Homeಮುಖಪುಟಜಾತಿ ದೌರ್ಜನ್ಯ: ವೈದ್ಯಕೀಯ ವಿದ್ಯಾರ್ಥಿ ಅಸಹಜ ಸಾವು!

ಜಾತಿ ದೌರ್ಜನ್ಯ: ವೈದ್ಯಕೀಯ ವಿದ್ಯಾರ್ಥಿ ಅಸಹಜ ಸಾವು!

ಜಾತಿವಾದಿ ಕಿರುಕುಳ ಹಾಗೂ ಆಡಳಿತ ಮಂಡಳಿಯ ಉದ್ದೇಶಪೂರ್ವಕ ನಿರ್ಲಕ್ಷ್ಯಕ್ಕಾಗಿ ಅನೇಕರು ಇದನ್ನು ’ಸಾಂಸ್ಥಿಕ ಕೊಲೆ’ ಎಂದು ಕರೆದಿದ್ದಾರೆ.

- Advertisement -
- Advertisement -

ಮಧ್ಯಪ್ರದೇಶದ ಜಬಲ್ಪುರದಲ್ಲಿ ಅಕ್ಟೋಬರ್ 1 ರಂದು ಹಿಂದುಳಿದ ವರ್ಗದ ಡಾ.ಭಾಗವತ್ ದೇವಾಂಗನ್ ಎಂಬ 28 ​​ವರ್ಷ ವಯಸ್ಸಿನ ಪ್ರಥಮ ವರ್ಷದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರನ್ನು “ಮೇಲ್ಜಾತಿ” (ಸವರ್ಣ)ಯ ಸೀನಿಯರ್‌ ವಿದ್ಯಾರ್ಥಿಗಳು ಕೆಲವು ತಿಂಗಳುಗಳಿಂದ ಮಾನಸಿಕವಾಗಿ ಹಿಂಸಿಸುತ್ತಿದ್ದರು ಮತ್ತು ಕಿರುಕುಳ ನೀಡುತ್ತಿದ್ದರು ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.

ಭಾಗವತ್ ದೇವಾಂಗನ್ ಜಂಜಗೀರ್ ಚಂಪಾದ ಸಣ್ಣ ಪಟ್ಟಣವಾದ ರಹೌದ್ ನಿವಾಸಿಯಾಗಿದ್ದು, ಅವರ ತಂದೆ ತಮ್ಮ ಊರಿನಲ್ಲಿ ಪಾತ್ರೆಗಳನ್ನು ಮಾರಾಟ ಮಾಡಿ ಜೀವನ ದೂಡುತ್ತಿದ್ದರು. ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಭಾಗವತ್ ಆರನೆ ತರಗತಿಯ ತನಕ ಸ್ಥಳೀಯ ಶಾಲೆಯಲ್ಲಿ ಅಧ್ಯಯನ ಮಾಡಿದ್ದರು. ನಂತರ ನವೋದಯ ವಿದ್ಯಾಲಯದಲ್ಲಿ 12 ನೇ ತನಕ ಅಧ್ಯಯನ ಮಾಡಿ ಪುಣೆಯ ಬೈರಂಜಿ ಜೀಜೀಭಾಯ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಮುಗಿಸಿದ್ದರು.

ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ, ಕೊಲೆ: ರಾಜ್ಯದಲ್ಲಿ ಸಿಡಿದೆದ್ದ ಆಕ್ರೋಶ -ತೀವ್ರಗೊಂಡ ಸರಣಿ ಪ್ರತಿಭಟನೆಗಳು

ವೈದ್ಯಕೀಯ ವಿದ್ಯಾರ್ಥಿಯಾಗಿ ಭಾಗವತ್ | ಬಿಬಿಸಿ ಹಿಂದಿ

ಐದು ಸೀನಿಯರ್‌ ವಿದ್ಯಾರ್ಥಿಗಳು ನಿರಂತರ ಕಿರುಕುಳ ನೀಡುತ್ತಿರುವುದೇ ಇದಕ್ಕೆ ಕಾರಣ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಜುಲೈ 1 ರಂದು ಕಾಲೇಜಿಗೆ ಸೇರಿದ ಹದಿನೈದು ದಿನಗಳ ನಂತರ, ಭಾಗವತ್ ತಮ್ಮ ಜಾತಿ ಮತ್ತು ಆರ್ಥಿಕ ಹಿನ್ನೆಲೆಯ ಕಾರಣಕ್ಕಾಗಿ ದೈಹಿಕವಾಗಿ ಮತ್ತು ಮಾನಸಿಕವಾಗಿ ಕಿರುಕುಳಕ್ಕೊಳಗಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

“ನಮ್ಮ ಸೀನಿಯರ್ಸ್‌‌‌ ನಮ್ಮ ಜಾತಿ ಮತ್ತು ಬಡತನವನ್ನು ಉಲ್ಲೇಖಿಸಿ ದೈಹಿಕವಾಗಿ ಮತ್ತು ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ ಎಂದು ಭಾಗವತ್ ನನಗೆ ಪ್ರತಿಭಾರಿಯೂ ಹೇಳುತ್ತಿದ್ದ, ಆಡಳಿತ ಮಂಡಳಿಗೆ ಇದು ತಿಳಿದಿತ್ತು. ಆದರೆ ಮಧ್ಯಪ್ರವೇಶಿಸಿಲ್ಲ” ಎಂದು ಮೃತ ಭಾಗವತ್ ಸಹೋದರ ಪ್ರಹ್ಲಾದ್ ಹೇಳಿದ್ದಾರೆ.

“ಸರಿಯಾದ ಅಧ್ಯಯನವಿಲ್ಲದೆ ಮೀಸಲಾತಿ ಆಧಾರದಲ್ಲಿ ಪ್ರವೇಶ ಪಡೆದ್ದಾಗಿ, ತನ್ನನ್ನು ಪದೇ ಪದೇ ’ಅರ್ಹನಲ್ಲದವ’ ಎಂದು ಸೀನಿಯರ್‌ಗಳು ಕರೆಯುತ್ತಾರೆ” ಎಂದು ಹೇಳಿದ್ದಾಗಿ ಪ್ರಹ್ಲಾದ್ ಹೇಳುತ್ತಾರೆ.

ಇದನ್ನೂ ಓದಿ: ದಲಿತ ಚಳವಳಿಯಲ್ಲಿ ಯುವ ನಾಯಕತ್ವ ಅರಳುವ ಸಮಯ

ಕಿರುಕುಳದಿಂದಾಗಿ ಭಾಗವತ್ ಜುಲೈ 24 ರಂದು ಆತ್ಮಹತ್ಯೆಗೆ ಯತ್ನಿಸಿದ್ದರು, ಇದಕ್ಕಾಗಿ ಒಂದು ತಿಂಗಳ ಕಾಲ ಅವರನ್ನು ಮನೆಗೆ ಕಳುಹಿಸಲಾಯಿತ್ತು. ಇದಾಗಿ ಅವರ HOD ಕೋರಿಕೆಯ ಮೇರೆಗೆ ಅವರು ಮರಳಿದ್ದರು ಎನ್ನಲಾಗಿದ್ದು, ಆದರೂ ಕಿರುಕುಳ ನಿಲ್ಲಲಿಲ್ಲ. ವಿಕಾಸ್ ದ್ವಿವೇದಿ, ಸಲ್ಮಾನ್ ಖಾನ್, ಅಮನ್ ಗೌತಮ್, ಶುಭಮ್ ಶಿಂಧೆ ಮತ್ತು ಅಭಿಷೇಕ್ ಗ್ಯಾಮೆ ಮುಂತಾದವರ ವಿರುದ್ಧ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಕುಟುಂಬವು ದೂರು ದಾಖಲಿಸಿದೆ.

ವೈದ್ಯಕೀಯ ಕಾಲೇಜು ಹಾಸ್ಟೆಲ್‌ನ ವಾರ್ಡನ್ ಮತ್ತು ಕಾಲೇಜಿನ ಆಂಟಿ ರ‍್ಯಾಗಿಂಗ್ ಸಮಿತಿಯ ಸದಸ್ಯರಾದ ಡಾ.ಅರವಿಂದ್ ಶರ್ಮಾ ಹಾಸ್ಟೆಲ್ ಒಳಗೆ ರ‍್ಯಾಗಿಂಗ್ ಅಥವಾ ಯಾವುದೇ ರೀತಿಯ ಕಿರುಕುಳ ನಡೆದಿಲ್ಲ ಎಂದು ಹೇಳಿದ್ದಾರೆ.

ಅಕ್ಟೋಬರ್ 7 ರಿಂದ, ಕುಟುಂಬ ಮತ್ತು ಸಮುದಾಯದ ಸದಸ್ಯರು ಪೊಲೀಸ್ ನಿಷ್ಕ್ರಿಯತೆಗಾಗಿ ಕ್ಯಾಂಡಲ್ ಮಾರ್ಚ್ ಮಾಡಿದ್ದು, ಒಂದು ವಾರದಿಂದ ತನಿಖೆ ನಡೆಸುತ್ತಿದ್ದರೂ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. ಉದ್ದೇಶಪೂರ್ವಕವಾಗಿ ವಿಷಯವನ್ನು ಮುಂದೂಡಲು ಪ್ರಯತ್ನಿಸುತ್ತಿದೆ ಎಂದು ಅವರ ಸಮುದಾಯ ಆರೋಪಿಸುತ್ತಿದೆ. ಭಾಗವತ್ ಅವರ ಬಾಲ್ಯ ಸ್ನೇಹಿತ ದಿಲೀಪ್ ದೇವಾಂಗನ್ “ಜಸ್ಟಿಸ್ ಫಾರ್ ಭಾಗವತ್ ದೇವಾಂಗನ್” ಎಂಬ ಅಭಿಯಾನವನ್ನು ಪ್ರಾರಂಭಿಸಿದ್ದಾರೆ ಮತ್ತು ಮಧ್ಯಪ್ರದೇಶದ ಮುಖ್ಯಮಂತ್ರಿಗೆ 1000 ಪೋಸ್ಟ್‌ಕಾರ್ಡ್‌ಗಳನ್ನು ಕಳುಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಛತ್ತೀಸ್‌ಗಡ ಆರೋಗ್ಯ ಸಚಿವ ಟಿ.ಎಸ್.ಸಿಂಗ್‌ದೇವ್ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಗುರುವಾರ ಪತ್ರವೊಂದನ್ನು ಬರೆದಿದ್ದು, ಕಠಿಣವಾದ ರಾಗಿಂಗ್ ವಿರೋಧಿ ನಿಯಮಗಳ ಹೊರತಾಗಿಯೂ, ರ‍್ಯಾಗಿಂಗ್‌ನಿಂದಾಗಿ ವಿದ್ಯಾರ್ಥಿಗಳು ಮಾನಸಿಕ ಮತ್ತು ದೈಹಿಕ ಕಿರುಕುಳ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಸಾಂಸ್ಥಿಕ ಕೊಲೆ

ತಳಸಮುದಾಯದ ವಿದ್ಯಾರ್ಥಿಗಳನ್ನು ಆತ್ಮಹತ್ಯೆಗೆ ತಳ್ಳುವ ವ್ಯವಸ್ಥಿತ ವಿಧಾನದ ಒಂದು ಭಾಗವಾಗಿ ಸೀನಿಯರ್‌ ವಿದ್ಯಾರ್ಥಿಗಳಿಂದ ದೈಹಿಕ ಮತ್ತು ಮಾನಸಿಕವಾಗಿ ನಡೆಯುವ ಜಾತಿವಾದಿ ಕಿರುಕುಳ ಹಾಗೂ ಆಡಳಿತ ಮಂಡಳಿಯ ಉದ್ದೇಶಪೂರ್ವಕ ನಿರ್ಲಕ್ಷ್ಯಕ್ಕಾಗಿ ಈ ಆತ್ಮಹತ್ಯೆಯನ್ನು ಅನೇಕ ಜನರು “ಸಾಂಸ್ಥಿಕ ಕೊಲೆ” ಎಂದು ಕರೆದಿದ್ದಾರೆ.

ಇದನ್ನೂ ಓದಿ: ಚಂದ್ರಶೇಖರ್ ಆಜಾದ್: ಮತ್ತೊಬ್ಬ ದಲಿತ ಸೂರ್ಯನ ಉದಯ

ಭಾರತದ ಪ್ರತಿಯೊಂದು ವಿಶ್ವವಿದ್ಯಾನಿಲಯದಲ್ಲೂ ಜಾತಿವಾದಿ ಹಿಂಸಾಚಾರವನ್ನು ಸಾಂಸ್ಥೀಕರಣಗೊಳಿಸಲಾಗಿದ್ದರೂ, ಇದು ಪಿಜಿ ವೈದ್ಯಕೀಯ ಕಾಲೇಜುಗಳಲ್ಲಿ ಸಾಂಕ್ರಾಮಿಕ ರೋಗವಾಗಿ ಮಾರ್ಪಟ್ಟಿದೆ. ಹಿಂದುಳಿದ ವರ್ಗಗಳ ಮಾನಸಿಕ ಆರೋಗ್ಯಕ್ಕೋಸ್ಕರ ಕೆಲಸ ಮಾಡುತ್ತಿರುವ ’ದಿ ಬ್ಲೂ ಡಾನ್’ ಈ ವಿಷಯದ ಬಗ್ಗೆ ಬರೆದಿದೆ,

2010 ರಲ್ಲಿ ಏಮ್ಸ್‌ನ ದಲಿತ ವೈದ್ಯಕೀಯ ವಿದ್ಯಾರ್ಥಿ ಡಾ.ಬಾಲಮುಕುಂದ್ ಭಾರತಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಡಳಿತ ಮಂಡಳಿಯು ಅವರು ಖಿನ್ನತೆಗೊಳಗಾಗಿದ್ದರು ಎಂದು ಹೇಳಿಕೊಂಡಿದೆ. ಹಾಗಾಗಿ ಅವರ ಮಾನಸಿಕ ಆರೋಗ್ಯವು ಜಾತಿ ಆಧಾರಿತ ಹಿಂಸೆಯಿಂದ ಹೀಗಾಗಿದೆ ಎಂದು ಒಪ್ಪಿಕೊಳ್ಳಲು ನಿರಾಕರಿಸಿತು.

ರೋಹಿತ್ ವೆಮುಲ ಆತ್ಮಹತ್ಯೆ ಪ್ರಕರಣದಲ್ಲೂ ಸರ್ಕಾರ ಸೇರಿದಂತೆ ಆಡಳಿತ ಮಂಡಳಿ ಇದನ್ನೇ ಹೇಳಿದ್ದವು. 2019 ರಲ್ಲಿ ಡಾ. ಪಾಯಲ್ ತಡ್ವಿ ಆತ್ಮಹತ್ಯೆ ಮಾಡಿಕೊಂಡಾಗ, ಆಕೆಯ ಪೋಷಕರು ದೌರ್ಜನ್ಯಕ್ಕೀಡು ಮಾಡಿದ ಮೇಲ್ಜಾತಿಯವರ ವಿರುದ್ಧ ದೂರು ನೀಡಿದರೂ ಮುಂಬೈನ ನಾಯರ್ ಕಾಲೇಜು ಕೂಡ ಇದನ್ನೇ ಹೇಳಿತ್ತು.

Members of Vanchit Bahujan Aghadi protest against Nair Hospital’s management. They sought immediate arrest of culprits responsible for death of Payal Tadvi at Nair Hospital Gate in Mumbai Central. (Photo: Debasish Dey)

ಡಾ. ಪಾಯಲ್ ತಡ್ವಿ ಪ್ರಕರಣದಲ್ಲಿ, ಪ್ರತಿಭಟನಾಕಾರರು ಮತ್ತು ಅವರ ಕುಟುಂಬವು ಪೊಲೀಸರು ಮತ್ತು ಸರ್ಕಾರದ ಮೇಲೆ ಹೆಚ್ಚಿನ ಒತ್ತಡ ಹೇರಿತ್ತಾದರೂ, ಪ್ರಕರಣವನ್ನು ಮುಂದೆ ತೆಗೆದುಕೊಳ್ಳಲಾಗಿಲ್ಲ. ಅಕ್ಟೋಬರ್ 8 ರಂದು ಆರೋಪಿಗಳಿಗೆ ಜಾಮೀನು ನೀಡಲಾಯಿತು. ಸವರ್ಣರಿಂದ ಹಿಂದುಳಿದ ವರ್ಗಗಳ ಮೇಲೆ ಹಿಂಸಾಚಾರ ನಡೆದಾಗೆಲ್ಲ ಪೊಲೀಸರು ಮತ್ತು ಸರ್ಕಾರ ನಿರ್ಲಕ್ಷ್ಯ ವಹಿಸಿ ಸವರ್ಣರನ್ನು ರಕ್ಷಿಸಲು ಪ್ರಯತ್ನಿಸುತ್ತದೆ. ಹತ್ರಾಸ್ ಘಟನೆ ಇದಕ್ಕೆ ಉತ್ತಮ ಉದಾಹರಣೆಯಾಗಿದೆ.

ಇದನ್ನೂ ಓದಿ: 16 ನಿಮಿಷಕ್ಕೊಮ್ಮೆ ದಲಿತರ ವಿರುದ್ಧ ದೌರ್ಜನ್ಯ, ಪ್ರತಿನಿತ್ಯ 6 ದಲಿತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...