತ್ತು. ಇದಾಗಿ ಅವರ HOD ಕೋರಿಕೆಯ ಮೇರೆಗೆ ಅವರು ಮರಳಿದ್ದರು ಎನ್ನಲಾಗಿದ್ದು, ಆದರೂ ಕಿರುಕುಳ ನಿಲ್ಲಲಿಲ್ಲ. ವಿಕಾಸ್ ದ್ವಿವೇದಿ, ಸಲ್ಮಾನ್ ಖಾನ್, ಅಮನ್ ಗೌತಮ್, ಶುಭಮ್ ಶಿಂಧೆ ಮತ್ತು ಅಭಿಷೇಕ್ ಗ್ಯಾಮೆ ಮುಂತಾದವರ ವಿರುದ್ಧ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಕುಟುಂಬವು ದೂರು ದಾಖಲಿಸಿದೆ.

ವೈದ್ಯಕೀಯ ಕಾಲೇಜು ಹಾಸ್ಟೆಲ್‌ನ ವಾರ್ಡನ್ ಮತ್ತು ಕಾಲೇಜಿನ ಆಂಟಿ ರ‍್ಯಾಗಿಂಗ್ ಸಮಿತಿಯ ಸದಸ್ಯರಾದ ಡಾ.ಅರವಿಂದ್ ಶರ್ಮಾ ಹಾಸ್ಟೆಲ್ ಒಳಗೆ ರ‍್ಯಾಗಿಂಗ್ ಅಥವಾ ಯಾವುದೇ ರೀತಿಯ ಕಿರುಕುಳ ನಡೆದಿಲ್ಲ ಎಂದು ಹೇಳಿದ್ದಾರೆ.

ಅಕ್ಟೋಬರ್ 7 ರಿಂದ, ಕುಟುಂಬ ಮತ್ತು ಸಮುದಾಯದ ಸದಸ್ಯರು ಪೊಲೀಸ್ ನಿಷ್ಕ್ರಿಯತೆಗಾಗಿ ಕ್ಯಾಂಡಲ್ ಮಾರ್ಚ್ ಮಾಡಿದ್ದು, ಒಂದು ವಾರದಿಂದ ತನಿಖೆ ನಡೆಸುತ್ತಿದ್ದರೂ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. ಉದ್ದೇಶಪೂರ್ವಕವಾಗಿ ವಿಷಯವನ್ನು ಮುಂದೂಡಲು ಪ್ರಯತ್ನಿಸುತ್ತಿದೆ ಎಂದು ಅವರ ಸಮುದಾಯ ಆರೋಪಿಸುತ್ತಿದೆ. ಭಾಗವತ್ ಅವರ ಬಾಲ್ಯ ಸ್ನೇಹಿತ ದಿಲೀಪ್ ದೇವಾಂಗನ್ “ಜಸ್ಟಿಸ್ ಫಾರ್ ಭಾಗವತ್ ದೇವಾಂಗನ್” ಎಂಬ ಅಭಿಯಾನವನ್ನು ಪ್ರಾರಂಭಿಸಿದ್ದಾರೆ ಮತ್ತು ಮಧ್ಯಪ್ರದೇಶದ ಮುಖ್ಯಮಂತ್ರಿಗೆ 1000 ಪೋಸ್ಟ್‌ಕಾರ್ಡ್‌ಗಳನ್ನು ಕಳುಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಛತ್ತೀಸ್‌ಗಡ ಆರೋಗ್ಯ ಸಚಿವ ಟಿ.ಎಸ್.ಸಿಂಗ್‌ದೇವ್ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಗುರುವಾರ ಪತ್ರವೊಂದನ್ನು ಬರೆದಿದ್ದು, ಕಠಿಣವಾದ ರಾಗಿಂಗ್ ವಿರೋಧಿ ನಿಯಮಗಳ ಹೊರತಾಗಿಯೂ, ರ‍್ಯಾಗಿಂಗ್‌ನಿಂದಾಗಿ ವಿದ್ಯಾರ್ಥಿಗಳು ಮಾನಸಿಕ ಮತ್ತು ದೈಹಿಕ ಕಿರುಕುಳ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಸಾಂಸ್ಥಿಕ ಕೊಲೆ

ತಳಸಮುದಾಯದ ವಿದ್ಯಾರ್ಥಿಗಳನ್ನು ಆತ್ಮಹತ್ಯೆಗೆ ತಳ್ಳುವ ವ್ಯವಸ್ಥಿತ ವಿಧಾನದ ಒಂದು ಭಾಗವಾಗಿ ಸೀನಿಯರ್‌ ವಿದ್ಯಾರ್ಥಿಗಳಿಂದ ದೈಹಿಕ ಮತ್ತು ಮಾನಸಿಕವಾಗಿ ನಡೆಯುವ ಜಾತಿವಾದಿ ಕಿರುಕುಳ ಹಾಗೂ ಆಡಳಿತ ಮಂಡಳಿಯ ಉದ್ದೇಶಪೂರ್ವಕ ನಿರ್ಲಕ್ಷ್ಯಕ್ಕಾಗಿ ಈ ಆತ್ಮಹತ್ಯೆಯನ್ನು ಅನೇಕ ಜನರು “ಸಾಂಸ್ಥಿಕ ಕೊಲೆ” ಎಂದು ಕರೆದಿದ್ದಾರೆ.

ಇದನ್ನೂ ಓದಿ: ಚಂದ್ರಶೇಖರ್ ಆಜಾದ್: ಮತ್ತೊಬ್ಬ ದಲಿತ ಸೂರ್ಯನ ಉದಯ

ಭಾರತದ ಪ್ರತಿಯೊಂದು ವಿಶ್ವವಿದ್ಯಾನಿಲಯದಲ್ಲೂ ಜಾತಿವಾದಿ ಹಿಂಸಾಚಾರವನ್ನು ಸಾಂಸ್ಥೀಕರಣಗೊಳಿಸಲಾಗಿದ್ದರೂ, ಇದು ಪಿಜಿ ವೈದ್ಯಕೀಯ ಕಾಲೇಜುಗಳಲ್ಲಿ ಸಾಂಕ್ರಾಮಿಕ ರೋಗವಾಗಿ ಮಾರ್ಪಟ್ಟಿದೆ. ಹಿಂದುಳಿದ ವರ್ಗಗಳ ಮಾನಸಿಕ ಆರೋಗ್ಯಕ್ಕೋಸ್ಕರ ಕೆಲಸ ಮಾಡುತ್ತಿರುವ ’ದಿ ಬ್ಲೂ ಡಾನ್’ ಈ ವಿಷಯದ ಬಗ್ಗೆ ಬರೆದಿದೆ,

2010 ರಲ್ಲಿ ಏಮ್ಸ್‌ನ ದಲಿತ ವೈದ್ಯಕೀಯ ವಿದ್ಯಾರ್ಥಿ ಡಾ.ಬಾಲಮುಕುಂದ್ ಭಾರತಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಡಳಿತ ಮಂಡಳಿಯು ಅವರು ಖಿನ್ನತೆಗೊಳಗಾಗಿದ್ದರು ಎಂದು ಹೇಳಿಕೊಂಡಿದೆ. ಹಾಗಾಗಿ ಅವರ ಮಾನಸಿಕ ಆರೋಗ್ಯವು ಜಾತಿ ಆಧಾರಿತ ಹಿಂಸೆಯಿಂದ ಹೀಗಾಗಿದೆ ಎಂದು ಒಪ್ಪಿಕೊಳ್ಳಲು ನಿರಾಕರಿಸಿತು.

ರೋಹಿತ್ ವೆಮುಲ ಆತ್ಮಹತ್ಯೆ ಪ್ರಕರಣದಲ್ಲೂ ಸರ್ಕಾರ ಸೇರಿದಂತೆ ಆಡಳಿತ ಮಂಡಳಿ ಇದನ್ನೇ ಹೇಳಿದ್ದವು. 2019 ರಲ್ಲಿ ಡಾ. ಪಾಯಲ್ ತಡ್ವಿ ಆತ್ಮಹತ್ಯೆ ಮಾಡಿಕೊಂಡಾಗ, ಆಕೆಯ ಪೋಷಕರು ದೌರ್ಜನ್ಯಕ್ಕೀಡು ಮಾಡಿದ ಮೇಲ್ಜಾತಿಯವರ ವಿರುದ್ಧ ದೂರು ನೀಡಿದರೂ ಮುಂಬೈನ ನಾಯರ್ ಕಾಲೇಜು ಕೂಡ ಇದನ್ನೇ ಹೇಳಿತ್ತು.

Members of Vanchit Bahujan Aghadi protest against Nair Hospital’s management. They sought immediate arrest of culprits responsible for death of Payal Tadvi at Nair Hospital Gate in Mumbai Central. (Photo: Debasish Dey)

ಡಾ. ಪಾಯಲ್ ತಡ್ವಿ ಪ್ರಕರಣದಲ್ಲಿ, ಪ್ರತಿಭಟನಾಕಾರರು ಮತ್ತು ಅವರ ಕುಟುಂಬವು ಪೊಲೀಸರು ಮತ್ತು ಸರ್ಕಾರದ ಮೇಲೆ ಹೆಚ್ಚಿನ ಒತ್ತಡ ಹೇರಿತ್ತಾದರೂ, ಪ್ರಕರಣವನ್ನು ಮುಂದೆ ತೆಗೆದುಕೊಳ್ಳಲಾಗಿಲ್ಲ. ಅಕ್ಟೋಬರ್ 8 ರಂದು ಆರೋಪಿಗಳಿಗೆ ಜಾಮೀನು ನೀಡಲಾಯಿತು. ಸವರ್ಣರಿಂದ ಹಿಂದುಳಿದ ವರ್ಗಗಳ ಮೇಲೆ ಹಿಂಸಾಚಾರ ನಡೆದಾಗೆಲ್ಲ ಪೊಲೀಸರು ಮತ್ತು ಸರ್ಕಾರ ನಿರ್ಲಕ್ಷ್ಯ ವಹಿಸಿ ಸವರ್ಣರನ್ನು ರಕ್ಷಿಸಲು ಪ್ರಯತ್ನಿಸುತ್ತದೆ. ಹತ್ರಾಸ್ ಘಟನೆ ಇದಕ್ಕೆ ಉತ್ತಮ ಉದಾಹರಣೆಯಾಗಿದೆ.

ಇದನ್ನೂ ಓದಿ: 16 ನಿಮಿಷಕ್ಕೊಮ್ಮೆ ದಲಿತರ ವಿರುದ್ಧ ದೌರ್ಜನ್ಯ, ಪ್ರತಿನಿತ್ಯ 6 ದಲಿತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...